LIVE NOW
Published : Dec 24, 2025, 06:59 AM ISTUpdated : Dec 24, 2025, 10:20 AM IST

India Latest News Live: ಭಾರತ ಎದುರಿನ ಏಕದಿನ, ಟಿ20 ಸರಣಿಗೆ ಬಲಿಷ್ಠ ನ್ಯೂಜಿಲೆಂಡ್ ತಂಡ ಪ್ರಕಟ; ಇದೊಂದು ಕಾರಣಕ್ಕೆ ಕೇನ್‌ ವಿಲಿಯಮ್ಸನ್‌ಗಿಲ್ಲ ಸ್ಥಾನ!

ಸಾರಾಂಶ

ನವದೆಹಲಿ: ಆಂತರಿಕ ಸಂಘರ್ಷ ಭುಗಿಲೆದ್ದಿರುವ ಬಾಂಗ್ಲಾದೇಶದಲ್ಲಿ ಭಾರತವಿರೋಧಿ ಮನಃಸ್ಥಿತಿಗೆ ತುಪ್ಪ ಸುರಿದು, ಭಾರತವು ಬಾಂಗ್ಲಾ ಮೇಲೆ ದಾಳಿ ಮಾಡುವಂತೆ ಪ್ರಚೋದಿಸಲು ಪಾಕಿಸ್ತಾನ ಯತ್ನಿಸುತ್ತಿದೆ ಎಂಬ ಸ್ಫೋಟಕ ವಿಚಾರವನ್ನು ಭಾರತದ ಗುಪ್ತಚರ ಸಂಸ್ಥೆಗಳು ಬಹಿರಂಗಪಡಿಸಿವೆ.

ಪಾಕ್‌ ಗುಪ್ತಚರ ಸಂಸ್ಥೆಯಾದ ಐಎಸ್‌ಐ ಬೆಂಬಲಿತ ಶಕ್ತಿಗಳು ಬಾಂಗ್ಲಾದ ಪದಚ್ಯುತ ಪ್ರಧಾನಿ ಶೇಖ್‌ ಹಸೀನಾ ಮತ್ತು ಅವರ ಅವಾಮಿ ಲೀಗ್‌ ಪಕ್ಷಕ್ಕೆ ಭಾರತ ಬೆನ್ನೆಲುಬಾಗಿ ನಿಂತಿದೆ ಎಂದು ಬಿಂಬಿಸಲು ಪ್ರಯತ್ನಿಸುತ್ತಿವೆ. ಬಾಂಗ್ಲಾ ನಾಗರಿಕರನ್ನು ಭಾರತದ ವಿರುದ್ಧ ಎತ್ತಿಕಟ್ಟಿ, ಭಾರತವು ಬಾಂಗ್ಲಾ ಮೇಲೆ ದಾಳಿ ಮಾಡುವಂತೆ ಪ್ರಚೋದಿಸುವುದು ಇವರ ಉದ್ದೇಶ. ಕಳೆದ ವರ್ಷ ಹಸೀನಾ ಭಾರತಕ್ಕೆ ಪಲಾಯನಗೈದ ದಿನಗಳಿಂದಲೇ ಐಎಸ್‌ಐ ಈ ಕೆಲಸದಲ್ಲಿ ನಿರತವಾಗಿದೆ ಎಂದು ಗುಪ್ತಚರ ಮೂಲಗಳು ತಿಳಿಸಿವೆ. ಈ ಮೂಲಕ ಭಾರತದ ವಿರುದ್ಧ ಇತರ ದೇಶಗಳನ್ನು ಎತ್ತಿಕಟ್ಟಿ ಮೈಕಾಯಿಸಿಕೊಳ್ಳುವ ಪಾಕಿಸ್ತಾನದ ಚಾಳಿ ಮತ್ತೊಮ್ಮೆ ಬಹಿರಂಗವಾಗಿದೆ.

10:20 AM (IST) Dec 24

ಭಾರತ ಎದುರಿನ ಏಕದಿನ, ಟಿ20 ಸರಣಿಗೆ ಬಲಿಷ್ಠ ನ್ಯೂಜಿಲೆಂಡ್ ತಂಡ ಪ್ರಕಟ; ಇದೊಂದು ಕಾರಣಕ್ಕೆ ಕೇನ್‌ ವಿಲಿಯಮ್ಸನ್‌ಗಿಲ್ಲ ಸ್ಥಾನ!

ಭಾರತ ವಿರುದ್ಧದ ಜನವರಿ 11ರಿಂದ ಆರಂಭವಾಗಲಿರುವ ಏಕದಿನ ಮತ್ತು ಟಿ20 ಸರಣಿಗಾಗಿ ನ್ಯೂಜಿಲೆಂಡ್ ಕ್ರಿಕೆಟ್ ತಂಡವನ್ನು ಪ್ರಕಟಿಸಲಾಗಿದೆ. ಕೇನ್ ವಿಲಿಯಮ್ಸನ್ ಅವರನ್ನು ಏಕದಿನ ಸರಣಿಯಿಂದ ಕೈಬಿಡಲಾಗಿದ್ದು, ಮೈಕಲ್ ಬ್ರೇಸ್‌ವೆಲ್ ತಂಡವನ್ನು ಮುನ್ನಡೆಸಲಿದ್ದಾರೆ.  

Read Full Story

09:34 AM (IST) Dec 24

ನ್ಯಾ. ಕುನ್ಹಾ ಆಯೋಗದ ಶಿಫಾರಸು ಪಾಲಿಸಿದ್ರೆ ಕ್ರಿಕೆಟ್‌ಗೆ ಒಪ್ಪಿಗೆ - ಸಿಎಂ ಸಿದ್ದರಾಮಯ್ಯ

ಚಿನ್ನಸ್ವಾಮಿ ಕ್ರೀಡಾಂಗಣದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದ ನ್ಯಾ.ಮೈಕಲ್‌ ಡಿ.ಕುನ್ಹಾ ಆಯೋಗದ ಶಿಫarಸುಗಳನ್ನು ಅಳವಡಿಸಿಕೊಂಡರೆ ಮಾತ್ರ ಕ್ರಿಕೆಟ್‌ ಪಂದ್ಯಗಳಿಗೆ ಅನುಮತಿ ನೀಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.  

Read Full Story

09:20 AM (IST) Dec 24

ವಿಜಯ್ ಹಜಾರೆ ಟ್ರೋಫಿ - ಇಂದು ಎಲ್ಲರ ಕಣ್ಣು ವಿರಾಟ್ ಕೊಹ್ಲಿ ಮೇಲೆ!

ವಿಜಯ್ ಹಜಾರೆ ರಾಷ್ಟ್ರೀಯ ಏಕದಿನ ಟೂರ್ನಿಯು ಆರಂಭವಾಗಲಿದ್ದು, ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ ಸೇರಿದಂತೆ ಪ್ರಮುಖ ಆಟಗಾರರು ಭಾಗವಹಿಸಲಿದ್ದಾರೆ. ಹಾಲಿ ಚಾಂಪಿಯನ್ ಕರ್ನಾಟಕ ತಂಡವು ಮಯಾಂಕ್ ಅಗರ್ವಾಲ್ ನಾಯಕತ್ವದಲ್ಲಿ ತನ್ನ ಮೊದಲ ಪಂದ್ಯವನ್ನು ಜಾರ್ಖಂಡ್ ವಿರುದ್ಧ ಆಡಲಿದೆ.
Read Full Story

09:18 AM (IST) Dec 24

ಸ್ಮಾರ್ಟ್‌ಫೋನ್‌ಗಳಿಗೆ ನೇರವಾಗಿ ಬಾಹ್ಯಾಕಾಶದಿಂದ ಬ್ರಾಡ್‌ಬ್ಯಾಂಡ್ ಸಂಪರ್ಕ - ನಭಕ್ಕೆ ಚಿಮ್ಮಿದ LVM3 M6

ಇಸ್ರೋ, ತನ್ನ LVM3-M6 ರಾಕೆಟ್ ಮೂಲಕ ಅಮೆರಿಕದ ಬ್ಲೂಬರ್ಡ್ ಬ್ಲಾಕ್-2 ಸಂವಹನ ಉಪಗ್ರಹವನ್ನು ಶ್ರೀಹರಿಕೋಟಾದಿಂದ ಯಶಸ್ವಿಯಾಗಿ ಉಡಾವಣೆ ಮಾಡಿದೆ. ಈ ಉಪಗ್ರಹವು ಸಾಮಾನ್ಯ ಸ್ಮಾರ್ಟ್‌ಫೋನ್‌ಗಳಿಗೆ ನೇರವಾಗಿ ಬಾಹ್ಯಾಕಾಶದಿಂದ ಬ್ರಾಡ್‌ಬ್ಯಾಂಡ್ ಸಂಪರ್ಕವನ್ನು ಒದಗಿಸುವ ಗುರಿ ಹೊಂದಿದೆ.

Read Full Story

09:00 AM (IST) Dec 24

ಬ್ಯಾಕ್ ಟು ಬ್ಯಾಕ್ ಎರಡೆರಡು ಬೊಗಳೆ ಬಿಟ್ಟು ನಗೆಪಾಟಲಿಗೀಡಾದ ಪಾಕಿಸ್ತಾನದ ಆಸೀಂ ಮುನೀರ್

ಪಾಕಿಸ್ತಾನದ ಸೇನಾ ಮುಖ್ಯಸ್ಥ ಆಸೀಂ ಮುನೀರ್, ಭಾರತದ ರಫೇಲ್, ಸುಖೋಯ್, ಎಸ್-400 ವ್ಯವಸ್ಥೆಗಳನ್ನು ಹೊಡೆದುರುಳಿಸಿದ್ದೇವೆ ಎಂದು ಬ್ಯಾಕ್ ಟು ಬ್ಯಾಕ್ ಎರಡೆರಡು ಬೊಗಳೆ ಬಿಟ್ಟು ನಗೆಪಾಟಲಿಗೀಡಾಗಿದ್ದಾರೆ. 

Read Full Story

08:50 AM (IST) Dec 24

Extreme fast-food consumer - ಸಿಕ್ಕಾಪಟ್ಟೆ ಫಾಸ್ಟ್‌ಫುಡ್‌ ತಿನ್ನುತ್ತಿದ್ದ 16ರ ಬಾಲಕಿ ಅನಾರೋಗ್ಯಕ್ಕೆ ಸಾವು

ಅತಿಯಾದ ಫಾಸ್ಟ್‌ಫುಡ್‌ ಸೇವನೆಯಿಂದ 16 ವರ್ಷದ ಬಾಲಕಿ ಹೃದಯಾಘಾತದಿಂದ ಮೃತಪಟ್ಟಿದ್ದಾಳೆ.  ಬರ್ಗರ್‌, ಪಿಜ್ಜಾ, ಮ್ಯಾಗಿ ಮೊದಲಾದ ಫಾಸ್ಟ್‌ ಫುಡ್‌ಗಳನ್ನೇ ಹೆಚ್ಚಾಗಿ ಸೇವಿಸುತ್ತಿದ್ದಳು.

Read Full Story

08:36 AM (IST) Dec 24

ಯೂನಸ್‌ ನೇತೃತ್ವದ ಮಧ್ಯಂತರ ಸರ್ಕಾರಕ್ಕೆ ಪದಚ್ಯುತಗೊಳಿಸುವ ಎಚ್ಚರಿಕೆ

ಭಾರತ ವಿರೋಧಿ ಯುವ ಮುಖಂಡ ಉಸ್ಮಾನ್‌ ಹದಿ ಹತ್ಯೆಯು ಬಾಂಗ್ಲಾದೇಶದಲ್ಲಿ ರಾಜಕೀಯ ಬಿಕ್ಕಟ್ಟನ್ನು ಸೃಷ್ಟಿಸಿದೆ. ಹತ್ಯೆಯ ಪಾರದರ್ಶಕ ತನಿಖೆಗೆ ಆಗ್ರಹಿಸಿರುವ ಇನ್‌ಕಿಲಾಬ್‌ ಮಂಚ್‌ ಪಕ್ಷ, ಮಧ್ಯಂತರ ಸರ್ಕಾರವನ್ನು ಪದಚ್ಯುತಗೊಳಿಸುವ ಎಚ್ಚರಿಕೆ ನೀಡಿದೆ. 

Read Full Story

08:18 AM (IST) Dec 24

ಕಾಂಗ್ರೆಸ್ ನಾಯಕರ ಕುಟುಂಬಕ್ಕೆ ಸಂಕಷ್ಟ - ಏನಿದು ಕೇಸ್?

ಚೀನಾ ಪ್ರಜೆಗಳಿಗೆ ಅಕ್ರಮವಾಗಿ ವೀಸಾ ನೀಡಿದ ಹಗರಣದಲ್ಲಿ ಕಾಂಗ್ರೆಸ್ ಸಂಸದ ಕಾರ್ತಿ ಚಿದಂಬರಂ ವಿರುದ್ಧ ದೋಷಾರೋಪ ಹೊರಿಸಲು ದೆಹಲಿ ಕೋರ್ಟ್ ಆದೇಶಿಸಿದೆ. ಕಾಂಗ್ರೆಸ್ ನಾಯಕ ಸಲ್ಮಾನ್ ಖುರ್ಷಿದ್ ಅವರ ಪತ್ನಿ ಲೂಯಿಸ್ ಖುರ್ಷಿದ್ ವಿರುದ್ಧ ಇ.ಡಿ. ಸಲ್ಲಿಸಿದ್ದ ಆರೋಪಪಟ್ಟಿಯನ್ನು ಲಖನೌ ಕೋರ್ಟ್ ಸ್ವೀಕರಿಸಿದೆ.

Read Full Story

08:05 AM (IST) Dec 24

ದೇಶದಲ್ಲಿ ಬಂಗಾರ, ಬೆಳ್ಳಿ ದಾಖಲೆ - ಬೆಲೆ ಏರಿಕೆ ಪರ್ವದ ಹಿಂದಿನ ರಹಸ್ಯ ಏನು?

ದೇಶದಲ್ಲಿ ಬಂಗಾರ ಮತ್ತು ಬೆಳ್ಳಿಯ ಬೆಲೆ ಏರಿಕೆ ಪರ್ವ ಮುಂದುವರಿದಿದ್ದು, 10 ಗ್ರಾಂ ಚಿನ್ನದ ಬೆಲೆ 1,40,850 ರು. ಹಾಗೂ 1 ಕೆಜಿ ಬೆಳ್ಳಿಯ ಬೆಲೆ 2,17,250 ರು.ಗೆ ತಲುಪಿ ಹೊಸ ದಾಖಲೆ ನಿರ್ಮಿಸಿದೆ. ಆರ್ಥಿಕ ಅನಿಶ್ಚಿತತೆ, ಅಮೆರಿಕದ ಬಡ್ಡಿ ದರ ಇಳಿಕೆ ಚಿನ್ನದತ್ತ ಹೂಡಿಕೆದಾರರನ್ನು ಸೆಳೆಯುತ್ತಿದೆ

Read Full Story

More Trending News