LIVE NOW
Published : Feb 25, 2026, 06:52 AM ISTUpdated : Feb 25, 2026, 09:30 AM IST

India Latest News Live: ಜಿಂಬಾಬ್ವೆ ಎದುರಿನ ಮಹತ್ವದ ಪಂದ್ಯಕ್ಕೂ ಮುನ್ನ ಮನೆಯತ್ತ ಓಡಿದ ಟೀಂ ಇಂಡಿಯಾ ಸ್ಟಾರ್ ಕ್ರಿಕೆಟಿಗ! ಅಷ್ಟಕ್ಕೂ ಆಗಿದ್ದೇನು?

ಸಾರಾಂಶ

ಹೈದರಾಬಾದ್‌: ಇಲ್ಲಿನ ದ್ವಿಮುಖಿ ಆಂಜನೇಯ ದೇಗುಲದಲ್ಲಿನ ಆಂಜನೇಯ ಮೂರ್ತಿಯ ಹಣೆಯಲ್ಲಿದ್ದ ಸಿಂದೂರವನ್ನು ಅಳಿಸಿಹಾಕಿ ವಿರೂಪಗೊಳಿಸಿದ ಘಟನೆ ನಡೆದಿದೆ. ಈ ಸಂಬಂಧ ಪ್ರಕರಣ ದಾಖಲಾಗಿದ್ದು, ಆರೋಪಿಗಳ ಪತ್ತೆಗೆ ಪೊಲೀಸರು ಶೋಧ ಆರಂಭಿಸಿದ್ದಾರೆ.

ಅತ್ತ ಘಟನೆಯನ್ನು ಖಂಡಿಸಿರುವ ಬಿಜೆಪಿಯ ರಾಜ್ಯಾಧ್ಯಕ್ಷ ಎನ್‌. ರಾಮಚಂದ್ರರಾವ್‌, ‘ತೆಲಂಗಾಣದಲ್ಲಿ ಒಂದರಹಿಂದೊಂದರಂತೆ ನಡೆಯುತ್ತಿರುವ ಇಂತಹ ಘಟನೆಗಳು ಪ್ರತ್ಯೇಕ ಪ್ರಕರಣಗಳಲ್ಲ. ಬದಲಿಗೆ ಸನಾತನ ಧರ್ಮದ ವಿರುದ್ಧದ ಯೋಜಿತ ಸಂಚು. ಇದು ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆಗೆ ಮಾರಕ’ ಎಂದಿದ್ದು, ಆರೋಪಿಗಳ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿದ್ದಾರೆ. ಜತೆಗೆ, ವೋಟ್‌ಬ್ಯಾಂಕ್‌ ರಾಜಕಾರಣದಲ್ಲಿ ತೊಡಗಿರುವ ರಾಜ್ಯ ಕಾಂಗ್ರೆಸ್‌ ಸರ್ಕಾರವು ಇಂತಹ ಸಮಾಜವಿರೋಧಿ ಕೃತ್ಯಗಳನ್ನು ತಡೆಯುವಲ್ಲಿ ವಿಫಲವಾಗಿದೆ ಎಂದು ಕಿಡಿ ಕಾರಿದ್ದಾರೆ.

09:30 AM (IST) Feb 25

ಜಿಂಬಾಬ್ವೆ ಎದುರಿನ ಮಹತ್ವದ ಪಂದ್ಯಕ್ಕೂ ಮುನ್ನ ಮನೆಯತ್ತ ಓಡಿದ ಟೀಂ ಇಂಡಿಯಾ ಸ್ಟಾರ್ ಕ್ರಿಕೆಟಿಗ! ಅಷ್ಟಕ್ಕೂ ಆಗಿದ್ದೇನು?

ಟಿ20 ವಿಶ್ವಕಪ್‌ನ ಸೂಪರ್-8 ಹಂತದ ನಿರ್ಣಾಯಕ ಪಂದ್ಯಕ್ಕೂ ಮುನ್ನ, ಸ್ಟಾರ್ ಫಿನಿಶರ್ ರಿಂಕು ಸಿಂಗ್ ಕುಟುಂಬದ ತುರ್ತು ಪರಿಸ್ಥಿತಿಯಿಂದಾಗಿ ತವರಿಗೆ ಮರಳಿದ್ದಾರೆ. ಜಿಂಬಾಬ್ವೆ ವಿರುದ್ಧದ 'ಮಾಡು ಇಲ್ಲವೇ ಮಡಿ' ಪಂದ್ಯದಲ್ಲಿ ಅವರ ಅನುಪಸ್ಥಿತಿಯು ತಂಡಕ್ಕೆ ಹಿನ್ನಡೆಯಾಗಿದೆ.

Read Full Story

08:58 AM (IST) Feb 25

ಟಿ20ಯಲ್ಲಿ ಟೆಸ್ಟ್ ಆಟ; ವಿಶ್ವಕಪ್ ಇತಿಹಾಸದಲ್ಲೇ ಅತ್ಯಂತ ಕೆಟ್ಟ ದಾಖಲೆ ಬರೆದ ಪಾಕ್ ಕ್ರಿಕೆಟಿಗ ಬಾಬರ್ ಅಜಂ!

ಟಿ20 ವಿಶ್ವಕಪ್ ಇತಿಹಾಸದಲ್ಲಿ 500ಕ್ಕೂ ಹೆಚ್ಚು ರನ್ ಗಳಿಸಿದ ಆಟಗಾರರ ಪೈಕಿ, ಪಾಕಿಸ್ತಾನದ ಬಾಬರ್ ಅಜಂ ಅತಿ ಕಡಿಮೆ ಸ್ಟ್ರೈಕ್ ರೇಟ್ ಹೊಂದಿದ ಆಟಗಾರ ಎಂಬ ಕೆಟ್ಟ ದಾಖಲೆ ಬರೆದಿದ್ದಾರೆ. ಇಂಗ್ಲೆಂಡ್ ವಿರುದ್ಧದ ಪಂದ್ಯದಲ್ಲಿ 24 ಎಸೆತಗಳಲ್ಲಿ 25 ರನ್ ಗಳಿಸಿದ ಅವರ ನಿಧಾನಗತಿಯ ಆಟವು ಈ ದಾಖಲೆಗೆ ಕಾರಣವಾಯಿತು.

Read Full Story

07:50 AM (IST) Feb 25

ದೇಶದಲ್ಲೇ ಮೊದಲು, ಕೇರಳ ನಾಗರಿಕರಿಗೆ ನೇಟಿವಿಟಿ ಕಾರ್ಡ್! ವಿವಿಧ ಸೌಲಭ್ಯ ಪಡೆಯಲು ಚಾನ್ಸ್‌

ಕೇರಳ ವಿಧಾನಸಭೆಯು ರಾಜ್ಯದ ಮೂಲ ನಿವಾಸಿಗಳಿಗಾಗಿ 'ನೇಟಿವಿಟಿ ಕಾರ್ಡ್' ಮಸೂದೆಗೆ ಅನುಮೋದನೆ ನೀಡಿದ್ದು, ಇದು ದೇಶದಲ್ಲೇ ಮೊದಲ ಇಂತಹ ವ್ಯವಸ್ಥೆಯಾಗಿದೆ. ಈ ಅಧಿಕೃತ ಗುರುತಿನ ಚೀಟಿಯು ಕೇರಳಿಗರಿಗೆ ಸರ್ಕಾರದ ವಿವಿಧ ಸೇವೆಗಳು ಮತ್ತು ಸೌಲಭ್ಯಗಳನ್ನು ಪಡೆಯಲು ಸಹಾಯ ಮಾಡುತ್ತದೆ.

Read Full Story

More Trending News