ಮುಂಬೈ: ಅಪಾರ್ಟ್ಮೆಂಟ್ ಮೇಲೆ ಗುಂಡಿನ ದಾಳಿ ನಡೆಸಿದ ಆರೋಪದ ಪ್ರಕರಣದಲ್ಲಿ ಬಾಲಿವುಡ್ ನಟ ಕಮಾಲ್ ರಶೀದ್ ಖಾನ್ನನ್ನು ಪೊಲೀಸರು ಬಂಧಿಸಿದ್ದಾರೆ. ‘ಜ.18ರಂದು ಅಂಧೇರಿ ಬಳಿಯ ಓಶಿವಾರಾದ ನಳಂದಾ ಸೊಸೈಟಿಯ 2ನೇ ಮತ್ತು ನಾಲ್ಕನೇ ಮಹಡಿಯ ಮನೆಗಳ ಗುಂಡಿನ ದಾಳಿ ನಡೆದಿತ್ತು. ಬರಹಗಾರರು ಮತ್ತು ಮಾಡೆಲ್ಗಳನು ವಾಸವಿದ್ದ ಮನೆಯ ಮೇಲೆ ನಡೆದ ಗುಂಡಿನ ದಾಳಿ ತನಿಖೆ ವೇಳೆ, ಅಲ್ಲಿ ಸಿಕ್ಕ ಗುಂಡು ಕಮಾಲ್ ಖಾನ್ ಗನ್ನಿಂದ ಹಾರಿದ್ದು ಎಂದು ಸಾಬೀತಾಗಿತ್ತು. ವಿಚಾರಣೆ ವೇಳೆ ದಾಳಿ ನಡೆಸಿದ್ದನ್ನು ಖಾನ್ ಒಪ್ಪಿಕೊಂಡಿದ್ದ. ಈ ಹಿನ್ನೆಲೆಯಲ್ಲಿ ಅವರನ್ನು ಬಂಧಿಸಲಾಗಿದೆ. ಗುಂಡಿನ ದಾಳಿಗೆ ಕಾರಣ ತಿಳಿದುಬಂದಿಲ್ಲ

12:04 AM (IST) Jan 26
ಧಾರಾವಾಹಿಗಳಲ್ಲಿ ಅವಕಾಶ ಕೊಡಿಸುವುದಾಗಿ ನಂಬಿಸಿ ಮುಂಬೈನ ಮಹಿಳಾ ಕಲಾವಿದೆಯೊಬ್ಬರನ್ನು ಲೈಂಗಿಕ ಶೋಷಣೆ. ಆರೋಪಿಗಳು ಸಂತ್ರಸ್ತೆಗೆ ಡ್ರಗ್ಸ್ ನೀಡಿ, ಆಕೆಯ ಅಶ್ಲೀಲ ವಿಡಿಯೋಗಳನ್ನು ಚಿತ್ರೀಕರಿಸಿ ಇಂಟರ್ನೆಟ್ಗೆ ಹರಿಬಿಟ್ಟಿದ್ದಾರೆ. ಕೊಲೆ ಬೆದರಿಕೆ ನಡುವೆಯೂ ಸಂತ್ರಸ್ತೆ ಪೊಲೀಸರಿಗೆ ದೂರು ನೀಡಿದ್ದಾರೆ.
11:17 PM (IST) Jan 25
ರಾಜಕೀಯ ವಿಷಯಗಳ ಬಗ್ಗೆ ವಿದೇಶದಲ್ಲಿ ಪ್ರತಿಕ್ರಿಯಿಸುವುದು ಸರಿಯಲ್ಲ ಎಂದು ಶಶಿ ತರೂರ್ ಹೇಳಿದ್ದಾರೆ. ಮಾಧ್ಯಮಗಳ ಮೂಲಕ ಸುದ್ದಿ ತಿಳಿದಿದ್ದೇನೆ, ಬೇರೆ ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ ಎಂದಿದ್ದಾರೆ.
10:46 PM (IST) Jan 25
ಕೇವಲ 14 ಎಸೆತದಲ್ಲಿ ಹಾಫ್ ಸೆಂಚುರಿ, ನ್ಯೂಜಿಲೆಂಡ್ ವಿರುದ್ಧದ 3ನೇ ಟಿ20ಯಲ್ಲಿ ಅಭಿಷೇಕ್ ಶರ್ಮಾ ಹಲವು ದಾಖಲೆ ಬರೆದಿದ್ದಾರೆ. ಸೂರ್ಯಕುಮಾರ್ ದಾಖಲೆ ಮುರಿದರೆ, ಯುವಿ ವಿಶ್ವ ದಾಖಲೆ ಸಮೀಪ ತಲುಪಿದ್ದಾರೆ.
10:00 PM (IST) Jan 25
ಪ್ರಮುಖ ನಾಯಕ ಕಾಂಗ್ರೆಸ್ನಿಂದ ಹೊರಬಂದು ಸಿಎಂ ಆಗಲಿದ್ದಾರೆ, ಜ್ಯೋತಿಷಿ ನುಡಿದ ಭವಿಷ್ಯದಿಂದ ರಾಜಕೀಯ ಚಟುವಟಿಕೆ ಗರಿಗೆದರಿದೆ. ಈ ಭವಿಷ್ಯ ಹೊರಬೀಳುತ್ತಿದ್ದಂತೆ ಕೆಲ ಮಹತ್ತರ ಬದಲಾವಣೆಗಳು ಕಾಣುತ್ತಿದೆ.
09:07 PM (IST) Jan 25
09:00 PM (IST) Jan 25
ಮಾಜಿ ಲವರ್ ಪತ್ನಿಗೆ ಅಪಘಾತ ಮಾಡಿಸಿ ಏಡ್ಸ್ ರಕ್ತ ಇಂಜೆಕ್ಟ್ ಮಾಡಿದ ಮಹಿಳಾ ನರ್ಸ್, ಬೆಚ್ಚಿ ಬೀಳಿಸುವ ಘಟನೆ ನಡೆದಿದೆ. ತನ್ನ ಮಾಜಿ ಗೆಳೆಯ ಬೇರೆ ಮದುವೆಯಾಗಿರುವುದು ಸಹಿಸಲು ಸಾಧ್ಯವಾಗದೆ ಮೂವರ ನೆರವು ಪಡೆದು ಈ ಕೃತ್ಯ ಎಸಗಲಾಗಿದೆ.
07:57 PM (IST) Jan 25
3 ನಿಮಿಷ 24 ಸೆಕೆಂಡ್ ವಿಡಿಯೋ ಲೀಕ್, ಈ ವೈರಲ್ ಕ್ಲಿಪ್ಗಾಗಿ ಜನ ಗೂಗಲ್, ಸೋಶಿಯಲ್ ಮೀಡಿಯಾ ಸೇರಿದಂತ ಎಲ್ಲೆಡೆ ಜಾಲಾಡುತ್ತಿದ್ದಾರೆ. ಯಾರು ಈ ಜನಪ್ರಿಯ ನಟಿ, ಏನಿದು ವಿಡಿಯೋ ಲೀಕ್ ಪ್ರಕರಣ?
07:24 PM (IST) Jan 25
ಗಾಯಕ ಪಲಾಶ್ ಮುಚ್ಚಲ್, ಸ್ಮೃತಿ ಮಂಧಾನ ಜೊತೆಗಿನ ತನ್ನ ಮದುವೆ ರದ್ದಾಗಲು ಕಾರಣವಾದ ರಹಸ್ಯವನ್ನು ಬಹಿರಂಗಪಡಿಸಿದ ಸ್ಮೃತಿಯ ಬಾಲ್ಯದ ಗೆಳೆಯ ವಿದ್ನ್ಯಾನ್ ಮಾನೆ ವಿರುದ್ಧ 10 ಕೋಟಿ ರೂ. ಮಾನನಷ್ಟ ಮೊಕದ್ದಮೆ ಹೂಡುವುದಾಗಿ ಘೋಷಿಸಿದ್ದಾರೆ.
06:42 PM (IST) Jan 25
ಶತವಧಾನಿ ಆರ್ ಗಣೇಶ್ ಸೇರಿ ಕರ್ನಾಟಕ 9 ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರಕಟ, ಇತ್ತೀಚೆಗೆ ನಿಧನರಾದ ಬಾಲಿವುಡ್ ನಟ ಧಮೇಂದ್ರ ಅವರಿಗೆ ಮರಣೋತ್ತರ ಪದ್ಮ ವಿಭೂಷಣ ಪ್ರಶಸ್ತಿಗೆ ಭಾಜನರಾಗಿದ್ದಾರೆ.
05:14 PM (IST) Jan 25
ನಟ ಅಜಿತ್ ಅವರ 'ಮಂಕಥಾ' ಚಿತ್ರದ ಮರು-ಬಿಡುಗಡೆ ಪ್ರದರ್ಶನದ ವೇಳೆ, ದಳಪತಿ ವಿಜಯ್ ಅವರ ಅಭಿಮಾನಿಯೊಬ್ಬರು ಅವರ ಹೊಸ ಪಕ್ಷದ ಧ್ವಜವನ್ನು ಪ್ರದರ್ಶಿಸಿದ್ದಾರೆ. ಇದರಿಂದ ಕೆರಳಿದ ಅಜಿತ್ ಅಭಿಮಾನಿಗಳು ಥಿಯೇಟರ್ನಲ್ಲೇ ವಿಜಯ್ ಅಭಿಮಾನಿಗೆ ಹಿಗ್ಗಾಮುಗ್ಗಾ ಥಳಿಸಿ, ಶರ್ಟ್ ಹರಿದು ಹಾಕಿದ್ದಾರೆ.
04:57 PM (IST) Jan 25
ಬಿಗ್ ಬಾಸ್ ಮಾಜಿ ಸ್ಪರ್ಧಿ ಜೊತೆ ಟೀಂ ಇಂಡಿಯಾ ಕ್ರಿಕೆಟಿಗನ ಡೇಟಿಂಗ್? ಜೊತೆಯಾಗಿ ಕಾಣಿಸಿಕೊಂಡ ಜೋಡಿ, ಇಬ್ಬರು ಜೊತೆಯಾಗಿ ರೆಸ್ಟೋರೆಂಟ್ ಹೊರಗೆ ಕಾಣಿಸಿಕೊಂಡಿದ್ದಾರೆ. ಆರ್ಜೆ ಮಹ್ವಾಶ್ ಅನ್ಫಾಲೋ ಮಾಡಿದ ಬೆನ್ನಲ್ಲೇ ಬಿಗ್ ಬಾಸ್ ಮಾಜಿ ಸ್ಪರ್ಧಿ ಜೊತೆ ಚಹಲ್ ಕಾಣಿಸಿಕೊಂಡಿದ್ದಾರೆ.
04:31 PM (IST) Jan 25
ಬಹಿಷ್ಕಾರದ ಬೆದರಿಕೆಗಳ ನಡುವೆಯೂ, 2026ರ ಟಿ20 ವಿಶ್ವಕಪ್ಗೆ ಪಾಕಿಸ್ತಾನ 15 ಸದಸ್ಯರ ತಂಡವನ್ನು ಪ್ರಕಟಿಸಿದೆ. ಸಲ್ಮಾನ್ ಅಲಿ ಆಘಾ ನಾಯಕತ್ವದ ತಂಡಕ್ಕೆ ಬಾಬರ್ ಅಜಂ ಮರಳಿದ್ದು, ಮೊಹಮ್ಮದ್ ರಿಜ್ವಾನ್ ಮತ್ತು ಹ್ಯಾರಿಸ್ ರೌಫ್ ಅವರಂತಹ ಪ್ರಮುಖ ಆಟಗಾರರನ್ನು ಕೈಬಿಡಲಾಗಿದೆ.
04:02 PM (IST) Jan 25
ಮನೆಯ ಗೃಹಿಣಿಯೊಬ್ಬರು ಸೋಫಾಗೆ ಸ್ವಲ್ಪ ಬಿಸಿಲು ತಾಗಲಿ ಎಂದು ಸೋಫಾವನ್ನು ಮನೆಯ ಹೊರಗೆ ಇಟ್ಟಿದ್ದರು. ಆದರೆ ಅವರ ಹೊರಗೆ ಹೋಗಿ ಒಳಗೆ ಬರುವಷ್ಟರಲ್ಲಿ ಅವರ ಸೊಗಸಾದ ಸೋಫಾ ಮಾಯವಾಗಿದೆ. ಹಾಗಿದ್ರೆ ಮನೆಯ ಮುಂಭಾಗ ಇದ್ದ ಸೋಫಾ ಏನಾಯ್ತು? ಇಲ್ಲಿದೆ ನೋಡಿ ಇಂಟರೆಸ್ಟಿಂಗ್ ಸ್ಟೋರಿ..
03:57 PM (IST) Jan 25
ಅಂಕೇಗೌಡ ಸೇರಿ ಮೂವರು ಕನ್ನಡಿಗರಿಗೆ ಪದ್ಮಶ್ರೀ ಪ್ರಶಸ್ತಿ, ದೇಶದ ಅತ್ಯುನ್ನತ ಪ್ರಶಸ್ತಿಗಳಲ್ಲಿ ಒಂದಾದ ಪದ್ಮ ಪುರಸ್ಕಾರ ಪ್ರಕಟಗೊಂಡಿದೆ. ಕರ್ನಾಟಕದ ಯಾರೆಲ್ಲೂ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ?
03:35 PM (IST) Jan 25
ನ್ಯೂಜಿಲೆಂಡ್ ವಿರುದ್ಧದ ಟಿ20 ಪಂದ್ಯದಲ್ಲಿ ಬುಮ್ರಾಗೆ ವಿಶ್ರಾಂತಿ ನೀಡಿದ ಟೀಮ್ ಮ್ಯಾನೇಜ್ಮೆಂಟ್ ನಿರ್ಧಾರವನ್ನು ಮೊಹಮ್ಮದ್ ಕೈಫ್ ತೀವ್ರವಾಗಿ ಟೀಕಿಸಿದ್ದಾರೆ. ಹೆಚ್ಚು ಪಂದ್ಯಗಳನ್ನು ಆಡದ ಬುಮ್ರಾಗೆ ವರ್ಕ್ಲೋಡ್ ಮ್ಯಾನೇಜ್ಮೆಂಟ್ ಹೆಸರಿನಲ್ಲಿ ವಿಶ್ರಾಂತಿ ನೀಡುವುದರಲ್ಲಿ ಅರ್ಥವಿಲ್ಲ ಎಂದಿದ್ದಾರೆ
03:02 PM (IST) Jan 25
ಸಾಲ ಬೇಕಂದ್ರೆ ಒಳ್ಳೆ ಸಿಬಿಲ್ ಸ್ಕೋರ್ ಇರಬೇಕು ಅನ್ನೋದು ಗೊತ್ತೇ ಇದೆ. ಆಮೇಲೆ ಬ್ಯಾಂಕ್ಗಳ ಸುತ್ತ ಅಲೆಯಬೇಕು. ಆದರೆ, ಹಾಗಿಲ್ಲದೆ ಫೋನ್ನಲ್ಲಿ ಒಂದೇ ಕ್ಲಿಕ್ನಲ್ಲಿ ಹಣ ನಿಮ್ಮ ಖಾತೆಗೆ ಬಂದರೆ ಚೆನ್ನಾಗಿರುತ್ತೆ ಅಲ್ವಾ! ಫೋನ್ಪೇ ಈಗ ಅಂತಹದ್ದೇ ಒಂದು ಫೀಚರ್ ತಂದಿದೆ.
02:53 PM (IST) Jan 25
01:20 PM (IST) Jan 25
ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್ಬಿಐ) ತನ್ನ ನಿಯಮಗಳಲ್ಲಿ ಬದಲಾವಣೆ ಮಾಡಿದೆ. ಇದು ಫೆಬ್ರವರಿ 15, 2026 ರಿಂದ ಜಾರಿಗೆ ಬರಲಿದೆ. ಬ್ಯಾಂಕ್ ಗ್ರಾಹಕರು ಈ ಬಗ್ಗೆ ವಿವರಗಳನ್ನು ತಿಳಿದುಕೊಳ್ಳುವುದು ಅವಶ್ಯಕ.
12:30 PM (IST) Jan 25
ಕೇರಳ-ಕರ್ನಾಟಕ ಗಡಿಯ ತೋಲ್ಪೆಟ್ಟಿಯಲ್ಲಿ, ದಾಖಲೆಗಳಿಲ್ಲದೆ ಬಸ್ನಲ್ಲಿ ಸಾಗಿಸುತ್ತಿದ್ದ ₹30.93 ಲಕ್ಷ ಸಮೇತ ಕೋಯಿಕ್ಕೋಡ್ನ ಯುವಕನನ್ನು ಅಬಕಾರಿ ಇಲಾಖೆ ಬಂಧಿಸಿದೆ. ಬೆಂಗಳೂರಿನಿಂದ ಕೋಯಿಕ್ಕೋಡ್ಗೆ ತೆರಳುತ್ತಿದ್ದ ಈತನನ್ನು ತಪಾಸಣೆ ವೇಳೆ ಹಿಡಿಯಲಾಗಿದೆ.
11:57 AM (IST) Jan 25
ಗುವಾಹಟಿ: ಭಾರತ-ನ್ಯೂಜಿಲೆಂಡ್ ನಡುವಿನ ಮೂರನೇ ಟಿ20 ಪಂದ್ಯವು ಇಂದು ಗುವಾಹಟಿಯಲ್ಲಿ ಆರಂಭವಾಗಲಿದ್ದು, ಸೂರ್ಯಕುಮಾರ್ ಯಾದವ್ ನೇತೃತ್ವದ ಟೀಂ ಇಂಡಿಯಾ ಸರಣಿ ಗೆಲ್ಲುವ ಲೆಕ್ಕಾಚಾರದಲ್ಲಿದೆ. ಟೀಂ ಇಂಡಿಯಾದಲ್ಲಿ ಒಂದು ಮೇಜರ್ ಚೇಂಜ್ ಆಗುವ ಸಾಧ್ಯತೆಯಿದೆ.
11:34 AM (IST) Jan 25
ಹಿರಿಯ ನಟಿ ಭಾನುಪ್ರಿಯಾ ಅವರು ಸ್ಟಾರ್ ನಟ ಜೊತೆಗಿನ ಸಿನಿಮಾದಲ್ಲಿನ ತಮ್ಮ ಪಾತ್ರದ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಆರಂಭದಲ್ಲಿ ಹೇಳಿದಂತೆ ಪಾತ್ರಕ್ಕೆ ಪ್ರಾಮುಖ್ಯತೆ ಇರಲಿಲ್ಲವೆಂದು ಬೇಸರದಿಂದ ಹೇಳಿಕೊಂಡಿದ್ದಾರೆ.
10:39 AM (IST) Jan 25
ಟಿ20 ವಿಶ್ವಕಪ್ 2026: ಬಾಂಗ್ಲಾದೇಶದ ದಾರಿಯಲ್ಲೇ ಪಾಕಿಸ್ತಾನ ಕೂಡ 2026ರ ಟಿ20 ವಿಶ್ವಕಪ್ನಿಂದ ಹಿಂದೆ ಸರಿಯುತ್ತಾ ಎಂಬ ಚರ್ಚೆ ಶುರುವಾಗಿದೆ. ಒಂದು ವೇಳೆ ಪಾಕ್ ಹಿಂದೆ ಸರಿದರೆ, ಆ ಜಾಗಕ್ಕೆ ಬರುವ ತಂಡ ಯಾವುದು? ಐಸಿಸಿ ಶ್ರೇಯಾಂಕದ ಆಧಾರದ ಮೇಲೆ ತೆಗೆದುಕೊಳ್ಳುವ ಈ ನಿರ್ಧಾರ ಏನು?
10:27 AM (IST) Jan 25
ರಾಷ್ಟ್ರೀಯ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಬ್ಯಾಂಕ್ (ನಬಾರ್ಡ್) 162 ಅಭಿವೃದ್ಧಿ ಸಹಾಯಕ (ಗುಂಪು-ಬಿ) ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಿದೆ. ಯಾವುದೇ ವಿಷಯದಲ್ಲಿ ಪದವಿ ಪಡೆದ ಅರ್ಹ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
10:24 AM (IST) Jan 25
ಭಾರತೀಯರು ಮತ್ತು ಬಂಗಾರವನ್ನು ಬೇರ್ಪಡಿಸಿ ನೋಡಲು ಸಾಧ್ಯವಿಲ್ಲ. ಚಿನ್ನವನ್ನು ಕೇವಲ ಹೂಡಿಕೆಯಾಗಿ ಮಾತ್ರವಲ್ಲದೆ, ಭಾವನಾತ್ಮಕವಾಗಿ ಕಾಣುವವರು ಬಹಳಷ್ಟು ಮಂದಿ ಇದ್ದಾರೆ. ಆದರೆ ಈ ಬಂಗಾರ ಅಸಲಿಗೆ ಹೇಗೆ ಹುಟ್ಟಿತು? ಇಷ್ಟು ಬೆಲೆಬಾಳುವ ವಸ್ತುವಾಗಿದ್ದು ಹೇಗೆಂದು ಈಗ ತಿಳಿಯೋಣ.
10:00 AM (IST) Jan 25
Korba Iron bridge, water pipeline theft ಸ್ಥಳೀಯಾಡಳಿತವು 20-30 ಟನ್ ತೂಗುವ ಗಟ್ಟಿಮುಟ್ಟಾದ ಕಬ್ಬಿಣದ ಸೇತುವೆಯನ್ನು ಕಟ್ಟಿಸಿತ್ತು. ಶುಕ್ರವಾರ ರಾತ್ರಿವರೆಗೂ ಜನರು ಇದರ ಮೇಲೆ ಓಡಾಡಿದ್ದಾರೆ.
09:41 AM (IST) Jan 25
ಮಧ್ಯಪ್ರದೇಶದ ಉಜ್ಜಯಿನಿ ಜಿಲ್ಲೆಯ ತರಾನಾ ಪಟ್ಟಣದಲ್ಲಿ ವಿಶ್ವ ಹಿಂದೂ ಪರಿಷತ್ನ ಯುವ ಮುಖಂಡನ ಮೇಲೆ ಹಲ್ಲೆ ನಡೆದ ನಂತರ ಕೋಮು ಹಿಂಸಾಚಾರ ಭುಗಿಲೆದ್ದಿದೆ. ಎರಡು ಗುಂಪುಗಳ ನಡುವಿನ ಈ ಸಂಘರ್ಷದಲ್ಲಿ ವಾಹನಗಳು ಮತ್ತು ಮನೆಗಳ ಮೇಲೆ ಕಲ್ಲುತೂರಾಟ ನಡೆದು, ವ್ಯಾಪಕ ವಿಧ್ವಂಸಕ ಕೃತ್ಯಗಳು ವರದಿಯಾಗಿವೆ.
09:21 AM (IST) Jan 25
ಚಿರಂಜೀವಿ ಮಧ್ಯಮ ವರ್ಗದ ಕುಟುಂಬದಿಂದ ಬಂದು ಮೆಗಾಸ್ಟಾರ್ ಆದ ನಟ. ಟಾಲಿವುಡ್ನಲ್ಲಿ ಮೆಗಾ ಸಾಮ್ರಾಜ್ಯವನ್ನೇ ಕಟ್ಟಿದ ಈ ಹೀರೋ, ಯಾರಿಗೂ ತಿಳಿಯದಂತೆ ಸಾಕಷ್ಟು ದಾನಗಳನ್ನೂ ಮಾಡಿದ್ದಾರೆ, ಈಗಲೂ ಮಾಡುತ್ತಿದ್ದಾರೆ. ಸಾವಿರಾರು ಕೋಟಿಗೆ ಒಡೆಯನಾಗಿರುವ ಚಿರಂಜೀವಿಯ ಒಂದು ದಿನದ ಖರ್ಚು ಎಷ್ಟು ಗೊತ್ತಾ?
09:15 AM (IST) Jan 25
09:05 AM (IST) Jan 25
08:57 AM (IST) Jan 25
ರಷ್ಯಾದಿಂದ ತೈಲ ಆಮದು ಕಡಿಮೆ ಮಾಡಿದರೆ ಭಾರತದ ಮೇಲಿನ ತೆರಿಗೆ ರದ್ದು ಮಾಡುವುದಾಗಿ ಅಮೆರಿಕ ಸುಳಿವು ನೀಡಿದೆ. ಮತ್ತೊಂದೆಡೆ, ಚೀನಾದೊಂದಿಗೆ ವ್ಯಾಪಾರ ಒಪ್ಪಂದ ಮಾಡಿಕೊಂಡರೆ ಕೆನಡಾದ ಮೇಲೆ ಶೇ.100ರಷ್ಟು ತೆರಿಗೆ ವಿಧಿಸುವುದಾಗಿ ಟ್ರಂಪ್ ಎಚ್ಚರಿಸಿದ್ದಾರೆ,
08:49 AM (IST) Jan 25
ತಿರುಮಲ ಲಡ್ಡು ತಯಾರಿಕೆಗೆ ಪ್ರಾಣಿಗಳ ಕೊಬ್ಬಿನಿಂದ ತಯಾರಿಸಿದ ನಕಲಿ ತುಪ್ಪ ಬಳಸಿದ ಪ್ರಕರಣದಲ್ಲಿ ಸಿಬಿಐ ಅಂತಿಮ ಆರೋಪಪಟ್ಟಿ ಸಲ್ಲಿಸಿದೆ. ಈ 250 ಕೋಟಿ ರೂ. ಹಗರಣದಲ್ಲಿ ಟಿಟಿಡಿ ಸಿಬ್ಬಂದಿ ಸೇರಿದಂತೆ 36 ಮಂದಿ ಭಾಗಿಯಾಗಿದ್ದು, 5 ವರ್ಷಗಳಲ್ಲಿ 68 ಲಕ್ಷ ಕೆ.ಜಿ ನಕಲಿ ತುಪ್ಪ ಪೂರೈಕೆಯಾಗಿದೆ.
08:28 AM (IST) Jan 25
2026ನೇ ಸಾಲಿನ IPL ಟೂರ್ನಿ ಆರಂಭಕ್ಕೆ ಕೆಲವೇ ದಿನಗಳು ಬಾಕಿ ಉಳಿದಿವೆ. ಹೀಗಿರುವಾಗಲೇ ಐದು ಬಾರಿಯ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್ಗೆ ಬಿಗ್ ಶಾಕ್ ಎದುರಾಗಿದೆ. ತಂಡದ ಸ್ಟಾರ್ ಆಟಗಾರ ರಣಜಿ ಟ್ರೋಫಿ ಆಡುವ ವೇಳೆ ಗಂಭೀರ ಗಾಯ ಮಾಡಿಕೊಂಡಿದ್ದು, ಅವರು ಐಪಿಎಲ್ ಆಡುವ ಬಗ್ಗೆ ಪ್ರಶ್ನೆಗಳು ಏಳಲಾರಂಭಿಸಿವೆ.
07:49 AM (IST) Jan 25
ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿರುವ, ತನ್ನ ಗುಂಪನ್ನು ತೊರೆದು ಪರ್ವತದತ್ತ ಸಾಗುತ್ತಿರುವ ಒಂಟಿ ಪೆಂಗ್ವಿನ್ ವಿಡಿಯೋದ ಅಸಲಿ ಕಥೆ ಬೇರೆಯೇ ಇದೆ. ಹಾಗಿದ್ದರೆ ಈ ಪೆಂಗ್ವಿನ್ನ ನಿಜವಾದ ಸ್ಟೋರಿ ಏನು?
07:22 AM (IST) Jan 25
ಶ್ರೀಮಂತ ಮಹಿಳೆಯರನ್ನು ಗುರಿಯಾಗಿಸಿ ಜಿಮ್ ಮೂಲಕ ಮತಾಂತರ ಮತ್ತು ಹಣ ಸುಲಿಗೆ ಮಾಡುತ್ತಿದ್ದ ವಿದೇಶಿ ನಂಟಿನ ಜಾಲವನ್ನು ಪೊಲೀಸರು ಭೇದಿಸಿದ್ದಾರೆ. ಮತ್ತೊಂದು ಪ್ರಕರಣದಲ್ಲಿ, ಸಹಪಾಠಿಯನ್ನು ಮತಾಂತರಗೊಳಿಸಲು ಯತ್ನಿಸಿದ ಆರೋಪದ ಮೇಲೆ ಐವರು ಅಪ್ರಾಪ್ತ ಮುಸ್ಲಿಂ ಬಾಲಕಿಯರ ವಿರುದ್ಧ ಪ್ರಕರಣ ದಾಖಲಾಗಿದೆ.
06:01 AM (IST) Jan 25