ಮುಂಬೈ: ಪ್ರತಿಭಟನೆಯಲ್ಲಿ ಭಾಗಿಯಾದರೆ ಬ್ಯಾಗ್ನಲ್ಲಿ ಡ್ರಗ್ಸ್ ಇಟ್ಟು ಜೀವನ ಹಾಳು ಮಾಡುವುದಾಗಿ ಪೊಲೀಸ್ ಒಬ್ಬರು ವಿದ್ಯಾರ್ಥಿಗಳಿಗೆ ಬೆದರಿಕೆ ಒಡ್ಡಿದ ಪ್ರಕರಣದ ಬೆನ್ನಲ್ಲೇ, ಮಫ್ತಿಯಲ್ಲಿದ್ದ ಪೊಲೀಸರೊಬ್ಬರು ನೀಟ್ ಸೋರಿಕೆ ವಿರುದ್ಧ ಪ್ರತಿಭಟಿಸುತ್ತಿದ್ದ ವಿದ್ಯಾರ್ಥಿನಿಯರನ್ನು ಅನುಚಿತವಾಗಿ ನಿಯಂತ್ರಿಸಲು ಯತ್ನಿಸುತ್ತಿದ್ದ ಘಟನೆ ಬೆಳಕಿಗೆ ಬಂದಿದೆ. ಇದು, ಮುಂಬೈ ಪೊಲೀಸರ ವಿರುದ್ಧ ಆಕ್ರೋಶಕ್ಕೆ ಕಾರಣವಾಗಿದೆ.
ದಾದರ್ನ ಶಿವಾಜಿ ಪಾರ್ಕ್ನಲ್ಲಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ರ ರಾಜೀನಾಮೆಗೆ ಆಗ್ರಹಿಸಿ ಪ್ರತಿಭಟನೆ ನಡೆಯುತ್ತಿದ್ದ ವೇಳೆ ಮಹಿಳೆಯರನ್ನೂ ನಿಯಂತ್ರಿಸಲು ಪೊಲೀಸರೊಬ್ಬರು ಯತ್ನಿಸಿದ ವಿಡಿಯೋವನ್ನು ಹಂಚಿಕೊಂಡ ವಿಪಕ್ಷ ನಾಯಕರು, ಆ ಪೊಲೀಸ್ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿದ್ದಾರೆ.
ಅತ್ತ ವಿಡಿಯೋ ಬಗ್ಗೆ ಸ್ಪಷ್ಟನೆ ನೀಡಿರುವ ಮುಂಬೈ ಪೊಲೀಸರು, ‘ವಿಡಿಯೋವನ್ನು ತಪ್ಪಾಗಿ ಅರ್ಥೈಸಿಕೊಳ್ಳಲಾಗುತ್ತಿದೆ. ಪುರುಷರನ್ನು ನಿಯಂತ್ರಿಸುತ್ತಿದ್ದ ವೇಳೆ ಮಹಿಳೆಯೊಬ್ಬರು ನಡುವೆ ಬಂದಿದ್ದರಷ್ಟೇ’ ಎಂದು ಸ್ಪಷ್ಟನೆ ನೀಡಲು ಯತ್ನಿಸಿದ್ದಾರೆ.
12:02 PM (IST) Jul 25
ಶೂಟಿಂಗ್ ಸೆಟ್ಗಳಲ್ಲಿ ಮಹಿಳಾ ಕಲಾವಿದರ ಸುರಕ್ಷತೆಯ ಬಗ್ಗೆ ಕಾಜಲ್ ಧ್ವನಿ ಎತ್ತಿರುವುದು ಈಗ ಚಿತ್ರರಂಗದಲ್ಲಿ ದೊಡ್ಡ ಚರ್ಚೆಗೆ ಕಾರಣವಾಗಿದೆ. ಸಿನಿತಾರೆಯರಿಗೂ ಸಾಮಾನ್ಯರಂತೆ ಗೌರವ ಮತ್ತು ಸುರಕ್ಷತೆ ಅತ್ಯಗತ್ಯ ಎಂಬುದು ಈ ಘಟನೆಯಿಂದ ಮತ್ತೊಮ್ಮೆ ಸಾಬೀತಾಗಿದೆ. ಈ ಸ್ಟೋರಿ ನೋಡಿ ಶಾಕ್ ಆಗ್ಬೇಡಿ..!
11:56 AM (IST) Jul 25
11:03 AM (IST) Jul 25
10:59 AM (IST) Jul 25
10:30 AM (IST) Jul 25
10:30 AM (IST) Jul 25
ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿ ವಿದ್ಯಾರ್ಥಿಗಳು ನಡೆಸುತ್ತಿರುವ ಪ್ರತಿಭಟನೆಗೆ ನಟಿ ಜ್ಯೋತಿಕಾ ಬೆಂಬಲ ಸೂಚಿಸಿದ್ದಾರೆ. ಸಚಿವರನ್ನು ಬದಲಿಸಲ್ಲ ಎಂದು ಸರ್ಕಾರ ಪಟ್ಟು ಹಿಡಿದಿದೆ. ಆದರೆ, ರಾಜೀನಾಮೆ ಪಡೆಯದಿದ್ದರೆ ದೇಶಾದ್ಯಂತ ಪ್ರತಿಭಟನೆ ನಡೆಸುವುದಾಗಿ ಸಿಜೆಪಿ ಎಚ್ಚರಿಕೆ
10:27 AM (IST) Jul 25
'ಕಾಕ್ರೋಚ್ ಜನತಾ ಪಾರ್ಟಿ' ಸಂಸ್ಥಾಪಕ ಅಭಿಜಿತ್ ದೀಪ್ಕೆ, ನೀಟ್ ಪೇಪರ್ ಸೋರಿಕೆ ವಿರುದ್ಧ ದೆಹಲಿಯ ಜಂತರ್ ಮಂತರ್ನಲ್ಲಿ ವಿಭಿನ್ನವಾಗಿ ಪ್ರತಿಭಟಿಸುತ್ತಿದ್ದಾರೆ. ಪ್ರತಿಭಟನೆಯ ನಡುವೆ ಕ್ರಿಕೆಟ್ ಆಡುವ ಮೂಲಕ ಗಮನ ಸೆಳೆದಿದ್ದಾರೆ.
10:13 AM (IST) Jul 25
ಆಸ್ಟ್ರೇಲಿಯಾ ಹಿಂದೆ ಸರಿದ ನಂತರ ಸ್ಕಾಟ್ಲೆಂಡ್ನ ಗ್ಲಾಸ್ಗೋದಲ್ಲಿ ಕಾಮನ್ವೆಲ್ತ್ ಕ್ರೀಡಾಕೂಟಕ್ಕೆ ಚಾಲನೆ ದೊರೆತಿದೆ. ಭಾರತ ತಂಡವನ್ನು ಮೀರಾಬಾಯಿ ಚಾನು ಮತ್ತು ಲವ್ಲೀನಾ ಮುನ್ನಡೆಸಿದರೆ, ಜುಡೋ ಪಟು ತುಲಿಕಾ ಮಾನ್ ಡೋಪಿಂಗ್ನಿಂದ ಹೊರಬಿದ್ದಿದ್ದು ಭಾರತಕ್ಕೆ ಆರಂಭಿಕ ಆಘಾತ ನೀಡಿದೆ. ಈಜುಪಟು ಶ್ರೀಹರಿ ನಟರಾಜ್ ಸೆಮಿಫೈನಲ್ ಪ್ರವೇಶಿಸಿದ್ದಾರೆ.
09:43 AM (IST) Jul 25
ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುವ ಪ್ರತಿಯೊಂದು ವಿಷಯವನ್ನೂ ಕಣ್ಣು ಮುಚ್ಚಿ ನಂಬಿದರೆ ಏನಾಗುತ್ತದೆ ಎಂಬುದಕ್ಕೆ ಚೀನಾದಲ್ಲಿ ನಡೆಯುತ್ತಿರುವ ಈ ಘಟನೆಗಳೇ ಸಾಕ್ಷಿ. ಕೇವಲ ಎರಡೇ ದಿನಗಳಲ್ಲಿ 4 ಕೆಜಿ ತೂಕ ಇಳಿಸಬಹುದು ಎಂಬ ಸುಳ್ಳು ಭರವಸೆಗೆ ಮರುಳಾಗಿ ಜನರು ಈಗ ಆಸ್ಪತ್ರೆ ಪಾಲಾಗುತ್ತಿದ್ದಾರೆ!
09:04 AM (IST) Jul 25
ವೈಭವ್ ಅವರ ಈ ಅದ್ಭುತ ಬ್ಯಾಟಿಂಗ್ ನೋಡಿದ ಮಾಜಿ ಕ್ರಿಕೆಟಿಗ ಮತ್ತು 1983ರ ವಿಶ್ವಕಪ್ ವಿಜೇತ ಕೆ.ಶ್ರೀಕಾಂತ್, ಗೌತಮ್ ಗಂಭೀರ್ ವಿರುದ್ಧ ಕಿಡಿಕಾರಿದ್ದಾರೆ. ಇಂಗ್ಲೆಂಡ್ ವಿರುದ್ಧದ ಸರಣಿಯಲ್ಲಿ ಕೇವಲ ಮೂರು ಪಂದ್ಯಗಳಲ್ಲಿ ವೈಫಲ್ಯ ಕಂಡಿದ್ದಕ್ಕೆ ವೈಭವ್ ಅವರನ್ನು ತಂಡದಿಂದ ಕೈಬಿಟ್ಟಿದ್ದನ್ನು ಶ್ರೀಕಾಂತ್ ಪ್ರಶ್ನಿಸಿದ್ದಾರೆ.
08:59 AM (IST) Jul 25
ಜಂತರ್ ಮಂತರ್ನಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆ ವಿಚಾರ ಕಾಂಗ್ರೆಸ್ ಸಂಸದೀಯ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಪ್ರಧಾನಿ ನರೇಂದ್ರ ಮೋದಿ ಸರ್ಕಾರ ವಿರುದ್ಧ ಶುಕ್ರವಾರ ತೀವ್ರ ವಾಗ್ದಾಳಿ ನಡೆಸಿದ್ದಾರೆ.
07:14 AM (IST) Jul 25