ಅಮರಾವತಿ (ಆಂಧ್ರ ಪ್ರದೇಶ): ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಲ್ಲಿ ಉಗ್ರವಾದವನ್ನು ಪಸರಿಸಿ, ಭಯೋತ್ಪಾದಕ ಕೃತ್ಯಗಳಿಗೆ ಸಂಚು ರೂಪಿಸುತ್ತಿದ್ದ 12 ಮಂದಿಯನ್ನು ಆಂಧ್ರ ಪ್ರದೇಶದ ಪೊಲೀಸರು ಬುಧವಾರ ಬಂಧಿಸಿದ್ದಾರೆ.

12:19 PM (IST) Mar 26
11:59 AM (IST) Mar 26
ಐಪಿಎಲ್ ಸೀಸನ್ ಆರಂಭಕ್ಕೂ ಮುನ್ನ, ಬಿಸಿಸಿಐ ಆಟಗಾರರಿಗಾಗಿ ಹೊಸ ನೀತಿ ಸಂಹಿತೆಯನ್ನು ಜಾರಿಗೆ ತಂದಿದೆ. ತರಬೇತಿ, ಪೋಸ್ಟ್-ಮ್ಯಾಚ್ ಪ್ರೆಸೆಂಟೇಷನ್ ಡ್ರೆಸ್ ಕೋಡ್ ಮತ್ತು ಕುಟುಂಬ ಸದಸ್ಯರ ಪ್ರವೇಶದ ಮೇಲೆ ಹಲವು ನಿರ್ಬಂಧಗಳನ್ನು ಹೇರಲಾಗಿದೆ.
11:50 AM (IST) Mar 26
ಲಖನೌ ಸೂಪರ್ ಜೈಂಟ್ಸ್ ತಂಡದಲ್ಲಿ ಅರ್ಜುನ್ ತೆಂಡೂಲ್ಕರ್ಗೆ ಆಡುವ ಅವಕಾಶ ಸಿಗುವುದಿಲ್ಲ ಎಂಬ ಆರ್. ಅಶ್ವಿನ್ ಹೇಳಿಕೆಗೆ, ಅರ್ಜುನ್ ಕೋಚ್ ಯೋಗರಾಜ್ ಸಿಂಗ್ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದಾರೆ. ಅಶ್ವಿನ್ ಹೇಳಿಕೆ ಅಸಂಬದ್ಧ ಎಂದಿರುವ ಅವರು, ಅರ್ಜುನ್ ಬ್ಯಾಟಿಂಗ್ ಸಾಮರ್ಥ್ಯದ ಬಗ್ಗೆ ಅಶ್ವಿನ್ಗೆ ತಿಳಿದಿಲ್ಲ ಎಂದು ತಿರುಗೇಟು ನೀಡಿದ್ದಾರೆ.
11:44 AM (IST) Mar 26
ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ರಾಹುಲ್ ಗಾಂಧಿ, ಕಾಂಗ್ರೆಸ್ ಪಕ್ಷವನ್ನು ಬಿಜೆಪಿಯ 'ಬಿ-ಟೀಮ್' ಎಂದು ಟೀಕಿಸಿದ್ದಾರೆ. ರಾಹುಲ್ ಗಾಂಧಿಗೆ ರಾಜಕೀಯ ಅರಿವಿನ ಕೊರತೆಯಿದೆ ಮತ್ತು ತಪ್ಪುಗಳಿಂದ ಪಾಠ ಕಲಿಯುತ್ತಿಲ್ಲ. ದೇಶದಾದ್ಯಂತ ಕಾಂಗ್ರೆಸ್, ಬಿಜೆಪಿಯ ನಿಲುವನ್ನೇ ಅನುಸರಿಸುತ್ತಿದೆ ಎಂದು ಕಿಡಿ.
11:39 AM (IST) Mar 26
ಮಲತಾಯಿಯ ಕಿರುಕುಳದಿಂದ ನೊಂದ 12 ವರ್ಷದ ಬಾಲಕಿಯೊಬ್ಬಳು, ತನ್ನ ತಾಯಿಯ ಸಮಾಧಿಯ ಬಳಿ ಗೋಳಾಡುತ್ತಿರುವ ಹೃದಯವಿದ್ರಾವಕ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
10:21 AM (IST) Mar 26
ಇರಾನ್-ಇಸ್ರೇಲ್ ಸಂಘರ್ಷದ ನಡುವೆಯೂ, ಭಾರತ, ಚೀನಾ ಮತ್ತು ರಷ್ಯಾದಂತಹ ಸ್ನೇಹಪರ ರಾಷ್ಟ್ರಗಳ ಹಡಗುಗಳಿಗೆ ಹಾರ್ಮುಜ್ ಜಲಸಂಧಿಯ ಮೂಲಕ ಸುರಕ್ಷಿತವಾಗಿ ಸಾಗಲು ಇರಾನ್ ಅನುಮತಿ ನೀಡಿದೆ. ವಿಶ್ವಸಂಸ್ಥೆಯ ಮನವಿಯ ಮೇರೆಗೆ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಇರಾನ್ ಹೇಳಿದೆ.
09:46 AM (IST) Mar 26
ಹೈದರಾಬಾದ್ನಲ್ಲಿ, ತನ್ನ ಪ್ರೀತಿಗೆ ವಿರೋಧ ವ್ಯಕ್ತಪಡಿಸಿದ ತಾಯಿಯನ್ನು ಮಗಳೇ ಪ್ರಿಯಕರನೊಂದಿಗೆ ಸೇರಿ ಕೊಲೆ ಮಾಡಿದ್ದಾಳೆ. ಒಂದು ವರ್ಷದ ಹಿಂದೆ ನಡೆದ ಈ ಘಟನೆ ಬೆಳಕಿಗೆ ಬಂದಿದ್ದು ಹೇಗೆ ಇಲ್ಲಿದೆ ಡಿಟೇಲ್ ಸ್ಟೋರಿ..
09:23 AM (IST) Mar 26
08:53 AM (IST) Mar 26
ಆಸ್ಟ್ರೇಲಿಯಾದ ಸ್ಪಿನ್ ದಿಗ್ಗಜ ಶೇನ್ ವಾರ್ನ್, 2008ರಲ್ಲಿ ರಾಜಸ್ಥಾನ್ ರಾಯಲ್ಸ್ ಜೊತೆ ಮಾಡಿಕೊಂಡಿದ್ದ ವಿಶೇಷ ಷೇರು ಒಪ್ಪಂದದಿಂದಾಗಿ ಅವರ ಕುಟುಂಬಕ್ಕೆ ಈಗ ಕೋಟ್ಯಂತರ ರೂಪಾಯಿ ಲಭಿಸಲಿದೆ. ತಂಡದಲ್ಲಿ 3% ಷೇರುಗಳನ್ನು ಹೊಂದಿದ್ದ ವಾರ್ನ್, ತಂಡದ ಹೊಸ ಮೌಲ್ಯಮಾಪನದ ಪ್ರಕಾರ ಸುಮಾರು 450 ಕೋಟಿ ರೂಪಾಯಿಗಳಷ್ಟು ಹಣವನ್ನು ತಮ್ಮ ಕುಟುಂಬಕ್ಕೆ ಆಸ್ತಿಯಾಗಿ ಬಿಟ್ಟುಹೋಗಿದ್ದಾರೆ.