ಅತ್ತ ಕರ್ನಾಟಕ ಸರ್ಕಾರ ಮೇಕೆದಾಟು ಅಣೆಕಟ್ಟು ಯೋಜನೆಗೆ ಜಾರಿಗೆ ಚುರುಕು ನೀಡಿರುವ ಹೊತ್ತಿನಲ್ಲೇ, ಇತ್ತ ಯೋಜನೆ ವಿರುದ್ಧ ಕಾನೂನು ಹೋರಾಟ ತೀವ್ರಗೊಳಿಸುವಂತೆ ತಮಿಳುನಾಡಿನ ಮುಖ್ಯಮಂತ್ರಿ ವಿಜಯ್, ತಮ್ಮ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಮೇಕೆದಾಟು ಅಣೆಕಟ್ಟು ವಿಷಯದಲ್ಲಿ ತಮಿಳುನಾಡು ಸರ್ಕಾರ ಯಾವುದೇ ಆಕ್ಷೇಪ ಎತ್ತುವಂತಿಲ್ಲ ಎಂದು ಕರ್ನಾಟಕದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಇತ್ತೀಚೆಗೆ ಹೇಳಿದ್ದರು. ಅದಕ್ಕೆ ಭಾನುವಾರ ಪ್ರತಿಕ್ರಿಯೆ ನೀಡಿದ್ದ ಡಿಎಂಕೆ ನಾಯಕ ಕೆ.ಎನ್. ನೆಹರು ‘ಡಿಕೆಶಿ ನೀಡಿರುವ ಹೇಳಿಕೆ ಅವರ ದುರಂಹಕಾರದ ಮನೋಭಾವ ತೋರಿಸುತ್ತದೆ. ತಮಿಳುನಾಡಿನಲ್ಲಿ ದುರ್ಬಲ ಮೈತ್ರಿ ಸರ್ಕಾರ ಅಸ್ತಿತ್ವದಲ್ಲಿದೆ ಎಂದು ಭಾವಿಸಿ ಅವರು ಇಂತಹ ಹೇಳಿಕೆ ನೀಡಿದ್ದಾರೆ. ಕಾಂಗ್ರೆಸ್ ಕೂಡ ಸಮ್ಮಿಶ್ರ ಸರ್ಕಾರದ ಭಾಗವಾಗಿರುವುದರಿಂದ ಯಾವುದೇ ವಿರೋಧ ಇರುವುದಿಲ್ಲ ಎಂದ ಈ ರೀತಿ ಹೇಳಿಕೆ ನೀಡುತ್ತಿದ್ದಾರೆ’ ಎಂದು ಆರೋಪಿಸಿದ್ದರು.

11:49 PM (IST) May 26
10:46 PM (IST) May 26
ರಾಮ್ಚರಣ್ ತೇಜ ನಟನೆಯ ‘ಪೆದ್ದಿ’ ಚಿತ್ರಕ್ಕೆ ನಾಯಕಿಯಾಗಿರುವ ಜಾನ್ವಿ ಚಿತ್ರತಂಡದ ಜೊತೆಗೆ ಬೆಂಗಳೂರಿಗೆ ಬಂದಿದ್ದರು. ನೂರಾರು ಮಂದಿ ಅಭಿಮಾನಿಗಳ ಸಮ್ಮುಖದಲ್ಲಿ ಜಾನ್ವಿ ಕಪೂರ್, ಶಿವಣ್ಣ ಬಗ್ಗೆ ಮಾತನಾಡಿದರು.
10:09 PM (IST) May 26
09:39 PM (IST) May 26
09:01 PM (IST) May 26
ಜೆಎಸ್ಡಬ್ಲ್ಯೂ ಎಂಜಿ ಮೋಟಾರ್ ಇಂಡಿಯಾ, ಟೊಯೋಟಾ ಫಾರ್ಚೂನರ್ಗೆ ಪ್ರತಿಸ್ಪರ್ಧಿಯಾಗಿ ತನ್ನ ಅತಿದೊಡ್ಡ ಮತ್ತು ಶಕ್ತಿಶಾಲಿ ಎಸ್ಯುವಿ 'ಎಂಜಿ ಮೆಜೆಸ್ಟರ್' ಅನ್ನು ಬಿಡುಗಡೆ ಮಾಡಲು ಸಜ್ಜಾಗಿದೆ. ಗುಜರಾತ್ನಲ್ಲಿ ಉತ್ಪಾದನೆ ಆರಂಭವಾಗಿದ್ದು, ಪ್ರೀ-ಬುಕಿಂಗ್ ಪ್ರಕ್ರಿಯೆ ಶುರುವಾಗಿದೆ.
07:45 PM (IST) May 26
ಕೇಂದ್ರ ಸರ್ಕಾರದ ರೈತ ವಿರೋಧಿ ನೀತಿಯಿಂದಾಗಿ ಜಿಲ್ಲೆಗಳ ನೈಸರ್ಗಿಕ ಸಂಪನ್ಮೂಲಗಳಿಂದ ಸಿಗುವ ಆದಾಯ ಸ್ಥಳೀಯ ರೈತರಿಗೆ ದೊರೆತಿಲ್ಲ ಎಂದು ಕಾನೂನು ಹಾಗೂ ಪ್ರವಾಸೋದ್ಯಮ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ.ಪಾಟೀಲ ತಿಳಿಸಿದರು.
07:27 PM (IST) May 26
ಐಪಿಎಲ್ 2026 ಟೂರ್ನಿಯ ಮೊದಲ ಕ್ವಾಲಿಫೈಯರ್ ಪಂದ್ಯದ ಟಾಸ್ ಪ್ರಕ್ರಿಯೆ ಮುಗಿದಿದೆ. ಟಾಸ್ ಗೆದ್ದ ಗುಜರಾತ್ ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿದೆ. ತಂಡದಲ್ಲಿನ ಬದಲಾವಣೆ ಏನು? ಆರ್ಸಿಬಿ ಪ್ಲೇಯಿಂಗ್ 11ನಲ್ಲಿ ಯಾರಿದ್ದಾರೆ.
06:27 PM (IST) May 26
06:04 PM (IST) May 26
ಬ್ಯುಸಿನೆಸ್ ಪ್ರಪೋಸಲ್ ಅಂತ ಮೊದಲು ನನ್ನನ್ನು ಸಂಪರ್ಕಿಸಿದ್ದು ಇನ್ಸ್ಟಾಗ್ರಾಂ ಮೂಲಕ. ಆಮೇಲೆ ನಡೆದಿದ್ದೇ ಬೇರೆ ಎಂದು ಗಾಯಕಿ ಮತ್ತು ಉದ್ಯಮಿ ಅಭಿರಾಮಿ ಸುರೇಶ್ ಹೇಳಿಕೊಂಡಿದ್ದಾರೆ.
05:44 PM (IST) May 26
ನಿಮ್ಮ ಮನೆಯ ಫ್ರಿಡ್ಜ್ ಸರಿಯಾಗಿ ಕೂಲ್ ಆಗ್ತಿಲ್ವಾ? ಕರೆಂಟ್ ಬಿಲ್ ಜಾಸ್ತಿ ಬರ್ತಿದ್ಯಾ? ಹಾಗಿದ್ರೆ ನೀವು ತಿಳಿಯದೆ ಮಾಡುವ ಈ ತಪ್ಪುಗಳೇ ಕಾರಣವಿರಬಹುದು. ಬಿಸಿ ಆಹಾರವನ್ನು ನೇರವಾಗಿ ಫ್ರಿಡ್ಜ್ನಲ್ಲಿ ಇಡುವುದರಿಂದ ಕಂಪ್ರೆಸರ್ಗೆ ಹೆಚ್ಚು ಒತ್ತಡ ಬೀಳುತ್ತದೆ.
05:43 PM (IST) May 26
ಪಂಜಾಬ್ ಕಿಂಗ್ಸ್ ವೇಗಿ ಅರ್ಶ್ದೀಪ್ ಸಿಂಗ್, ಐಪಿಎಲ್ 2026ರ ಕಳಪೆ ಪ್ರದರ್ಶನದ ನಂತರ, ತಮ್ಮ ಇನ್ಸ್ಟಾಗ್ರಾಮ್ ಖಾತೆಯಿಂದ ವಿರಾಟ್ ಕೊಹ್ಲಿ ಜೊತೆಗಿನ ವೈರಲ್ ವಿಡಿಯೋ ಸೇರಿದಂತೆ 200ಕ್ಕೂ ಹೆಚ್ಚು ಪೋಸ್ಟ್ಗಳನ್ನು ದಿಢೀರ್ ಅಳಿಸಿಹಾಕಿದ್ದಾರೆ. ಈ ಅನಿರೀಕ್ಷಿತ ಬೆಳವಣಿಗೆಯ ಹಿಂದಿನ ಕಾರಣ ಸ್ಪಷ್ಟವಾಗಿಲ್ಲ.
05:32 PM (IST) May 26
05:26 PM (IST) May 26
ಮೆಗಾ ಪವರ್ ಸ್ಟಾರ್ ರಾಮ್ ಚರಣ್ ನಟನೆಯ 'ಪೆದ್ದಿ' ಚಿತ್ರದಲ್ಲಿ ಪ್ರಮುಖ ಪಾತ್ರದಲ್ಲಿ ನಟಿಸುತ್ತಿರುವ ಶಿವರಾಜ್ಕುಮಾರ್, ಈ ಚಿತ್ರದ ನಟನೆಗೆ ರಾಮ್ ಚರಣ್ಗೆ ರಾಷ್ಟ್ರ ಪ್ರಶಸ್ತಿ ಸಿಗುವುದು ಗ್ಯಾರಂಟಿ ಎಂದು ಭವಿಷ್ಯ ನುಡಿದಿದ್ದಾರೆ.
04:56 PM (IST) May 26
22 ವರ್ಷದ ಯುವತಿಯೊಬ್ಬಳು ಈಗಾಗಲೇ ಐದು ಮಕ್ಕಳ ತಾಯಿ. ನಾಲ್ವರು ಹೆಣ್ಣು ಮತ್ತು ಒಬ್ಬ ಮಗನಿದ್ದರೂ, ಮತ್ತೊಬ್ಬ ಗಂಡು ಮಗುವಿಗಾಗಿ 6ನೇ ಬಾರಿಗೆ ಗರ್ಭಿಣಿಯಾಗಿದ್ದಾಳೆ. ಈ ಬಗ್ಗೆ ವೈದ್ಯರು ಎಚ್ಚರಿಕೆ ನೀಡಿದ್ದು, ವಿಡಿಯೋ ವೈರಲ್ ಆಗಿದೆ.
04:52 PM (IST) May 26
04:51 PM (IST) May 26
Actor vivek dahiya and divyanka tripathi: ಯೇ ಹೈ ಮೊಹಬತೇ ಧಾರಾವಾಹಿ ನಟಿ ದಿವ್ಯಾಂಕಾ ತ್ರಿಪಾಠಿ, ವಿವೇಕ್ ದಹಿಯಾರ ಮನೆಗೆ ಹೊಸ ಅತಿಥಿಗಳ ಆಗಮನವಾಗಿದೆ. ಹೌದು, ದಿವ್ಯಾಂಕಾ ಮನೆಗೆ ಅವಳಿ ಗಂಡು ಮಕ್ಕಳು ಬಂದಿದ್ದಾರೆ.
04:32 PM (IST) May 26
ಕೇರಳ ರಾಜ್ಯ ಲಾಟರಿ ಇಲಾಖೆಯು, ಎಲ್ಲರೂ ಕಾತುರದಿಂದ ಕಾಯುತ್ತಿದ್ದ ಸ್ತ್ರೀ ಶಕ್ತಿ SS-521 ಲಾಟರಿ ಫಲಿತಾಂಶವನ್ನು ಇಂದು, ಅಂದರೆ ಮೇ 26, 2026ರಂದು ಅಧಿಕೃತವಾಗಿ ಪ್ರಕಟಿಸಿದೆ. ರಾಜ್ಯದ ಸಾವಿರಾರು ಜನರು ವಿಜೇತ..
04:27 PM (IST) May 26
04:27 PM (IST) May 26
ಭರ್ಜರಿ ಮೀನೂಟಕ್ಕೆ ಕೇವಲ 5 ರೂಪಾಯಿ ಮಾತ್ರ. ಇನ್ನು ಪ್ರತಿ ತಿಂಗಳು ಮಹಿಳೆಯರ ಖಾತೆಗೆ 3000 ರೂಪಾಯಿ ಜಮೆ ಆಗಲಿದೆ. ಮುಖ್ಯಮಂತ್ರಿ ಸುವೇಂದು ಅಧಿಕಾರಿಯ ಬಂಪರ್ ಕೊಡುಗೆ ಘೋಷಿಸಿದ್ದಾರೆ.
04:17 PM (IST) May 26
ಶಬರಿಮಲೆ ಚಿನ್ನ ಕಳವು ಪ್ರಕರಣದಲ್ಲಿ ತನಿಖಾ ತಂಡವನ್ನು ಕೇರಳ ಹೈಕೋರ್ಟ್ ತರಾಟೆಗೆ ತೆಗೆದುಕೊಂಡಿದೆ. ತಂತ್ರಿ ಕಂಠರರ್ ರಾಜೀವರರ ಜಾಮೀನು ರದ್ದುಗೊಳಿಸಲು ಸಾಧ್ಯವಿಲ್ಲ ಎಂದು ನ್ಯಾಯಾಲಯ ಮೌಖಿಕವಾಗಿ ತಿಳಿಸಿದೆ.
04:13 PM (IST) May 26
ಕೊಯಮತ್ತೂರಿನಲ್ಲಿ ಹತ್ತು ವರ್ಷದ ಬಾಲಕಿಯ ಮೇಲಿನ ಸಾಮೂಹಿಕ ಅ*ತ್ಯಾಚಾರ ಮತ್ತು ಕೊಲೆ ಪ್ರಕರಣ ರಾಜ್ಯಾದ್ಯಂತ ಆಕ್ರೋಶಕ್ಕೆ ಕಾರಣವಾಗಿದೆ. ಈ ಪ್ರಕರಣದ ಕುರಿತ ಪತ್ರಿಕಾಗೋಷ್ಠಿಯಲ್ಲಿ ಹಿರಿಯ ಪೊಲೀಸ್ ಅಧಿಕಾರಿಗಳು ನಗುತ್ತಿರುವ ವಿಡಿಯೋ ವೈರಲ್ ಆಗಿದ್ದು, ಇದು ತೀವ್ರ ವಿವಾದಕ್ಕೆ ಕಾರಣವಾಗಿದೆ. ಅಧಿಕಾರಿ ಕೀರ್ತನಾ ಈ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ.
04:11 PM (IST) May 26
Virat Kohli Playoff Stats: 2026ರ ಐಪಿಎಲ್ ಟೂರ್ನಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಪ್ರದರ್ಶನ ಅತ್ಯದ್ಭುತವಾಗಿದೆ. ಇದೀಗ ಆರ್ಸಿಬಿ ತಂಡವಿಂದು ಕ್ವಾಲಿಫೈಯರ್-1 ಪಂದ್ಯಕ್ಕೆ ಸಜ್ಜಾಗಿದೆ. ಹೀಗಿರುವಾಗಲೇ ವಿರಾಟ್ ಕೊಹ್ಲಿ ವಿಚಾರವಾಗಿ ಆರ್ಸಿಬಿ ತಂಡಕ್ಕೆ ಹೊಸ ತಲೆನೋವು ಶುರುವಾಗಿದೆ.
04:04 PM (IST) May 26
03:16 PM (IST) May 26
02:40 PM (IST) May 26
Actor thalapathy vijay News: ಬೆಳೆ ಸಾಲ ಮನ್ನಾ ವಿಚಾರದಲ್ಲಿ ಟಿವಿಕೆ ಸರ್ಕಾರ ರೈತರಿಗೆ ಮೋಸ ಮಾಡಿದೆ ಎಂದು ತಮಿಳುನಾಡು ವಿರೋಧ ಪಕ್ಷದ ನಾಯಕ ಉದಯನಿಧಿ ಸ್ಟಾಲಿನ್ ತೀವ್ರ ವಾಗ್ದಾಳಿ ನಡೆಸಿದ್ದಾರೆ.
01:47 PM (IST) May 26
ಐಪಿಎಲ್ ಕ್ವಾಲಿಫೈಯರ್-1 ಪಂದ್ಯದಲ್ಲಿ ಆರ್ಸಿಬಿ, ಗುಜರಾತ್ ಟೈಟಾನ್ಸ್ ತಂಡವನ್ನು ಎದುರಿಸಲಿದೆ. ಈ ಮಹತ್ವದ ಪಂದ್ಯದಲ್ಲಿ ಗೆದ್ದು ಫೈನಲ್ಗೇರಲು ಆರ್ಸಿಬಿ ತಂಡದಲ್ಲಿ ಒಂದು ಪ್ರಮುಖ ಬದಲಾವಣೆಗಳಾಗುವ ಸಾಧ್ಯತೆಯಿದ್ದು, ಫಿಲ್ ಸಾಲ್ಟ್ ಆರಂಭಿಕರಾಗಿ ಕಣಕ್ಕಿಳಿಯುವ ನಿರೀಕ್ಷೆಯಿದೆ. ಆರ್ಸಿಬಿ ಸಂಭಾವ್ಯ ತಂಡ ಹೇಗಿರಲಿದೆ ನೋಡೋಣ ಬನ್ನಿ.
12:49 PM (IST) May 26
ಬಳ್ಳಾರಿಯ ಕುರುಗೋಡು ಪಟ್ಟಣದಿಂದ ಸುಮಾರು 20 ವರ್ಷಗಳ ಹಿಂದೆ ಮನೆಬಿಟ್ಟು ಹೋಗಿದ್ದ ಶಂಕರಾಚಾರಿ ಎಂಬ ಯುವಕ, ಇದೀಗ ಗುಜರಾತ್ನ ಅಹ್ಮದಾಬಾದ್ನಲ್ಲಿರುವ ಕಾಳಿಕಾದೇವಿ ಮಠದ ಸ್ವಾಮೀಜಿಯಾಗಿ ಪತ್ತೆಯಾಗಿದ್ದಾರೆ. ಪೋಷಕರ ಕೋರಿಕೆಯ ಮೇರೆಗೆ ಹುಟ್ಟೂರಿಗೆ ಮರಳುತ್ತಿದ್ದಾರೆ.
12:26 PM (IST) May 26
12:08 PM (IST) May 26
12:05 PM (IST) May 26
11:58 AM (IST) May 26
11:23 AM (IST) May 26
'ಪೆದ್ದಿ' ಚಿತ್ರದ ಪ್ರಚಾರಕ್ಕಾಗಿ ನಟಿ ಜಾಹ್ನವಿ ಕಪೂರ್ ಬೆಂಗಳೂರಿಗೆ ಆಗಮಿಸಿದ್ದರು. ಈ ಸಂದರ್ಭದಲ್ಲಿ ಕನ್ನಡದಲ್ಲಿ ಮಾತನಾಡಿ ಅಭಿಮಾನಿಗಳ ಮನಗೆದ್ದ ಅವರು, ರಾಮ್ ಚರಣ್ ಮತ್ತು ಶಿವರಾಜ್ಕುಮಾರ್ ಅವರೊಂದಿಗೆ ವೇದಿಕೆ ಹಂಚಿಕೊಂಡರು
11:21 AM (IST) May 26
ಅಮೆರಿಕದ ವಿದೇಶಾಂಗ ಸಚಿವ ಮಾರ್ಕೋ ರುಬಿಯೋ ತಾಜ್ ಮಹಲ್ ಭೇಟಿಗೆ ಇರಾನ್ ವ್ಯಂಗ್ಯವಾಡಿದೆ, ತಾಜ್ಗೆ ಇರುವ ಇರಾನಿನ ನಂಟನ್ನು ನೆನಪಿಸಿ ಟ್ರಂಪ್ ಆಡಳಿತಕ್ಕೆ ತಿರುಗೇಟು ನೀಡಿದೆ. ಇರಾನ್ನ ಇತಿಹಾಸ ಅಳಿಸಿಹಾಕುತ್ತೀವಿ ಎಂದವರೇ ಇದೀಗ ಅದೇ ಇತಿಹಾಸದ ಮುಂದೆ ನಿಂತಿದ್ದಾರೆ ಎಂದು ವ್ಯಂಗ್ಯ
11:07 AM (IST) May 26
ಮುಖ್ಯಮಂತ್ರಿ ಸಿದ್ದರಾಮಯ್ಯ, ಗೃಹ ಸಚಿವ ಜಿ. ಪರಮೇಶ್ವರ್ ಒಟ್ಟಾಗಿ ದೆಹಲಿಗೆ ಪ್ರಯಾಣ ಬೆಳೆಸಿದ್ದಾರೆ. ಈ ಹಿಂದೆ 'ಸಿಎಂ ಸ್ಥಾನಕ್ಕೆ ನಾನೂ ಸಿದ್ಧ' ಎಂದಿದ್ದ ಪರಮೇಶ್ವರ್, ಈಗ ಸಿಎಂ ಜೊತೆ ಹೈಕಮಾಂಡ್ ಭೇಟಿಗೆ ತೆರಳಿರುವುದು ರಾಜ್ಯ ಕಾಂಗ್ರೆಸ್ನಲ್ಲಿ ನಾಯಕತ್ವ ಬದಲಾವಣೆಯ ಚರ್ಚೆ ಮತ್ತೆ ಮುನ್ನೆಲೆಗೆ ತಂದಿದೆ.
10:18 AM (IST) May 26
09:50 AM (IST) May 26
09:38 AM (IST) May 26
ನಟ ಉಪೇಂದ್ರ ಅವರ ಮನೆಯಲ್ಲಿ ಮದುವೆ ಸಂಭ್ರಮ ಶುರು ಆಗಿದೆ. ಇವರ ಅಣ್ಣನ ಮಗ, ನಟ ನಿರಂಜನ್ ಸುಧೀಂದ್ರ ಅವರು ಎಂಗೇಜ್ ಆಗಿದ್ದಾರೆ. ಕುಟುಂಬಸ್ಥರು, ಸ್ನೇಹಿತರ ಸಾಕ್ಷಿಯಾಗಿ ನಡೆದ ಈ ನಿಶ್ಚಿತಾರ್ಥದ ಫೋಟೋಗಳು ಇಲ್ಲಿವೆ.
09:34 AM (IST) May 26
09:28 AM (IST) May 26
ಪಶ್ಚಿಮ ಏಷ್ಯಾ ಸಂಘರ್ಷವು ಭಾರತದ ಆರ್ಥಿಕತೆಯ ಮೇಲೆ ನೇರ ಪರಿಣಾಮ ಬೀರುತ್ತಿದ್ದು, ಈ ಸವಾಲನ್ನು ಎದುರಿಸಲು ಸರ್ಕಾರವು ಇಂಧನ, ರಸಗೊಬ್ಬರ ಮತ್ತು ವಿದೇಶಿ ವಿನಿಮಯ (3F) ಕ್ಷೇತ್ರಗಳ ಮೇಲೆ ಗಮನಹರಿಸಿದೆ. ನಾಗರಿಕರ ರಕ್ಷಿಸಲು ಮತ್ತು ಆರ್ಥಿಕ ಸ್ಥಿರತೆ ಕಾಪಾಡಲು 3F ಸೂತ್ರಗಳ ಬಗ್ಗೆ ಲೇಖನದಲ್ಲಿ ವಿವರಿಸಿದೆ.
08:55 AM (IST) May 26