ಅತ್ತ ಕರ್ನಾಟಕ ಸರ್ಕಾರ ಮೇಕೆದಾಟು ಅಣೆಕಟ್ಟು ಯೋಜನೆಗೆ ಜಾರಿಗೆ ಚುರುಕು ನೀಡಿರುವ ಹೊತ್ತಿನಲ್ಲೇ, ಇತ್ತ ಯೋಜನೆ ವಿರುದ್ಧ ಕಾನೂನು ಹೋರಾಟ ತೀವ್ರಗೊಳಿಸುವಂತೆ ತಮಿಳುನಾಡಿನ ಮುಖ್ಯಮಂತ್ರಿ ವಿಜಯ್, ತಮ್ಮ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಮೇಕೆದಾಟು ಅಣೆಕಟ್ಟು ವಿಷಯದಲ್ಲಿ ತಮಿಳುನಾಡು ಸರ್ಕಾರ ಯಾವುದೇ ಆಕ್ಷೇಪ ಎತ್ತುವಂತಿಲ್ಲ ಎಂದು ಕರ್ನಾಟಕದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಇತ್ತೀಚೆಗೆ ಹೇಳಿದ್ದರು. ಅದಕ್ಕೆ ಭಾನುವಾರ ಪ್ರತಿಕ್ರಿಯೆ ನೀಡಿದ್ದ ಡಿಎಂಕೆ ನಾಯಕ ಕೆ.ಎನ್. ನೆಹರು ‘ಡಿಕೆಶಿ ನೀಡಿರುವ ಹೇಳಿಕೆ ಅವರ ದುರಂಹಕಾರದ ಮನೋಭಾವ ತೋರಿಸುತ್ತದೆ. ತಮಿಳುನಾಡಿನಲ್ಲಿ ದುರ್ಬಲ ಮೈತ್ರಿ ಸರ್ಕಾರ ಅಸ್ತಿತ್ವದಲ್ಲಿದೆ ಎಂದು ಭಾವಿಸಿ ಅವರು ಇಂತಹ ಹೇಳಿಕೆ ನೀಡಿದ್ದಾರೆ. ಕಾಂಗ್ರೆಸ್ ಕೂಡ ಸಮ್ಮಿಶ್ರ ಸರ್ಕಾರದ ಭಾಗವಾಗಿರುವುದರಿಂದ ಯಾವುದೇ ವಿರೋಧ ಇರುವುದಿಲ್ಲ ಎಂದ ಈ ರೀತಿ ಹೇಳಿಕೆ ನೀಡುತ್ತಿದ್ದಾರೆ’ ಎಂದು ಆರೋಪಿಸಿದ್ದರು.

09:38 AM (IST) May 26
ನಟ ಉಪೇಂದ್ರ ಅವರ ಮನೆಯಲ್ಲಿ ಮದುವೆ ಸಂಭ್ರಮ ಶುರು ಆಗಿದೆ. ಇವರ ಅಣ್ಣನ ಮಗ, ನಟ ನಿರಂಜನ್ ಸುಧೀಂದ್ರ ಅವರು ಎಂಗೇಜ್ ಆಗಿದ್ದಾರೆ. ಕುಟುಂಬಸ್ಥರು, ಸ್ನೇಹಿತರ ಸಾಕ್ಷಿಯಾಗಿ ನಡೆದ ಈ ನಿಶ್ಚಿತಾರ್ಥದ ಫೋಟೋಗಳು ಇಲ್ಲಿವೆ.
09:34 AM (IST) May 26
09:28 AM (IST) May 26
ಪಶ್ಚಿಮ ಏಷ್ಯಾ ಸಂಘರ್ಷವು ಭಾರತದ ಆರ್ಥಿಕತೆಯ ಮೇಲೆ ನೇರ ಪರಿಣಾಮ ಬೀರುತ್ತಿದ್ದು, ಈ ಸವಾಲನ್ನು ಎದುರಿಸಲು ಸರ್ಕಾರವು ಇಂಧನ, ರಸಗೊಬ್ಬರ ಮತ್ತು ವಿದೇಶಿ ವಿನಿಮಯ (3F) ಕ್ಷೇತ್ರಗಳ ಮೇಲೆ ಗಮನಹರಿಸಿದೆ. ನಾಗರಿಕರ ರಕ್ಷಿಸಲು ಮತ್ತು ಆರ್ಥಿಕ ಸ್ಥಿರತೆ ಕಾಪಾಡಲು 3F ಸೂತ್ರಗಳ ಬಗ್ಗೆ ಲೇಖನದಲ್ಲಿ ವಿವರಿಸಿದೆ.
08:55 AM (IST) May 26
08:50 AM (IST) May 26
08:38 AM (IST) May 26
ಮಹಾರಾಷ್ಟ್ರದ ಸಿಂಧುದುರ್ಗ ತೀರದಲ್ಲಿ, ಭಾರತದ ಮೊದಲ ನೀರೊಳಗಿನ ವಸ್ತುಸಂಗ್ರಹಾಲಯ ನಿರ್ಮಾಣದ ಭಾಗವಾಗಿ ಐಎನ್ಎಸ್ ಗುಲ್ದಾರ್ ಯುದ್ಧನೌಕೆಯನ್ನು ಸಮುದ್ರದಲ್ಲಿ ಮುಳುಗಿಸಲಾಗಿದೆ. ಜೊತೆಗೆ ಸ್ಕೂಬಾ ಡೈವಿಂಗ್ ಮತ್ತು ಸಬ್ಮರೀನ್ ಮೂಲಕ ಸಾಗರ ವೀಕ್ಷಣೆಯ ಅವಕಾಶವನ್ನು ಕಲ್ಪಿಸಲಿದೆ.
08:37 AM (IST) May 26
‘ಸೈಫರ್ ನಂ. ಐ-0678’ ಎಂಬ ರಹಸ್ಯ ವರದಿಯು, ಮಾಜಿ ಪ್ರಧಾನಿ ಇಮ್ರಾನ್ ಖಾನ್ ಅವರ ಪದಚ್ಯುತಿಯ ಹಿಂದೆ ಅಮೆರಿಕದ ಕೈವಾಡವಿದೆ ಎಂಬ ಆರೋಪವನ್ನು ಸಾಬೀತುಪಡಿಸಿದೆ. ಅಮೆರಿಕದ ಅಧಿಕಾರಿಗಳು ನೀಡಿದ ಆಮಿಷವನ್ನು ಈ ವರದಿ ಬಹಿರಂಗಪಡಿಸುತ್ತದೆ.
08:12 AM (IST) May 26
Shahzad Bhatti ಪಾಕಿಸ್ತಾನದಿಂದಲ್ಲಿ ಕುಳಿತು ದೇಶದಲ್ಲಿ ಉಗ್ರ ಚಟುವಟಿಕೆ ನಡೆಸುತ್ತಿರುವ ಶಹಜಾದ್ ಭಟ್ಟಿಗೆ ಜಮ್ಮು ಮತ್ತು ಕಾಶ್ಮೀರ ಪೊಲೀಸರು ನೇರ ಎಚ್ಚರಿಕೆ ನೀಡಿದ್ದಾರೆ.ಭಾರತದಲ್ಲಿ ಭಯೋತ್ಪಾದನೆ, ಡ್ರಗ್ಸ್ ದಂಧೆ ಮತ್ತು ಯುವಕರನ್ನು ಬ್ರೇನ್ವಾಶ್ ಮಾಡುತ್ತಿರುವ ಭಟ್ಟಿ. ಅವನ ಶಾಕಿಂಗ್ ಕೃತ್ಯಗಳು ಏನು?
07:50 AM (IST) May 26
ಮೇಕೆದಾಟು ಅಣೆಕಟ್ಟು ವಿಷಯದಲ್ಲಿ ತಮಿಳುನಾಡು ಸರ್ಕಾರ ಯಾವುದೇ ಆಕ್ಷೇಪ ಎತ್ತುವಂತಿಲ್ಲ ಎಂದು ಕರ್ನಾಟಕದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಇತ್ತೀಚೆಗೆ ಹೇಳಿದ್ದರು. ಅದಕ್ಕೆ ಭಾನುವಾರ ಪ್ರತಿಕ್ರಿಯೆ ನೀಡಿದ್ದ ಡಿಎಂಕೆ ನಾಯಕ ಕೆ.ಎನ್. ನೆಹರು ‘ಡಿಕೆಶಿ ನೀಡಿರುವ ಹೇಳಿಕೆ ಅವರ ದುರಂಹಕಾರದ ಮನೋಭಾವ ತೋರಿಸುತ್ತದೆ. ತಮಿಳುನಾಡಿನಲ್ಲಿ ದುರ್ಬಲ ಮೈತ್ರಿ ಸರ್ಕಾರ ಅಸ್ತಿತ್ವದಲ್ಲಿದೆ ಎಂದು ಭಾವಿಸಿ ಅವರು ಇಂತಹ ಹೇಳಿಕೆ ನೀಡಿದ್ದಾರೆ. ಕಾಂಗ್ರೆಸ್ ಕೂಡ ಸಮ್ಮಿಶ್ರ ಸರ್ಕಾರದ ಭಾಗವಾಗಿರುವುದರಿಂದ ಯಾವುದೇ ವಿರೋಧ ಇರುವುದಿಲ್ಲ ಎಂದ ಈ ರೀತಿ ಹೇಳಿಕೆ ನೀಡುತ್ತಿದ್ದಾರೆ’ ಎಂದು ಆರೋಪಿಸಿದ್ದರು.