ನವದೆಹಲಿ: 4 ದಿನ ನೀಟ್ ಸೋರಿಕೆ ವಿರೋಧಿ ಗದ್ದಲಕ್ಕೆ ಬಲಿಯಾದ ಮುಂಗಾರು ಅಧಿವೇಶನದ 5ನೇ ದಿನವಾದ ಸೋಮವಾರ ವಿದ್ಯಾರ್ಥಿಗಳ ಮೇಲೆ ಪೊಲೀಸರು ದೌರ್ಜನ್ಯವೆಸಗಿದ್ದಕ್ಕೆ ಸಂಬಂಧಿಸಿದಂತೆ ಕೋಲಾಹಲವೇಳುವ ಸಂಭವವಿದೆ. ಕಾಂಗ್ರೆಸ್ ಹಾಗೂ ಟಿಎಂಸಿ ಈ ವಿಷಯ ಪ್ರಸ್ತಾಪಿಸುವ ಸಂಭವವಿದೆ.
ಇದರ ಸುಳಿವು ನೀಡುವಂತೆ ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಪತ್ರ ಬರೆದಿದ್ದು, ‘ನ್ಯಾಯಯುತ ಶಿಕ್ಷಣ ವ್ಯವಸ್ಥೆಗೆ ಆಗ್ರಹಿಸಿ ಜು.20ರಂದು ಶಾಂತಿಯುತ ಪ್ರತಿಭಟನೆ ನಡೆಸುತ್ತಿದ್ದ ವಿದ್ಯಾರ್ಥಿಗಳ ಮೇಲೆ ಅಮಾನವೀಯವಾಗಿ ಹಲ್ಲೆ ನಡೆಸಿದ್ದರ ಹೊಣೆ ಹೊರಬೇಕು. ನಿಮ್ಮ ಅಡಿ ಬರುವ ದಿಲ್ಲಿ ಪೊಲೀಸರಿಗೆ ಪೆಲೆಟ್ ಗನ್ನಂತಹ ಮಾರಕ ಅಸ್ತ್ರಗಳನ್ನು ಬಳಸಲು ಅವಕಾಶ ಕೊಟ್ಟಿದ್ದಿರಾ? ನೀವಲ್ಲದಿದ್ದರೆ ಇನ್ಯಾರು ಕೊಟ್ಟಿದ್ದರು? ಮಫ್ತಿಯಲ್ಲಿದ್ದುಕೊಂಡು ಯುವಕರಿಗೆ ಹೊಡೆಯುತ್ತಿದ್ದವರು ಪೊಲೀಸರೇ ಅಥವಾ ಸ್ವಯಂಸೇವಕರೇ?’ ಎಂಬಿತ್ಯಾದಿ ಪ್ರಶ್ನೆಗಳನ್ನು ಕೇಳಿದ್ದಾರೆ. ಇದಕ್ಕೆಲ್ಲ ಕಲಾಪದ ವೇಳೆ ಉತ್ತರಿಸುವಂತೆ ಆಗ್ರಹಿಸಿದ್ದಾರೆ.
01:33 PM (IST) Jul 27
ಸಿಜೆಪಿ ಪ್ರತಿಭಟನೆ, ಇಡೀ ಹೋರಾಟ, ಬಳಿಕ ಫೈವ್ ಸ್ಟಾರ್ ಹೊಟೆಲ್ನಲ್ಲಿ ಪಾರ್ಟಿ. ಇದಕ್ಕೆಲ್ಲಾ ಹಣದ ಮೂಲ ಎಲ್ಲಿಂದ? ಖ್ಯಾತ ವಕೀಲ ಮಹೇಶ್ ಜೇಠಲ್ಮಾನಿ ಪ್ರಶ್ನಿಸಿದ್ದಾರೆ. ವಿಡಿಯೋ ಪೋಸ್ಟ್ ಮಾಡಿರುವ ವಕೀರಲು ಹಲವು ಪ್ರಶ್ನೆ ಎತ್ತಿದ್ದಾರೆ.
01:31 PM (IST) Jul 27
ಇವತ್ತು ಲೋಕಸಭೆಯಲ್ಲಿ Anti-Paper Leak Bill ಮಂಡನೆಯಾಗಿದೆ. ಪರೀಕ್ಷೆಗಳಲ್ಲಿ ನಡೆಯುವ ಅಕ್ರಮಗಳನ್ನ ತಡೆಯಲು ಕೇಂದ್ರ ಸರ್ಕಾರ ಮಹತ್ವದ ಹೆಜ್ಜೆಯನ್ನಿಟ್ಟಿದ್ದು, ಈ ತಿದ್ದುಪಡಿ ಮಸೂದೆಯಲ್ಲಿ ಏನಿದೆ? ಏನೆಲ್ಲ ಬದಲಾವಣೆ ಮಾಡಲಾಗಿದೆ ಅನ್ನೋ ವಿವರ ಇಲ್ಲಿದೆ.
01:18 PM (IST) Jul 27
ಬೆಂಗಳೂರು: ಭಾರತ ಹಾಗೂ ಜಿಂಬಾಬ್ವೆ ನಡುವಿನ ಮೂರು ಪಂದ್ಯಗಳ ಟಿ20 ಸರಣಿಯನ್ನು ಟೀಂ ಇಂಡಿಯಾ 3-0 ಅಂತರದಲ್ಲಿ ಕ್ಲೀನ್ಸ್ವೀಪ್ ಮಾಡಿದೆ. ಇದರ ಹೊರತಾಗಿಯೂ ಈ ಸರಣಿಯಲ್ಲಿ ವೈಫಲ್ಯ ಅನುಭವಿಸಿದ ಐದು ಆಟಗಾರರು ಟೀಂ ಇಂಡಿಯಾದಿಂದ ಹೊರಬೀಳುವ ಭೀತಿಗೆ ಸಿಲುಕಿದ್ದಾರೆ. ಯಾರವರು? ನೋಡೋಣ ಬನ್ನಿ.
11:50 AM (IST) Jul 27
ಮೊದಲ ಭಾಗವು ಪ್ರೇಕ್ಷಕರಲ್ಲಿ ಮುಂದೇನಾಗಬಹುದು ಎಂಬ ಕುತೂಹಲವನ್ನು ತುದಿಗಾಲಿನಲ್ಲಿ ನಿಲ್ಲುವಂತೆ ಮಾಡಲಿದೆ. ಭಾಗ 1 ಮುಗಿದ ಕೂಡಲೇ ಪ್ರೇಕ್ಷಕರಿಗೆ ಭಾಗ 2 ನೋಡಲೇಬೇಕು ಎಂಬ ಹಪಾಹಪಿ ಶುರುವಾಗುವಂತೆ ಕಥೆಯನ್ನು ಅದ್ಭುತವಾಗಿ ಹೆಣೆಯಲಾಗಿದೆ ಎಂದು ತಂಡ ಹೇಳಿಕೊಂಡಿದೆ.
11:41 AM (IST) Jul 27
ಕರ್ನಾಟಕ ಸೇರಿದಂತೆ 17 ರಾಜ್ಯಗಳಲ್ಲಿ ಭಾರಿ ಮಳೆ ಎಚ್ಚರಿಕೆ ನೀಡಲಾಗಿದೆ. ಈ ಪೈಕಿ ಕೆಲೆವೆಡೆ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಯಾವ ರಾಜ್ಯಗಳಿಗೆ ಯಾವ ಅಲರ್ಟ್?
11:29 AM (IST) Jul 27
11:15 AM (IST) Jul 27
ಜಿಂಬಾಬ್ವೆ ವಿರುದ್ಧದ ಟಿ20 ಸರಣಿಯನ್ನು 3-0 ಅಂತರದಲ್ಲಿ ಕ್ಲೀನ್ಸ್ವೀಪ್ ಮಾಡಿದ ಭಾರತ, ಸೋಲಿನ ಸರಪಳಿಯಿಂದ ಹೊರಬಂದಿದೆ. ವೈಭವ್ ಸೂರ್ಯವಂಶಿ ಅವರ ಸ್ಫೋಟಕ ಆಟ ಮತ್ತು ಮಯಾಂಕ್ ಯಾದವ್ ಅವರ ಬೌಲಿಂಗ್ ನೆರವಿನಿಂದ ಗೆದ್ದ ಟೀಂ ಇಂಡಿಯಾ, ಐಸಿಸಿ ಟಿ20 ರ್ಯಾಂಕಿಂಗ್ನಲ್ಲಿ ಮತ್ತೆ ಅಗ್ರಸ್ಥಾನವನ್ನು ಅಲಂಕರಿಸಿದೆ.
10:34 AM (IST) Jul 27
ನಮಿತ್ ಮಲ್ಹೋತ್ರಾ ಅವರ ಪ್ರೈಮ್ ಫೋಕಸ್ ಸ್ಟುಡಿಯೋಸ್ ಮತ್ತು ಯಶ್ ಅವರ ಮಾನ್ಸ್ಟರ್ ಮೈಂಡ್ ಕ್ರಿಯೇಷನ್ಸ್ ಜಂಟಿಯಾಗಿ ನಿರ್ಮಿಸುತ್ತಿವೆ. ರಾಮನಾಗಿ ರಣಬೀರ್ ಕಪೂರ್, ರಾವಣನಾಗಿ ಯಶ್, ಸಾಯಿ ಪಲ್ಲವಿ ಸೀತೆಯಾಗಿ, ಸನ್ನಿ ಡಿಯೋಲ್ ಹನುಮಂತನಾಗಿ ಮತ್ತು ರವಿ ದುಬೆ ಲಕ್ಷ್ಮಣನಾಗಿ ನಟಿಸುತ್ತಿದ್ದಾರೆ.
09:02 AM (IST) Jul 27
ವೈಯಕ್ತಿಕ ಕಾರಣಗಳಿಂದಾಗಿ ಭಾರೀ ಸುದ್ದಿಯಲ್ಲಿದ್ದ ಆರ್ಸಿಬಿ ಸ್ಟಾರ್ ಯಶ್ ದಯಾಳ್ ಅವರು ತಂಡ ಬದಲಿಸಿದ್ದಾರೆ. ಬೆನ್ನಲ್ಲೇ ಬೆಂಗಳೂರಿಗೆ ಅವರು ಆಗಮಿಸಿದ್ದು, ಯಾವ ತಂಡ ಸೇರಿದ್ದಾರೆ? ಯಾಕೆ ಈ ನಿರ್ಧಾರ ಕೈಗೊಂಡ್ರು ಅನ್ನೋ ವಿವರ ಈ ಸ್ಟೋರಿಯಲ್ಲಿದೆ.
08:33 AM (IST) Jul 27