ವಿಶ್ವಾದ್ಯಂತ ಉದ್ಯೋಗ ಕಡಿತ ಪರ್ವ ಶುರುವಾಗಿದ್ದು, ಜಾಗತಿಕ ದೈತ್ಯ ಕಂಪನಿಗಳು ಭಾರಿ ಸಂಖ್ಯೆಯಲ್ಲಿ ಹುದ್ದೆ ಕಡಿತಗೊಳಿಸುತ್ತಿವೆ. ಕೃತಕ ಬುದ್ಧಿಮತ್ತೆ ಅಳವಡಿಕೆ, ಜಾಗತಿಕ ಆರ್ಥಿಕ ಸ್ಥಿತ್ಯಂತರ ಇತರ ಕಾರಣಗಳಿಗಾಗಿ ಈ ಕ್ರಮಕ್ಕೆ ಕಂಪನಿಗಳು ಮುಂದಾಗಿವೆ. ಇದರ ಪರಿಣಾಮ ಈಗ ಸಾವಿರಾರು ಸಿಬ್ಬಂದಿ ಮನೆ ಕಡೆಗೆ ಮುಖ ಮಾಡುವಂತಾಗಿದೆ. ಭಾರತದ ಟೆಕ್ ದೈತ್ಯ ಟಿಸಿಎಸ್ ಇದೇ ವರ್ಷ 12,000 ನೌಕರರನ್ನು ಮನೆಗೆ ಕಳಿಸುವುದಾಗಿ ಭಾನುವಾರ ಹೇಳಿದೆ. ಇದರ ಆಸುಪಾಸಿನಲ್ಲೇ ಇಂಟೆಲ್ ಕಂಪನಿಯು 25,000, ಪ್ಯಾನಸಾನಿಕ್ 10,000, ಮೈಕ್ರೋಸಾಫ್ಟ್ 6500, ಮೆಟಾ 3600, ಅಮೆಜಾನ್ 14000, ಐಬಿಎಂ 8000, ಗೂಗಲ್ 500 ಸಿಬ್ಬಂದಿಯನ್ನು ಕಡಿತಗೊಳಿಸುವ ಘೋಷಣೆ ಮಾಡಿವೆ. ಎಚ್ಪಿ 6000, ನಿಸ್ಸಾನ್ 20000, ಸ್ಟಾರ್ಬಕ್ಸ್ 1100 ಹುದ್ದೆ ಕಡಿತ ಮಾಡುವುದಾಗಿ ಘೋಷಿಸಿವೆ. ಇದರ ಜತೆಗೆ ವಾಲ್ಮಾರ್ಟ್, ಬಾಷ್ನಂತಹ ಕಂಪನಿಗಳು ಸಹ ವೆಚ್ಚ ಕಡಿತ ಕಾರಣಗಳಿಂದಾಗಿ ಸಿಬ್ಬಂದಿ ಸಂಖ್ಯೆಯನ್ನು ಇಳಿಸಲು ನಿರ್ಧರಿಸಿವೆ ಎನ್ನಲಾಗಿದೆ.

10:50 PM (IST) Jul 28
ತಾಯಾನೆಯ ಮಡಿಲಲ್ಲಿ ಮಲಗಿರುವ ಮರಿ ಆನೆಯ ಮುದ್ದಾದ ವಿಡಿಯೋ ವೈರಲ್ ಆಗಿದೆ. ಈ ವೀಡಿಯೋವನ್ನು ನಿವೃತ್ತ ಐಎಫ್ಎಸ್ ಅಧಿಕಾರಿ ಸುಶಾಂತ್ ನಂದಾ ಅವರು ಹಂಚಿಕೊಂಡಿದ್ದು, ಮರಿಯ ಪ್ರೀತಿ ಮತ್ತು ತಾಯಿಯ ಮಮತೆಯನ್ನು ಸುಂದರವಾಗಿ ಚಿತ್ರಿಸುತ್ತಿದೆ.
05:50 PM (IST) Jul 28
ಮರಣದಂಡನೆ ಶಿಕ್ಷೆಗೆ ಗುರಿಯಾಗಿ ಯಮನ್ ಜೈಲಿನಲ್ಲಿರುವ ನಿಮಿಷಾ ಪ್ರಿಯಾ ಅವರ ಬಿಡುಗಡೆಗಾಗಿ 13 ವರ್ಷದ ಮಗಳು ಮಿಷೆಲ್ ಯಮೆನ್ಗೆ ತೆರಳಿ ಅಧಿಕಾರಿಗಳನ್ನು ಭೇಟಿ ಮಾಡಿ ಮನವಿ ಮಾಡಿದ್ದಾರೆ.
04:10 PM (IST) Jul 28
ಮಗುವೊಂದು ಅಪ್ಪ ಆಗಷ್ಟೇ ಅಂಗಡಿಯಿಂದ ತಂದ ಹೊಸದಾದ ಚೊಂಬಿನಲ್ಲಿ ಆಟವಾಡುತ್ತಾ ಚೊಂಬನ್ನು ತಲೆಗೆ ಹಾಕಿಕೊಂಡಿದೆ. ಆದರೆ ನಂತರ ವಾಪಸ್ ತೆಗೆಯುವುದಕ್ಕೆ ಮಾತ್ರ ಆಗಿಲ್ಲ. ನಂತರ ಅಗ್ನಿಶಾಮಕ ದಳದವರು ಎರಡು ಗಂಟೆಗಳ ಕಾರ್ಯಾಚರಣೆ ನಡೆಸಿ ಮಗುವನ್ನು ರಕ್ಷಿಸಿದ್ದಾರೆ.
03:47 PM (IST) Jul 28
03:15 PM (IST) Jul 28
02:44 PM (IST) Jul 28
ಹೈದರಾಬಾದ್ನಲ್ಲಿ ಬ್ಯಾಡ್ಮಿಂಟನ್ ಆಡುತ್ತಿದ್ದ 25 ವರ್ಷದ ಯುವಕ ಹೃದಯಾಘಾತದಿಂದ ಕುಸಿದು ಬಿದ್ದು ಮೃತಪಟ್ಟಿದ್ದಾರೆ. ಈ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
02:19 PM (IST) Jul 28
ಪಹಲ್ಗಾಂನಲ್ಲಿ 26 ಜನರನ್ನು ಬಲಿ ಪಡೆದ ಭಯೋತ್ಪಾದಕ ದಾಳಿಗೆ ಪ್ರತೀಕಾರವಾಗಿ, ಭದ್ರತಾ ಪಡೆಗಳು ಶ್ರೀನಗರದಲ್ಲಿ ಮೂವರು ಶಂಕಿತ ಉಗ್ರರನ್ನು ಹೊಡೆದುರುಳಿಸಿವೆ.
01:26 PM (IST) Jul 28
Bangkok Tor Kor Market Shooting: ಬ್ಯಾಂಕಾಕ್ನ ಚತುಚಕ್ ಮಾರುಕಟ್ಟೆಯಲ್ಲಿ ನಡೆದ ಗುಂಡಿನ ದಾಳಿಯಲ್ಲಿ ಆರು ಜನರು ಸಾವನ್ನಪ್ಪಿದ್ದಾರೆ. ದಾಳಿಕೋರನು ತನ್ನ ಮೇಲೆಯೇ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಘಟನೆಯ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
01:02 PM (IST) Jul 28
01:00 PM (IST) Jul 28
ಮಕ್ಕಳಿಲ್ಲದ ದಂಪತಿಗೆ ಬಾಡಿಗೆ ತಾಯ್ತನದ ಮೂಲಕ ಮಗು ನೀಡುವುದಾಗಿ ಹೇಳಿ ಲಕ್ಷಾಂತರ ರೂಪಾಯಿ ವಂಚಿಸಿದ ಹೈದರಾಬಾದ್ ಆಸ್ಪತ್ರೆ. ಮಗುವಿನ ಡಿಎನ್ಎ ಪರೀಕ್ಷೆ ನಡೆಸಿದ ದಂಪತಿಗೆ ಆಘಾತ
12:01 PM (IST) Jul 28
ಶಾಸಕರೊಬ್ಬರು ಪಂಚಾಯತ್ ಕಾರ್ಯದರ್ಶಿಯೊಬ್ಬರಿಗೆ ಬೂಟಿನಿಂದ ಹೊಡೆಯುವುದಾಗಿ ಬೆದರಿಕೆ ಹಾಕಿದ್ದಾರೆ. ಶಾಸಕರನ್ನು ಗುರುತಿಸದ ಕಾರಣಕ್ಕೆ ಈ ಘಟನೆ ನಡೆದಿದ್ದು, ಆಡಿಯೋ ಕ್ಲಿಪ್ ವೈರಲ್ ಆಗಿದೆ. ಅಧಿಕಾರಿಯೂ ಸಹ ಶಾಸಕರಿಗೆ ಖಡಕ್ ಉತ್ತರ ನೀಡಿದ್ದಾರೆ.
11:21 AM (IST) Jul 28
ಚಿನ್ನದ ಬೆಲೆಯಲ್ಲಿ ನಿರಂತರ ಏರಿಳಿತಗಳು ಕಂಡುಬರುತ್ತಿದ್ದು, ಇದು ಷೇರು ಮಾರುಕಟ್ಟೆ ಏರಿಳಿತಗಳ ಮೇಲೆ ಅವಲಂಬಿತವಾಗಿದೆ. ಹೂಡಿಕೆದಾರರು ಚಿನ್ನವನ್ನು ಒಂದು ಆಸ್ತಿ ಎಂದು ಪರಿಗಣಿಸುವುದರಿಂದ ಬೆಲೆ ಏರಿಕೆಯಾಗುತ್ತಿದೆ. ಇಂದಿನ ಚಿನ್ನ ಮತ್ತು ಬೆಳ್ಳಿ ದರಗಳ ವಿವರ ಇಲ್ಲಿದೆ.
09:01 AM (IST) Jul 28
ಬಾಲಿವುಡ್ ನಟ ಆಮಿರ್ ಖಾನ್ ಅವರ ಬಾಂದ್ರಾ ನಿವಾಸಕ್ಕೆ 25ಕ್ಕೂ ಹೆಚ್ಚು ಐಪಿಎಸ್ ಅಧಿಕಾರಿಗಳು ಭೇಟಿ ನೀಡಿದ್ದು, ಕುತೂಹಲ ಕೆರಳಿಸಿದೆ. ಭೇಟಿಯ ನಿಖರ ಕಾರಣ ತಿಳಿದುಬಂದಿಲ್ಲವಾದರೂ, ಅಭಿಮಾನಿಗಳಲ್ಲಿ ಕಳವಳ ಮೂಡಿದೆ.