Published : Dec 29, 2025, 06:56 AM ISTUpdated : Dec 29, 2025, 08:29 PM IST

India Latest News Live: ಪ್ರೀತಿಸಿದ ಹುಡುಗಿ ಬೆನ್ನಲ್ಲೇ ಪೋಷಕರು ತೋರಿಸಿದಾಕೆ ಜೊತೆಗೂ ಮದುವೆ, ಮೃತ ಕತೆ ಕಟ್ಟಿ ತಗ್ಲಾಕೊಂಡ

ಸಾರಾಂಶ

ಜಮ್ಮು: ಪಾಕ್ ಬೆಂಬಲಿತ 30 ಉಗ್ರರು ಜಮ್ಮು ಪ್ರಾಂತ್ಯದಲ್ಲಿ ಬೀಡು ಬಿಟ್ಟಿದ್ದಾರೆ. ಭದ್ರತಾ ಪಡೆಗಳಿಂದ ತಪ್ಪಿಸಿಕೊಳ್ಳಲು ಎತ್ತರದ ಪ್ರದೇಶಗಳು, ಹಿಮಭರಿತ ಪರ್ವತಗಳಲ್ಲಿ ಅಡಗಿದ್ದಾರೆ ಎಂದು ಗುಪ್ತಚರ ಸಂಸ್ಥೆಗಳು ಎಚ್ಚರಿಕೆ ನೀಡಿವೆ.

ಡಿ.21ರಿಂದ ತೀವ್ರ ಚಳಿಯ ಅವಧಿ ಆರಂಭವಾಗಿದ್ದು, ಈ ವೇಳೆ ಭದ್ರತಾ ಪಡೆಗಳು ತಮ್ಮ ಕಾರ್ಯಾಚರಣೆಯನ್ನು ಕೊಂಚ ಮಟ್ಟಿಗೆ ಕಡಿಮೆಗೊಳಿಸುತ್ತದೆ. ಈ ಅವಧಿಯ ಲಾಭ ಪಡೆಯಲು ಉಗ್ರರು ಜಮಾಯಿಸಿದ್ದು, ಕಿಶ್ತ್‌ವಾರ್‌ ಮತ್ತು ದೋಡಾ ಪ್ರದೇಶದಲ್ಲಿದ್ದಾರೆ ಎನ್ನಲಾಗಿದೆ.

08:29 PM (IST) Dec 29

ಪ್ರೀತಿಸಿದ ಹುಡುಗಿ ಬೆನ್ನಲ್ಲೇ ಪೋಷಕರು ತೋರಿಸಿದಾಕೆ ಜೊತೆಗೂ ಮದುವೆ, ಮೃತ ಕತೆ ಕಟ್ಟಿ ತಗ್ಲಾಕೊಂಡ

ಪ್ರೀತಿಸಿದ ಹುಡುಗಿ ಬೆನ್ನಲ್ಲೇ ಪೋಷಕರು ತೋರಿಸಿದಾಕೆ ಜೊತೆಗೂ ಮದುವೆ, ಮೃತ ಕತೆ ಕಟ್ಟಿ ತಗ್ಲಾಕೊಂಡ ಘಟನೆ ಇದು. ಅಪಘಾತದಲ್ಲಿ ಮೃತಪಟ್ಟ ರೀತಿ ಘಟನೆ ಸೃಷ್ಟಿ ಮಾಡಿದ್ದಾನೆ. ಪರಿಣಾಮ ಈತನ ಎರಡು ಮದುವೆಯಿಂದ ಹಿಡಿದು ಎಲ್ಲಾ ಕಳ್ಳಾಟ ಬಯಲಾಗಿದೆ.

 

Read Full Story

07:18 PM (IST) Dec 29

ಕಿಬ್ಬೊಟ್ಟೆ ನೋವೆಂದು ಆಸ್ಪತ್ರೆಗೆ ಹೋದ 82 ವರ್ಷದ ವೃದ್ಧೆಗೆ ಸ್ಕ್ಯಾನಿಂಗ್ ರಿಪೋರ್ಟ್ ನೋಡಿ ಆಘಾತ

ಇಲ್ಲೊಂದು ಕಡೆ ಗರ್ಭಾಶಯದ ಕೆಳಭಾಗದಲ್ಲಿ ತೀವ್ರ ನೋವು ಕಾಣಿಸಿಕೊಂಡ ಹಿನ್ನೆಲೆ ಆಸ್ಪತ್ರೆಗೆ ಹೋಗಿದ್ದ 82 ವರ್ಷದ ಮಹಿಳೆಗೆ ತೀವ್ರ ಆಘಾತ ಕಾದಿತ್ತು.ಆಕೆಗೆ ಸ್ಕ್ಯಾನಿಂಗ್ ಮಾಡಿದ ವೈದ್ಯರು ಕೂಡ ಆಘಾತಗೊಂಡಿದ್ದರು. ಕಾರಣ ಆಕೆಯ ಫೆಲ್ವಿಕ್‌ನಲ್ಲಿ ಸ್ಟೋನ್ ಬೇಬಿ ಎಂದು ಕರೆಯುವ ಮಗುವಿತ್ತು.

Read Full Story

07:04 PM (IST) Dec 29

ಭಾರತೀಯರು ಮನೆಗಳಲ್ಲಿ ಇಟ್ಟಿರುವ ಚಿನ್ನದ ಮೌಲ್ಯ ಎಷ್ಟು ಗೊತ್ತಾ? ಜಿಡಿಪಿಯನ್ನೇ ಮೀರಿಸಿ ದಾಖಲೆ

ಭಾರತೀಯರು ಮನೆಗಳಲ್ಲಿ ಇಟ್ಟಿರುವ ಚಿನ್ನದ ಮೌಲ್ಯ ಎಷ್ಟು ಗೊತ್ತಾ? ಜಿಡಿಪಿಯನ್ನೇ ಮೀರಿಸಿ ದಾಖಲೆ,  ಇದರ ಮೌಲ್ಯ ಭಾರತದ ಜಿಡಿಪಿಯನ್ನೇ ಮೀರಿಸಿದೆ. ಮಾರ್ಗನ್ ಸ್ಟಾನ್ಲಿ ವರದಿ ಈ ಕುರಿತು ರೋಚಕ ಮಾಹಿತಿಯನ್ನು ನೀಡಿದೆ. ಈ ಚಿನ್ನದಲ್ಲಿ ನಿಮ್ಮ ಪಾಲೆಷ್ಟು?

 

Read Full Story

06:40 PM (IST) Dec 29

ವಿಜಯ್ ಹಜಾರೆ ಟ್ರೋಫಿ - ರಿಷಭ್ ಪಂತ್ ಮತ್ತೆ ಫೇಲ್ ಆದ್ರೂ ಡೆಲ್ಲಿಗೆ ಹ್ಯಾಟ್ರಿಕ್ ಗೆಲುವು

ವಿಜಯ್ ಹಜಾರೆ ಟ್ರೋಫಿಯಲ್ಲಿ, ಸೌರಾಷ್ಟ್ರ ವಿರುದ್ಧ ಡೆಲ್ಲಿ ರೋಚಕ ಜಯ ಸಾಧಿಸಿತು, ಆದರೆ ನಾಯಕ ರಿಷಭ್ ಪಂತ್ ವಿಫಲರಾದರು. ಇನ್ನೊಂದು ಪಂದ್ಯದಲ್ಲಿ, ಧ್ರುವ್ ಜುರೆಲ್ ಅವರ ಭರ್ಜರಿ ಶತಕದ ನೆರವಿನಿಂದ ಉತ್ತರ ಪ್ರದೇಶ ತಂಡವು ಬರೋಡಾ ವಿರುದ್ಧ ಜಯ ಗಳಿಸಿತು.
Read Full Story

06:05 PM (IST) Dec 29

ವಿಜಯ್ ಹಜಾರೆ ಟ್ರೋಫಿ - ತಮಿಳುನಾಡು ತಂಡವನ್ನು ಬಗ್ಗುಬಡಿದ ಕರ್ನಾಟಕ; ನಮ್ಮ ರಾಜ್ಯಕ್ಕೆ ಹ್ಯಾಟ್ರಿಕ್ ಜಯಭೇರಿ

2025-26ನೇ ಸಾಲಿನ ವಿಜಯ್ ಹಜಾರೆ ಟ್ರೋಫಿಯಲ್ಲಿ, ಮಯಾಂಕ್ ಅಗರ್‌ವಾಲ್ ನೇತೃತ್ವದ ಕರ್ನಾಟಕ ತಂಡವು ತಮಿಳುನಾಡನ್ನು 4 ವಿಕೆಟ್‌ಗಳಿಂದ ಸೋಲಿಸಿ ಹ್ಯಾಟ್ರಿಕ್ ಗೆಲುವು ದಾಖಲಿಸಿದೆ. ಮಯಾಂಕ್, ಶ್ರೀಜಿತ್ ಮತ್ತು ಶ್ರೇಯಸ್ ಗೋಪಾಲ್ ಅರ್ಧಶತಕಗಳ ನೆರವಿನಿಂದ 289 ರನ್‌ಗಳ ಗುರಿಯನ್ನು ಯಶಸ್ವಿಯಾಗಿ ಬೆನ್ನಟ್ಟಿತು.

Read Full Story

06:03 PM (IST) Dec 29

ಹೆಂಡ್ತಿಗೆ ಹೆರಿಗೆ ನೋವು - ಆಸ್ಪತ್ರೆಗೆ ಕರೆದೊಯ್ಯುವ ಗೊಂದಲದಲ್ಲಿ ಆಕೆಯನ್ನೇ ಬಿಟ್ಟು ಹೋದ ಗಡಿಬಿಡಿ ಗಂಡ

ಚೊಚ್ಚಲ ಹೆರಿಗೆ ನೋವಿನಿಂದ ಬಳಲುತ್ತಿದ್ದ ಪತ್ನಿಯನ್ನು ಆಸ್ಪತ್ರೆಗೆ ಕರೆದೊಯ್ಯುವ ಆತಂಕದಲ್ಲಿ, ಪತಿಯೊಬ್ಬ ಆಕೆಯನ್ನೇ ಮನೆಯಲ್ಲೇ ಮರೆತು ಲಗೇಜ್ ಸಮೇತ ಕಾರಿನಲ್ಲಿ ಒಬ್ಬನೇ ಹೊರಟು ಹೋದ ಘಟನೆ ನಡೆದಿದ್ದು, ಈ ಘಟನೆಯವ ವೀಡಿಯೋ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗ್ತಿದೆ.

Read Full Story

05:22 PM (IST) Dec 29

ವಿವಿಎಸ್ ಲಕ್ಷ್ಮಣ್ ಟೀಂ ಇಂಡಿಯಾ ಟೆಸ್ಟ್ ಕೋಚ್ ಸುದ್ದಿ ಬಗ್ಗೆ ಕೊನೆಗೂ ಅಪ್‌ಡೇಟ್ಸ್‌ ಕೊಟ್ಟ ಬಿಸಿಸಿಐ!

ನವದೆಹಲಿ: ಟೀಂ ಇಂಡಿಯಾ ಹೆಡ್ ಕೋಚ್ ಗೌತಮ್ ಗಂಭೀರ್ ಅವರನ್ನು ಟೆಸ್ಟ್ ತಂಡದಿಂದ ಕೆಳಗಿಳಿಸಿ, ವಿವಿಎಸ್‌ ಲಕ್ಷ್ಮಣ್‌ಗೆ ಪಟ್ಟ ಕಟ್ಟಲಾಗುತ್ತದೆ ಎನ್ನುವ ಗಾಳಿ ಸುದ್ದಿಯ ಬಗ್ಗೆ ಮೊದಲ ಸಲ ಬಿಸಿಸಿಐ ತುಟಿಬಿಚ್ಚಿದೆ. ಈ ಕುರಿತಾದ ಅಪ್‌ಡೇಟ್ಸ್ ಇಲ್ಲಿದೆ ನೋಡಿ.

 

Read Full Story

04:27 PM (IST) Dec 29

ಸಿಎಂ ಯೋಗಿ ಆದಿತ್ಯನಾಥ್ ರೀತಿ ಮಾತನಾಡಿ ಸರ್ಕಾರಿ ಶಾಲಾ ಶಿಕ್ಷಕಿ ಅಳುವಂತೆ ಮಾಡಿದ ಯುವಕ - ವೀಡಿಯೋ

ಮಿಮಿಕ್ರಿ ಕಲಾವಿದರೊಬ್ಬರು ಉತ್ತರ ಪ್ರದೇಶದ ಸಿಎಂ ಯೋಗಿ ಆದಿತ್ಯನಾಥ್ ಅವರ ಧ್ವನಿ ನಕಲು ಮಾಡಿ ಕರ್ತವ್ಯಲೋಪ ಎಸಗಿದ ಸರ್ಕಾರಿ ಶಾಲಾ ಶಿಕ್ಷಕಿಯೊಬ್ಬರಿಗೆ ಕ್ಲಾಸ್ ತೆಗೆದುಕೊಂಡಿದ್ದು,  ಈ ಘಟನೆಯ ಆಡಿಯೋ ವೈರಲ್ ಆಗಿದೆ.

Read Full Story

04:27 PM (IST) Dec 29

ಹಳದಿ ಬೋರ್ಡ್ ಇದೆ, ಟ್ರೈನ್ ಬರುತ್ತೆ, ಆದ್ರೆ ಹೆಸರಿಲ್ಲ! ಇದು ಭಾರತದ ಅನಾಮಧೇಯ ರೈಲು ನಿಲ್ದಾಣದ ಕಥೆ!

ಭಾರತದ ಪ್ರತಿಯೊಂದು ರೈಲ್ವೆ ನಿಲ್ದಾಣಕ್ಕೂ ತನ್ನದೇ ಆದ ಇತಿಹಾಸ ಮತ್ತು ವಿಶೇಷತೆಗಳಿವೆ. ಆದ್ರೆ ದೇಶದಲ್ಲಿ ಹೆಸರಿಲ್ಲದ ಒಂದು ರೈಲ್ವೆ ನಿಲ್ದಾಣ ಇದೆ ಅಂದ್ರೆ ನಂಬ್ತೀರಾ? ಹೌದು, ಪ್ಲಾಟ್‌ಫಾರ್ಮ್ ಮುಂದೆ ಇಟ್ಟಿರೋ ಹಳದಿ ಬೋರ್ಡ್ ಇವತ್ತಿಗೂ ಖಾಲಿಯಾಗೇ ಇರೋ ಒಂದು ಸ್ಟೇಷನ್ ಭಾರತದಲ್ಲಿದೆ.

Read Full Story

04:23 PM (IST) Dec 29

ಅಪಘಾತದಲ್ಲಿ ಎಲೆಕ್ಷನ್ ಕಮಿಷನರ್ ತಂದೆಗೆ ಗಂಭೀರ ಗಾಯ, ಒಡಿಶಾ BLO ಸಭೆ ರದ್ದುಗೊಳಿಸಿ ದೆಹಲಿಗೆ ವಾಪಸ್

ಅಪಘಾತದಲ್ಲಿ ಎಲೆಕ್ಷನ್ ಕಮಿಷನರ್ ತಂದೆಗೆ ಗಂಭೀರ ಗಾಯ, ಒಡಿಶಾ ಪ್ರವಾಸದಲ್ಲಿದ್ದ ಗ್ಯಾನೇಶ್ ಕುಮಾರ್ ಪ್ರವಾಸ ಮೊಟಕುಗೊಳಿಸಿ ದೆಹಲಿಗೆ ವಾಪಾಸ್ ಆಗಿದ್ದಾರೆ. ಬಿಎಲ್ಒ ಸಭೆಯನ್ನು ರದ್ದು ಮಾಡಿದ್ದಾರೆ

Read Full Story

04:03 PM (IST) Dec 29

ಬಿಗ್‌ ನ್ಯೂಸ್‌, ಜಿಮೇಲ್‌ ನೇಮ್‌ ಬದಲಾಯಿಸುವ ಅವಕಾಶ ನೀಡಿದ ಗೂಗಲ್‌!

ಗೂಗಲ್ ತನ್ನ ಬಳಕೆದಾರರಿಗೆ ಹಳೆಯ ಜಿಮೇಲ್‌ ಖಾತೆಯನ್ನು ಉಳಿಸಿಕೊಂಡು, ಅದರ ವಿಳಾಸವನ್ನು (ನೇಮ್) ಬದಲಾಯಿಸಲು ಹೊಸ ಅವಕಾಶ ನೀಡಿದೆ. ಇದರಿಂದಾಗಿ, ಶಾಲಾ-ಕಾಲೇಜು ದಿನಗಳಲ್ಲಿ ಸೃಷ್ಟಿಸಿದ ಮುಜುಗರದ ಇಮೇಲ್ ಹೆಸರುಗಳಿಂದ ತೊಂದರೆ ಅನುಭವಿಸುತ್ತಿದ್ದವರು ತಮ್ಮ ಡೇಟಾ ಕಳೆದುಕೊಳ್ಳದೆ ಹೊಸ ಹೆಸರು ಪಡೆಯಬಹುದು.
Read Full Story

03:54 PM (IST) Dec 29

T20 World Cup 2026 ಅಭಿಷೇಕ್ ಶರ್ಮಾ ಜತೆ ಈತನೇ ಓಪನ್ನರ್ ಆಗಲಿ ಎಂದ ರಾಬಿನ್ ಉತ್ತಪ್ಪ!

ಮುಂಬರುವ ಟಿ20 ವಿಶ್ವಕಪ್‌ಗೆ ಸಂಜು ಸ್ಯಾಮ್ಸನ್ ಭಾರತ ತಂಡದ ಆರಂಭಿಕ ಬ್ಯಾಟ್ಸ್‌ಮನ್ ಮತ್ತು ಮೊದಲ ಆಯ್ಕೆಯ ವಿಕೆಟ್ ಕೀಪರ್ ಆಗಿ ಆಯ್ಕೆಯಾಗಿದ್ದಾರೆ. ಗಿಲ್ ಬದಲಿಗೆ ಸ್ಥಾನ ಪಡೆದ ಸಂಜು ಆಯ್ಕೆಯನ್ನು ಮಾಜಿ ಕ್ರಿಕೆಟಿಗ ಉತ್ತಪ್ಪ ಬೆಂಬಲಿಸಿದರೆ, ಇಶಾನ್ ಕಿಶನ್ ಕೂಡ ಆರಂಭಿಕ ಸ್ಥಾನದ ರೇಸ್‌ನಲ್ಲಿದ್ದಾರೆ.

Read Full Story

03:49 PM (IST) Dec 29

ಸ್ಮೃತಿ ಮಂಧನಾ To ತಮನ್ನಾ, 2025ರಲ್ಲಿ ಕೋಲಾಹಲ ಸೃಷ್ಟಿಸಿದ ಟಾಪ್ 5 ಬ್ರೇಕ್ ಅಪ್

ಸ್ಮೃತಿ ಮಂಧನಾ To ತಮನ್ನಾ, ಈ ವರ್ಷ ಹಲವು ಸೆಲೆಬ್ರೆಟಿಗಳು ತಮ್ಮ ಸಂಬಂಧ ಮುರಿದುಕೊಂಡು ಬೇರೆ ಬೇರೆಯಾಗಿದ್ದಾರೆ. ಈ ಪೈಕಿ ಕೆಲವು ಕೋಹಾಲ ಸೃಷ್ಟಿಸಿದೆ. ಅನ್ಯೋನ್ಯವಾಗಿದ್ದ ಸಂಬಂಧಗಳು ಆರೋಪ ಪ್ರತ್ಯಾರೋಪ, ಹಲವು ಟ್ವಿಸ್ಟ್ ಮೂಲಕ ಬೇರ್ಪಟ್ಟಿದೆ.

 

Read Full Story

03:03 PM (IST) Dec 29

ಡಿವೋರ್ಸ್ ಆದರೂ ಹೆಸರಿನಲ್ಲಿ ಪತಿಯ ಹೆಸರು ಉಳಿಸಿಕೊಂಡ ನಟಿ

ಇತ್ತೀಚೆಗೆ ಅಪೆಂಡಿಕ್ಸ್ ಶಸ್ತ್ರಚಿಕಿತ್ಸೆಗೆ ಒಳಗಾದ ನಟಿ ಕಿರಣ್ ರಾವ್, ತಮ್ಮ ಆರೋಗ್ಯದ ಬಗ್ಗೆ ಮಾಹಿತಿ ಹಂಚಿಕೊಂಡಿದ್ದಾರೆ. ಆದರೆ, ಆಸ್ಪತ್ರೆಯ ರಿಸ್ಟ್ ಬ್ಯಾಂಡ್‌ನಲ್ಲಿದ್ದ ಅವರ ಹೆಸರು ನೋಡಿ ಅವರ ಅಭಿಮಾನಿಗಳು ಅಚ್ಚರಿಪಟ್ಟಿದ್ದಾರೆ.

Read Full Story

02:55 PM (IST) Dec 29

ಹೊತ್ತಿ ಉರಿದ ಚಲಿಸುತ್ತಿದ್ದ ರೈಲಿನ ಬೋಗಿ, ಟಾಟಾ ನಗರ ಟ್ರೈನ್ ದುರಂತದಲ್ಲಿ ಬೆಂದು ಹೋದ ಪ್ರಯಾಣಿಕ

ಹೊತ್ತಿ ಉರಿದ ಚಲಿಸುತ್ತಿದ್ದ ರೈಲಿನ ಬೋಗಿ, ಟಾಟಾ ನಗರ ಎರ್ನಾಕುಲಂ ಎಕ್ಸ್‌ಪ್ರೆಸ್ ರೈಲಿನಲ್ಲಿ ಬೆಂಕಿ ಕಾಣಿಸಿಕೊಂಡು ಬೋಗಿಗಳು ಹೊತ್ತಿ ಉರಿದ ಘಟನೆ ನಡೆದಿದೆ. ಘಟನೆಯಲ್ಲಿ ಓರ್ವ ಪ್ರಯಾಣಿಕ ಮೃತಪಟ್ಟಿರುವುದಾಗಿ ವರದಿಯಾಗಿದೆ.

 

Read Full Story

01:55 PM (IST) Dec 29

ಭಾರತ ತಂಡ ಪ್ರತಿನಿಧಿಸಿದ ಪಾಕಿಸ್ತಾನ ಕಬಡ್ಡಿ ಪಟು ಮೇಲೆ ಕಠಿಣ ಕ್ರಮ! ಅನಿರ್ದಿಷ್ಟಾವಧಿಗೆ ಬ್ಯಾನ್

ಪಾಕಿಸ್ತಾನದ ಅಂತರರಾಷ್ಟ್ರೀಯ ಕಬಡ್ಡಿ ಆಟಗಾರ ಉಬೈದುಲ್ಲಾ ರಜಪೂತ್ ಅವರನ್ನು ಪಾಕಿಸ್ತಾನ ಕಬಡ್ಡಿ ಫೆಡರೇಶನ್ ಅನಿರ್ದಿಷ್ಟಾವಧಿಗೆ ನಿಷೇಧಿಸಿದೆ. ಬಹ್ರೇನ್‌ನಲ್ಲಿ ನಡೆದ ಖಾಸಗಿ ಪಂದ್ಯಾವಳಿಯಲ್ಲಿ ಎನ್‌ಒಸಿ ಇಲ್ಲದೆ ಭಾರತೀಯ ತಂಡಕ್ಕಾಗಿ ಆಡಿದ್ದು ಮತ್ತು ಭಾರತದ ಧ್ವಜವನ್ನು ಹೊದ್ದು ಸಂಭ್ರಮಿಸಿದ್ದರು.

Read Full Story

01:43 PM (IST) Dec 29

ಚಿತ್ರರಂಗಕ್ಕೇ ಗುಡ್​ಬೈ ಹೇಳಿ, ದಾಖಲೆಯನ್ನೂ ಸೃಷ್ಟಿಸಿದ ಬೆನ್ನಲ್ಲೇ ಕುಸಿದು ಬಿದ್ದ ನಟ ವಿಜಯ್​! ಏನಿದು ಘಟನೆ?

ನಟ ದಳಪತಿ ವಿಜಯ್ 33 ವರ್ಷಗಳ ಸಿನಿ ಪಯಣಕ್ಕೆ ವಿದಾಯ ಹೇಳಿದ್ದಾರೆ. ಮಲೇಷ್ಯಾದಲ್ಲಿ ದಾಖಲೆಯ ಕಾರ್ಯಕ್ರಮದ ನಂತರ, ಚೆನ್ನೈ ವಿಮಾನ ನಿಲ್ದಾಣದಲ್ಲಿ ಅಭಿಮಾನಿಗಳ ನೂಕುನುಗ್ಗಲಿಗೆ ಸಿಲುಕಿ ಕುಸಿದುಬಿದ್ದರು.

Read Full Story

01:12 PM (IST) Dec 29

ವಿ ಮಿಸ್ ಯೂ - ಮುದ್ದಿನ ಶ್ವಾನಕ್ಕೆ ನಟನ ಭಾವುಕ ವಿದಾಯ

ಬಾಲಿವುಡ್ ನಟ ವರುಣ್ ಧವನ್ ತಮ್ಮ ಮುದ್ದಿನ ಶ್ವಾನ 'ಏಂಜೆಲ್' ಅನ್ನು ಕಳೆದುಕೊಂಡಿದ್ದಾರೆ. ಈ ಕುರಿತು ಸೋಶಿಯಲ್ ಮೀಡಿಯಾದಲ್ಲಿ ಭಾವುಕ ಪೋಸ್ಟ್ ಹಂಚಿಕೊಂಡಿದ್ದು, ಅನೇಕ ಸೆಲೆಬ್ರಿಟಿಗಳು ಸಂತಾಪ ಸೂಚಿಸಿದ್ದಾರೆ. 

Read Full Story

12:31 PM (IST) Dec 29

Breaking - ಉನ್ನಾವೋ ರೇ*ಪ್‌ ಆರೋಪಿ ಕುಲದೀಪ್‌ ಸೆಂಗಾರ್‌ಗೆ ಶಾಕ್‌, ಜಾಮೀನು ನೀಡಿದ್ದ ಹೈಕೋರ್ಟ್‌ ಆದೇಶಕ್ಕೆ ಸುಪ್ರೀಂ ಕೋರ್ಟ್‌ ತಡೆ

2017ರ ಉನ್ನಾವೋ ಅ*ತ್ಯಾಚಾರ ಪ್ರಕರಣದಲ್ಲಿ ದೋಷಿ ಕುಲದೀಪ್ ಸೆಂಗಾರ್‌ಗೆ ನೀಡಲಾಗಿದ್ದ ಜಾಮೀನಿಗೆ ಸುಪ್ರೀಂ ಕೋರ್ಟ್ ತಡೆಯಾಜ್ಞೆ ನೀಡಿದೆ. ಈ ಹಿನ್ನೆಲೆಯಲ್ಲಿ ಅವರು ಜೈಲಿನಿಂದ ಬಿಡುಗಡೆಯಾಗುವುದಿಲ್ಲ, ಪ್ರಕರಣದ ಮುಂದಿನ ವಿಚಾರಣೆ ಜನವರಿಯಲ್ಲಿ ನಡೆಯಲಿದೆ ಎಂದು ನ್ಯಾಯಾಲಯ ಸ್ಪಷ್ಟಪಡಿಸಿದೆ.

Read Full Story

12:21 PM (IST) Dec 29

887 ಕೋಟಿಯ ಮುಂಬೈ ಮರೀನಾ ಪ್ರಾಜೆಕ್ಟ್‌ಗೆ ಗ್ರೀನ್‌ಸಿಗ್ನಲ್‌ ನೀಡಿದ ಕೇಂದ್ರ ಸರ್ಕಾರ!

ಕೇಂದ್ರ ಸರ್ಕಾರವು ಮುಂಬೈ ಬಂದರಿನಲ್ಲಿ 'ವಿಕ್ಷಿತ್ ಭಾರತ್ ಮುಂಬೈ ಮರೀನಾ' ಎಂಬ ವಿಶ್ವ ದರ್ಜೆಯ ಮರೀನಾ ನಿರ್ಮಾಣಕ್ಕೆ 887 ಕೋಟಿ ರೂ.ಗಳ ಯೋಜನೆಗೆ ಅನುಮೋದನೆ ನೀಡಿದೆ. ಈ ಯೋಜನೆಯು ಕಡಲ ಪ್ರವಾಸೋದ್ಯಮವನ್ನು ಉತ್ತೇಜಿಸುವ ಗುರಿ ಹೊಂದಿದ್ದು, 424 ವಿಹಾರ ನೌಕೆಗಳಿಗೆ ಸ್ಥಳಾವಕಾಶ ಕಲ್ಪಿಸಲಿದೆ.

Read Full Story

11:55 AM (IST) Dec 29

ಆಟವಾಡುತ್ತಾ ಅಪ್ಪನ ದುಡ್ಡಿಗೆ ಕತ್ತರಿ ಹಾಕಿದ ಮಗಳು - 50 ಸಾವಿರ ಮೌಲ್ಯದ ನೋಟುಗಳು ಪೀಸ್ ಪೀಸ್

ಚೀನಾದಲ್ಲಿ ಐದು ವರ್ಷದ ಬಾಲಕಿಯೊಬ್ಬಳು, ಹಣದ ಮೌಲ್ಯ ತಿಳಿಯದೆ ತನ್ನ ತಂದೆಯ 6.3 ಲಕ್ಷ ರೂ. ಮೌಲ್ಯದ ಉಳಿತಾಯದ ಹಣವನ್ನು ಕತ್ತರಿಸಿದ್ದಾಳೆ. ನೋಟುಗಳಲ್ಲಿದ್ದ ಮಾವೋ ಝೆಡಾಂಗ್ ಅವರ ಫೋಟೋವನ್ನು ಕತ್ತರಿ ಬಳಸಿ ಬೇರ್ಪಡಿಸಿದ್ದು, ಈ ಘಟನೆಯಿಂದಾಗಿ ಇಡೀ ಹಣ ಬಳಕೆಗೆ ಬಾರದಂತಾಗಿದೆ.
Read Full Story

11:55 AM (IST) Dec 29

ಕ್ರಿಕೆಟ್ ಲೆಜೆಂಡ್ಸ್‌ ಹಿಂದಿಕ್ಕಿ ಹೊಸ ಇತಿಹಾಸ ಬರೆದ ಸ್ಮೃತಿ ಮಂಧನಾ! ಈ ಸಾಧನೆ ಮಾಡಿದ ಮೊದಲ ಮಹಿಳಾ ಕ್ರಿಕೆಟರ್

ಭಾರತದ ಆರಂಭಿಕ ಬ್ಯಾಟರ್ ಸ್ಮೃತಿ ಮಂಧನಾ, ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ 10,000 ರನ್ ಪೂರೈಸಿದ ನಾಲ್ಕನೇ ಮಹಿಳಾ ಆಟಗಾರ್ತಿಯಾಗಿದ್ದಾರೆ. ಕೇವಲ 281 ಇನ್ನಿಂಗ್ಸ್‌ಗಳಲ್ಲಿ ಈ ಸಾಧನೆ ಮಾಡುವ ಮೂಲಕ, ಅತಿವೇಗವಾಗಿ 10 ಸಾವಿರ ರನ್ ಗಳಿಸಿದ ಆಟಗಾರ್ತಿ ಎಂಬ ವಿಶ್ವದಾಖಲೆ ಬರೆದಿದ್ದಾರೆ.
Read Full Story

11:43 AM (IST) Dec 29

ಧಮ್‌ ಎಳೆಯೋ ಮಂದಿಗೆ ಗುಡ್‌ನ್ಯೂಸ್‌, ಸಿಗರೇಟ್‌ ರೇಟ್‌ 72 ರೂಪಾಯಿಗೆ ಏರಿಕೆ ಆಗಲ್ಲ!

ಭಾರತದಲ್ಲಿ ಸಿಗರೇಟ್‌ ಮೇಲೆ ಹೊಸ ತೆರಿಗೆ ವಿಧಿಸಲಾಗುತ್ತಿದ್ದು, ಒಂದು ಸಿಗರೇಟ್ ಬೆಲೆ 72 ರೂ. ಆಗಲಿದೆ ಎಂಬ ಸುದ್ದಿ ಸುಳ್ಳು. ಈ ಲೇಖನವು ಹೊಸ ತೆರಿಗೆಯನ್ನು ಹೇಗೆ ಲೆಕ್ಕ ಹಾಕಲಾಗುತ್ತದೆ ಮತ್ತು ಪ್ರತಿ ಸಿಗರೇಟಿನ ನೈಜ ಬೆಲೆ ಏರಿಕೆ ₹2.5 ರಿಂದ ₹10.3 ರಷ್ಟಿರಬಹುದು ಎಂಬುದನ್ನು ವಿವರಿಸುತ್ತದೆ.
Read Full Story

10:53 AM (IST) Dec 29

14,19,06,98,900 ಲಾಟರಿ ಗೆದ್ದ ವಿಚಾರ ಯಾರಿಗೂ ಗೊತ್ತಾಗಬಾರದು ಅಂತ ಮುಖವಾಡ ಧರಿಸಿ ಲಾಟರಿ ಹಣ ಪಡೆದ ಯುವಕ

ಜಮೈಕಾದಲ್ಲಿ ವ್ಯಕ್ತಿಯೊಬ್ಬ 158 ಮಿಲಿಯನ್ ಡಾಲರ್ ಲಾಟರಿ ಗೆದ್ದಿದ್ದಾನೆ. ಆದರೆ, ತನ್ನ ಕುಟುಂಬ ಮತ್ತು ಇತರರಿಂದ ತನ್ನನ್ನು ರಕ್ಷಿಸಿಕೊಳ್ಳಲು, ಗುರುತು ಸಿಗದಂತೆ ಭಯಾನಕ ಮುಖವಾಡ ಧರಿಸಿ ಹಣವನ್ನು ಸ್ವೀಕರಿಸಿದ್ದಾನೆ. ಆತನ ಈ ಬುದ್ಧಿವಂತಿಕೆಯ ನಡೆ ಈಗ ಇಂಟರ್‌ನೆಟ್‌ನಲ್ಲಿ ವೈರಲ್ ಆಗಿದೆ.
Read Full Story

More Trending News