ಪಾಲಕ್ಕಾಡ್: ಪ್ರಧಾನಿ ನರೇಂದ್ರ ಮೋದಿಯವರು ಕೇರಳದ ಪಾಲಕ್ಕಾಡ್ನಲ್ಲಿ ಭಾಗಿಯಾಗಿದ್ದ ಚುನಾವಣಾ ರ್ಯಾಲಿ ವೇಳೆ ಆಂಪ್ಲಿಫೈಯರ್ನಿಂದ ಹೊಗೆ ಕಾಣಿಸಿಕೊಂಡಿದೆ. ಇದು ಕೆಲ ಕಾಲ ಆತಂಕಕ್ಕೆ ಕಾರಣವಾಗಿದೆ.
ರ್ಯಾಲಿ ನಡೆಯಬೇಕಿದ್ದ ಸ್ಥಳವಾದ ಕೊಟ್ಟಮೈಡನಂಗೆ ಆಗಮಿಸುವ ಅರ್ಧ ಗಂಟೆಗೂ ಮುನ್ನ ಮೈಕ್ರೊಫೋನ್ಗಳಿಗೆ ಸಂಪರ್ಕಗೊಂಡಿರುವ ಆಂಪ್ಲಿಫೈಯರ್ನಿಂದ ಹೊಗೆ ಬರುತ್ತಿರುವುದು ಕಂಡುಬಂದಿದೆ. ವಿಚಾರ ತಿಳಿಯುತ್ತಿದ್ದಂತೆ ಪೊಲೀಸರು ಕೂಡಲೇ ಹೊಗೆ ನಿಲ್ಲಿಸಲು ಕ್ರಮ ಕೈಗೊಂಡಿದ್ದಾರೆ. ಓವರ್ಲೋಡ್ನಿಂದ ಆಂಪ್ಲಿಫೈಯರ್ ಹೆಚ್ಚು ಬಿಸಿಯಾಗಿ ಘಟನೆ ನಡೆದಿದೆ ಎನ್ನಲಾಗಿದೆ.
10:07 AM (IST) Mar 30
09:57 AM (IST) Mar 30
ಬ್ಯೂಟಿ ಪಾರ್ಲರ್ ತರಬೇತಿ ನೆಪದಲ್ಲಿ ಯುವತಿಯರನ್ನು ಮನೆಗೆ ಕರೆಸಿಕೊಂಡು ಪತಿಯ ಅತ್ಯಾ*ಚಾರಕ್ಕೆ ಪತ್ನಿಯೇ ಸಹಾಯ ಮಾಡುತ್ತಿದ್ದ ಆಘಾತಕಾರಿ ಘಟನೆ ನಡೆದಿದೆ. ಪತಿ ಕೋಣೆಯೊಳಗೆ ಕೃತ್ಯ ಎಸಗುತ್ತಿದ್ದರೆ, ಪತ್ನಿ ಹೊರಗೆ ಕಾವಲು ಕಾಯುತ್ತಿದ್ದಳು.
09:23 AM (IST) Mar 30
ಅಮೆರಿಕ-ಇರಾನ್ ಯುದ್ಧದ ಮಧ್ಯಸ್ಥಿಕೆ ಕುರಿತು ಇಸ್ಲಾಮಾಬಾದ್ನಲ್ಲಿ ನಡೆದ ವಿದೇಶಾಂಗ ಸಚಿವರ ಸಭೆಯಲ್ಲಿ ಪಾಕಿಸ್ತಾನದ ಉಪ ಪ್ರಧಾನಿ ಇಷಾಕ್ ದಾರ್ ಜಾರಿ ಬಿದ್ದರು. ಈ ಸಭೆಯಲ್ಲಿ ಸೌದಿ ಅರೇಬಿಯಾ, ಈಜಿಪ್ಟ್, ಮತ್ತು ಟರ್ಕಿ ದೇಶಗಳ ಸಚಿವರು ಭಾಗವಹಿಸಿದ್ದರು.
09:11 AM (IST) Mar 30
ಐಪಿಎಲ್ ಕಾಮೆಂಟರಿ ವೇಳೆ ವಿರೇಂದ್ರ ಸೆಹ್ವಾಗ್ ಮತ್ತು ಆರ್. ಅಶ್ವಿನ್ ನಡುವೆ ವಾಗ್ವಾದ ನಡೆದಿದೆ. ಸೆಹ್ವಾಗ್ ಅವರು ಅಶ್ವಿನ್ ಅವರನ್ನು ಪದೇ ಪದೇ ಕಾಲೆಳೆದಿದ್ದು, ಇದು ಅಭಿಮಾನಿಗಳ ಆಕ್ರೋಶಕ್ಕೆ ಕಾರಣವಾಗಿದೆ. ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸಿರುವ ಬಿಸಿಸಿಐ, ಇಬ್ಬರ ಮೇಲೂ ಕ್ರಮ ಕೈಗೊಳ್ಳುವ ಸಾಧ್ಯತೆಯಿದೆ.
08:24 AM (IST) Mar 30
ಯುದ್ಧದಿಂದ ಎಲ್ಪಿಜಿ ಪೂರೈಕೆಯ ಮೇಲೆ ಉಂಟಾದ ಪರಿಣಾಮದಿಂದಾಗಿ, ಕೇಂದ್ರ ಸರ್ಕಾರವು 21 ರಾಜ್ಯಗಳಲ್ಲಿ ಸೀಮೆಎಣ್ಣೆ ವಿತರಣೆಯನ್ನು ಪುನರಾರಂಭಿಸಿದೆ. ಪೆಟ್ರೋಲ್, ಡೀಸೆಲ್ ಅಥವಾ ಗ್ಯಾಸ್ಗೆ ಯಾವುದೇ ಕೊರತೆಯಿಲ್ಲ ಎಂದು ಸರ್ಕಾರ ಭರವಸೆ ನೀಡಿದೆ.
08:22 AM (IST) Mar 30
07:47 AM (IST) Mar 30
07:34 AM (IST) Mar 30
ಬೆಂಗಳೂರಿನಿಂದ ವಾರಾಣಸಿಗೆ ಹೊರಟಿದ್ದ ಇಂಡಿಗೋ ವಿಮಾನದಲ್ಲಿ ಪ್ರಯಾಣಿಕನೊಬ್ಬ ಎರಡು ಬಾರಿ ತುರ್ತು ನಿರ್ಗಮನ ದ್ವಾರವನ್ನು ತೆರೆಯಲು ಯತ್ನಿಸಿದ್ದಾನೆ. ವಿಮಾನ ಲ್ಯಾಂಡ್ ಆಗುತ್ತಿದ್ದಂತೆ ಆತನನ್ನು ಬಂಧಿಸಲಾಗಿದ್ದು, ವಿಚಾರಣೆ ವೇಳೆ 'ನನ್ನ ಮೈಮೇಲೆ ದೆವ್ವ ಬಂದಿತ್ತು' ಎಂಬ ವಿಚಿತ್ರ ಹೇಳಿಕೆ ನೀಡಿದ್ದಾನೆ.