Published : Apr 04, 2026, 06:20 AM ISTUpdated : Apr 04, 2026, 11:37 PM IST

India Latest News Live: ಜುರೆಲ್-ಜೈಸ್ವಾಲ್ ಬೊಂಬಾಟ ಆಟ; ಬಿಷ್ಣೋಯ್ ದಾಳಿಗೆ ಮುಳುಗಿದ ಗುಜರಾತ್ ಟೈಟಾನ್ಸ್

ಸಾರಾಂಶ

ನವದೆಹಲಿ: ಭಾರತದ ಕ್ರೀಡಾಪಟುಗಳಲ್ಲಿ ವರ್ಷದಿಂದ ವರ್ಷಕ್ಕೆ ನಿಷೇಧಿತ ಮದ್ದು ಸೇವನೆ(ಡೋಪಿಂಗ್‌) ಪ್ರಮಾಣ ಹೆಚ್ಚುತ್ತಿದ್ದು, ಅನರ್ಹ ಕ್ರೀಡಾಪಟುಗಳ ಪಟ್ಟಿಯಲ್ಲಿ ಭಾರತ ಈಗ ಕೀನ್ಯಾಕ್ಕಿಂತಲೂ ಕಳಪೆ ಸಾಧನೆ ಮಾಡಿ ವಿಶ್ವದಲ್ಲೇ ನಂ.1 ಸ್ಥಾನದಲ್ಲಿದೆ. ಆಫ್ರಿಕಾ ದೇಶ ಕೀನ್ಯಾ ಈಗ 2ನೇ ಸ್ಥಾನದಲ್ಲಿದೆ.

ವಿಶ್ವ ಅಥ್ಲೆಟಿಕ್ ಸಂಸ್ಥೆಯ ಅಥ್ಲೆಟಿಕ್ಸ್‌ ಸಮಗ್ರತಾ ಘಟಕ(ಎಐಯು) ವರದಿ ಪ್ರಕಾರ, ಭಾರತದಲ್ಲಿ ಈಗ ಬರೋಬ್ಬರಿ 148 ಕ್ರೀಡಾಪಟುಗಳು ಸ್ಪರ್ಧೆಗೆ ಅನರ್ಹಗೊಂಡಿದ್ದಾರೆ. ಇದರಲ್ಲಿ ಅಗ್ರ ಅಥ್ಲೀಟ್‌ಗಳಾದ ದ್ಯುತೀ ಚಂದ್‌, ಶೇಕರ್‌ ಧನಲಕ್ಷ್ಮಿ, ಫರ್ವೇಜ್‌ ಖಾನ್‌ ಸೇರಿ ಪ್ರಮುಖರಿದ್ದಾರೆ. ಇನ್ನು, ಕೀನ್ಯಾದಲ್ಲಿ ಡೋಪಿಂಗ್‌ನಲ್ಲಿ ಸಿಕ್ಕಿಬಿದ್ದು ಅನರ್ಹಗೊಂಡ ಅಥ್ಲೀಟ್‌ಗಳ ಸಂಖ್ಯೆ 146. ಪಟ್ಟಿಯಲ್ಲಿ 3ನೇ ಸ್ಥಾನದಲ್ಲಿರುವ ರಷ್ಯಾದಲ್ಲಿ ಒಟ್ಟು 66 ಕ್ರೀಡಾಪಟುಗಳು ಅನರ್ಹಗೊಂಡಿದ್ದಾರೆ.

11:37 PM (IST) Apr 04

ಜುರೆಲ್-ಜೈಸ್ವಾಲ್ ಬೊಂಬಾಟ ಆಟ; ಬಿಷ್ಣೋಯ್ ದಾಳಿಗೆ ಮುಳುಗಿದ ಗುಜರಾತ್ ಟೈಟಾನ್ಸ್

ಯಶಸ್ವಿ ಜೈಸ್ವಾಲ್ ಮತ್ತು ಧ್ರುವ್ ಜುರೆಲ್ ಅವರ ಆಕರ್ಷಕ ಬ್ಯಾಟಿಂಗ್ ಹಾಗೂ ರವಿ ಬಿಷ್ಣೋಯ್ ಅವರ ಮಾರಕ ಬೌಲಿಂಗ್ ದಾಳಿಯ ನೆರವಿನಿಂದ ರಾಜಸ್ಥಾನ ರಾಯಲ್ಸ್ ತಂಡವು ಗುಜರಾತ್ ಟೈಟಾನ್ಸ್ ವಿರುದ್ಧ 6 ರನ್‌ಗಳ ರೋಚಕ ಜಯ ಸಾಧಿಸಿತು. ಈ ಗೆಲುವಿನೊಂದಿಗೆ ರಾಜಸ್ಥಾನ ಅಂಕಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದೆ.
Read Full Story

08:02 PM (IST) Apr 04

ಆಸ್ತಿ ಮನೆ ಇಲ್ಲ, ವಾಹನ ಇಲ್ಲ, ಕೈಯಲ್ಲಿದೆ 84 ರೂ, ವಿಧಾನಸಭೆ ಚುನಾವಣೆ ಅಚ್ಚರಿ ಅಭ್ಯರ್ಥಿ

ಆಸ್ತಿ ಮನೆ ಇಲ್ಲ, ವಾಹನ ಇಲ್ಲ, ಕೈಯಲ್ಲಿದೆ 84 ರೂ, ವಿಧಾನಸಭೆ ಚುನಾವಣೆ ಅಚ್ಚರಿ ಅಭ್ಯರ್ಥಿ , ಎಟುಮಾನೂರು ಕ್ಷೇತ್ರದ ಅಭ್ಯರ್ಥಿ ಖಾತೆಯಲ್ಲಿ 40 ರೂಪಾಯಿ, ಕೈಯಲ್ಲಿ 44 ರೂಪಾಯಿ ಬಿಟ್ಟರೆ ಇನ್ಯಾವ ಆಸ್ತಿಯೂ ಇಲ್ಲ.

Read Full Story

07:36 PM (IST) Apr 04

ಉಪ ಮುಖ್ಯಮಂತ್ರಿಗೆ 17 ಬಾರಿ ಕರೆ ಮಾಡಿದ ರಾಸಲೀಲೆ ಗುರೂಜಿ, ಆ್ಯಕ್ಟಿವಿಸ್ಟ್‌ನಿಂದ CDR ಬಿಡುಗಡೆ

ಉಪ ಮುಖ್ಯಮಂತ್ರಿಗೆ 17 ಬಾರಿ ಕರೆ ಮಾಡಿದ ರಾಸಲೀಲೆ ಗುರೂಜಿ, ಆ್ಯಕ್ಟಿವಿಸ್ಟ್‌ನಿಂದ CDR ಬಿಡುಗಡೆ, 100ಕ್ಕೂ ಹೆಚ್ಚು ಮಹಿಳೆಯರನ್ನು ಬಳಸಿಕೊಂಡು ಅರೆಸ್ಟ್ ಆಗಿರುವ ಸ್ವಾಮೀಜಿ ಕುರಿತು ಕೆಲ ಮಾಹಿತಿ ಬಹಿರಂಗವಾಗಿದೆ.

Read Full Story

06:47 PM (IST) Apr 04

ಟಾಟಾ ಟ್ರಸ್ಟ್‌ನಲ್ಲಿ ಧರ್ಮ ಸಂಘರ್ಷ, ಪಾರ್ಸಿ ಅಲ್ಲದವರ ನೇಮಕಕ್ಕೆ ಶುರುವಾಯ್ತು ಆಕ್ರೋಶ

ಟಾಟಾ ಟ್ರಸ್ಟ್‌ನ ಮಾಜಿ ಟ್ರಸ್ಟಿ ಮೆಹ್ಲಿ ಮಿಸ್ತ್ರಿ, 'ಬಾಯಿ ಹೀರಾಬಾಯಿ' ಸಂಸ್ಥೆಗೆ ಪಾರ್ಸಿಗಳಲ್ಲದವರನ್ನು ನೇಮಕ ಮಾಡಿರುವುದನ್ನು ಪ್ರಶ್ನಿಸಿದ್ದಾರೆ. 1923ರ ಟ್ರಸ್ಟ್ ಒಪ್ಪಂದದ ಉಲ್ಲಂಘನೆ ಎಂದು ಆರೋಪಿಸಿರುವ ಅವರು, ಇದು ಕಾನೂನುಬಾಹಿರವೆಂದು ಮಹಾರಾಷ್ಟ್ರ ಚಾರಿಟಿ ಕಮಿಷನರ್ ಬಳಿ ದೂರು ದಾಖಲಿಸಿದ್ದಾರೆ. 

Read Full Story

06:47 PM (IST) Apr 04

'ಧುರಂಧರ್' ಚಿತ್ರಕ್ಕೆ ಕೃತಿಚೌರ್ಯ ಆರೋಪದ ವಿರುದ್ಧ ಲೀಗಲ್ ನೋಟಿಸ್ ಜಾರಿ ಮಾಡಿಸಿದ್ರಾ ಆದಿತ್ಯ ಧರ್? ಸತ್ಯ ಸಂಗತಿ ಏನು?

ಬಾಕ್ಸ್ ಆಫೀಸ್‌ನಲ್ಲಿ ಮಿನುಗುತ್ತಿರುವ 'ಧುರಂಧರ್' ಚಿತ್ರಕ್ಕೆ ಈ ಕಾನೂನು ಸಮರವು ಹೊಸ ತಲೆನೋವಾಗಿ ಪರಿಣಮಿಸಿದೆ. ರಣವೀರ್ ಸಿಂಗ್ ಅವರ ಅಪ್ಪಟ ಅಭಿಮಾನಿಗಳು ಈ ವಿವಾದ ಎಲ್ಲಿಗೆ ಹೋಗಿ ನಿಲ್ಲುತ್ತದೆಯೋ ಎಂದು ಆತಂಕದಿಂದ ಕಾಯುತ್ತಿದ್ದಾರೆ. ಸದ್ಯಕ್ಕೆ ಈ 'ಕಥೆಯ ಕದನ' ಬಾಲಿವುಡ್‌ನ ಹಾಟ್ ಟಾಪಿಕ್ ಆಗಿದೆ.

Read Full Story

06:39 PM (IST) Apr 04

ಮೈ ಚಳಿ ಬಿಟ್ಟು ಅಜಯ್​ ದೇವಗನ್​ ಜೊತೆ ಕರೀನಾ ಕಪೂರ್​ ​ ಲಿಪ್​ಲಾಕ್​ - ಸೈಫ್​ ಎಂಟ್ರಿಯಾಗಾದ ಆಗಿದ್ದೇ ಬೇರೆ

ನಟ ಅಜಯ್ ದೇವಗನ್ ಅವರ ಹುಟ್ಟುಹಬ್ಬದ ಸಂದರ್ಭದಲ್ಲಿ, 2013ರ 'ಸತ್ಯಾಗ್ರಹ' ಚಿತ್ರದಲ್ಲಿ ಕರೀನಾ ಕಪೂರ್ ಅವರು ಲಿಪ್‌ಲಾಕ್ ದೃಶ್ಯಕ್ಕೆ ನಿರಾಕರಿಸಿದ ಘಟನೆ ಮುನ್ನೆಲೆಗೆ ಬಂದಿದೆ. ಸೈಫ್ ಅಲಿ ಖಾನ್ ಜೊತೆಗಿನ ಮದುವೆಯ ನಂತರ ಕರೀನಾ ಈ ನಿರ್ಧಾರ ತೆಗೆದುಕೊಂಡಿದ್ದರು. ಅಲ್ಲಿ ಆಗಿದ್ದೇನು?

Read Full Story

06:27 PM (IST) Apr 04

ಅರ್ಧಶತಕ ಸಿಡಿಸಿ ಪಂಜಾಬ್ ತಂಡ ಗೆಲ್ಲಿಸಿದ್ರೂ ಶ್ರೇಯಸ್ ಅಯ್ಯರ್ ಟೀಕಿಸಿದ ಆಕಾಶ್ ಚೋಪ್ರಾ!

ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಪಂಜಾಬ್ ಕಿಂಗ್ಸ್ ಗೆದ್ದರೂ, ನಾಯಕ ಶ್ರೇಯಸ್ ಅಯ್ಯರ್ ಅವರ ನಾಯಕತ್ವದ ಬಗ್ಗೆ ಮಾಜಿ ಆಟಗಾರ ಆಕಾಶ್ ಚೋಪ್ರಾ ಪ್ರಶ್ನೆ ಎತ್ತಿದ್ದಾರೆ. ಸ್ಪಿನ್ನರ್ ಯುಜುವೇಂದ್ರ ಚಹಲ್ ಅವರನ್ನು ಸರಿಯಾಗಿ ಬಳಸಿಕೊಳ್ಳದ ಬಗ್ಗೆ ಟೀಕೆ ವ್ಯಕ್ತವಾಗಿದ್ದು, ಇದೇ ಪಂದ್ಯದಲ್ಲಿ ನಿಧಾನಗತಿಯ ಓವರ್ ರೇಟ್‌ಗಾಗಿ ಅಯ್ಯರ್‌ಗೆ 24 ಲಕ್ಷ ರೂ. ದಂಡ ವಿಧಿಸಲಾಗಿದೆ.
Read Full Story

06:26 PM (IST) Apr 04

ಜಿಯೋ ಮೊಬೈಲ್‌ ರೀಚಾರ್ಜ್ ಪ್ಲಾನ್‌ಗಳ 'ಆಟ'ಕ್ಕೆ ಟ್ರಾಯ್ ಬ್ರೇಕ್, ಏ.14 ಡೆಡ್‌ಲೈನ್‌

ರಿಲಯನ್ಸ್ ಜಿಯೋದ ಕೆಲವು ರೀಚಾರ್ಜ್ ಯೋಜನೆಗಳು ತಾರತಮ್ಯದಿಂದ ಕೂಡಿದ್ದು, ಪಾರದರ್ಶಕತೆಯ ನಿಯಮಗಳನ್ನು ಉಲ್ಲಂಘಿಸುತ್ತಿವೆ ಎಂದು ಟ್ರಾಯ್ ಹೇಳಿದೆ. ಈ ಹಿನ್ನೆಲೆಯಲ್ಲಿ, ಎಲ್ಲಾ ಪ್ಲಾನ್‌ಗಳನ್ನು ಎಲ್ಲ ವೇದಿಕೆಗಳಲ್ಲಿ ಮತ್ತು ಎಲ್ಲ ಸಾಧನಗಳಿಗೆ ಲಭ್ಯವಾಗುವಂತೆ ಮಾಡಲು ಟ್ರಾಯ್ ಕಟ್ಟುನಿಟ್ಟಿನ ಆದೇಶ ನೀಡಿದೆ.

Read Full Story

05:56 PM (IST) Apr 04

ಡಿವೋರ್ಸ್ ಸುದ್ದಿಗೆ ಉತ್ತರ ಸಿಕ್ತು ಬಿಡಿ.. ಮೌನ ಮುರಿದು ಪತ್ನಿ-ಮಗಳ ಬಗ್ಗೆ 'ಜೂನಿಯರ್ ಬಿ' ಬಿಚ್ಚಿಟ್ಟ ಸತ್ಯಗಳಿವು!

ಮಹಿಳೆಯರಲ್ಲಿರುವ ಸೂಕ್ಷ್ಮ ಸಂವೇದನೆ ಪುರುಷರಲ್ಲಿ ಕಡಿಮೆ ಇರುತ್ತದೆ. ಆದರೂ ನಾನು ಮತ್ತು ಐಶ್ವರ್ಯಾ ಮಗಳಿಗೆ ಉತ್ತಮ ಮಾದರಿಯಾಗಲು ಬಯಸುತ್ತೇವೆ. ಮಕ್ಕಳಿಗೆ ಬರಿ ಮಾತಿನ ಮೂಲಕ ಪಾಠ ಮಾಡುವ ಬದಲು, ನಾವೇ ಅದನ್ನು ಮಾಡಿ ತೋರಿಸುತ್ತೇವೆ. ಮನೆಯಲ್ಲಿ ನೈತಿಕತೆ ಮತ್ತು ಮೌಲ್ಯಗಳೊಂದಿಗೆ ಜೀವನ ನಡೆಸಿದರೆ ಮಕ್ಕಳು ಅದನ್ನು ನೋಡಿ ಕಲಿಯುತ್ತಾರೆ. ನಮ್ಮ ಮನೆಯಲ್ಲಿ ಗಂಡು ಮತ್ತು ಹೆಣ್ಣಿನ ನಡುವೆ ಯಾವುದೇ ಸ್ಪರ್ಧೆಯಿಲ್ಲ..

Read Full Story

05:14 PM (IST) Apr 04

'ನಾನೇನು ಫಾರಿನ್ ಪ್ಲೇಯರಾ?' - ಲಂಡನ್‌ಗೆ ಶಿಫ್ಟ್ ಆಗಿದ್ದಕ್ಕೆ ಟ್ರೋಲ್, ಖಡಕ್ ಉತ್ತರ ಕೊಟ್ಟ ವಿರಾಟ್ ಕೊಹ್ಲಿ

ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧದ ಗೆಲುವಿನ ನಂತರ, ವಿರಾಟ್ ಕೊಹ್ಲಿ ತಮ್ಮನ್ನು 'ವಿದೇಶಿ ಆಟಗಾರ' ಎಂದು ಟ್ರೋಲ್ ಮಾಡಿದವರಿಗೆ ಖಡಕ್ ಉತ್ತರ ನೀಡಿದ್ದಾರೆ. ಮಿಸ್ಟರ್ ನಾಗ್ಸ್ ಜೊತೆಗಿನ ಸಂದರ್ಶನದಲ್ಲಿ, "ನಾನೇನು ಫಾರಿನ್ ಪ್ಲೇಯರಾ?" ಎಂದು ಮರುಪ್ರಶ್ನಿಸಿದ ಅವರು, ಕಳೆದ ಸೀಸನ್‌ನ ಐಪಿಎಲ್ ಗೆಲುವಿನ ಭಾವನಾತ್ಮಕ ಕ್ಷಣಗಳ ಬಗ್ಗೆಯೂ ಮಾತನಾಡಿದ್ದಾರೆ.
Read Full Story

05:09 PM (IST) Apr 04

ಜಾತ್ರೆಯಲ್ಲಿ ಕುಸಿದು ಬಿದ್ದ 60 ಅಡಿ ಎತ್ತರದ ಜಾಯಿಂಟ್ ವೀಲ್; 30ಕ್ಕೂ ಹೆಚ್ಚು ಮಂದಿಗೆ ಗಾಯ!

ಉತ್ತರ ಪ್ರದೇಶದ ಕುಶಿನಗರದಲ್ಲಿ ನಡೆದ ವಾರ್ಷಿಕ ಜಾತ್ರೆಯಲ್ಲಿ 60 ಅಡಿ ಎತ್ತರದ ದೈತ್ಯ ಜಾಯಿಂಟ್ ವೀಲ್ ಕುಸಿದು 30ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಸಾಮರ್ಥ್ಯಕ್ಕಿಂತ ಹೆಚ್ಚು ಜನರನ್ನು ಹೊತ್ತಿದ್ದರಿಂದ ಹಾಗೂ ದುರ್ಬಲ ಬುನಾದಿಯಿಂದಾಗಿ ಈ ದುರಂತ ಸಂಭವಿಸಿದೆ ಎಂದು ಶಂಕಿಸಲಾಗಿದೆ. 

Read Full Story

04:58 PM (IST) Apr 04

ಚಂದ್ರನ ಬಳಿ ಪ್ರಯಾಣ ನಡುವೆ ಬಾಹ್ಯಾಕಾಶದಿಂದ ಭೂಮಿಯ ಅದ್ಭುತ ದೃಶ್ಯ ಸೆರೆ ಹಿಡಿದ ನಾಸಾ

ಚಂದ್ರನ ಬಳಿ ಪ್ರಯಾಣ ನಡುವೆ ಬಾಹ್ಯಾಕಾಶದಿಂದ ಭೂಮಿಯ ಅದ್ಭುತ ದೃಶ್ಯ ಸೆರೆ ಹಿಡಿದ ನಾಸಾ, ವಿಜ್ಞಾನಿಗಳ ತಂಡ ಆರ್ಟಮೆಸ್ 2 ಮೂಲಕ ಮಹತ್ತರ ಸಂಶೋಧನೆಯಲ್ಲಿ ತೊಡಗಿದ್ದಾರೆ. ಇದರ ನಡುವೆ ಭೂಮಿ ದೃಶ್ಯ ಕುತೂಹಲಕ್ಕೆ ಕಾರಣವಾಗಿದೆ.

Read Full Story

04:45 PM (IST) Apr 04

ಸೀತೆ ಲುಕ್‌ನಲ್ಲಿ ಸಾಯಿ ಪಲ್ಲವಿ ಕಂಡಾಗ ರಣಬೀರ್‌ಗೆ ಏನಾಯ್ತು? 'ರಾವಣ' ಯಶ್ ಬಗ್ಗೆ 'ರಾಮ' ಹೇಳಿದ್ದು ಭಾರೀ ವೈರಲ್!

ನಮಿತ್ ಮಲ್ಹೋತ್ರಾ ನಿರ್ಮಾಣದ ಈ ಸಿನಿಮಾ ಎರಡು ಭಾಗಗಳಲ್ಲಿ ಮೂಡಿಬರುತ್ತಿದೆ. ಮೊದಲ ಭಾಗವು ದೀಪಾವಳಿ ಹಬ್ಬದ ಸಂಭ್ರಮದಲ್ಲಿ ತೆರೆಗೆ ಬರಲಿದ್ದು, ಎರಡನೇ ಭಾಗವು 2027ರ ದೀಪಾವಳಿಗೆ ಬಿಡುಗಡೆಯಾಗಲಿದೆ. ಚಿತ್ರದಲ್ಲಿ ಸನ್ನಿ ಡಿಯೋಲ್ ಹನುಮಂತನಾಗಿ ಮತ್ತು ರವಿ ದುಬೆ ಲಕ್ಷ್ಮಣನಾಗಿ ನಟಿಸುತ್ತಿದ್ದಾರೆ.

Read Full Story

04:39 PM (IST) Apr 04

ಏಳು ನ್ಯಾಯಾಂಗ ಅಧಿಕಾರಿಗಳಿಗೆ ಮಾಲ್ಡಾ ದಿಗ್ಬಂದನ ಸಂಚುಕೋರ ಬೆಂಗಳೂರಿಗೆ ಪರಾರಿ ವೇಳೆ ಸೆರೆ, ಏರ್ಪೋರ್ಟಲ್ಲಿ ಬಂಧನ

ಮಾಲ್ಡಾದಲ್ಲಿ 7 ನ್ಯಾಯಾಂಗ ಅಧಿಕಾರಿಗಳಿಗೆ ಘೇರಾವ್‌ ಹಾಕಿದ ಪ್ರಕರಣದ ಪ್ರಮುಖ ಸೂತ್ರಧಾರಿ, ವಕೀಲ ಮೊಫಾಕ್ಕರುಲ್‌ ಇಸ್ಲಾಂನನ್ನು ಪೊಲೀಸರು ಬಂಧಿಸಿದ್ದಾರೆ. ಈ ಘಟನೆಯ ಹಿಂದೆ ಬಿಜೆಪಿ, ಎಐಎಂಐಎಂ ಮತ್ತು ಐಎಸ್‌ಎಫ್‌ ಪಕ್ಷಗಳ ಕೈವಾಡವಿದೆ ಎಂದು ಸಿಎಂ ಮಮತಾ ಬ್ಯಾನರ್ಜಿ ಆರೋಪಿಸಿದ್ದಾರೆ. ಬೆಂಗಳೂರಿಗೆ ಪರಾರಿಯಾಗಲು ಯತ್ನಿಸುತ್ತಿದ್ದಾಗ ಆರೋಪಿಯನ್ನು ವಿಮಾನ ನಿಲ್ದಾಣದಲ್ಲಿ ಬಂಧಿಸಲಾಯಿತು.
Read Full Story

04:13 PM (IST) Apr 04

ಇಮಾಮ್ ಮುಖ್ಯಸ್ಥ ಉಮರ್ ಸ್ಫೋಟಕ ಭವಿಷ್ಯ, ಪಾಕ್ ಆಕ್ರಮಿತ ಕಾಶ್ಮೀರ ಶೀಘ್ರದಲ್ಲೇ ಘರ್ ವಾಪ್ಸಿ

ಇಮಾಮ್ ಮುಖ್ಯಸ್ಥ ಉಮರ್ ಸ್ಫೋಟಕ ಭವಿಷ್ಯ, ಪಾಕ್ ಆಕ್ರಮಿತ ಕಾಶ್ಮೀರ ಶೀಘ್ರದಲ್ಲೇ ಘರ್ ವಾಪ್ಸಿ, ಆರ್ಟಿಕಲ್ 370 ತೆಗೆದು ಹಾಕಿದ ಬಳಿಕ ಕಾಶ್ಮೀರದಲ್ಲಿ ಅದ್ಭುತ ಬದಲಾವಣೆ ಆಗಿದೆ ಎಂದಿದ್ದಾರೆ.

 

Read Full Story

04:09 PM (IST) Apr 04

RCB ಕೈಬಿಟ್ಟು ಈ 4 ತಂಡಗಳೇ ಐಪಿಎಲ್ ಪ್ಲೇ ಆಫ್ ಪ್ರವೇಶಿಸಲಿವೆ ಎಂದು ಅಚ್ಚರಿ ಭವಿಷ್ಯ ನುಡಿದ ಕೆವಿನ್ ಪೀಟರ್‌ಸನ್‌!

ಬೆಂಗಳೂರು: 19ನೇ ಆವೃತ್ತಿಯ IPL ಟೂರ್ನಿಗೆ ಭರ್ಜರಿ ಚಾಲನೆ ಸಿಕ್ಕಿದ್ದು, ಕ್ರಿಕೆಟ್ ಅಭಿಮಾನಿಗಳಿಗೆ ಭರಪೂರ ಮನರಂಜನೆ ಸಿಗುತ್ತಿದೆ. ಹೀಗಿರುವಾಗಲೇ ಇಂಗ್ಲೆಂಡ್ ಮಾಜಿ ಕ್ರಿಕೆಟಿಗ ಕೆವಿನ್ ಪೀಟರ್‌ಸನ್ ಈ ಬಾರಿ ಪ್ಲೇ ಆಫ್ ಪ್ರವೇಶಿಸಲಿರುವ ನಾಲ್ಕು ತಂಡಗಳ ಬಗ್ಗೆ ಭವಿಷ್ಯ ನುಡಿದಿದ್ದಾರೆ.

 

Read Full Story

04:00 PM (IST) Apr 04

Ramayana Teaser - ರಣಬೀರ್ ಮುಖದಲ್ಲಿ 'ಅದು' ಸರಿಯಿಲ್ಲ ಎಂದು ಅಪಸ್ವರ ಎತ್ತಿದ 'ರಾಮಾಯಣ'ದ ಲಕ್ಷ್ಮಣ ಸುನಿಲ್ ಲಹ್ರಿ

ನಿತೇಶ್ ತಿವಾರಿ ನಿರ್ದೇಶನದ ಈ 'ರಾಮಾಯಣ' ಕೇವಲ ಸಿನಿಮಾ ಅಲ್ಲ, ಅದೊಂದು ದೃಶ್ಯ ವೈಭವ. ಸುಮಾರು 4,000 ಕೋಟಿ ರೂಪಾಯಿಗಳ ಬೃಹತ್ ಬಜೆಟ್‌ನಲ್ಲಿ ಈ ಸಿನಿಮಾ ನಿರ್ಮಾಣವಾಗುತ್ತಿದೆ. ಇದು ಭಾರತೀಯ ಚಿತ್ರರಂಗದಲ್ಲೇ ಅತ್ಯಂತ ದುಬಾರಿ ಸಿನಿಮಾ ಎಂಬ ಹೆಗ್ಗಳಿಕೆಗೆ ಪಾತ್ರವಾಗಲಿದೆ. ಚಿತ್ರದಲ್ಲಿ ರಣಬೀರ್ ಕಪೂರ್ ರಾಮನಾಗಿ ನಟಿಸಿದರೆ, ರಾಕಿಂಗ್ ಸ್ಟಾರ್ ಯಶ್ ರಾವಣನಾಗಿ, ಸಾಯಿ ಪಲ್ಲವಿ ಸೀತೆಯಾಗಿ ನಟಿಸಿದ್ದಾರೆ.

Read Full Story

03:36 PM (IST) Apr 04

ಬೆಂಗಳೂರಲ್ಲಿ ಒಂದೇ ದಿನ 13,000 ಎಲೆಕ್ಟ್ರಿಕ್ ವಾಹನ ನೋಂದಣಿ, ಎಲ್ಲರೂ ಇವಿ ಖರೀದಿಗೆ ಇದೆ ಕಾರಣ

ಬೆಂಗಳೂರಲ್ಲಿ ಒಂದೇ ದಿನ 13,000 ಎಲೆಕ್ಟ್ರಿಕ್ ವಾಹನ ನೋಂದಣಿ, ಎಲ್ಲರೂ ಇವಿ ಖರೀದಿಗೆ ಇದೆ ಕಾರಣ, ಇದು ಅತ್ಯಧಿಕ ದಾಖಲೆಯಾಗಿದೆ. ಅಷ್ಟಕ್ಕೂ ಬೆಂಗಳೂರಲ್ಲಿ ಇವಿ ಖರೀದಿ ಹೆಚ್ಚಾಗಲು ಕಾರಣವೇನು?

Read Full Story

02:58 PM (IST) Apr 04

ನಾಪತ್ತೆಯಾದ 13ರ ಬಾಲಕಿ ಬರೋಬ್ಬರಿ 30 ವರ್ಷ ಬಳಿಕ ಜೀವಂತವಾಗಿ ಪತ್ತೆ, ಆಕೆಗೀಗ 44 ವರ್ಷ

ನಾಪತ್ತೆಯಾದ 13ರ ಬಾಲಕಿ ಬರೋಬ್ಬರಿ 30 ವರ್ಷ ಬಳಿಕ ಜೀವಂತವಾಗಿ ಪತ್ತೆ, ಆಕೆಗೀಗ 44 ವರ್ಷ, ಮೂರು ದಶಕಗಳಿಂದ ಹುಡುಕಾಟ ನಿರಂತರವಾಗಿ ಸಾಗಿತ್ತು. ಇದೀಗ ಜೀವಂತವಾಗಿ ಪತ್ತೆಯಾಗಿದ್ದಾಳೆ.

Read Full Story

02:28 PM (IST) Apr 04

ಹೇಳಿಕೆ ಜತೆಗೆ ಲಿಖಿತವಾಗಿಯೂ ಹೈಕಮಾಂಡ್‌ಗೆ ಮನವರಿಕೆ ಮಾಡಿದ್ದೆ, ಪಕ್ಷದಿಂದ ಟಿಕೆಟ್ ಸಿಗದ್ದಕ್ಕೆ ಅಣ್ಣಾಮಲೈ ಸ್ಪಷ್ಟನೆ

ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸದಿರುವುದು ತಮ್ಮದೇ ಸ್ವಯಂ ತೀರ್ಮಾನ ಎಂದು ಬಿಜೆಪಿ ಮಾಜಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ ಸ್ಪಷ್ಟಪಡಿಸಿದ್ದಾರೆ. ತಮ್ಮ ಟಿಕೆಟ್ ಕಟ್ ಆಗಿದೆ ಎಂಬ ವದಂತಿಗಳನ್ನು ತಳ್ಳಿಹಾಕಿದ ಅವರು, ಪಕ್ಷದ ನಾಯಕತ್ವಕ್ಕೆ ಈ ಮೊದಲೇ ಲಿಖಿತವಾಗಿ ಮಾಹಿತಿ ನೀಡಿದ್ದಾಗಿ ತಿಳಿಸಿದ್ದಾರೆ. ಇದೀಗ ತಾವು ರಾಜ್ಯಾದ್ಯಂತ ಬಿಜೆಪಿ ಮತ್ತು ಎನ್‌ಡಿಎ ಅಭ್ಯರ್ಥಿಗಳ ಪರ ಪ್ರಚಾರ ನಡೆಸುವುದಾಗಿ ಅವರು ಹೇಳಿದ್ದಾರೆ.
Read Full Story

02:13 PM (IST) Apr 04

ಧುರಂಧರ್ ಸಕ್ಸಸ್ ಬೆನ್ನಲ್ಲೇ ವಿಶ್ರಾಂತಿಗೆ ಜಾರಿದ ಆದಿತ್ಯ ಧರ್ ಕೈನಲ್ಲಿವೆ 3 ಚಿತ್ರಗಳು, ನಾಯಕ ನಟರು ಯಾರು ಗೊತ್ತಾ?

ಆದಿತ್ಯ ಧರ್ ಅವರ ಮುಂದಿನ ಚಿತ್ರ ಯಾವುದಾದರೂ ಇರಲಿ, ಅದು ಭಾರತೀಯ ಸಿನಿಮಾ ಇತಿಹಾಸದಲ್ಲಿ ಒಂದು ಮೈಲಿಗಲ್ಲಾಗುವುದಂತೂ ಗ್ಯಾರಂಟಿ. ಆದಿತ್ಯ ಧರ್ ಅವರ ಮೇಕಿಂಗ್ ನೋಡಲು ಅಭಿಮಾನಿಗಳು ಈಗಿನಿಂದಲೇ ಕಾತರರಾಗಿದ್ದಾರೆ. ಧುರಂಧರ್ ಗ್ರಾಂಡ್ ಸಕ್ಸಸ್ ಬಳಿಕ ಆದಿತ್ಯ ಧರ್ ಅವರ ಕ್ರೇಜ್ ಹೆಚ್ಚಾಗಿದ್ದು, ಬಾಲಿವುಡ್‌ನ ಮೇರು ನಿರ್ದೇಶಕರಾಗಿ ಅವರೀಗ ಸ್ಥಾನ ಪಡೆದಿದ್ದಾರೆ.

Read Full Story

01:19 PM (IST) Apr 04

ಕ್ಯಾಮೆರಾಗಳ ಮುಂದೆಯೇ ನಟಿಯರ ಸೊಂಟಕ್ಕೆ ಕೈ ಹಾಕಿದ ನಟ ಶಕೀಬ್ ಖಾನ್ - ವಿಡಿಯೋ ವೈರಲ್

'ಪ್ರಿನ್ಸ್' ಸಿನಿಮಾ ಸುದ್ದಿಗೋಷ್ಠಿಯಲ್ಲಿ ನಟ ಶಕೀಬ್ ಖಾನ್, ನಟಿ ಜ್ಯೋತಿರ್ಮಯಿ ಅವರ ಸೊಂಟಕ್ಕೆ ಕೈ ಹಾಕಿ ಮುಜುಗರ ಉಂಟುಮಾಡಿದ್ದಾರೆ. ಈ ವಿಡಿಯೋ ವೈರಲ್ ಆಗಿ ಸಾರ್ವಜನಿಕರಿಂದ ತೀವ್ರ ಟೀಕೆ ವ್ಯಕ್ತವಾಗಿದ್ದು, ನಟ ಈ ಬಗ್ಗೆ ಪ್ರತಿಕ್ರಿಯಿಸಲು ನಿರಾಕರಿಸಿದ್ದಾರೆ.

Read Full Story

01:07 PM (IST) Apr 04

IPL 2026 ಸತತ ಎರಡು ಪಂದ್ಯ ಗೆದ್ದ ಪಂಜಾಬ್ ಕಿಂಗ್ಸ್, ಆದ್ರೆ ಬ್ಯಾನ್ ಆಗೋ ಭೀತಿಗೆ ಸಿಲುಕಿದ ಶ್ರೇಯಸ್ ಅಯ್ಯರ್! BCCI ಖಡಕ್ ವಾರ್ನಿಂಗ್

ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಗೆದ್ದ ಖುಷಿಯಲ್ಲಿದ್ದ ಪಂಜಾಬ್ ಕಿಂಗ್ಸ್‌ಗೆ ಬಿಸಿಸಿಐ ದಂಡದ ಬಿಸಿ ಮುಟ್ಟಿಸಿದೆ. ನಿಧಾನಗತಿಯ ಓವರ್ ರೇಟ್‌ಗಾಗಿ ನಾಯಕ ಶ್ರೇಯಸ್ ಅಯ್ಯರ್‌ಗೆ 24 ಲಕ್ಷ ರೂ. ದಂಡ ವಿಧಿಸಲಾಗಿದ್ದು, ಮತ್ತೊಮ್ಮೆ ಇದೇ ತಪ್ಪು ಪುನರಾವರ್ತನೆಯಾದರೆ ಅವರು ಒಂದು ಪಂದ್ಯದ ನಿಷೇಧ ಎದುರಿಸಲಿದ್ದಾರೆ.
Read Full Story

12:58 PM (IST) Apr 04

ಪಶ್ಚಿಮ ಬಂಗಾಳ ಚುನಾವಣೆ ಪ್ರಚಾರದಲ್ಲಿ ಕಾಂಗ್ರೆಸ್ ಮಾಜಿ ಸಂಸದ ಅಧೀರ್ ರಂಜನ್ ಮೇಲೆ ಶಸ್ತ್ರ ಹೊಂದಿದ್ದವರಿಂದ ಅಟ್ಯಾಕ್!

ಪಶ್ಚಿಮ ಬಂಗಾಳದ ಬೆರ್ಹಾಂಪೋರ್‌ನಲ್ಲಿ ಚುನಾವಣಾ ಪ್ರಚಾರ ನಡೆಸುತ್ತಿದ್ದ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಅವರ ಮೇಲೆ ಟಿಎಂಸಿ ಕಾರ್ಯಕರ್ತರು ದಾಳಿಗೆ ಯತ್ನಿಸಿದ್ದಾರೆ ಎಂದು ಆರೋಪಿಸಲಾಗಿದೆ. ಈ ಘಟನೆಯು ಎರಡೂ ಪಕ್ಷಗಳ ನಡುವೆ ತಳ್ಳಾಟ-ನೂಕಾಟಕ್ಕೆ ಕಾರಣವಾಗಿ, ಪ್ರದೇಶದಲ್ಲಿ ತೀವ್ರ ರಾಜಕೀಯ ಉದ್ವಿಗ್ನತೆಯನ್ನು ಸೃಷ್ಟಿಸಿದೆ.
Read Full Story

12:49 PM (IST) Apr 04

ಕಲಬೆರಕೆ ತೊಗರಿಬೇಳೆಯಲ್ಲಿ ಕ್ಯಾನ್ಸರ್​ಕಾರಕ ಅಂಶ - ಮನೆಯಲ್ಲಿಯೇ ಅಸಲಿ- ನಕಲಿ ಹೀಗೆ ಕಂಡು ಹಿಡಿಯಿರಿ

ತೊಗರಿ ಬೇಳೆಯಲ್ಲಿ ಕ್ಯಾನ್ಸರ್​ಕಾರಕ ಮತ್ತು ನರರೋಗಕ್ಕೆ ಕಾರಣವಾಗುವ ವಿಷಕಾರಿ ಕೇಸರಿ ಬೇಳೆಯನ್ನು ಕಲಬೆರಕೆ ಮಾಡಲಾಗುತ್ತಿದೆ. ಹಣದಾಸೆಗಾಗಿ ನಡೆಯುತ್ತಿರುವ ಈ ದಂಧೆಯಿಂದ ಜನರ ಆರೋಗ್ಯದ ಮೇಲೆ ಗಂಭೀರ ಪರಿಣಾಮ ಬೀರುತ್ತಿದೆ.  ಅಸಲಿ ಮತ್ತು ನಕಲಿ ಬೇಳೆಯನ್ನು ಗುರುತಿಸುವ ಸರಳ ವಿಧಾನಗಳನ್ನು ವಿವರಿಸಲಾಗಿದೆ.

Read Full Story

12:48 PM (IST) Apr 04

CBSE Curriculum - ಹಿಂದಿ ಹೇರಿಕೆ ವ್ಯವಸ್ಥಿತ ತಂತ್ರ, CBSE ಪಠ್ಯಕ್ರಮಕ್ಕೆ ಸ್ಟಾಲಿನ್ ಗರಂ

ತಮಿಳುನಾಡು ಸಿಎಂ ಎಂ.ಕೆ. ಸ್ಟಾಲಿನ್ ಅವರು ಸಿಬಿಎಸ್‌ಇಯ ಹೊಸ ಪಠ್ಯಕ್ರಮ 'ಭಾಷಾ ಹೇರಿಕೆಯ ವ್ಯವಸ್ಥಿತ ಪ್ರಯತ್ನ' ಎಂದು ತೀವ್ರವಾಗಿ ಟೀಕಿಸಿದ್ದಾರೆ. ತ್ರಿಭಾಷಾ ಸೂತ್ರವು ಹಿಂದಿಯನ್ನು ಬಲವಂತವಾಗಿ ಹೇರಲು ಮತ್ತು ಇತರ ಪ್ರಾದೇಶಿಕ ಭಾಷೆಗಳನ್ನು ಮೂಲೆಗುಂಪು ಮಾಡಲು ರೂಪಿಸಿರುವ ಒಂದು ಹುನ್ನಾರ ಎಂದಿದ್ದಾರೆ.

Read Full Story

12:41 PM (IST) Apr 04

ಹೆಣ್ಣುಮಕ್ಕಳ ಫುಟ್‌ಬಾಲ್ ಟೀಮ್‌ ಕಟ್ಟೋಕೆ 10 ಲಕ್ಷ ರೂ. ವೈಯಕ್ತಿಕ ಸಾಲ ಮಾಡಿದ ಕೋಚ್; ನ್ಯಾಷನಲ್‌ ಲೀಗ್‌ಗೆ ಲಗ್ಗೆ ಇಟ್ಟ ಟೀಮ್‌

ಮಧ್ಯಪ್ರದೇಶದ ಫುಟ್‌ಬಾಲ್ ಕೋಚ್ ಪರಮ್, 10 ಲಕ್ಷ ರೂ. ವೈಯಕ್ತಿಕ ಸಾಲ ಮಾಡಿ ಗ್ರಾಮೀಣ ಹೆಣ್ಣುಮಕ್ಕಳಿಗೆ ತರಬೇತಿ ನೀಡಿದ್ದಾರೆ. ಅವರ ನಿಸ್ವಾರ್ಥ ಪ್ರಯತ್ನದ ಫಲವಾಗಿ, 'ಡಿಸ್ಟ್ರಿಕ್ಟ್ ರೈಸೇನ್ ಫುಟ್‌ಬಾಲ್ ಕ್ಲಬ್' ಇಂಡಿಯನ್ ವುಮೆನ್ಸ್ ಲೀಗ್ (IWL) ಟೈಯರ್-2 ಗೆ ಅರ್ಹತೆ ಪಡೆದು ಇತಿಹಾಸ ನಿರ್ಮಿಸಿದೆ.

Read Full Story

12:28 PM (IST) Apr 04

ಸುದ್ದಿ ಸುಳ್ಳಲ್ಲ.. ರಶ್ಮಿಕಾ ಮಂದಣ್ಣಗೆ ಅತ್ತೆ ಪರಂಪರಾಗತ ಚಿನ್ನದ ಬಳೆಗಳನ್ನು ಕೊಟ್ಟಿದ್ದಕ್ಕೆ ಸಾಕ್ಷಿ ಇಲ್ಲಿದೆ ನೋಡಿ!

ಈ ವಿವಾಹ ಮಹೋತ್ಸವದ ಹೈಲೈಟ್ ಎಂದರೆ ವಿಜಯ್ ದೇವರಕೊಂಡ ಅವರ ತಾಯಿ ಮಾಧವಿ ಅವರು ತಮ್ಮ ಸೊಸೆ ರಶ್ಮಿಕಾಗೆ ನೀಡಿದ ವಿಶೇಷ ಉಡುಗೊರೆ. ತಮ್ಮ ಕುಟುಂಬದ ಪರಂಪರಾಗತ ಚಿನ್ನದ ಬಳೆಗಳನ್ನು (Heirloom Bangles) ಸಂಪ್ರದಾಯದಂತೆ ರಶ್ಮಿಕಾ ಅವರಿಗೆ ತೊಡಿಸಿ ಮನೆಗೆ ಬರಮಾಡಿಕೊಂಡಿದ್ದಾರೆ. ಸಾಕ್ಷಿ ನೋಡಿ..

Read Full Story

12:21 PM (IST) Apr 04

The Kerala Story ಅದಾ ಶರ್ಮಾಗೆ ಸೈಜ್​ ಕೇಳಿದ ನೆಟ್ಟಿಗ; ಪ್ರಶ್ನೆ ಕೇಳಿದವ ಮುಟ್ಟಿಕೊಳ್ಳೋ ಉತ್ತರ ಕೊಟ್ಟ ನಟಿ

'ದಿ ಕೇರಳ ಸ್ಟೋರಿ' ಖ್ಯಾತಿಯ ನಟಿ ಅದಾ ಶರ್ಮಾ, ಸೋಷಿಯಲ್ ಮೀಡಿಯಾದಲ್ಲಿ ನೆಟ್ಟಿಗರೊಬ್ಬರು ಕೇಳಿದ 'ನಿಮ್ಮ ಸೈಜ್ ಎಷ್ಟು?' ಎಂಬ ಅಸಭ್ಯ ಪ್ರಶ್ನೆಗೆ  ಆತ ಮುಟ್ಟಿ ಕೊಳ್ಳುವ ಉತ್ತರ ಕೊಟ್ಟಿದ್ದಾರೆ ನಟಿ. ಅವರು ಹೇಳಿದ್ದೇನು| ವಿಡಿಯೋ ಆಗಿದೆ ವೈರಲ್​

Read Full Story

11:44 AM (IST) Apr 04

ಸೀಕ್ರೆಟ್ ಬಹಿರಂಗ - ಹೈದರಾಬಾದ್‌ನಲ್ಲಿ ಪ್ರಿಯಾಂಕಾ ಚೋಪ್ರಾ ಈ ಮಹಾ ಗುಟ್ಟು ಕೊನೆಗೂ ರಟ್ಟಾಯ್ತು!

ಬಾಲಿವುಡ್‌ನ ‘ದೇಶಿ ಗರ್ಲ್’ ಪ್ರಿಯಾಂಕಾ ಚೋಪ್ರಾ ಜೋನಾಸ್ ಸದಾ ಯಾವುದಾದರೊಂದು ವಿಷಯವಾಗಿ ಸುದ್ದಿಯಲ್ಲಿರುತ್ತಾರೆ. ಇದೀಗ ಅವರು ತಮ್ಮ ಬೆಳಗಿನ ದಿನಚರಿಯ (Morning Routine) ಸಣ್ಣ ತುಣುಕನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳುವ ಮೂಲಕ ಅಭಿಮಾನಿಗಳ ಗಮನ ಸೆಳೆದಿದ್ದಾರೆ.

Read Full Story

10:33 AM (IST) Apr 04

ಬುಡಕಟ್ಟು ಕ್ರೀಡಾ ಪ್ರತಿಭೆ - ನಮ್ಮ ರಾಷ್ಟ್ರೀಯ ಹೆಮ್ಮೆ - ರಾಷ್ಟ್ರಪತಿ

ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಗ್ರಾಮೀಣ ಮತ್ತು ಬುಡಕಟ್ಟು ಮಕ್ಕಳಲ್ಲಿರುವ ಸಹಜ ಕ್ರೀಡಾ ಪ್ರತಿಭೆಯನ್ನು ವಿವರಿಸುತ್ತಾರೆ. ಈ ಪ್ರತಿಭೆಗಳನ್ನು ಗುರುತಿಸಿ, 'ಖೇಲೋ ಇಂಡಿಯಾ' ದಂತಹ ಯೋಜನೆಗಳ ಮೂಲಕ ಸೂಕ್ತ ತರಬೇತಿ ಮತ್ತು ಸೌಲಭ್ಯಗಳನ್ನು ಒದಗಿಸುವುದರ ಮಹತ್ವವನ್ನು ಅವರು ಒತ್ತಿಹೇಳುತ್ತಾರೆ. 

Read Full Story

09:52 AM (IST) Apr 04

ನನ್ನ ಸಕ್ಸಸ್ ನೋಡಿ ಕೆಲವರಿಗೆ ಹೊಟ್ಟೆಕಿಚ್ಚು! ಕೆಕೆಆರ್ ನಾಯಕ ಅಜಿಂಕ್ಯ ರಹಾನೆ ಹೀಗಂದಿದ್ದೇಕೆ?

ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧದ ಸೋಲಿನ ನಂತರ, ತಮ್ಮ ಸ್ಟ್ರೈಕ್ ರೇಟ್ ಕುರಿತ ಟೀಕೆಗಳಿಗೆ ಕೆಕೆಆರ್ ನಾಯಕ ಅಜಿಂಕ್ಯ ರಹಾನೆ ಖಾರವಾಗಿ ಪ್ರತಿಕ್ರಿಯಿಸಿದ್ದಾರೆ. ಟೀಕಾಕಾರರಿಗೆ ಬೇರೆ ಅಜೆಂಡಾ ಇದೆ ಮತ್ತು ನನ್ನ ಯಶಸ್ಸು ಕಂಡು ಅವರಿಗೆ ಹೊಟ್ಟೆಕಿಚ್ಚು ಬಂದಿದೆ ಎಂದು ಹೇಳಿರುವ ಅವರು, ಒಂದೇ ಇನ್ನಿಂಗ್ಸ್‌ನಿಂದ ನನ್ನನ್ನು ಅಳೆಯಬೇಡಿ ಎಂದು ಸ್ಪಷ್ಟಪಡಿಸಿದ್ದಾರೆ.
Read Full Story

09:30 AM (IST) Apr 04

IPL 2026 - ಸತತ ಎರಡನೇ ಗೆಲುವಿಗಾಗಿ ಡೆಲ್ಲಿ ಕ್ಯಾಪಿಟಲ್ಸ್ vs ಮುಂಬೈ ಇಂಡಿಯನ್ಸ ಹೋರಾಟ!

ಐಪಿಎಲ್‌ನಲ್ಲಿ ಶುಭಾರಂಭ ಮಾಡಿರುವ ಡೆಲ್ಲಿ ಕ್ಯಾಪಿಟಲ್ಸ್‌ ಹಾಗೂ ಮುಂಬೈ ಇಂಡಿಯನ್ಸ್‌ ತಂಡಗಳು ತಮ್ಮ ಎರಡನೇ ಗೆಲುವಿಗಾಗಿ ಶನಿವಾರ ಸೆಣಸಾಡಲಿವೆ. 13 ವರ್ಷಗಳ ಬಳಿಕ ಮೊದಲ ಪಂದ್ಯ ಗೆದ್ದಿರುವ ಮುಂಬೈಗೆ ಸ್ಯಾಂಟ್ನರ್‌ ಬಲ ಬಂದಿದ್ದರೆ, ಅಕ್ಷರ್‌ ಪಟೇಲ್ ನಾಯಕತ್ವದ ಡೆಲ್ಲಿ ತಂಡದಲ್ಲಿ ಕೆ.ಎಲ್. ರಾಹುಲ್ ಉತ್ತಮ ಪ್ರದರ್ಶನ ನೀಡುವ ವಿಶ್ವಾಸದಲ್ಲಿದ್ದಾರೆ.
Read Full Story

09:03 AM (IST) Apr 04

IPL 2026 - ನಿನ್ನೆ ನಡೆದ ಚೆನ್ನೈ ಸೂಪರ್ ಕಿಂಗ್ಸ್‌- ಪಂಜಾಬ್ ಕಿಂಗ್ಸ್ ನಡುವಿನ ಮ್ಯಾಚ್ ಗೆದ್ದಿದ್ದು ಯಾರು?

ಐಪಿಎಲ್ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ವಿರುದ್ಧ ಚೆನ್ನೈ ಸೂಪರ್ ಕಿಂಗ್ಸ್ 5 ವಿಕೆಟ್‌ಗಳಿಂದ ಸೋತಿದೆ. ಆಯುಶ್ ಮ್ಹಾತ್ರೆ (73) ಅವರ ಉತ್ತಮ ಬ್ಯಾಟಿಂಗ್ ಹೊರತಾಗಿಯೂ, ಚೆನ್ನೈ ನೀಡಿದ 210 ರನ್‌ಗಳ ಗುರಿಯನ್ನು ಶ್ರೇಯಸ್ ಅಯ್ಯರ್ (50) ನಾಯಕತ್ವದ ಪಂಜಾಬ್ ತಂಡ ಯಶಸ್ವಿಯಾಗಿ ಬೆನ್ನಟ್ಟಿತು. ಇದು ಚೆಪಾಕ್‌ನಲ್ಲಿ ಸಿಎಸ್‌ಕೆಗೆ ಸತತ 6ನೇ ಸೋಲಾಗಿದೆ.
Read Full Story

08:13 AM (IST) Apr 04

ದಿವಾಳಿ ಪಾಕಿಸ್ತಾನದಲ್ಲಿ ಎಮ್ಮೆ ಸಾಕಿದರಿಗೆ ಸೆಗಣಿ ತೆರಿಗೆ ವಸೂಲಿ; ರೈತರು ದಿನಕ್ಕೆ ಎಷ್ಟು ಹಣ ನೀಡಬೇಕು?

ಪಾಕಿಸ್ತಾನದ ಪಂಜಾಬ್‌ ಪ್ರಾಂತ್ಯದ ಸರ್ಕಾರವು 'ಸ್ವಚ್ಛ ಪಂಜಾಬ್‌' ಯೋಜನೆಯಡಿ ಎಮ್ಮೆ ಸಾಕಿದವರಿಂದ 'ಸೆಗಣಿ ಕರ' ವಸೂಲಿ ಮಾಡಲು ಮುಂದಾಗಿದೆ. ತ್ಯಾಜ್ಯ ನಿರ್ವಹಣೆ ಮತ್ತು ಜೈವಿಕ ಅನಿಲ ಉತ್ಪಾದನೆಗೆ ಹಣ ಸಂಗ್ರಹಿಸುವ ಈ ಯೋಜನೆಗೆ, ಈಗಾಗಲೇ ಸಂಕಷ್ಟದಲ್ಲಿರುವ ರೈತರಿಂದ ತೀವ್ರ ವಿರೋಧ ವ್ಯಕ್ತವಾಗಿದೆ.
Read Full Story

08:01 AM (IST) Apr 04

West Asia crisis - ಇಂಡಕ್ಷನ್‌ ಸ್ಟವ್‌, ಪಾತ್ರೆ ಉತ್ಪಾದನೆ ಹೆಚ್ಚಳಕ್ಕೆ ಕೇಂದ್ರ ಚಿಂತನೆ

ಕೊಲ್ಲಿ ಯುದ್ಧದಿಂದ ಎಲ್‌ಪಿಜಿ ಪೂರೈಕೆಯಲ್ಲಿ ವ್ಯತ್ಯಯವಾದ ಕಾರಣ, ಕೇಂದ್ರ ಸರ್ಕಾರವು ಇಂಡಕ್ಷನ್‌ ಸ್ಟವ್‌ ಅದಕ್ಕೆ ಬೇಕಾದ ಪಾತ್ರೆಗಳ ಉತ್ಪಾದನೆಗೆ ಪ್ರೋತ್ಸಾಹ ನೀಡಲು ನಿರ್ಧರ ದೇಶದಲ್ಲಿ ವಿದ್ಯುತ್ ಆಧಾರಿತ ಅಡುಗೆ ಉಪಕರಣಗಳಿಗೆ ಬೇಡಿಕೆ ಹೆಚ್ಚಾಗಿದ್ದು, ಉತ್ಪಾದನೆ ಹೆಚ್ಚಿಸುವ ಕುರಿತು ಚರ್ಚೆ ನಡೆದಿದೆ.

Read Full Story

07:38 AM (IST) Apr 04

ಪ್ರೀತಿಯಲ್ಲಿ ಸೋಲು, ಬಾಲ್ಯದ ನೆರಳಿನಾಟ! ಪ್ಪಾದ ಸಂಗಾತಿಯನ್ನು ಆಯ್ಕೆ ಮಾಡೋದ್ಯಾಕೆ?

ಪದೇ ಪದೇ ಸಂಬಂಧಗಳು ಮುರಿದು ಬೀಳಲು ನಿಮ್ಮ ಕೆಟ್ಟ ಸಮಯ ಕಾರಣವಲ್ಲ, ಬದಲಿಗೆ ನಿಮ್ಮ ಬಾಲ್ಯದ ಅನುಭವಗಳು ಮತ್ತು ಮನಸ್ಥಿತಿಯೇ ಕಾರಣವೆಂದು ಮನೋವಿಜ್ಞಾನ ಹೇಳುತ್ತದೆ. ಬಾಲ್ಯದಲ್ಲಿ ಪ್ರೀತಿ, ಗೌರವ ಕಾಣದವರು, ತಮಗರಿವಿಲ್ಲದಂತೆಯೇ ದೊಡ್ಡವರಾದ ಮೇಲೆ ಅಂಥದ್ದೇ ಅಶಾಂತ ಸಂಬಂಧಗಳ ಕಡೆಗೆ ಆಕರ್ಷಿತರಾಗುತ್ತಾರೆ.

Read Full Story

06:53 AM (IST) Apr 04

ಚಾಮರಾಜನಗರ ಸಮೀಪದ ಮೆಟ್ಟೂರು ಕ್ಷೇತ್ರದಿಂದ ವೀರಪ್ಪನ್‌ಪುತ್ರಿ ವಿದ್ಯಾರಾಣಿ ಕಣಕ್ಕೆ

ನರಹಂತಕ ವೀರಪ್ಪನ್ ಪುತ್ರಿ ವಿದ್ಯಾರಾಣಿ, ತಮಿಳುನಾಡು ಚುನಾವಣೆಯಲ್ಲಿ ಮೆಟ್ಟೂರು ಕ್ಷೇತ್ರದಿಂದ ನಾಮ್ ತಮಿಳರ್ ಕಚ್ಚಿ ಪಕ್ಷದ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದಾರೆ. ನಾಮಪತ್ರ ಸಲ್ಲಿಕೆಗೂ ಮುನ್ನ ತಂದೆಯ ಸಮಾಧಿಗೆ ಪೂಜೆ ಸಲ್ಲಿಸಿದ್ದು, ಈ ಹಿಂದೆ ಅವರು ಬಿಜೆಪಿ ಯುವ ಘಟಕದ ಉಪಾಧ್ಯಕ್ಷರಾಗಿದ್ದರು.
Read Full Story

More Trending News