ನವದೆಹಲಿ: ಕೆಲ ತಿಂಗಳುಗಳಲ್ಲಿ ವಿಧಾನಸಭೆ ಚುನಾವಣೆ ಎದುರಿಸಲಿರುವ ಪಶ್ಚಿಮ ಬಂಗಾಳದಲ್ಲಿ ಟಿಎಂಸಿ ರಾಜ್ಯಸಭೆ ಸಂಸದೆ ಮೌಸಮ್ ನೂರ್(46) ಅವರು ಶನಿವಾರ ಕಾಂಗ್ರೆಸ್ಗೆ ಮರುಸೇರ್ಪಡೆಗೊಂಡಿದ್ದಾರೆ. ಚುನಾವಣೆಯಲ್ಲಿ ಇವರು ಮಾಲ್ದಾದಿಂದ ಸ್ಪರ್ಧಿಸುವ ನಿರೀಕ್ಷೆಯಿದ್ದು. ಟಿಎಂಸಿಗೆ ಶಾಕ್ ನೀಡಿದ್ದಾರೆ. ನೂರ್ ಅವರು ಕಾಂಗ್ರೆಸ್ ಪ್ರಧಾನ ಕಚೇರಿಯಲ್ಲಿ ಪಕ್ಷದ ನಾಯಕರಾದ ಜೈರಾಂ ರಮೇಶ್, ಎಐಸಿಸಿ ಪ್ರಧಾನ ಕಾರ್ಯದರ್ಶಿ ಗುಲಾಮ್ ಅಹ್ಮದ್ ಮೀರ್ ಹಾಗೂ ಪಿಸಿಸಿ ಅಧ್ಯಕ್ಷ ಶುಭಂಕರ್ ಸರ್ಕಾರ್ ಅವರ ಸಮ್ಮುಖದಲ್ಲಿ ಕಾಂಗ್ರೆಸ್ಗೆ ಸೇರಿದರು.
ತಾಯಿ ರೂಬಿ ನೂರ್ರ ನಿಧನಾನಂತರ 2009ರಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಪಾದಾರ್ಪಣೆ ಮಾಡುವ ಮೂಲಕ ರಾಜಕೀಯ ಜೀವನ ಆರಂಭಿಸಿದ್ದ ಮೌಸಮ್, 2009ರಿಂದ 2019ರ ವರೆಗೆ ನಿರಂತರ 2 ಬಾರಿ ಮಾಲ್ದಾದಿಂದ ಲೋಕಸಭೆಯ ಸದಸ್ಯೆಯಾಗಿದ್ದರು. 2019ರ ಜನವರಿಯಲ್ಲಿ ಟಿಎಂಸಿ ಸೇರಿದ್ದರು.
10:51 PM (IST) Jan 04
ವಿಮಾನಕ್ಕಿಂತಲೂ ಲಕ್ಷುರಿ, ವಂದೇ ಭಾರತ್ ಸ್ಲೀಪರ್ ರೈಲು ಹೇಗಿದೆ? ವಿಡಿಯೋ ಹಂಚಿಕೊಂಡ ಸಚಿವ ಅಶ್ವಿನಿ ವೈಷ್ಣವ್. ಅತ್ಯಾಧುನಿಕ ಸೌಲಭ್ಯ, ಆರಾಮದಾಯಕ ಪ್ರಯಾಣ ನೀಡಲಿರುವ ವಂದೇ ಭಾರತ್ ಸ್ಲೀಪರ್ ರೈಲಿನ ವಿಡಿಯೋ ಇಲ್ಲಿದೆ.
09:44 PM (IST) Jan 04
ಅತೀ ಕಿರಿಯ ವಯಸ್ಸಿಗೆ ಭಾರತ ತಂಡದ ನಾಯಕ, ಯೂತ್ ODIನಲ್ಲಿ ವೈಭವ್ ಸೂರ್ಯವಂಶಿ ದಾಖಲೆ ಬರೆದಿದ್ದಾನೆ. ಕೇವಲ 14ನೇ ವಯಸ್ಸಿಗೆ ಯೂತ್ ಏಕದಿನದಲ್ಲಿ ಭಾರತ ತಂಡವನ್ನು ಮುನ್ನಡೆಸುವ ಮೂಲಕ ವಿಶ್ವ ದಾಖಲೆ.
09:36 PM (IST) Jan 04
08:38 PM (IST) Jan 04
ಬಾಂಗ್ಲಾದೇಶದಲ್ಲಿ ಹೆಚ್ಚುತ್ತಿರುವ ಹಿಂದೂಗಳ ಮೇಲಿನ ಹಿಂಸಾಚಾರದ ಬಗ್ಗೆ ಲೇಖಕಿ ತಸ್ಲಿಮಾ ನಸ್ರೀನ್ ಆತಂಕ ವ್ಯಕ್ತಪಡಿಸಿದ್ದಾರೆ. ದೇಶದಲ್ಲಿ ಎರಡು ಬಗೆಯ ಜಿಹಾದಿಗಳಿದ್ದು, ಭಾರತವನ್ನು ದ್ವೇಷಿಸಿ ಬಾಂಗ್ಲಾವನ್ನು ಪಾಕಿಸ್ತಾನದೊಂದಿಗೆ ವಿಲೀನಗೊಳಿಸುವುದೇ ಅವರ ಗುರಿ ಎಂದು ಅವರು ವಿಶ್ಲೇಷಿಸಿದ್ದಾರೆ.
08:26 PM (IST) Jan 04
ವಿಮಾನ ನಿಲ್ದಾಣದಲ್ಲೇ ಖ್ಯಾತ ಬಿಗ್ ಬಾಸ್ ಮಾಜಿ ಸ್ಪರ್ಧಿ ಬಂಧನ, ಸಂಚಲನ ಸೃಷ್ಟಿಸಿದ ಪೊಲೀಸ್ ನಡೆ, ಲ್ಯಾಂಡಿಂಗ್ ಆಗಿ ಏರ್ಪೋರ್ಟ್ನಿಂದ ಹೊರಬರುತ್ತಿದ್ದಂತೆ ಪೊಲೀಸರು ಬಂಧಿಸಿದ್ದಾರೆ. ನಟನ ಅರೆಸ್ಟ್ಗೆ ಕಾರಣವೇನು?
07:12 PM (IST) Jan 04
ಮದುವೆ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಪಂಚಾಯತ್ ಅಧ್ಯಕ್ಷ ಅಪರಿಚಿತರ ಗುಂಡಿನ ದಾಳಿಗೆ ಬಲಿ, ಮೂವರು ಅಪರಿಚಿತರು ಬೈಕ್ ಮೂಲಕ ಆಗಮಿಸಿ ದಾಳಿ ನಡೆಸಿದ್ದಾರೆ. ಘಟನೆಯಲ್ಲಿ ಪಂಚಾಯತ್ ಅಧ್ಯಕ್ಷನ ಕಾರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
06:30 PM (IST) Jan 04
ಲೈವ್ ಬ್ಯಾಂಡ್ಗೆ ಎಚ್ಚರಗೊಂಡ ಗೆಳತಿಗೆ ಅಚ್ಚರಿ, ಬಾಯ್ಫ್ರೆಂಡ್ ಭಿನ್ನ ಪ್ರಪೋಸ್ಗೆ ಉತ್ತರವೇನು? ಮುದ್ದಾದ ವಿಡಿಯೋ ಇದೀಗ ಭಾರಿ ಸದ್ದು ಮಾಡುತ್ತಿದೆ. ಈ ರೀತಿ ಪ್ರಪೋಸ್ ಮಾಡಿದರೆ ಹುಡುಗಿಯರು ಸುಲಭವಾಗಿ ಒಪ್ಪಿಕೊಳ್ತಾರಾ?
06:09 PM (IST) Jan 04
ಬ್ರೂಕರೇಜ್ ಸಂಸ್ಥೆ ಕೊಟಕ್ ಸೆಕ್ಯೂರಿಟಿಸ್ನಿಂದ ತಪ್ಪಾಗಿ ವರ್ಗಾವಣೆಯಾದ 40 ಕೋಟಿ ರೂ. ಬಳಸಿ, ಟ್ರೇಡರ್ ಒಬ್ಬರು ಎಫ್&ಓ ಟ್ರೇಡಿಂಗ್ನಲ್ಲಿ ಕೇವಲ 20 ನಿಮಿಷದಲ್ಲಿ 1.75 ಕೋಟಿ ರೂ. ಲಾಭ ಗಳಿಸಿದರು ಆಮೇಲೇನಾಯ್ತು ಇಲ್ಲಿದೆ ಡಿಟೇಲ್ ಸ್ಟೋರಿ…
04:53 PM (IST) Jan 04
ವಿಶ್ವದ ಟಾಪ್ 10 ಬ್ಯೂಸಿ ರೈಲ್ವೇ ನಿಲ್ದಾಣ ಯಾವುದು? ಪಟ್ಟಿಯಲ್ಲಿದೆ ಭಾರತದ 2 ಸ್ಟೇಶನ್, ಈ ಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿರುವ ರೈಲು ನಿಲ್ದಾಣ ಯಾವುದು? ಭಾರತದ ಬ್ಯೂಸಿಯೆಸ್ಟ್ ರೈಲು ನಿಲ್ದಾಣ ಯಾವುದು? ಮುಂಬೈ, ದೆಹಲಿ ಅಲ್ಲ
04:32 PM (IST) Jan 04
71ರ ಹರೆಯದ ನಟಿ ರೇಖಾ ಅವರ ವೈಯಕ್ತಿಕ ಜೀವನದ ಕುರಿತು ಯಾಸಿರ್ ಉಸ್ಮಾನ್ ಅವರ ಪುಸ್ತಕವು ಹಲವು ರಹಸ್ಯಗಳನ್ನು ಬಹಿರಂಗಪಡಿಸಿದೆ. ಮದುವೆಗೂ ಮುನ್ನ ದೈಹಿಕ ಸಂಬಂಧವನ್ನು ಸಹಜ ಎಂದಿದ್ದ ರೇಖಾ, ತಾನು ಗರ್ಭಿಣಿಯಾಗದಿರುವುದು ಕೇವಲ ಕಾಕತಾಳೀಯ ಎಂಬ ವಿವಾದಿತ ಹೇಳಿಕೆ ನೀಡಿದ್ದರು.
04:06 PM (IST) Jan 04
ಐಪಿಎಲ್ನಿಂದ ಮುಸ್ತಾಫಿಜುರ್ ಅವರನ್ನು ಕೈಬಿಟ್ಟಿದ್ದಕ್ಕೆ ಪ್ರತೀಕಾರವಾಗಿ, ಬಾಂಗ್ಲಾದೇಶ ಕ್ರಿಕೆಟ್ ಮಂಡಳಿ ಕಠಿಣ ಕ್ರಮಕ್ಕೆ ಮುಂದಾಗಿದೆ. ಮುಂಬರುವ 2026ರ ಟಿ20 ವಿಶ್ವಕಪ್ನಲ್ಲಿ ಭಾರತದಲ್ಲಿ ನಡೆಯಲಿರುವ ತನ್ನ ಪಂದ್ಯಗಳನ್ನು ಬಹಿಷ್ಕರಿಸಿ, ಶ್ರೀಲಂಕಾಕ್ಕೆ ಸ್ಥಳಾಂತರಿಸಲು ಬಿಸಿಬಿ ಚಿಂತನೆ ನಡೆಸಿದೆ.
03:57 PM (IST) Jan 04
ರಾಜಧಾನಿ ಲೆ ಮೆರಿಡಿಯನ್ ಹೊಟೇಲ್ನ 12ನೇ ಮಹಡಿಯಿಂದ ಕೆಳಗೆ ಹಾರಿ 50 ವರ್ಷದ ಪರ್ವಿಂದರ್ ಸಿಂಗ್ ಜುನೇಜಾ ಎಂಬುವವರು ಸಾವನ್ನಪ್ಪಿದ್ದಾರೆ. ಮಧ್ಯಾಹ್ನ 12.30ರ ಸುಮಾರಿಗೆ ನಡೆದ ಈ ಘಟನೆಗೆ ನಿಖರ ಕಾರಣ ತಿಳಿದುಬಂದಿಲ್ಲ, ಪೊಲೀಸರು ತನಿಖೆ ಆರಂಭಿಸಿದ್ದಾರೆ.
03:51 PM (IST) Jan 04
ವಿಮಾನ ಪ್ರಯಾಣಿಕರಿಗೆ ಹೊಸ ಸುರಕ್ಷತಾ ಮಾರ್ಗಸೂಚಿ ಪ್ರಕಟ, ಇದುವರೆಗೆ ಇದ್ದ ನಿರ್ಬಂಧಕ್ಕಿಂತ ಹೊಸ ಮಾರ್ಗಸೂಚಿಯಲ್ಲಿ ಕಠಿಣ ನಿಯಮ ಜಾರಿಗೊಳಿಸಲಾಗಿದೆ. ಹೀಗಾಗಿ ಇನ್ಮುಂದೆ ಪ್ರಯಾಣಿಕರು ವಿಮಾನ ಪ್ರಯಾಣದ ವೇಳೆ ಕೆಲ ವಸ್ತುಗಳನ್ನು ಕೊಂಡೊಯ್ಯುವಂತಿಲ್ಲ.
03:42 PM (IST) Jan 04
ಭಾರತ-ಬಾಂಗ್ಲಾ ರಾಜತಾಂತ್ರಿಕ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ, ಬಿಸಿಸಿಐ ಸೂಚನೆ ಮೇರೆಗೆ ಕೆಕೆಆರ್ ತಂಡವು ಮುಸ್ತಾಫಿಜುರ್ ರೆಹಮಾನ್ ಅವರನ್ನು ರಿಲೀಸ್ ಮಾಡಿದೆ. ಈ ಕ್ರಮವನ್ನು ಕಾಂಗ್ರೆಸ್ ಸಂಸದ ಶಶಿ ತರೂರ್ ತೀವ್ರವಾಗಿ ಖಂಡಿಸಿದ್ದಾರೆ.
03:02 PM (IST) Jan 04
02:23 PM (IST) Jan 04
ಇಂದಿನ ದಂಪತಿಗಳ ಕಲಹಕ್ಕೆ ಪ್ರೀತಿಯ ಕೊರತೆಯ ಹೊರತಾಗಿಯೂ ನೂರೆಂಟು ಕಾರಣಗಳಿವೆ ಎಲ್ಲರಂತೆ ನಾವಿಲ್ಲ ಎಂಬ ಹೋಲಿಕೆಯ ಜೊತೆ ಇಲ್ಲಗಳ ಪಟ್ಟಿ ಬಹಳ ದೊಡ್ಡದೇ ಇದೆ. ಆದರೆ ಈ ಸ್ಮಾರ್ಟ್ಫೋನ್ಗಳ ಕಾಲಘಟ್ಟದಲ್ಲಿ ನಾವು ಬದುಕುತ್ತಿರುವಾಗ ಇಲ್ಲೊಂದು ವೃದ್ಧ ಜೋಡಿಯ ಮುಗ್ಧತೆ ಬಾರಿ ವೈರಲ್ ಆಗಿದೆ.
02:15 PM (IST) Jan 04
01:28 PM (IST) Jan 04
ಡ್ರಗ್ಸ್ ಪ್ರಕರಣದ ಆರೋಪಿಯನ್ನು ರಕ್ಷಿಸಲು ಸಾಕ್ಷ್ಯ ತಿರುಚಿದ 34 ವರ್ಷಗಳ ಹಳೆಯ ಪ್ರಕರಣದಲ್ಲಿ ಮಾಜಿ ಸಚಿವ ಮತ್ತು ಶಾಸಕ ಆಂಟನಿ ರಾಜುಗೆ ನ್ಯಾಯಾಲಯವು ಜೈಲು ಶಿಕ್ಷೆ ವಿಧಿಸಿದೆ. ಈ ಶಿಕ್ಷೆಯ ಪರಿಣಾಮವಾಗಿ, ಅವರು ತಮ್ಮ ಶಾಸಕ ಸ್ಥಾನದಿಂದ ಅನರ್ಹರಾಗಿದ್ದಾರೆ.
01:27 PM (IST) Jan 04
ಬಿಸಿಸಿಐ ಸೂಚನೆಯಂತೆ, ಭಾರತ-ಬಾಂಗ್ಲಾದೇಶ ರಾಜತಾಂತ್ರಿಕ ಸಂಘರ್ಷದ ಹಿನ್ನೆಲೆಯಲ್ಲಿ ಕೋಲ್ಕತಾ ನೈಟ್ ರೈಡರ್ಸ್ ತಂಡವು ವೇಗಿ ಮುಸ್ತಫಿಜುರ್ ರಹಮಾನ್ ಅವರನ್ನು ಕೈಬಿಟ್ಟಿದೆ. ಈ ನಿರ್ಧಾರವನ್ನು ಬಾಂಗ್ಲಾದೇಶ ಕ್ರಿಕೆಟ್ ಮಂಡಳಿ ಟೀಕಿಸಿದೆ. ಈ ಬಗ್ಗೆ ಎಡಗೈ ವೇಗಿ ಮೊದಲ ಸಲ ಪ್ರತಿಕ್ರಿಯಿಸಿದ್ದಾರೆ.
01:19 PM (IST) Jan 04
ಮಂಗಳೂರಿನ ಮರಕಡದಲ್ಲಿ, ಟೈರ್ ಸ್ಫೋಟಗೊಂಡು ಕಾರೊಂದು ನಿಯಂತ್ರಣ ತಪ್ಪಿ ಮನೆಯ ಕಾಂಪೌಂಡ್ ಹಾರಿ ಅಂಗಳಕ್ಕೆ ಬಿದ್ದಿದೆ. ಕಾರು ಚಲಾಯಿಸುತ್ತಿದ್ದ ಚರ್ಚ್ನ ಧರ್ಮಗುರುಗಳು ಈ ಘಟನೆಯಲ್ಲಿ ಪವಾಡಸದೃಶವಾಗಿ ಪಾರಾಗಿದ್ದಾರೆ.
12:42 PM (IST) Jan 04
ಬಾಲಿವುಡ್ ನಟಿ ಸಯಾನಿ ಗುಪ್ತಾ, ನಗ್ನ ಮತ್ತು ಅರೆನಗ್ನ ದೃಶ್ಯಗಳ ಚಿತ್ರೀಕರಣದ ತಮ್ಮ ಅನುಭವಗಳನ್ನು ಹಂಚಿಕೊಂಡಿದ್ದಾರೆ. ಕೆಲವೊಮ್ಮೆ ಗೋಪ್ಯತೆ ಕಾಪಾಡಿ ಚಿತ್ರೀಕರಣ ನಡೆಸಿದರೆ, ಸಹ-ನಟರಿಂದ ಅನುಚಿತ ವರ್ತನೆ ಮತ್ತು ಸಾರ್ವಜನಿಕ ಸ್ಥಳಗಳಲ್ಲಿ ಮುಜುಗರದಂತಹ ಘಟನೆ ಎದುರಿಸಿದ್ದಾಗಿ ಅವರು ವಿವರಿಸಿದ್ದಾರೆ.
12:33 PM (IST) Jan 04
ಬೆಂಗಳೂರು: ಜನವರಿ 11ರಿಂದ ನ್ಯೂಜಿಲೆಂಡ್ ಎದುರು ಭಾರತ ತಂಡವು 3 ಪಂದ್ಯಗಳ ಏಕದಿನ ಸರಣಿಯಾಡಲಿದೆ. ಈ ಸರಣಿಯಿಂದ ಇಬ್ಬರು ಸ್ಟಾರ್ ಆಟಗಾರರು ಹೊರಬಿದ್ದಿದ್ದು, ಅವರ ಏಕದಿನ ಕ್ರಿಕೆಟ್ ವೃತ್ತಿಬದುಕು ಮುಗಿಯಿತಾ ಎನ್ನುವ ಪ್ರಶ್ನೆ ಕಾಡಲಾರಂಭಿಸಿದೆ.
11:34 AM (IST) Jan 04
ಭಾರತ ಪಾಕಿಸ್ತಾನ ಪ್ರತ್ಯೇಕಗೊಂಡು 79 ವರ್ಷಗಳೇ ಕಳೆದಿವೆ. ಆದರೂ ಭಾರತದಲ್ಲಿ ಪಾಕಿಸ್ತಾನದ ನಾಯಕರೊಬ್ಬರಿಗೆ ಸೇರಿದ 2.5 ಎಕರೆಯ ವಿಸ್ತಾರವಾಗಿರುವ ಬಂಗಲೆಯೊಂದು ಇದೆ ಎಂಬ ವಿಚಾರ ನಿಮಗೆ ಗೊತ್ತಾ? ಇಲ್ಲಿದೆ ಡಿಟೇಲ್ ಸ್ಟೋರಿ…
10:19 AM (IST) Jan 04
ಮುಂಬೈ: ಭಾರತ ಹಾಗೂ ನ್ಯೂಜಿಲೆಂಡ್ ನಡುವಿನ ಮೂರು ಪಂದ್ಯಗಳ ಏಕದಿನ ಸರಣಿಗೆ ಬಲಿಷ್ಠ ಭಾರತ ಕ್ರಿಕೆಟ್ ತಂಡವನ್ನು ಶನಿವಾರ ಬಿಸಿಸಿಐ ಆಯ್ಕೆ ಸಮಿತಿ ಪ್ರಕಟಿಸಿದೆ. ಆದರೆ ತಂಡಕ್ಕೆ ಕಮ್ಬ್ಯಾಕ್ ಮಾಡುವ ನಿರೀಕ್ಷೆಯಲ್ಲಿದ್ದ ಐವರಿಗೆ ಬಿಸಿಸಿಐ ಸೆಲೆಕ್ಷನ್ ಕಮಿಟಿ ಶಾಕ್ ನೀಡಿದೆ. ಈ ಕುರಿತಾದ ರಿಪೋರ್ಟ್ ಇಲ್ಲಿದೆ.
09:19 AM (IST) Jan 04
ಮುಂಬೈ: ನ್ಯೂಜಿಲೆಂಡ್ ಎದುರಿನ ಮೂರು ಪಂದ್ಯಗಳ ಏಕದಿನ ಸರಣಿಗೆ ಭಾರತ ಕ್ರಿಕೆಟ್ ತಂಡವನ್ನು ಪ್ರಕಟಿಸಲಾಗಿದ್ದು, ಮತ್ತೊಮ್ಮೆ ವೇಗಿ ಮೊಹಮ್ಮದ್ ಶಮಿ ಅವರನ್ನು ಕಡೆಗಣಿಸಲಾಗಿದೆ. ಈ ಕುರಿತಂತೆ ಹೆಡ್ಕೋಚ್ ಕಿಡಿಕಾರಿದ್ದಾರೆ.
08:28 AM (IST) Jan 04
ಬೆಂಗಳೂರು: ಬಹುನಿರೀಕ್ಷಿತ 19ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಗೆ ಬೆಂಗಳೂರಿನ ಎಂ ಚಿನ್ನಸ್ವಾಮಿ ಸ್ಟೇಡಿಯಂ ಆತಿಥ್ಯ ವಹಿಸುತ್ತಾ ಎನ್ನುವ ಕುತೂಹಲದ ಕುರಿತಂತೆ ಮಹತ್ವದ ಅಪ್ಡೇಟ್ ಹೊರಬಿದ್ದಿದೆ. ಈ ಕುರಿತಾದ ರಿಪೋರ್ಟ್ ಇಲ್ಲಿದೆ ನೋಡಿ