Published : Mar 04, 2026, 06:58 AM ISTUpdated : Mar 04, 2026, 10:51 PM IST

India Latest News Live: ಭಾರತದಿಂದ ಮರಳುತ್ತಿದ್ದ ಇರಾನ್ ನೌಕೆ ಮೇಲೆ ಅಮೆರಿಕ ದಾಳಿ, 87 ಮಂದಿ ಸಾವು

ಸಾರಾಂಶ

ನವದೆಹಲಿ: ಇರಾನ್‌ನ ಪ್ರತೀಕಾರದ ದಾಳಿಗೆ ತುತ್ತಾಗಿರುವ ಒಮಾನ್‌ನ ಸುಲ್ತಾನ ಹೈತಮ್ ಬಿನ್ ತಾರಿಕ್, ಕುವೈತ್‌ ರಾಜಕುಮಾರ ಶೇಖ್ ಸಬಾಹ್ ಅಲ್-ಖಾಲಿದ್ ಅಲ್-ಹಮದ್ ಅಲ್-ಮುಬಾರಕ್ ಅಲ್-ಸಬಾಹ್ ಮತ್ತು ಕತಾರ್‌ನ ಅಮೀರ ಶೇಖ್ ತಮೀಮ್ ಬಿನ್ ಹಮದ್ ಅಲ್ ಥಾನಿ ಅವರೊಂದಿಗೆ ಪ್ರಧಾನಿ ನರೇಂದ್ರ ಮೋದಿ ಮಂಗಳವಾರ ದೂರವಾಣಿ ಮಾತುಕತೆ ನಡೆಸಿ, ದಾಳಿಯ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ.

ಈ ವೇಳೆ 3 ದೇಶಗಳ ಸಾರ್ವಭೌಮತ್ವದ ಉಲ್ಲಂಘನೆಯನ್ನು ಖಂಡಿಸಿದ ಅವರು, ಅಲ್ಲಿನ ಭಾರತೀಯ ನಾಗರಿಕರ ಸುರಕ್ಷತೆ ಬಗ್ಗೆ ಚರ್ಚೆ ನಡೆಸಿದ್ದಾರೆ. ಕಳೆದ 2 ದಿನಗಳಲ್ಲಿ ಮೋದಿ, ಇಸ್ರೇಲ್‌, ಬಹ್ರೈನ್‌, ಸೌದಿ ಅರೇಬಿಯಾ ಸೇರಿ 8 ರಾಷ್ಟ್ರಗಳ ಮುಖ್ಯಸ್ಥರಿಗೆ ಕರೆ ಮಾಡಿ

10:51 PM (IST) Mar 04

ಭಾರತದಿಂದ ಮರಳುತ್ತಿದ್ದ ಇರಾನ್ ನೌಕೆ ಮೇಲೆ ಅಮೆರಿಕ ದಾಳಿ, 87 ಮಂದಿ ಸಾವು

ಭಾರತದಿಂದ ಮರಳುತ್ತಿದ್ದ ಇರಾನ್ ನೌಕೆ ಮೇಲೆ ಅಮೆರಿಕ ದಾಳಿ, 87 ಮಂದಿ ಸಾವು, 100ಕ್ಕೂ ಹೆಚ್ಚು ಮಂದಿ ನಾಪತ್ತೆಯಾಗಿದ್ದಾರೆ. ಅಮೆರಿಕ ಸಬ್‌ಮರೀನ್ ದಾಳಿಗೆ ಇರಾನ್ ನೌಕೆ ಹಿಂದೂ ಮಹಾಸಾಗರದಲ್ಲಿ ಮುಳುಗಿದೆ.

 

Read Full Story

10:26 PM (IST) Mar 04

33 ಎಸೆತದಲ್ಲಿ ಅಲೆನ್ ಶತಕ ದಾಖಲೆ, ಸೌತ್ ಆಫ್ರಿಕಾ ಮಣಿಸಿದ ಫೈನಲ್ ಪ್ರವೇಶಿಸಿದ ನ್ಯೂಜಿಲೆಂಡ್

33 ಎಸೆತದಲ್ಲಿ ಅಲೆನ್ ಶತಕ ದಾಖಲೆ, ಸೌತ್ ಆಫ್ರಿಕಾ ಮಣಿಸಿದ ಫೈನಲ್ ಪ್ರವೇಶಿಸಿದ ನ್ಯೂಜಿಲೆಂಡ್, ಟಿ20 ವಿಶ್ವಕಪ್‌ನಲ್ಲಿ ಅತೀ ವೇಗದ ಸೆಂಚುರಿ ದಾಖಲಾಗಿದೆ. ಕೇವಲ 12.5 ಓವರ್‌ನಲ್ಲಿ ಪಂದ್ಯ ಮುಗಿಸಿ ನ್ಯೂಜಿಲೆಂಡ್ ಹೊಸ ಇತಿಹಾಸ ರಚಿಸಿದೆ.

 

Read Full Story

09:40 PM (IST) Mar 04

ರಶ್ಮಿಕಾ ಮಂದಣ್ಣ ವಿಜಯ್ ಅದ್ಧೂರಿ ರೆಸೆಪ್ಶನ್, ಮೈಸೂರು ರೇಷ್ಮೆ ಸೀರೆಯಲ್ಲಿ ಮಿಂಚಿದ ಶ್ರೀವಲ್ಲಿ

ರಶ್ಮಿಕಾ ಮಂದಣ್ಣ ವಿಜಯ್ ಅದ್ಧೂರಿ ರೆಸೆಪ್ಶನ್, ಮೈಸೂರು ರೇಷ್ಮೆ ಸೀರೆಯಲ್ಲಿ ಮಿಂಚಿದ ಶ್ರೀವಲ್ಲಿ, ಹೈದರಾಬಾದ್‌ನಲ್ಲಿ ಸದ್ಯ ಆರತಕ್ಷತೆ ಕಾರ್ಯಕ್ರಮ ನಡೆಯುತ್ತಿದೆ. ಸೆಲೆಬ್ರೆಟಿಗಳ ದಂಡೆ ಆಗಮಿಸಿದ್ದು, ಪ್ರಧಾನಿ ಮೋದಿ ಪಾಲ್ಗೊಳುವ ಸಾಧ್ಯತೆ ಕೇಳಿಬರುತ್ತಿದೆ.

 

Read Full Story

09:07 PM (IST) Mar 04

ಪೈಲ್ಸ್ ಸರ್ಜರಿ ಆದ್ರೂ ನಂಬದ ರೈಲ್ವೇ ಅಧಿಕಾರಿ, ಪ್ಯಾಂಟ್ ಬಿಚ್ಚಿ ಅದನ್ನೇ ತೋರಿಸಿದ ಲೋಕೋ ಪೈಲೆಟ್

ಪೈಲ್ಸ್ ಸರ್ಜರಿ ಆದ್ರೂ ನಂಬದ ರೈಲ್ವೇ ಅಧಿಕಾರಿ, ಪ್ಯಾಂಟ್ ಬಿಚ್ಚಿ ಅದನ್ನೇ ತೋರಿಸಿದ ಲೋಕೋ ಪೈಲೆಟ್, ಅಧಿಕಾರಿಗೆ ಮುಂದೆ ಮೆಡಿಕಲ್ ಸರ್ಟಿಫಿಕೇಟ್, ಔಷಧಿ ಎಲ್ಲಾ ಮುಂದಿಟ್ಟರೂ ಅಧಿಕಾರಿ ನಂಬಲೇ ಇಲ್ಲ, ಬೇರೆ ದಾರಿ ಕಾಣದೆ ಪ್ಯಾಂಟ್ ಬಿಚ್ಚಿ ತೋರಿಸಿದ್ದಾನೆ.

 

Read Full Story

08:04 PM (IST) Mar 04

ಇರಾನ್ ದಾಳಿಯಿಂದ ಖತಾರ್ LNG ಘಟಕ ಸ್ಥಗಿತ, ಭಾರತದ ಗ್ಯಾಸ್ ಆಮದು ಸಂಪೂರ್ಣ ಬಂದ್‌

ಇರಾನ್ ದಾಳಿಯಿಂದ ಖತಾರ್ LNG ಘಟಕ ಸ್ಥಗಿತ, ಭಾರತದ ಗ್ಯಾಸ್ ಆಮದು ಸಂಪೂರ್ಣ ಬಂದ್‌ , ಭಾರತ ವಾರ್ಷಿಕ ಶೇಕಡಾ 40 ರಷ್ಟು ಗ್ಯಾಸನ್ನು ಖತಾರ್‌ನಿಂದ ಆಮದು ಮಾಡಿಕೊಳ್ಳುತ್ತದೆ. ಇದೀಗ ಏಕಾಏಕಿ ಪೂರೈಕೆ ಸ್ಥಗಿತ ಭಾರತಕ್ಕೆ ತೀವ್ರ ಸಂಕಷ್ಟ ತರಲಿದೆ.

Read Full Story

07:42 PM (IST) Mar 04

ಬಿಹಾರ ರಾಜಕೀಯದಲ್ಲಿ ಮಹಾ ತಿರುವು - ಸಿಎಂ ಸ್ಥಾನಕ್ಕೆ ನಿತೀಶ್ ಕುಮಾರ್ ರಾಜೀನಾಮೆ?

ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ರಾಜ್ಯಸಭೆಗೆ ಆಯ್ಕೆಯಾದ ನಂತರ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವ ಸಾಧ್ಯತೆಯಿದೆ. ಈ ಬೆಳವಣಿಗೆಯು ಅವರ ಉತ್ತರಾಧಿಕಾರಿ ಯಾರು ಎಂಬ ಚರ್ಚೆಯನ್ನು ಹುಟ್ಟುಹಾಕಿದ್ದು, ರಾಜ್ಯದ ರಾಜಕೀಯದಲ್ಲಿ ಹೊಸ ಲೆಕ್ಕಾಚಾರಗಳಿಗೆ ಕಾರಣವಾಗಿದೆ.
Read Full Story

07:28 PM (IST) Mar 04

ವೆಬ್‌ ಸಿರೀಸ್‌ನಲ್ಲಿ ಸಖತ್‌ ಬೋಲ್ಡ್‌ ಪಾತ್ರದಲ್ಲಿ ನಟಿಸಿ ಪ್ರಖ್ಯಾತಿ ಪಡೆದ ನಟಿಗೆ ಸ್ತನ ಕ್ಯಾನ್ಸರ್‌!

'ಸೇಕ್ರೆಡ್ ಗೇಮ್ಸ್' ಖ್ಯಾತಿಯ ನಟಿ ರಾಜಶ್ರೀ ದೇಶಪಾಂಡೆ ಅವರಿಗೆ ಗ್ರೇಡ್ 1 ಸ್ತನ ಕ್ಯಾನ್ಸರ್ ಇರುವುದು ಪತ್ತೆಯಾಗಿದೆ. ಸಾಮಾನ್ಯ ತಪಾಸಣೆ ವೇಳೆ ರೋಗ ಪತ್ತೆಯಾಗಿದ್ದು, ಶಸ್ತ್ರಚಿಕಿತ್ಸೆಗೆ ಒಳಗಾಗಿರುವ ಮಾಹಿತಿ ನೀಡಿದ್ದಾರೆ.

Read Full Story

07:07 PM (IST) Mar 04

ಅಮೆರಿಕ-ಇಸ್ರೇಲ್ ಜಂಟಿ ದಾಳಿ ನಡೆಸಿದ್ರೂ ಬಗ್ಗದ ಇರಾನ್, ಪ್ರತಿಕಾರದ ದಾಳಿಗೆ ಬೆದರಿದ ಟ್ರಂಪ್!

ಮಧ್ಯಪ್ರಾಚ್ಯದಲ್ಲಿ ಇರಾನ್, ಇಸ್ರೇಲ್ ಮತ್ತು ಅಮೆರಿಕ ನಡುವಿನ ಯುದ್ಧ ತೀವ್ರಗೊಂಡಿದೆ. ನಾಯಕರ ಸಾವು ಮತ್ತು ಶಸ್ತ್ರಾಸ್ತ್ರ ನಷ್ಟದ ನಡುವೆಯೂ ಇರಾನ್ ಪ್ರತಿದಾಳಿ ನಡೆಸುತ್ತಿದ್ದು, ಪರ್ವತಗಳಡಿಯ 'ಕ್ಷಿಪಣಿ ನಗರ'ಗಳು ಅದರ ಪ್ರಮುಖ ಶಕ್ತಿಯಾಗಿವೆ. ಈ ಸಂಘರ್ಷವು ಜಾಗತಿಕ ತೈಲ ಬಿಕ್ಕಟ್ಟಿಗೆ ಕಾರಣವಾಗುವ ಆತಂಕ

Read Full Story

07:00 PM (IST) Mar 04

27 ವರ್ಷಗಳ ದಾಂಪತ್ಯಕ್ಕೆ 250 ಕೋಟಿ ರೂ? ದಳಪತಿ-ಸಂಗೀತಾ ಡಿವೋರ್ಸ್​ಗೆ ಇದೇನಿದು ಟ್ವಿಸ್ಟ್​?

27 ವರ್ಷಗಳ ದಾಂಪತ್ಯದ ನಂತರ, ನಟ ದಳಪತಿ ವಿಜಯ್ ಅವರ ಪತ್ನಿ ಸಂಗೀತಾ ಸೊರ್ನಲಿಂಗಂ ಗಂಭೀರ ಆರೋಪಗಳೊಂದಿಗೆ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದಾರೆ. ವರದಿಗಳ ಪ್ರಕಾರ, ವಿಜಯ್ ನ್ಯಾಯಾಲಯದ ಹೊರಗೆ ಪ್ರಕರಣವನ್ನು ಇತ್ಯರ್ಥಪಡಿಸಲು ಬಯಸಿದ್ದು, 250 ಕೋಟಿ ರೂ ಜೀವನಾಂಶವನ್ನು ನೀಡಲು ಮುಂದಾಗಿದ್ದಾರೆ ಎನ್ನಲಾಗಿದೆ.

Read Full Story

06:40 PM (IST) Mar 04

Sanju Weds Charu - ಕ್ರಿಕೆಟಿಗ ಸಂಜು ಸ್ಯಾಮ್ಸನ್​ ಅಂತರ್​ಧರ್ಮೀಯ ರೋಚಕ ಫೇಸ್​ಬುಕ್ ಲವ್​ ಸ್ಟೋರಿ!

ಕ್ರಿಕೆಟಿಗ ಸಂಜು ಸ್ಯಾಮ್ಸನ್ ಅವರ ಪ್ರೇಮಕಥೆ ಫೇಸ್‌ಬುಕ್‌ನಲ್ಲಿ ಒಂದು 'Hi' ಸಂದೇಶದಿಂದ ಪ್ರಾರಂಭವಾಯಿತು. ಹಿಂದೂ ಧರ್ಮದ ಚಾರುಲತಾ ಮತ್ತು ಕ್ರೈಸ್ತ ಸಮುದಾಯದ ಸಂಜು, ತಮ್ಮ ಕುಟುಂಬಗಳನ್ನು ಒಪ್ಪಿಸಿ ಅಂತರ್​ಧರ್ಮೀಯ ವಿವಾಹವಾದರು.

Read Full Story

06:38 PM (IST) Mar 04

ಬಾವಿಗೆ ಹಾರಿದ 27 ವರ್ಷದ ಪುತ್ರಿ ಆಕೆಯ ಹಿಂದೆಯೇ ಹಾರಿ ಮಗಳ ರಕ್ಷಿಸಿದ 55 ವರ್ಷದ ಅಮ್ಮ

ತಮಿಳುನಾಡಿನ ನಂಬಿಯೂರಿನಲ್ಲಿ, ಆತ್ಮ*ಹತ್ಯೆ ಮಾಡಿಕೊಳ್ಳಲು ಬಾವಿಗೆ ಹಾರಿದ ತನ್ನ 27 ವರ್ಷದ ಮಗಳನ್ನು ರಕ್ಷಿಸಲು 55 ವರ್ಷದ ತಾಯಿ ಕೂಡಲೇ ಬಾವಿಗೆ ಹಾರಿದ್ದಾರೆ. ಅಗ್ನಿಶಾಮಕ ದಳದವರು ಬರುವವರೆಗೂ ಮಗಳನ್ನು ನೀರಿನಲ್ಲಿ ಮುಳುಗದಂತೆ ಹಿಡಿದಿಟ್ಟುಕೊಂಡು ತಾಯಿ ಸಾಹಸ ಮೆರೆದಿದ್ದಾಳೆ.

Read Full Story

06:21 PM (IST) Mar 04

ಇಂಗ್ಲೆಂಡ್ ವಿರುದ್ಧ ಸೆಮಿಫೈನಲ್ ಗೆದ್ರೆ ಭಾರತಕ್ಕೆ ಟ್ರೋಫಿ ಖಚಿತ, ಟಿ20 ವಿಶ್ವಕಪ್‌ನಲ್ಲಿದೆ ಸಂಪ್ರದಾಯ

ಇಂಗ್ಲೆಂಡ್ ವಿರುದ್ಧ ಸೆಮಿಫೈನಲ್ ಗೆದ್ರೆ ಟ್ರೋಫಿ ಖಚಿತ, ಟಿ20 ವಿಶ್ವಕಪ್‌ನಲ್ಲಿದೆ ಸಂಪ್ರದಾಯ , ಕಳೆದ ಎರಡು ಬಾರಿ ಈ ಸಂಪ್ರದಾಯ ಸರಿಯಾಗಿದೆ. ಇದರ ಜೊತೆಗೆ ಎರಡು ಪ್ರಮುಖ ಮೈಲಿಗಲ್ಲು ರಚನೆಯಾಗಲಿದೆ.

Read Full Story

05:55 PM (IST) Mar 04

Viral Video - ರಾಮೇಶ್ವರಂ ಕೆಫೆ ಮುಂದೆ ಘರ್ಜಿಸಿದ ಜೆಸಿಬಿ; ಪಾಲಿಕೆಯಿಂದ ಅಕ್ರಮ ಒತ್ತುವರಿ ತೆರವು!

ಪುಣೆಯ ವಿಮಾನ್ ನಗರದಲ್ಲಿ ಮುನ್ಸಿಪಲ್ ಕಾರ್ಪೊರೇಷನ್ (ಪಿಎಂಸಿ) ಅತಿಕ್ರಮಣ ತೆರವು ಕಾರ್ಯಾಚರಣೆ ನಡೆಸಿದೆ. ಈ ವೇಳೆ, ರಾಮೇಶ್ವರಂ ಕೆಫೆ ಸೇರಿದಂತೆ ಹಲವು ವಾಣಿಜ್ಯ ಸಂಸ್ಥೆಗಳು ಫುಟ್‌ಪಾತ್‌ ಮೇಲೆ ನಿರ್ಮಿಸಿದ್ದ ಅನಧಿಕೃತ ಕಟ್ಟಡಗಳನ್ನು ನೆಲಸಮಗೊಳಿಸಲಾಯಿತು.

Read Full Story

05:26 PM (IST) Mar 04

ಇಂಗ್ಲೆಂಡ್‌ನ ಈ ವೇಗಿ ಎದುರು ಸಂಜು ಸ್ಯಾಮ್ಸನ್ ಮೂರು ಸಲ ಡಕ್‌ ಔಟ್! ಸೆಮಿಫೈನಲ್‌ಗೂ ಮುನ್ನ ಫ್ಯಾನ್ಸ್‌ಗೆ ಶುರುವಾಯ್ತು ಹೊಸ ತಲೆನೋವು!

ಟಿ20 ವಿಶ್ವಕಪ್ ಸೆಮಿಫೈನಲ್‌ನಲ್ಲಿ ಇಂಗ್ಲೆಂಡ್ ವಿರುದ್ಧ ಭಾರತ ಸೆಣಸಲಿದ್ದು, ಉತ್ತಮ ಫಾರ್ಮ್‌ನಲ್ಲಿರುವ ಸಂಜು ಸ್ಯಾಮ್ಸನ್ ಅವರ ಕಳಪೆ ದಾಖಲೆ ತಂಡಕ್ಕೆ ಚಿಂತೆಗೀಡುಮಾಡಿದೆ. ವಿಶೇಷವಾಗಿ ವೇಗಿ ಜೋಫ್ರಾ ಆರ್ಚರ್ ಎದುರು ಸಂಜು ಪದೇ ಪದೇ ವಿಫಲರಾಗಿದ್ದು ಭಾರತದ ತಲೆನೋವು ಹೆಚ್ಚಿಸುವಂತೆ ಮಾಡಿದೆ.

Read Full Story

05:16 PM (IST) Mar 04

ಒಂಟಿಯಾಗಿ ಬದುಕಿ ಬೇಸತ್ತಿದ್ದೇನೆ ನನಗೂ ಒಬ್ಬ ಗೆಳೆಯ ಬೇಕು - ಪತಿ ಸಾವಿನ 3 ವರ್ಷದ ನಂತರ ಮದುವೆ ಮಾತಾಡಿದ ನಟಿ

ಪತಿ, ನಟ ಕೊಲ್ಲಂ ಸುಧಿ ಅವರ ನಿಧನದ ಮೂರು ವರ್ಷಗಳ ನಂತರ, ಮಾಡೆಲ್ ರೇಣು ಸುಧಿ ಅವರು ಮರುಮದುವೆಯ ಬಗ್ಗೆ ಮಾತನಾಡಿದ್ದಾರೆ. ಒಂಟಿ ಜೀವನದಿಂದ ಬೇಸತ್ತಿದ್ದು, ತನ್ನನ್ನು ಹಾಗೂ ತನ್ನ ಮಕ್ಕಳನ್ನು ಅರ್ಥಮಾಡಿಕೊಳ್ಳುವ ಸಂಗಾತಿಯೊಬ್ಬರು ಬೇಕು ಎಂದು ಅವರು ಹೇಳಿಕೊಂಡಿದ್ದಾರೆ.

Read Full Story

05:03 PM (IST) Mar 04

ಪ್ರಯೋಗಾಲಯದಲ್ಲಿ ತಯಾರಾಗ್ತಿವೆ ಮಿರಿಮಿರಿ ಮಿಂಚುವ ಚಿನ್ನ! ಬಂಗಾರ ಪ್ರಿಯರಿಗೆ ಸರ್​ಪ್ರೈಸ್​ - ಡಿಟೇಲ್ಸ್​ ಇಲ್ಲಿದೆ

ಪ್ರಯೋಗಾಲಯದಲ್ಲಿ ತಯಾರಿಸಿದ ಚಿನ್ನವು ರಾಸಾಯನಿಕವಾಗಿ ಮತ್ತು ಭೌತಿಕವಾಗಿ ಗಣಿಗಾರಿಕೆಯ ಚಿನ್ನವನ್ನೇ ಹೋಲುತ್ತದೆ. ಈ ಲೇಖನವು ಲ್ಯಾಬ್ ಗೋಲ್ಡ್ ತಯಾರಿಸುವ ವಿಧಾನ, ಅದರ ಬೆಲೆ, ಮರುಮಾರಾಟ ಮೌಲ್ಯ, ಮತ್ತು ಹೂಡಿಕೆಯಾಗಿ ಅದರ ಸುರಕ್ಷತೆಯ ಬಗ್ಗೆ ವಿವರಿಸುತ್ತದೆ.

Read Full Story

04:52 PM (IST) Mar 04

US-Iran Conflict - ಹೋರಾಡದೆ ಭಾರೀ ಬೆಲೆ ತೆರುತ್ತಿದೆ ಭಾರತ, ನಾಲ್ಕೇ ದಿನದಲ್ಲಿ 2,000 ಕೋಟಿ ರೂ. ನಷ್ಟವಾಗಿದ್ದು ಹೇಗೆ?

ಮಧ್ಯಪ್ರಾಚ್ಯದಲ್ಲಿ ಇರಾನ್ ಮತ್ತು ಇಸ್ರೇಲ್ ನಡುವಿನ ಯುದ್ಧದ ಉದ್ವಿಗ್ನತೆಯು ಭಾರತದ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ ಬೀರಿದೆ. ಕಳೆದ ನಾಲ್ಕೇ ದಿನಗಳಲ್ಲಿ, ಕಚ್ಚಾ ತೈಲ ಬೆಲೆ ಏರಿಕೆ ಮತ್ತು ರೂಪಾಯಿ ಮೌಲ್ಯ ಕುಸಿತದಿಂದಾಗಿ ದೇಶವು 2,000 ಕೋಟಿ ರೂಪಾಯಿಗೂ ಅಧಿಕ ಆರ್ಥಿಕ ಹೊರೆಯನ್ನು ಹೊತ್ತಿದೆ.

Read Full Story

04:44 PM (IST) Mar 04

ದಳಪತಿ ವಿಜಯ್ ದಾಂಪತ್ಯ ಅಂತ್ಯಕ್ಕೆ ತ್ರಿಷಾ ಕಾರಣನಾ? ಹೊಸ ಜಯಲಲಿತಾ ಆಗ್ತಾರಾ ನಟಿ ತ್ರಿಷಾ? ನಿಗೂಢ ಪೋಸ್ಟ್​ ಬಗ್ಗೆ ಬಿಸಿ ಬಿಸಿ ಚರ್ಚೆ!

ದಳಪತಿ ವಿಜಯ್ ದಾಂಪತ್ಯವು ವಿಚ್ಛೇದನದ ಅಂಚಿನಲ್ಲಿದ್ದು, ಇದಕ್ಕೆ ನಟಿ ತ್ರಿಷಾ ಜೊತೆಗಿನ ಅವರ ಸಂಬಂಧವೇ ಕಾರಣ ಎಂದು ಹೇಳಲಾಗುತ್ತಿದೆ. ಈ ಊಹಾಪೋಹಗಳ ಮಧ್ಯೆ, ವಿಜಯ್ ಅವರೊಂದಿಗೆ ತ್ರಿಷಾ ಕೂಡ ರಾಜಕೀಯಕ್ಕೆ ಪ್ರವೇಶಿಸಿ, ಜಯಲಲಿತಾ ಅವರಂತೆ ಆಗುತ್ತಾರೆಯೇ ಎಂಬ ಚರ್ಚೆ ತಮಿಳುನಾಡಿನಲ್ಲಿ ತೀವ್ರಗೊಂಡಿದೆ.

Read Full Story

04:34 PM (IST) Mar 04

ಬೃಹತ್ ಭೂಗತ 'ಕ್ಷಿಪಣಿ ನಗರ' ಪ್ರದರ್ಶಿಸಿದ ಇರಾನ್; ಅಮೆರಿಕದ ದುಬಾರಿ ಅಸ್ತ್ರಗಳು ಖಾಲಿಯಾಗುವ ಭೀತಿ!

ಇರಾನ್ ತನ್ನ ಬೃಹತ್ ಭೂಗತ ಕ್ಷಿಪಣಿ ನಗರವನ್ನು ಅನಾವರಣಗೊಳಿಸುವ ಮೂಲಕ ಜಗತ್ತನ್ನು ಬೆಚ್ಚಿಬೀಳಿಸಿದೆ. ಈ ಸಂಘರ್ಷವು ಅಮೆರಿಕ ಮತ್ತು ಅದರ ಮಿತ್ರರಾಷ್ಟ್ರಗಳಿಗೆ ಆರ್ಥಿಕವಾಗಿ ದುಬಾರಿಯಾಗುತ್ತಿದೆ.

Read Full Story

04:23 PM (IST) Mar 04

ಸಚಿನ್ ಅಂಜಲಿಯಂತೆ ಪುತ್ರ ಅರ್ಜುನ್ ಸಾನಿಯಾ ಜೋಡಿಯಲ್ಲಿದೆ ವಯಸ್ಸಿನ ಅಂತರ

ಸಚಿನ್ ಅಂಜಲಿಯಂತೆ ಪುತ್ರ ಅರ್ಜುನ್ ಸಾನಿಯಾ ಜೋಡಿಯಲ್ಲಿದೆ ವಯಸ್ಸಿನ ಅಂತರ, ಸಚಿನ್ ತನಗಿಂತ ಹಿರಿಯ ಅಂಜಲಿಯನ್ನು ಪ್ರೀತಿಸಿ ವಿವಾಹವಾಗಿದ್ದರೆ, ಪುತ್ರ ಅರ್ಜುನ್ ತೆಂಡೂಲ್ಕರ್ ಪ್ರೀತಿ ಕೂಡ ಇದೇ ದಾರಿಯಲ್ಲಿ ಸಾಗಿದೆ.

 

Read Full Story

03:56 PM (IST) Mar 04

ಕೊನೆಗೂ ಭಾರತದ ಅಂಚಿಗೆ ಬಂದ ಮಧ್ಯಪ್ರಾಚ್ಯ ಯುದ್ಧ? ಶ್ರೀಲಂಕಾ ಕರಾವಳಿಯಲ್ಲಿ ಅಚ್ಚರಿಯ ರೀತಿಯಲ್ಲಿ ಮುಳುಗಿದ ಇರಾನ್‌ ಹಡಗು!

ಶ್ರೀಲಂಕಾದ ದಕ್ಷಿಣ ಕರಾವಳಿಯಲ್ಲಿ ಇರಾನ್‌ನ 'ಐರಿಸ್ ದೇನಾ' ಯುದ್ಧನೌಕೆ ಮುಳುಗಡೆಯಾಗಿದ್ದು, ಶ್ರೀಲಂಕಾ ಸೇನೆಯು 30 ನಾವಿಕರನ್ನು ರಕ್ಷಿಸಿದೆ. ಈ ಘಟನೆಯಲ್ಲಿ ಇನ್ನೂ 108 ಮಂದಿ ನಾಪತ್ತೆಯಾಗಿದ್ದು, ಪಶ್ಚಿಮ ಏಷ್ಯಾದಲ್ಲಿನ ಸಂಘರ್ಷದ ಪರಿಣಾಮ ಭಾರತದ ಸಮೀಪಕ್ಕೂ ತಲುಪಿದಂತಾಗಿದೆ. 

Read Full Story

03:28 PM (IST) Mar 04

ತಾಂತ್ರಿಕ ಸಮಸ್ಯೆಯಿಂದ ಫೇಸ್‌ಬುಕ್ ತಾತ್ಕಾಲಿಕ ಸ್ಥಗಿತ, ನಿಮಗೂ ಸಮಸ್ಯೆಯಾಗುತ್ತಿದ್ದರೆ ಹೀಗೆ ಮಾಡಿ

ತಾಂತ್ರಿಕ ಸಮಸ್ಯೆಯಿಂದ ಫೇಸ್‌ಬುಕ್ ತಾತ್ಕಾಲಿಕ ಸ್ಥಗಿತ, ನಿಮಗೂ ಸಮಸ್ಯೆಯಾಗುತ್ತಿದ್ದರೆ ಹೀಗೆ ಮಾಡಿ, ಮೊಬೈಲ್ ಹಾಗೂ ಡೆಸ್ಕ್‌ಟಾಪ್‌ನಲ್ಲಿ ಫೇಸ್‌ಬುಕ್ ಲಾಗಿನ್ ಆಗಲು ಸಾಧ್ಯವಾಗದೇ ಹಲವರು ಸಮಸ್ಯೆ ಎದುರಿಸುತ್ತಿದ್ದಾರೆ.

 

Read Full Story

03:25 PM (IST) Mar 04

ಹಿಂದೂ ಮಹಾಸಾಗರದಲ್ಲಿ ಅಮೆರಿಕದ ಯುದ್ಧನೌಕೆ ಮೇಲೆ ಇರಾನ್ ಕ್ಷಿಪಣಿ ದಾಳಿ - ಉಲ್ಬಣಗೊಂಡ ಮಹಾಯುದ್ಧ!

ಇರಾನ್-ಇಸ್ರೇಲ್ ಸಂಘರ್ಷ ತೀವ್ರಗೊಂಡಿದ್ದು, ಹಿಂದೂ ಮಹಾಸಾಗರದಲ್ಲಿ ಅಮೆರಿಕದ ಯುದ್ಧನೌಕೆಯ ಮೇಲೆ ದಾಳಿ ಮಾಡಿರುವುದಾಗಿ ಇರಾನ್ ಹೇಳಿಕೊಂಡಿದೆ. ಇತ್ತ ಇಸ್ರೇಲ್ ಟೆಹ್ರಾನ್ ಮೇಲೆ ಬಾಂಬ್ ದಾಳಿ ನಡೆಸಿದ್ದು, ನಿರ್ಣಾಯಕ ತೈಲ ಮಾರ್ಗವಾದ ಹಾರ್ಮುಜ್ ಜಲಸಂಧಿಯನ್ನು ವಶಕ್ಕೆ ಪಡೆದಿರುವುದಾಗಿ ಇರಾನ್ ಘೋಷಿಸಿದೆ. 

Read Full Story

03:01 PM (IST) Mar 04

48 ವರ್ಷಗಳ ಬಳಿಕ ಪುರಿ ಜಗನ್ನಾಥ ದೇವಸ್ಥಾನದ ಚಿನ್ನ, ವಜ್ರ ವೈಡೂರ್ಯ ಎಣಿಕೆಗೆ ದಿನಾಂಕ ಫಿಕ್ಸ್‌

ಪುರಿಯ ಶ್ರೀ ಜಗನ್ನಾಥ ದೇವಾಲಯದ 'ರತ್ನ ಭಂಡಾರ'ವನ್ನು 46 ವರ್ಷಗಳ ನಂತರ ಆಭರಣಗಳ ಎಣಿಕೆಗಾಗಿ ತೆರೆಯಲಾಗುತ್ತಿದೆ. ಮಾರ್ಚ್ 25ರಂದು ಆರ್‌ಬಿಐ ಮೇಲ್ವಿಚಾರಣೆಯಲ್ಲಿ ನಡೆಯಲಿರುವ ಈ ಪ್ರಕ್ರಿಯೆಯು, 1978ರ ನಂತರ ಮೊದಲ ಬಾರಿಗೆ ದೇವಾಲಯದ ಅಪಾರ ಚಿನ್ನ ಮತ್ತು ಬೆಳ್ಳಿಯ ಆಭರಣಗಳ ಪಟ್ಟಿಯನ್ನು ನವೀಕರಿಸಲಿದೆ.

Read Full Story

02:46 PM (IST) Mar 04

Free Bus Scheme - ಮಹಿಳೆಯರಿಗೆ ಮಾತ್ರವಲ್ಲ, ಇನ್ಮುಂದೆ ಈ ಪುರುಷರಿಗೂ ಬಸ್ ಪ್ರಯಾಣ ಫ್ರೀ! ಸರ್ಕಾರದ ಆದೇಶ ಜಾರಿ

ಆಂಧ್ರಪ್ರದೇಶ ಸರ್ಕಾರವು ಮಹಿಳೆಯರ ಜೊತೆಗೆ ಇದೀಗ ಕೆಲವು ಪುರುಷರಿಗೂ ಆರ್‌ಟಿಸಿ ಬಸ್‌ಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅವಕಾಶ ನೀಡಿದೆ. ಈ ಸಂಬಂಧ ಸರ್ಕಾರ ಇತ್ತೀಚೆಗೆ ಅಧಿಕೃತ ಆದೇಶವನ್ನೂ ಹೊರಡಿಸಿದೆ.
Read Full Story

02:25 PM (IST) Mar 04

ಮನೆಯಲ್ಲಿ ಲಕ್ಕಿ ಬ್ಯಾಂಬೂ ಗಿಡ ಬೆಳೆಸುತ್ತೀರಾ? ಈ 5 ಸಿಂಪಲ್ ಟಿಪ್ಸ್ ಮರೆಯದೇ ಫಾಲೋ ಮಾಡಿ

ಈಗಂತೂ ಮನೆಯೊಳಗೆ ಬೆಳೆಸಬಹುದಾದ ಹಲವು ಬಗೆಯ ಗಿಡಗಳು ಸಿಗುತ್ತವೆ. ಅವುಗಳಲ್ಲಿ ಲಕ್ಕಿ ಬ್ಯಾಂಬೂ ಕೂಡ ಒಂದು. ಇದಕ್ಕೆ ಹೆಚ್ಚು ಕಾಳಜಿ ಬೇಕಿಲ್ಲ, ಸುಲಭವಾಗಿ ಬೆಳೆಯುತ್ತೆ. ಆದರೂ, ಕೆಲವು ವಿಷಯಗಳನ್ನು ಗಮನದಲ್ಲಿಟ್ಟುಕೊಳ್ಳಬೇಕು. ಲಕ್ಕಿ ಬ್ಯಾಂಬೂ ಬೆಳೆಸುವಾಗ ತಿಳಿಯಬೇಕಾದ ಮುಖ್ಯ ಅಂಶಗಳಿವು.

 

Read Full Story

02:23 PM (IST) Mar 04

ಶಾಲೆಯಲ್ಲಿ ಇವನ್ಯಾರು ಅಂತ ಒಬ್ರಿಗೂ ಗೊತ್ತಿಲ್ಲ - ಮಗನ ಶಾಲೆಗೆ ಹೋದ ಅಪ್ಪನ ಬೈಗುಳದ ವೀಡಿಯೋ ಭಾರಿ ವೈರಲ್

ಮಗನ ಶಾಲೆಗೆ ಭೇಟಿ ನೀಡಿದ ತಂದೆಯೊಬ್ಬರು, ಅಲ್ಲಿನ ಅಪರಿಚಿತ ಮತ್ತು ಆತ್ಮೀಯತೆಯಿಲ್ಲದ ವಾತಾವರಣದಿಂದ ಬೇಸರಗೊಂಡಿದ್ದಾರೆ. ತಮ್ಮ ಬಾಲ್ಯದ ಶಾಲಾ ದಿನಗಳನ್ನು ಇಂದಿನ ಶಿಕ್ಷಣ ಪದ್ಧತಿಗೆ ಹೋಲಿಸಿ ಅವರು ವ್ಯಕ್ತಪಡಿಸಿದ ನೋವಿನ ಮಾತುಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
Read Full Story

02:17 PM (IST) Mar 04

'ರಂಜಾನ್‌ ತಿಂಗಳಲ್ಲಿ ಪೊಂಗಾಲ ಆಚರಣೆ? ಮತಾಂತರ ಆಗಬಾರದೇಕೆ? - ನೆಟ್ಟಿಗರ ಟೀಕೆಗೆ ಕಿರುತೆರೆ ನಟಿಯ ಖಡಕ್‌ ಉತ್ತರ

ಮಲಯಾಳಂ ನಟಿ ರೆನೀಶಾ ರಹೀಮ್, ಮುಸ್ಲಿಂ ಸಮುದಾಯಕ್ಕೆ ಸೇರಿದ್ದರೂ ಕೇರಳದ ಪ್ರಸಿದ್ಧ 'ಆಟ್ಟುಕಲ್ ಪೊಂಗಾಲ' ಉತ್ಸವದಲ್ಲಿ ಭಾಗವಹಿಸಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಟೀಕೆಗಳು ವ್ಯಕ್ತವಾದಾಗ, ಅವರು ಟೀಕಾಕಾರರಿಗೆ ಖಡಕ್ ಉತ್ತರ ನೀಡಿ, ತಮಗೆ ಮತಾಂತರದ ಆಸೆಯಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
Read Full Story

01:59 PM (IST) Mar 04

ಟಿ20 ವಿಶ್ವಕಪ್ ಸೆಮಿಫೈನಲ್‌ನಲ್ಲಿ ಭಾರತದ ಈ ಆಟಗಾರನನ್ನು ಕೈಬಿಡಿ ಎಂದು ಅಚ್ಚರಿ ಸಲಹೆ ಕೊಟ್ಟ ರವಿಶಾಸ್ತ್ರಿ!

ಟಿ20 ವಿಶ್ವಕಪ್ ಸೆಮಿಫೈನಲ್‌ನಲ್ಲಿ ಇಂಗ್ಲೆಂಡ್ ವಿರುದ್ಧದ ಪಂದ್ಯಕ್ಕೆ, ಮಾಜಿ ಕೋಚ್ ರವಿಶಾಸ್ತ್ರಿ ತಂಡದಲ್ಲಿ ಬದಲಾವಣೆಗೆ ಸಲಹೆ ನೀಡಿದ್ದಾರೆ. ಕಳಪೆ ಫಾರ್ಮ್‌ನಲ್ಲಿರುವ ಅಭಿಷೇಕ್ ಶರ್ಮಾ ಬದಲು ಇಶಾನ್ ಕಿಶನ್‌ರನ್ನು ಓಪನರ್ ಆಗಿ ಆಡಿಸಬೇಕು ಎಂದು ಅವರು ಹೇಳಿದ್ದಾರೆ. 

Read Full Story

01:28 PM (IST) Mar 04

ಖಮೇನಿ ಉತ್ತರಾಧಿಕಾರಿ ಮೊಜ್ತಬಾ ಖಮೇನಿ ಹತ್ಯೆ ಮಾಡುವಂತೆ ಇಸ್ರೇಲ್‌ ಸೇನೆಗೆ ಆದೇಶ ನೀಡಿದ ನೆತನ್ಯಾಹು!

ಇರಾನ್ ಸರ್ವೋಚ್ಚ ನಾಯಕ ಅಯತೊಲ್ಲಾ ಖಮೇನಿ ಅವರ ಮರಣದ ನಂತರ, ಅವರ ಪುತ್ರ ಮೊಜ್ತಾಬಾ ಅವರನ್ನು ಉತ್ತರಾಧಿಕಾರಿಯಾಗಿ ನೇಮಿಸಲಾಗಿದೆ. ಈ ನೇಮಕಾತಿಯ ಬೆನ್ನಲ್ಲೇ, ಇಸ್ರೇಲ್ ರಕ್ಷಣಾ ಸಚಿವರು ಹೊಸ ನಾಯಕನನ್ನು ಹತ್ಯೆ ಮಾಡುವುದಾಗಿ ಬಹಿರಂಗವಾಗಿ ಬೆದರಿಕೆ ಹಾಕಿದ್ದಾರೆ.

Read Full Story

12:48 PM (IST) Mar 04

ಖಮೇನಿ ಕ್ರೌರ್ಯದ ಪುಟಗಳಿಂದ - ಚಿಕಿತ್ಸೆ ಕೊಟ್ಟಳೆಂದು ಒಬ್ಬಳು, ಹಿಜಾಬ್​ಗಾಗಿ ಮತ್ತೊಬ್ಬಳು, ಮಗದೊಬ್ಬಳು! ಕಣ್ಣೀರಿನ ಕಥೆ ಇದು

ಇರಾನ್ ಸರ್ವಾಧಿಕಾರಿ ಅಲಿ ಖಮೇನಿ ಸಾವಿಗೆ ಕೆಲವರು ಸಂಭ್ರಮಿಸುತ್ತಿರುವುದರ ಹಿಂದಿನ ಕಾರಣಗಳನ್ನು ಈ ಲೇಖನ ವಿವರಿಸುತ್ತದೆ. ಹಿಜಾಬ್ ವಿಚಾರವಾಗಿ ಅವರ ಆಡಳಿತದಲ್ಲಿ ನಡೆದ ಕ್ರೌರ್ಯಕ್ಕೆ ಬಲಿಯಾದ ಡಾ. ಐದಾ ರಸ್ತೋಮಿ,  ಅತಾಫಿ ರಜಾಬಿ ಹಾಗೂ  ಮಾರ್ಜಿ ಇಸ್ಫಹಾನ್‌ರಂತಹ ಮಹಿಳೆಯರ  ಕಥೆಗಳನ್ನು ಇದು ತೆರೆದಿಡುತ್ತದೆ

Read Full Story

12:46 PM (IST) Mar 04

'ನಮ್ಮ ಜೊತೆ ಇನ್ನೊಂದು ಯುದ್ಧಕ್ಕೆ ಭಾರತ ಸಿದ್ಧವಾಗಿದೆ, ಆದರೆ ಮನವಿ ಇಷ್ಟೇ..' ಎಂದ ಪಾಕ್‌ ಅಧ್ಯಕ್ಷ ಅಸಿಫ್‌ ಅಲಿ ಜರ್ದಾರಿ!

ಪಾಕಿಸ್ತಾನದ ಅಧ್ಯಕ್ಷ ಆಸಿಫ್ ಅಲಿ ಜರ್ದಾರಿ ಅವರು, ಭಾರತ ಮತ್ತೊಂದು ಸಂಘರ್ಷಕ್ಕೆ ಸಿದ್ಧತೆ ನಡೆಸುತ್ತಿದೆ ಎಂದು ಆರೋಪ ಮಾಡಿದ್ದಾರೆ. ಯುದ್ಧದ ಹಾದಿ ಬಿಟ್ಟು ಮಾತುಕತೆಗೆ ಮರಳುವಂತೆ ನವದೆಹಲಿಗೆ ಒತ್ತಾಯಿಸಿದ ಅವರು, ಸಿಂಧೂ ನದಿ ನೀರು ಒಪ್ಪಂದ ಸ್ಥಗಿತಗೊಳಿಸಿದ್ದನ್ನು 'ಜಲ-ಭಯೋತ್ಪಾದನೆ' ಎಂದು ಕರೆದಿದ್ದಾರೆ.

Read Full Story

12:30 PM (IST) Mar 04

ಯೂಟ್ಯೂಬ್‌ನಲ್ಲಿ ಮೋದಿ ಈಗ ವಿಶ್ವದ ನಂ.1 ಜನನಾಯಕ! 3 ಕೋಟಿ subscribers ಇದ್ರೂ ದುಡ್ಡಿಗೆ ಆಸೆ ಪಡದ ಭಾರತದ ಪ್ರಧಾನಿ!

ಪ್ರಧಾನಿ ನರೇಂದ್ರ ಮೋದಿ ಯೂಟ್ಯೂಬ್‌ನಲ್ಲಿ 3 ಕೋಟಿ ಚಂದಾದಾರರನ್ನು ಹೊಂದುವ ಮೂಲಕ ಜಗತ್ತಿನ ಮೊದಲ ಜನನಾಯಕರಾಗಿದ್ದಾರೆ. ಈ ಬೃಹತ್ ಹಿಂಬಾಲಕರ ಬಳಗದಿಂದ ಅವರಿಗೆ ಎಷ್ಟು ಆದಾಯ ಬರಬಹುದು ಮತ್ತು ಅವರ ಚಾನೆಲ್ ಮಾನಿಟೈಸ್ ಆಗಿದೆಯೇ ಎಂಬ ಕುತೂಹಲಕಾರಿ ಮಾಹಿತಿಯನ್ನು ಈ ಲೇಖನವು ಬಹಿರಂಗಪಡಿಸುತ್ತದೆ.
Read Full Story

12:17 PM (IST) Mar 04

3 ಕೋಟಿ Subscribes ದಾಟಿದ ವಿಶ್ವದ ಏಕೈಕ ನಾಯಕ ಪ್ರಧಾನಿ ಮೋದಿ, Youtube ಚಾನೆಲ್‌ನಿಂದ ಕೋಟಿ ಕೋಟಿ ಆದಾಯ ಬರುತ್ತಿದೆಯೇ?

PM Modi YouTube channel crosses 30M subscribers ಪ್ರಧಾನಿ ಮೋದಿ ಯೂಟ್ಯೂಬ್ ಚಾನೆಲ್ 3 ಕೋಟಿ ಚಂದಾದಾರರ ಗಡಿ ದಾಟಿ ವಿಶ್ವ ದಾಖಲೆ ಬರೆದಿದೆ! ಜಾಗತಿಕ ನಾಯಕರಲ್ಲಿ ನಂ.1 ಸ್ಥಾನ. ಈ ಚಾನೆಲ್‌ನಿಂದ ಆದಾಯ ಬರುತ್ತದೆಯೇ? ತಿಳಿಯಲು ಸುದ್ದಿ ಓದಿ.

Read Full Story

12:13 PM (IST) Mar 04

Middle East War Tensions - ಇರಾನ್‌ನ ಹೊಸ ಸರ್ವೋಚ್ಚ ನಾಯಕನಾಗಿ ಮೊಜ್ತಬಾ ಖಮೇನಿ ಆಯ್ಕೆ

ಇರಾನ್‌ನಲ್ಲಿ ಅಧಿಕಾರದ ಆಟ ಇದ್ದಕ್ಕಿದ್ದಂತೆ ಬದಲಾಯಿತೇ? ಅಲಿ ಖೊಮೇನಿ ಅವರ ಸಾವಿನ ನಂತರ, ಅವರ ಮಗ ಮೊಜ್ತಬಾ ಖೊಮೇನಿಯನ್ನು ಸದ್ದಿಲ್ಲದೆ ಸುಪ್ರೀಂ ಲೀಡರ್ ಆಗಿ ಆಯ್ಕೆ ಮಾಡಲಾಗಿದೆಯೇ? ಆಂತರಿಕ ಮತದಾನ, ಬಾಹ್ಯ ದಾಳಿ ಮತ್ತು ತೀವ್ರಗೊಳ್ಳುತ್ತಿರುವ ಯುದ್ಧದ ನಡುವೆ ಸತ್ಯ ಯಾವುದು? ಜಗತ್ತು ಯಾಕೆ ಆತಂಕದಲ್ಲಿದೆ?

Read Full Story

11:22 AM (IST) Mar 04

ಜಿಯೋ ಹಾಟ್‌ಸ್ಟಾರ್ ಬಿಡಿ, ಈ ಚಾನೆಲ್‌ನಲ್ಲಿ ಭಾರತ-ಇಂಗ್ಲೆಂಡ್ ಟಿ20 ವಿಶ್ವಕಪ್ ಸೆಮಿಫೈನಲ್ ಮ್ಯಾಚ್ ಫ್ರೀ ಆಗಿ ನೋಡಿ!

2026ರ ಐಸಿಸಿ ಟಿ20 ವಿಶ್ವಕಪ್ ಸೆಮಿಫೈನಲ್‌ನಲ್ಲಿ ಭಾರತ ತಂಡವು ಇಂಗ್ಲೆಂಡ್ ಅನ್ನು ಎದುರಿಸಲಿದೆ. ಮಾರ್ಚ್ 05 ರಂದು ನಡೆಯಲಿರುವ ಈ ಹೈವೋಲ್ಟೇಜ್ ಪಂದ್ಯವನ್ನು ಯಾವುದೇ ಸಬ್‌ಸ್ಕ್ರಿಪ್ಷನ್ ಇಲ್ಲದೆ ಡಿಡಿ ಸ್ಪೋರ್ಟ್ಸ್‌ನಲ್ಲಿ ಉಚಿತವಾಗಿ ವೀಕ್ಷಿಸಬಹುದಾಗಿದೆ.
Read Full Story

10:56 AM (IST) Mar 04

ಅಲ್ಲಿ ಯುದ್ಧ, ಇಲ್ಲಿ ರಾಕೆಟ್ ವೇಗದಲ್ಲಿ ಪಾತಾಳಕ್ಕೆ ಕುಸಿದ ಚಿನ್ನದ ಬೆಲೆ - ಖರೀದಿದಾರರಿಗೆ ಹಬ್ಬ!

ಸತತ ಮೂರನೇ ದಿನವೂ ಚಿನ್ನದ ಬೆಲೆಯಲ್ಲಿ ಕುಸಿತವಾಗಿದ್ದು, ಬೆಳ್ಳಿ ದರವೂ ಇಳಿಕೆಯಾಗಿದೆ. ದೇಶದ ಪ್ರಮುಖ ನಗರಗಳಲ್ಲಿನ 22 ಮತ್ತು 24 ಕ್ಯಾರಟ್ ಚಿನ್ನದ ಇಂದಿನ ದರಗಳ ಸಂಪೂರ್ಣ ವಿವರ ಇಲ್ಲಿದೆ.
Read Full Story

10:24 AM (IST) Mar 04

ಹಾವಿನ ಮೊಟ್ಟೆಗಳನ್ನು ಬೇಯಿಸಿ ತಿನ್ನಬಹುದೇ? ಅವುಗಳ ವಿಷಕಾರಿ ಅಲ್ಲವಾ? ಇಲ್ಲಿದೆ ಸತ್ಯ

ಹಾವಿನ ಮೊಟ್ಟೆ ಸೇವನೆ ಸುರಕ್ಷಿತವೇ ಎಂಬ ಚರ್ಚೆ ವೈರಲ್ ಆಗಿದೆ. ಸಾಮಾಜಿಕ ಜಾಲತಾಣದಲ್ಲಿ ಹಾವಿನ ಮೊಟ್ಟೆ ಸೇವನೆ ಸುರಕ್ಷಿತವೇ ಎಂಬುದರ ಕುರಿತು ಬಿಸಿ ಬಿಸಿ ಚರ್ಚೆಯಾಗುತ್ತಿದೆ. ಹಾವಿನ ಮೊಟ್ಟೆ ವಿಷಕಾರಿ ಅಲ್ಲವಾ?

Read Full Story

10:09 AM (IST) Mar 04

165 ಶಾಲಾ ಮಕ್ಕಳನ್ನು ಒಂದೇ ಸ್ಥಳದಲ್ಲಿ ಸಮಾಧಿ - ಇದು ಅಮೆರಿಕಾ ನೀಡಿದ ರಕ್ಷಣೆಯ ಭರವಸೆ ಎಂದ ಇರಾನ್

ಇಸ್ರೇಲ್ ಅಮೆರಿಕಾದ ಇರಾನ್ ಮೇಲೆ ನಡೆಸಿದ ಜಂಟಿ ದಾಳಿ ವೇಳೆ ಇರಾನ್‌ನ ಶಾಲಾ ಕಟ್ಟಡದ ಮೇಲೆ ಬಾಂಬ್ ಬಿದ್ದು 165 ಮಕ್ಕಳು ಸಾವನ್ನಪ್ಪಿದ್ದರು ಅವರೆಲ್ಲರನ್ನು ಒಂದೇ ಜಾಗದಲ್ಲಿ ಇರಿಸಿ ಸಾಮೂಹಿಕ ಅಂತ್ಯಕ್ರಿಯೆ ಮಾಡಲಾಗಿದೆ. 

Read Full Story

09:52 AM (IST) Mar 04

Rashmika Wedding Saree - ರಶ್ಮಿಕಾ ಮದುವೆಯಲ್ಲಿ ಉಟ್ಟಿದ್ದ ಸೀರೆ ಬೆಲೆ ಕೇಳಿದ್ರೆ ಶಾಕ್ ಆಗ್ತೀರಾ! ಏನಿದರ ವಿಶೇಷತೆ?

ಟಾಲಿವುಡ್ ತಾರೆಯರಾದ ರಶ್ಮಿಕಾ ಮಂದಣ್ಣ ಹಾಗೂ ವಿಜಯ್ ದೇವರಕೊಂಡ ಇತ್ತೀಚೆಗೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ಈ ಮದುವೆಯಲ್ಲಿ ರಶ್ಮಿಕಾ ಉಟ್ಟಿದ್ದ ಸೀರೆ ಸಖತ್ ಟ್ರೆಂಡ್ ಆಗಿದೆ. ಅಂದಹಾಗೆ, ಈ ಸೀರೆಯ ಬೆಲೆ ಎಷ್ಟು ಗೊತ್ತಾ?
Read Full Story

More Trending News