ನವದೆಹಲಿ: ರಷ್ಯಾದಿಂದ ಕಚ್ಚಾ ತೈಲ ಆಮದಿನ ಮೇಲೆ ಸದಾ ಕಾಲ ಕಿಡಿಕಾರುತ್ತಿರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತು ಐರೋಪ್ಯ ದೇಶಗಳಿಗೆ ಭಾರತ ಸರ್ಕಾರ ಸೋಮವಾರ ತೀಕ್ಷ್ಣ ತಿರುಗೇಟು ನೀಡಿದೆ. ರಷ್ಯಾದ ಜೊತೆಗೆ ಭಾರತದ ವ್ಯವಹಾರಕ್ಕಿಂತ ಐರೋಪ್ಯ ರಾಷ್ಟ್ರಗಳ ವ್ಯಾಪಾರ ಜಾಸ್ತಿಯಿದೆ. ಅಲ್ಲದೇ ಭಾರತದ ಮೇಲೆ ಪ್ರಹಾರ ಬೀಸುವ ಅಮೆರಿಕವು ರಷ್ಯಾದಿಂದ ಪರಮಾಣು ಶಕ್ತಿಗೆ ಬೇಕಾದ ರಾಸಾಯನಿಕ, ರಸಗೊಬ್ಬರಗಳನ್ನು ಆಮದು ಮಾಡಿಕೊಳ್ಳುತ್ತಿದೆ ಎಂದು ತಿವಿದಿದೆ. ಯುರೋಪ್-ರಷ್ಯಾ ವ್ಯಾಪಾರವು ಕೇವಲ ಶಕ್ತಿಯನ್ನು ಮಾತ್ರವಲ್ಲದೆ, ರಸಗೊಬ್ಬರಗಳು, ಗಣಿಗಾರಿಕೆ ಉತ್ಪನ್ನಗಳು, ರಾಸಾಯನಿಕಗಳು, ಕಬ್ಬಿಣ ಮತ್ತು ಉಕ್ಕು ಮತ್ತು ಯಂತ್ರೋಪಕರಣಗಳು ಮತ್ತು ಸಾರಿಗೆ ಉಪಕರಣಗಳನ್ನು ಸಹ ಒಳಗೊಂಡಿದೆ.

08:48 PM (IST) Aug 05
08:43 PM (IST) Aug 05
06:37 PM (IST) Aug 05
ಆಪರೇಷನ್ ಸಿಂದೂರ್ನಲ್ಲಿ ಬ್ರಹ್ಮೋಸ್ ಕ್ಷಿಪಣಿಗಳ ಯಶಸ್ವಿ ಬಳಕೆಯ ನಂತರ, ಭಾರತವು ತನ್ನ ಸಶಸ್ತ್ರ ಪಡೆಗಳಿಗೆ ಹೆಚ್ಚಿನ ಕ್ಷಿಪಣಿಗಳನ್ನು ಖರೀದಿಸಲು ಯೋಜಿಸಿದೆ. ಈ ಖರೀದಿಯು ನೌಕಾಪಡೆ ಮತ್ತು ವಾಯುಪಡೆಯನ್ನು ಬಲಪಡಿಸುತ್ತದೆ.
06:26 PM (IST) Aug 05
ರಾಪಿಡೋ ಚಾಲಕನ ದೇಹದಾಕಾರವನ್ನು ನೋಡಿ ಮಹಿಳೆಯೊಬ್ಬರು ಟ್ರಿಪ್ ರದ್ದುಗೊಳಿಸಿ, ವೀಡಿಯೊ ಮಾಡಿ ಅಣಕಿಸಿದ ಘಟನೆ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ಘಟನೆಗೆ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ.
05:41 PM (IST) Aug 05
ವಿದೇಶದಲ್ಲಿ ಹಿಂದೂಗಳ ಆರಾಧ್ಯ ದೈವ ಮರ್ಯಾದ ಪುರುಷೋತ್ತಮ ಶ್ರೀರಾಮಚಂದ್ರನ ಅತೀ ಎತ್ತರದ ಪ್ರತಿಮೆಯನ್ನು ಲೋಕಾರ್ಪಣೆ ಮಾಡಲಾಗಿದೆ. ಉತ್ತರ ಅಮೆರಿಕಾದ ಕೆನಡಾದಲ್ಲಿ ಶ್ರೀರಾಮನ ಅತೀ ಎತ್ತರದ ಮೂರ್ತಿಯನ್ನು ಭಾನುವಾರ ಲೋಕಾರ್ಪಣೆ ಮಾಡಲಾಗಿದೆ.
05:12 PM (IST) Aug 05
ದೀರ್ಘಕಾಲದವರೆಗೆ ಅಮೆರಿಕದೊಂದಿಗೆ ಉದ್ವಿಗ್ನ ಸಂಬಂಧ ಹೊಂದಿರುವ ದೇಶಗಳ ಪಟ್ಟಿಯಲ್ಲಿ ಇರಾನ್ ಅಗ್ರಸ್ಥಾನದಲ್ಲಿದೆ. ಇಸ್ಲಾಮಿಕ್ ಕ್ರಾಂತಿಯ ನಂತರ, ಎರಡೂ ದೇಶಗಳ ನಡುವಿನ ಕಹಿ ಭಾವನೆಗಳು ಹೆಚ್ಚಾಗಿವೆ.
04:10 PM (IST) Aug 05
ಆಂಧ್ರಪ್ರದೇಶದಲ್ಲಿ ನವವಿವಾಹಿತೆಯೊಬ್ಬರು ಪತಿಯ ಕಿರುಕುಳ ತಾಳಲಾರದೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸಾಯುವ ಮುನ್ನ ಸೋದರನಿಗೆ ಬರೆದ ಪತ್ರದಲ್ಲಿ ಕೌಟುಂಬಿಕ ಹಿಂಸೆಯನ್ನು ವಿವರಿಸಿದ್ದಾರೆ. ಇದೇ ವೇಳೆ ಗುಜರಾತ್ನಲ್ಲಿ ಪತ್ನಿಯೊಬ್ಬರು ಪತಿಯನ್ನು ಕೊಂದು ತಾವು ಸಾವಿಗೆ ಶರಣಾಗಿದ್ದಾರೆ.
03:38 PM (IST) Aug 05
03:05 PM (IST) Aug 05
02:58 PM (IST) Aug 05
ಒಡಿಶಾದಲ್ಲಿ ಆನೆಯೊಂದು ರಸ್ತೆ ತಡೆದು ವಾಹನಗಳ ತಪಾಸಣೆ ಮಾಡುತ್ತಿರುವ ವಿಡಿಯೋ ವೈರಲ್ ಆಗಿದೆ.ಹಾಗೆಯೇ ಮತ್ತೊಂದೆಡೆ ತಿಮಿಂಗಿಲವೊಂದು ಬೋಟ್ಗೆ ಡಿಕ್ಕಿ ಹೊಡೆದು ಸಾವನ್ನಪ್ಪಿದೆ. ಈ ಎರಡು ದೃಶ್ಯಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ.
02:28 PM (IST) Aug 05
ಜಮ್ಮು ಕಾಶ್ಮೀರದ ಮಾಜಿ ರಾಜ್ಯಪಾಲ ಸತ್ಯಪಾಲ್ ಮಲಿಕ್ ಅವರು ನಿಧನರಾಗಿದ್ದು, ಅವರಿಗೆ 79 ವರ್ಷ ವಯಸ್ಸಾಗಿತ್ತು. ಕೆಲದಿನಗಳಿಂದ ಅನಾರೋಗ್ಯಕ್ಕೀಡಾದ ಅವರನ್ನು ದೆಹಲಿಯ ಆರ್ಎಂಎಲ್ ಆಸ್ಪತ್ರೆಗೆ ದಾಖಲಿಸಲಾಗಿತ್ತು.
02:01 PM (IST) Aug 05
ಉದ್ಯೋಗ ಸೃಷ್ಟಿಯನ್ನು ಉತ್ತೇಜಿಸುವ ಮತ್ತು ಮೊದಲ ಬಾರಿಗೆ ಉದ್ಯೋಗಿಗಳು ಮತ್ತು ಉದ್ಯೋಗದಾತರಿಗೆ ಬೆಂಬಲ ನೀಡುವ ಉದ್ದೇಶದಿಂದ ಕೇಂದ್ರ ಸರ್ಕಾರ ಹೊಸ ಯೋಜನೆ ಜಾರಿಗೊಳಿಸಿದೆ. ಏನಿದು PM-VBR ಯೋಜನೆ?
01:00 PM (IST) Aug 05
ಗುಜರಾತ್ನ ಭಾವನಗರದಲ್ಲಿ ಸಿಂಹವೊಂದು ಬೇಟೆಯಾಡಿ ತಿನ್ನುತ್ತಿದ್ದಾಗ ವ್ಯಕ್ತಿಯೊಬ್ಬ ವಿಡಿಯೋ ಮಾಡಲು ಹೋಗಿ ಸಿಂಹದ ಕೋಪಕ್ಕೆ ಗುರಿಯಾಗಿದ್ದಾನೆ. ಸಿಂಹ ಆತನನ್ನು ಓಡಿಸಿಕೊಂಡು ಬಂದಿದ್ದು ಈ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ರೆಕಾರ್ಡ್ ಆಗಿದೆ.
11:42 AM (IST) Aug 05
ಹಿಮಾಚಲ ಪ್ರದೇಶದಲ್ಲಿ ಇಬ್ಬರು ಸೋದರರು ತಮ್ಮ ಅನಾರೋಗ್ಯ ಪೀಡಿತ 200 ಕೇಜಿ ತೂಕದ ಹಸುವನ್ನು ಬೆನ್ನ ಮೇಲೆ ಹೊತ್ತುಕೊಂಡು 3 ಕಿ.ಮೀ. ಕಡಿದಾದ ರಸ್ತೆಯಲ್ಲಿ ಆಸ್ಪತ್ರೆಗೆ ಕರೆದೊಯ್ದಿದ್ದು, ಈ ಘಟನೆ ವೀಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
10:49 AM (IST) Aug 05
ಅಮೆರಿಕದಲ್ಲಿ ಭಾರತೀಯ ಕುಟುಂಬವೊಂದು ಹೋಮ ಹವನ ಮಾಡುತ್ತಿದ್ದಾಗ ನೆರೆಹೊರೆಯವರು ಅಗ್ನಿಶಾಮಕ ದಳಕ್ಕೆ ಕರೆ ಮಾಡಿದ್ದಾರೆ. ಹೊಸ ಮನೆಯ ಗೃಹಪ್ರವೇಶಕ್ಕಾಗಿ ಹೋಮ ಮಾಡುವಾಗ ಈ ಘಟನೆ ನಡೆದಿದ್ದು ಘಟನೆಗೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ.
10:30 AM (IST) Aug 05
ಗ್ರಾಮದಲ್ಲಿ ಕುಟುಂಬದ ಒಪ್ಪಿಗೆಯಿಲ್ಲದ ಪ್ರೇಮ ವಿವಾಹಗಳನ್ನು ನಿಷೇಧಿಸಲಾಗಿದೆ. ಈ ನಿರ್ಧಾರವು ವ್ಯಾಪಕ ಟೀಕೆಗೆ ಗುರಿಯಾಗಿದ್ದು, ವೈಯಕ್ತಿಕ ಸ್ವಾತಂತ್ರ್ಯದ ಉಲ್ಲಂಘನೆ ಎಂದು ಹಲವರು ಆರೋಪಿಸಿದ್ದಾರೆ. ಗ್ರಾಮ ಪಂಚಾಯತ್ ಮಾತ್ರ ಈ ನಿರ್ಧಾರವನ್ನು ಸಮರ್ಥಿಸಿಕೊಂಡಿದೆ.
07:56 AM (IST) Aug 05