ಪೈಲಟ್ಗಳ ಕೊರತೆಯಿಂದ ಇಂಡಿಗೋ ವಿಮಾನಗಳ ರದ್ದು ಮತ್ತು ವಿಳಂಬ ಮುಂದುವರಿದಿದ್ದು, ಶುಕ್ರವಾರ 1000ಕ್ಕೂ ಹೆಚ್ಚು ವಿಮಾನಗಳು ರದ್ದುಗೊಂಡವು. ಇಂಡಿಗೋ ನಿತ್ಯ ನಡೆಸುವ 2300 ಸಂಚಾರದ ಪೈಕಿ ಅರ್ಧಕ್ಕರ್ಧ ಸಂಚಾರ ರದ್ದಾಗಿದೆ. ಯಾವುದೇ ಮುನ್ಸೂಚನೆ ಇಲ್ಲದೆಯೇ ಹೀಗೆ ಸಾವಿರಾರು ಸಂಚಾರ ರದ್ದಾಗುತ್ತಿರುವ ಕಾರಣ ದೇಶವ್ಯಾಪಿ ವಿಮಾನ ನಿಲ್ದಾಣಗಳಲ್ಲಿ ಸಾವಿರಾರು ಪ್ರಯಾಣಿಕರು ಸಿಕ್ಕಿಬಿದ್ದಿದ್ದು, ಭಾರೀ ಆಕ್ರೋಶ ವ್ಯಕ್ತವಾಗಿದೆ. ಆದರೆ, ಇದರ ಬೆನ್ನಲ್ಲೇ ವಿಮಾನಗಳ ರದ್ದು ಮತ್ತು ವಿಳಂಬಕ್ಕೆ ಕೊನೆ ಹಾಡುವ ಉದ್ದೇಶದಿಂದ ನಾಗರಿಕ ವಿಮಾನಯಾನ ಮಹಾನಿರ್ದೇಶನಾಲಯ (ಡಿಜಿಸಿಎ), ತಾನೇ ಕಳೆದ ತಿಂಗಳು ಪೈಲಟ್ಗಳ ಕರ್ತವ್ಯದ ಅವಧಿಗೆ ಕಡಿವಾಣ ಹಾಕಿ ಹೊರಡಿಸಿದ್ದ ಕಠಿಣ ನಿಯಮಗಳನ್ನು ತಕ್ಷಣದಿಂದ ಜಾರಿಗೆ ಬರುವಂತೆ ಸ್ಥಗಿತಗೊಳಿಸಲಾಗಿದೆ. ಹೀಗಾಗಿ ಪೈಲಟ್ಗಳ ಲಭ್ಯತೆ ಶನಿವಾರದಿಂದ ಹೆಚ್ಚಾಗುವ ನಿರೀಕ್ಷೆ ಇದೆ. ಇನ್ನೊಂದೆಡೆ ಬೆಳವಣಿಗೆ ಕುರಿತು ತನಿಖೆಗೆ ಕೇಂದ್ರ ಸರ್ಕಾರ ನಾಲ್ವರು ಸದಸ್ಯರ ಸಮಿತಿ ರಚಿಸಿದೆ.

03:52 PM (IST) Dec 06
ತುಂಬಾ ಸೊಗಸಾಗಿ ಕಾಣಬೇಕು ಎಂಬುದು ಬಹುತೇಕರ ಆಸೆ. ಅದೇ ರೀತಿ ಚೀನಾದಲ್ಲಿ ಈಗ ಹೆಣ್ಣು ಮಕ್ಕಳು ಚೆನ್ನಾಗಿ ಕಾಣುವುದಕ್ಕೆ ಕೃತಕ ಮೂಗಿನ ಮೊರೆ ಹೋಗಿದ್ದು, ಈ ಕೃತಕ ಮೂಗುಗಳು ಅವರನ್ನು ಗುರುತು ಸಿಗದಷ್ಟು ಬದಲಾಯಿಸಿ ಬಿಡುತ್ತವೆ.
03:30 PM (IST) Dec 06
ಮಾಜಿ ಪ್ರಧಾನಿ ಇಮ್ರಾನ್ ಖಾನ್ ಮಾನಸಿಕ ಅಸ್ವಸ್ಥ ಎಂದ ಪಾಕಿಸ್ತಾನ ಸೇನೆ, ಕೋಲಾಹಲ ಶುರು, ಪಾಕಿಸ್ತಾನದ ಸೇನಾ ಮುಖ್ಯಸ್ಥ ಅಸೀಮ್ ಮುನೀರ್ ಮನತಣಿಸಲು ಸರ್ಕಾರ ದಿನಕ್ಕೊಂದು ಪದವಿ ನೀಡುತ್ತಿದೆ. ಇದರ ಬೆನ್ನಲ್ಲೇ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಹೇಳಿಕೆ ಕೋಲಾಹಲ ಸೃಷ್ಟಿಸಿದೆ.
02:47 PM (IST) Dec 06
ಪಶ್ಚಿಮ ಬಂಗಾಳದ ಮುರ್ಷಿದಾಬಾದ್ನಲ್ಲಿ, ಟಿಎಂಸಿಯಿಂದ ಅಮಾನತುಗೊಂಡ ಶಾಸಕ ಹುಮಾಯೂನ್ ಕಬೀರ್ ಅವರು ಬಾಬರಿ ಮಸೀದಿಯನ್ನು ಹೋಲುವ ಮಸೀದಿಗೆ ಶಂಕುಸ್ಥಾಪನೆ ನೆರವೇರಿಸಿದ್ದಾರೆ. ಬಿಗಿ ಭದ್ರತೆಯ ನಡುವೆ ನಡೆದ ಈ ಕಾರ್ಯಕ್ರಮದಲ್ಲಿ ಸಾವಿರಾರು ಜನರು ಭಾಗವಹಿಸಿದ್ದರು.
01:29 PM (IST) Dec 06
ಜಾರಿ ನಿರ್ದೇಶನಾಲಯವು ಉದ್ಯಮಿ ಅನಿಲ್ ಅಂಬಾನಿಯವರ ₹1,120 ಕೋಟಿ ಮೌಲ್ಯದ ಹೆಚ್ಚುವರಿ ಆಸ್ತಿಗಳನ್ನು ಮುಟ್ಟುಗೋಲು ಹಾಕಿಕೊಂಡಿದೆ. ಇದರೊಂದಿಗೆ, ಯೆಸ್ ಬ್ಯಾಂಕ್ ಸಾಲ ವಂಚನೆಗೆ ಸಂಬಂಧಿಸಿದ ತನಿಖೆಯಲ್ಲಿ ಮುಟ್ಟುಗೋಲು ಹಾಕಿಕೊಂಡ ಒಟ್ಟು ಆಸ್ತಿಗಳ ಮೌಲ್ಯ ₹10,117 ಕೋಟಿಗೆ ಏರಿದೆ.
01:12 PM (IST) Dec 06
ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ನಿರ್ಣಾಯಕ ಮೂರನೇ ಏಕದಿನ ಪಂದ್ಯದಲ್ಲಿ, ಟೀಂ ಇಂಡಿಯಾ ನಾಯಕ ಕೆ ಎಲ್ ರಾಹುಲ್ ಟಾಸ್ ಗೆದ್ದು ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ. 20 ಪಂದ್ಯಗಳ ನಂತರ ಭಾರತ ಟಾಸ್ ಗೆದ್ದಿದ್ದು, ತಂಡದಲ್ಲಿ ತಿಲಕ್ ವರ್ಮಾಗೆ ಅವಕಾಶ ನೀಡಲಾಗಿದೆ.
12:51 PM (IST) Dec 06
ವಿಶಾಖಪಟ್ಟಣ: ಭಾರತ ಹಾಗೂ ದಕ್ಷಿಣ ಆಫ್ರಿಕಾ ನಡುವಿನ ಮೂರನೇ ಹಾಗೂ ನಿರ್ಣಾಯಕ ಪಂದ್ಯ ಆರಂಭಕ್ಕೆ ಕೆಲವೇ ಗಂಟೆ ಬಾಕಿ ಉಳಿದಿದೆ. ಹೀಗಿರುವಾಗಲೇ ಹರಿಣಗಳ ಪಡೆಗೆ ಬಿಗ್ ಶಾಕ್ ಎದುರಾಗಿದ್ದು, ತಂಡದ ಇಬ್ಬರು ಆಟಗಾರರು ಪಂದ್ಯದಿಂದ ಹೊರಬಿದ್ದಿದ್ದಾರೆ.
12:36 PM (IST) Dec 06
ಮನೆ ಮುಂದೆ ಹಸು ಸಗಣಿ ಹಾಕಿದ ವಿಚಾರಕ್ಕೆ ಸಂಬಂಧಿಕರ ನಡುವೆ ನಡೆದ ಜಗಳ ವಿಕೋಪಕ್ಕೆ ತಿರುಗಿ ಯುವಕನ ಕೊಲೆಯಲ್ಲಿ ಅಂತ್ಯವಾಗಿದೆ. ತಾಯಿ ಮತ್ತು ಅತ್ತೆಯ ಜಗಳ ಬಿಡಿಸಲು ಹೋದ ಕಾನೂನು ವಿದ್ಯಾರ್ಥಿಯನ್ನು ಚಾಕುವಿನಿಂದ ಇರಿದು ಹತ್ಯೆ ಮಾಡಲಾಗಿದೆ.
12:14 PM (IST) Dec 06
ನವದೆಹಲಿ: ಮದುವೆ ಮುಂದೂಡಿಕೆ ಬಳಿಕ ಭಾರತ ಮಹಿಳಾ ಕ್ರಿಕೆಟರ್ ಸ್ಮೃತಿ ಮಂಧನಾ ಇದೇ ಮೊದಲ ಸಲ ಸಾರ್ವಜನಿಕವಾಗಿ ಕಾಣಿಸಿಕೊಂಡಿದ್ದಾರೆ. ಆದರೆ ಆಕೆಯ ಎಂಗೇಜ್ಮೆಂಟ್ ರಿಂಗ್ ನಾಪತ್ತೆಯಾಗಿದೆ. ಈ ಕುರಿತಾದ ರಿಪೋರ್ಟ್ ಇಲ್ಲಿದೆ ನೋಡಿ.
11:43 AM (IST) Dec 06
ಇಲ್ಲೊಂದು ದೇಶದಲ್ಲಿ ಮನೆ ಕೆಲಸಕ್ಕಾಗಿ ಮಹಿಳೆಯರು ಗಂಡನನ್ನು ಬಾಡಿಗೆಗೆ ಪಡೆಯುತ್ತಾರೆ. ಹೌದು ಆ ದೇಶದಲ್ಲಿ ಲಿಂಗ ಅಸಮತೋಲನ ತೀವ್ರವಾಗಿದ್ದು, ಮಹಿಳೆಯರಿಗೆ ಹೋಲಿಸಿದರೆ ಪುರುಷರ ಸಂಖ್ಯೆ ತೀರ ಕಡಿಮೆ ಇದೆ. ಇದೇ ಕಾರಣಕ್ಕೆ ಇಲ್ಲಿ ಪುರುಷರನ್ನು ಮಹಿಳೆಯರು ದುಡ್ಡು ನೀಡಿ ಬಾಡಿಗೆಗೆ ಪಡೆದುಕೊಳ್ಳುತ್ತಾರೆ.
11:34 AM (IST) Dec 06
ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಏಕದಿನ ಸರಣಿಯ ನಿರ್ಣಾಯಕ ಮೂರನೇ ಪಂದ್ಯ ಇಂದು ವಿಶಾಖಪಟ್ಟಣದಲ್ಲಿ ನಡೆಯಲಿದೆ. ಬೌಲಿಂಗ್ ವಿಭಾಗದ ಬಗ್ಗೆ ಚಿಂತೆಯಲ್ಲಿರುವ ಟೀಂ ಇಂಡಿಯಾ, ಹ್ಯಾಟ್ರಿಕ್ ಶತಕದ ನಿರೀಕ್ಷೆಯಲ್ಲಿರುವ ವಿರಾಟ್ ಕೊಹ್ಲಿಯ ಬ್ಯಾಟಿಂಗ್ ಬಲವನ್ನು ನೆಚ್ಚಿಕೊಂಡಿದೆ.
11:20 AM (IST) Dec 06
10:45 AM (IST) Dec 06
ಸುಮಾರು 10 ವರ್ಷಗಳಿಂದ ಭದ್ರತಾ ಪಡೆಗಳಿಂದ ತಪ್ಪಿಸಿಕೊಂಡಿದ್ದ ಅಂತಾರಾಷ್ಟ್ರೀಯ ವನ್ಯಜೀವಿ ಕಳ್ಳಸಾಗಣೆಗಾರ್ತಿ ಯಾಂಗ್ಚೆನ್ ಲಾಚುಂಗ್ಪಾಳನ್ನು ಇಂಡೋ-ಚೀನಾ ಗಡಿಯಲ್ಲಿ ಬಂಧಿಸಲಾಗಿದೆ. ಮಧ್ಯಪ್ರದೇಶ ಹುಲಿ ದಾಳಿ ಪಡೆ ವನ್ಯಜೀವಿ ಅಪರಾಧ ನಿಯಂತ್ರಣ ಬ್ಯೂರೋ ಜಂಟಿಯಾಗಿ ನಡೆಸಿದ ಕಾರ್ಯಾಚರಣೆಯಲ್ಲಿ ಈ ಬಂಧನವಾಗಿದೆ.
09:43 AM (IST) Dec 06
ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ (ಕೆಎಸ್ಸಿಎ) ಚುನಾವಣೆಯ ಮತದಾರರ ಪಟ್ಟಿಯಲ್ಲಿ ಹಲವು ನಕಲಿ ಹಾಗೂ ಅಸ್ತಿತ್ವದಲ್ಲಿಲ್ಲದ ಕ್ಲಬ್ಗಳಿವೆ ಎಂದು ಗಂಭೀರ ಆರೋಪ ಕೇಳಿಬಂದಿದೆ. ಈ ಸಂಬಂಧ, ಅಭ್ಯರ್ಥಿ ವಿಎಂ ಮಂಜುನಾಥ್ ಅವರು ಚುನಾವಣಾ ಅಕ್ರಮ ತಡೆಯಲು ಆಗ್ರಹಿಸಿ ದೂರು ನೀಡಿದ್ದಾರೆ.
09:04 AM (IST) Dec 06
ವಿಶಾಖಪಟ್ಟಣಂನಲ್ಲಿ ನಡೆಯಲಿರುವ 3ನೇ ಏಕದಿನ ಪಂದ್ಯದಲ್ಲಿ ಭಾರತ ಮತ್ತು ದಕ್ಷಿಣ ಆಫ್ರಿಕಾ ಸರಣಿ ಗೆಲುವಿಗಾಗಿ ಸೆಣಸಲಿವೆ. 1-1ರಿಂದ ಸಮಬಲಗೊಂಡಿರುವ ಸರಣಿಯಲ್ಲಿ, ಭಾರತದ ಬ್ಯಾಟಿಂಗ್ ಕೊಹ್ಲಿ-ರೋಹಿತ್ ಮೇಲೆ ಅವಲಂಬಿತವಾಗಿದ್ದರೆ, ಬೌಲಿಂಗ್ ವಿಭಾಗವು ದುಬಾರಿಯಾಗಿದೆ.