ಪೈಲಟ್ಗಳ ಕೊರತೆಯಿಂದ ಇಂಡಿಗೋ ವಿಮಾನಗಳ ರದ್ದು ಮತ್ತು ವಿಳಂಬ ಮುಂದುವರಿದಿದ್ದು, ಶುಕ್ರವಾರ 1000ಕ್ಕೂ ಹೆಚ್ಚು ವಿಮಾನಗಳು ರದ್ದುಗೊಂಡವು. ಇಂಡಿಗೋ ನಿತ್ಯ ನಡೆಸುವ 2300 ಸಂಚಾರದ ಪೈಕಿ ಅರ್ಧಕ್ಕರ್ಧ ಸಂಚಾರ ರದ್ದಾಗಿದೆ. ಯಾವುದೇ ಮುನ್ಸೂಚನೆ ಇಲ್ಲದೆಯೇ ಹೀಗೆ ಸಾವಿರಾರು ಸಂಚಾರ ರದ್ದಾಗುತ್ತಿರುವ ಕಾರಣ ದೇಶವ್ಯಾಪಿ ವಿಮಾನ ನಿಲ್ದಾಣಗಳಲ್ಲಿ ಸಾವಿರಾರು ಪ್ರಯಾಣಿಕರು ಸಿಕ್ಕಿಬಿದ್ದಿದ್ದು, ಭಾರೀ ಆಕ್ರೋಶ ವ್ಯಕ್ತವಾಗಿದೆ. ಆದರೆ, ಇದರ ಬೆನ್ನಲ್ಲೇ ವಿಮಾನಗಳ ರದ್ದು ಮತ್ತು ವಿಳಂಬಕ್ಕೆ ಕೊನೆ ಹಾಡುವ ಉದ್ದೇಶದಿಂದ ನಾಗರಿಕ ವಿಮಾನಯಾನ ಮಹಾನಿರ್ದೇಶನಾಲಯ (ಡಿಜಿಸಿಎ), ತಾನೇ ಕಳೆದ ತಿಂಗಳು ಪೈಲಟ್ಗಳ ಕರ್ತವ್ಯದ ಅವಧಿಗೆ ಕಡಿವಾಣ ಹಾಕಿ ಹೊರಡಿಸಿದ್ದ ಕಠಿಣ ನಿಯಮಗಳನ್ನು ತಕ್ಷಣದಿಂದ ಜಾರಿಗೆ ಬರುವಂತೆ ಸ್ಥಗಿತಗೊಳಿಸಲಾಗಿದೆ. ಹೀಗಾಗಿ ಪೈಲಟ್ಗಳ ಲಭ್ಯತೆ ಶನಿವಾರದಿಂದ ಹೆಚ್ಚಾಗುವ ನಿರೀಕ್ಷೆ ಇದೆ. ಇನ್ನೊಂದೆಡೆ ಬೆಳವಣಿಗೆ ಕುರಿತು ತನಿಖೆಗೆ ಕೇಂದ್ರ ಸರ್ಕಾರ ನಾಲ್ವರು ಸದಸ್ಯರ ಸಮಿತಿ ರಚಿಸಿದೆ.

08:48 PM (IST) Dec 06
ವಿಶಾಖಪಟ್ಟಣದಲ್ಲಿ ನಡೆದ ಅಂತಿಮ ಏಕದಿನ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ಭಾರತ 9 ವಿಕೆಟ್ಗಳ ಭರ್ಜರಿ ಜಯ ಸಾಧಿಸಿದೆ. ಯಶಸ್ವಿ ಜೈಸ್ವಾಲ್ ಅವರ ಅಮೋಘ ಶತಕ ಹಾಗೂ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ ಅವರ ಅರ್ಧಶತಕಗಳ ನೆರವಿನಿಂದ ಭಾರತವು 2-1 ಅಂತರದಲ್ಲಿ ಸರಣಿ ಗೆದ್ದುಕೊಂಡಿತು.
08:22 PM (IST) Dec 06
ಪ್ರಪಂಚದಾದ್ಯಂತ ಆಲ್ಕೋಹಾಲ್ ಪ್ರಿಯರಿದ್ದಾರೆ ಎಂಬುದು ಎಲ್ಲರಿಗೂ ತಿಳಿದಿರುವ ವಿಷಯ. ಮದ್ಯ ಮಾರಾಟಕ್ಕೆ ಸಂಬಂಧಿಸಿದಂತೆ ಪ್ರತಿಯೊಂದು ದೇಶದಲ್ಲೂ ವಿಭಿನ್ನ ನಿಯಮಗಳಿವೆ. ಆದರೆ, ಥೈಲ್ಯಾಂಡ್ನಲ್ಲಿ ಮದ್ಯ ಮಾರಾಟಕ್ಕೆ ಸಂಬಂಧಿಸಿದಂತೆ ಒಂದು ವಿಚಿತ್ರ ನಿಯಮವಿದೆ. ಅದೇನು ಅಂತೀರಾ..
07:53 PM (IST) Dec 06
ಅನ್ನದಾತ ರೈತರ ಕಲ್ಯಾಣಕ್ಕಾಗಿ ಬಿಜೆಪಿ ಸಂಸದ ಡಾ.ಕೆ.ಸುಧಾಕರ್ ಅವರು ಲೋಕಸಭೆಯಲ್ಲಿ ಎರಡು ಮಹತ್ವದ ಖಾಸಗಿ ಮಸೂದೆಗಳನ್ನು ಮಂಡಿಸಿದ್ದಾರೆ. ಈ ಮಸೂದೆಗಳು ಕೃಷಿ ಆರ್ಥಿಕತೆ ಹಾಗೂ ಗ್ರಾಮೀಣ ಕುಟುಂಬಗಳ ಅಭಿವೃದ್ಧಿಗೆ ಸಹಕಾರಿಯಾಗಿವೆ.
07:48 PM (IST) Dec 06
ಇಂಡಿಗೋ ವಿಮಾನಗಳ ಸರಣಿ ರದ್ದತಿಯಿಂದ ಉಂಟಾದ ಬಿಕ್ಕಟ್ಟಿಗೆ ಕೇಂದ್ರ ಸರ್ಕಾರ ಮಧ್ಯಪ್ರವೇಶಿಸಿದ್ದು, ರದ್ದಾದ ಟಿಕೆಟ್ಗಳಿಗೆ 8 ಗಂಟೆಯೊಳಗೆ ಮರುಪಾವತಿ ಮಾಡಲು ಮತ್ತು ಲಗೇಜ್ಗಳನ್ನು 48 ಗಂಟೆಯೊಳಗೆ ಹಿಂತಿರುಗಿಸಲು ಕಟ್ಟುನಿಟ್ಟಿನ ನಿರ್ದೇಶನ ನೀಡಿದೆ.
06:18 PM (IST) Dec 06
ವೈವಾಹಿಕ ಜೀವನಕ್ಕೆ ಬಿಗ್ ಬಾಸ್ ಮಾಜಿ ಸ್ಪರ್ಧಿ, ಹಿಂದೂ ಮುಸ್ಲಿಂ ಸಂಪ್ರದಾಯದಂತೆ ಮದುವೆ, ನವ ಜೋಡಿಗಳಿಗೆ ಬಿಗ್ ಬಾಸ್ ಸ್ಪರ್ಧಿಗಳು, ಸೆಲೆಬ್ರೆಟಿಗಳು ಶುಭಹಾರೈಸಿದ್ದಾರೆ. ಅಷ್ಟಕ್ಕೂ ಈ ಜೋಡಿ ಎರಡು ಸಂಪ್ರದಾಯದಲ್ಲಿ ಮದುವೆಯಾಗಿದ್ದೇಕೆ?
05:46 PM (IST) Dec 06
Priyanka Chopra sister:ಪ್ರಿಯಾಂಕಾ ಚೋಪ್ರಾ ಅವರ ಸಹೋದರಿ ಹಾಗೂ ಬಿಗ್ಬಾಸ್ ಖ್ಯಾತಿಯ ಮನಾರಾ ಚೋಪ್ರಾ ಅವರು ಬಹರೇನ್ನ ಮಸೀದಿಯೊಂದಕ್ಕೆ ಬುರ್ಖಾ ಧರಿಸಿ ಭೇಟಿ ನೀಡಿದ್ದಾರೆ. ಈ ವಿಡಿಯೋ ವೈರಲ್ ಆಗಿದ್ದು, ಅಲ್ಲಾ ಒಬ್ಬನೇ ಎಂದು ಹೇಳಿರುವ ಅವರ ನಡೆಗೆ ಸೋಶಿಯಲ್ ಮೀಡಿಯಾದಲ್ಲಿ ತೀವ್ರ ಟೀಕೆ ವ್ಯಕ್ತವಾಗಿದೆ.
05:25 PM (IST) Dec 06
ವಿಶಾಖಪಟ್ಟಣದಲ್ಲಿ ನಡೆದ ಮೂರನೇ ಏಕದಿನ ಪಂದ್ಯದಲ್ಲಿ, ಕ್ವಿಂಟನ್ ಡಿ ಕಾಕ್ (106) ಅವರ ಆಕರ್ಷಕ ಶತಕದ ಹೊರತಾಗಿಯೂ ದಕ್ಷಿಣ ಆಫ್ರಿಕಾ 270 ರನ್ಗಳಿಗೆ ಆಲೌಟ್ ಆಯಿತು. ಭಾರತದ ಪರ ಕುಲ್ದೀಪ್ ಯಾದವ್ ಮತ್ತು ಪ್ರಸಿದ್ದ್ ಕೃಷ್ಣ ತಲಾ ನಾಲ್ಕು ವಿಕೆಟ್ ಪಡೆದು ಮಿಂಚಿದರು.
04:45 PM (IST) Dec 06
ಶ್ವಾನಗಳಿಗಾಗಿಯೇ 'ಝುಟೊಪಿಯಾ 2' ಅನಿಮೇಟೆಡ್ ಸಿನಿಮಾದ ವಿಶೇಷ ಪ್ರದರ್ಶನವನ್ನು ಆಯೋಜಿಸಲಾಗಿತ್ತು. ರೆಡ್ ಕಾರ್ಪೆಟ್ ಸ್ವಾಗತ, ವಿಶೇಷ ಆಹಾರ ವ್ಯವಸ್ಥೆಯೊಂದಿಗೆ ಮಾಲೀಕರು ತಮ್ಮ ಶ್ವಾನಗಳ ಜೊತೆ ಥಿಯೇಟರ್ನಲ್ಲಿ ಕುಳಿತು ಸಿನಿಮಾ ವೀಕ್ಷಿಸಿದರು.
04:45 PM (IST) Dec 06
ಇಂಡಿಗೋ ವಿಮಾನ ರದ್ದಾಗಿ ಪರದಾಡುತ್ತಿರುವ ಪ್ರಯಾಣಿಕರ ನೆರವಿಗೆ ಧಾವಿಸಿದ ಭಾರತೀಯ ರೈಲ್ವೆ , ಬೆಂಗಳೂರು ಸೇರಿದಂತೆ ದೇಶಾದ್ಯಂತ ಪ್ರಯಾಣಿಕರು ಪರಿತಪಿಸುತ್ತಿದ್ದಾರೆ. ಇದರ ಬೆನ್ನಲ್ಲೇ ಭಾರತೀಯ ರೈಲ್ವೇ ಈ ಪ್ರಯಾಣಿಕರಿಗೆ ವಿಶೇಷ ನೆರವು ನೀಡುತ್ತಿದೆ.
04:44 PM (IST) Dec 06
ಕತ್ತು ನೋವಿನಿಂದಾಗಿ ದಕ್ಷಿಣ ಆಫ್ರಿಕಾ ವಿರುದ್ಧದ ಸರಣಿಯಿಂದ ಹೊರಗುಳಿದಿದ್ದ ಟೀಂ ಇಂಡಿಯಾದ ಶುಭ್ಮನ್ ಗಿಲ್ ಇದೀಗ ಸಂಪೂರ್ಣವಾಗಿ ಚೇತರಿಸಿಕೊಂಡಿದ್ದಾರೆ. ಅವರು ಡಿಸೆಂಬರ್ 09 ರಿಂದ ಆರಂಭವಾಗಲಿರುವ ಟಿ20 ಸರಣಿಯಲ್ಲಿ ಭಾರತ ತಂಡಕ್ಕೆ ಮರಳುವ ನಿರೀಕ್ಷೆಯಿದೆ.
04:06 PM (IST) Dec 06
ಅಫೀಸ್ ಸಮಯ ಬಳಿಕ ಕರೆ-ಇಮೇಲ್ ಮಾಡಂಗಿಲ್ಲ, ರೈಟ್ ಟು ಡಿಸ್ಕನೆಕ್ಟ್ ಬಿಲ್ ಲೋಕಸಭೆಯಲ್ಲಿ ಮಂಡನೆ, ನೀವು ಕಚೇರಿಯಿಂದ ಮನಗೆ ತೆರಳಿದ ಬಳಿಕ, ಅಥವಾ ನಿಮ್ಮ ಕೆಲಸದ ಸಮಯ ಮುಗಿದ ಬಳಿಕ ಆಫೀಸ್ ವಿಚಾರವಾಗಿ ಕರೆ, ಇಮೇಲ್ ಮಾಡಿದರೆ ಅಪರಾಧ. ಈ ಬಿಲ್ ಮಂಡಿಸಿದೆ.
03:52 PM (IST) Dec 06
ತುಂಬಾ ಸೊಗಸಾಗಿ ಕಾಣಬೇಕು ಎಂಬುದು ಬಹುತೇಕರ ಆಸೆ. ಅದೇ ರೀತಿ ಚೀನಾದಲ್ಲಿ ಈಗ ಹೆಣ್ಣು ಮಕ್ಕಳು ಚೆನ್ನಾಗಿ ಕಾಣುವುದಕ್ಕೆ ಕೃತಕ ಮೂಗಿನ ಮೊರೆ ಹೋಗಿದ್ದು, ಈ ಕೃತಕ ಮೂಗುಗಳು ಅವರನ್ನು ಗುರುತು ಸಿಗದಷ್ಟು ಬದಲಾಯಿಸಿ ಬಿಡುತ್ತವೆ.
03:30 PM (IST) Dec 06
ಮಾಜಿ ಪ್ರಧಾನಿ ಇಮ್ರಾನ್ ಖಾನ್ ಮಾನಸಿಕ ಅಸ್ವಸ್ಥ ಎಂದ ಪಾಕಿಸ್ತಾನ ಸೇನೆ, ಕೋಲಾಹಲ ಶುರು, ಪಾಕಿಸ್ತಾನದ ಸೇನಾ ಮುಖ್ಯಸ್ಥ ಅಸೀಮ್ ಮುನೀರ್ ಮನತಣಿಸಲು ಸರ್ಕಾರ ದಿನಕ್ಕೊಂದು ಪದವಿ ನೀಡುತ್ತಿದೆ. ಇದರ ಬೆನ್ನಲ್ಲೇ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಹೇಳಿಕೆ ಕೋಲಾಹಲ ಸೃಷ್ಟಿಸಿದೆ.
02:47 PM (IST) Dec 06
ಪಶ್ಚಿಮ ಬಂಗಾಳದ ಮುರ್ಷಿದಾಬಾದ್ನಲ್ಲಿ, ಟಿಎಂಸಿಯಿಂದ ಅಮಾನತುಗೊಂಡ ಶಾಸಕ ಹುಮಾಯೂನ್ ಕಬೀರ್ ಅವರು ಬಾಬರಿ ಮಸೀದಿಯನ್ನು ಹೋಲುವ ಮಸೀದಿಗೆ ಶಂಕುಸ್ಥಾಪನೆ ನೆರವೇರಿಸಿದ್ದಾರೆ. ಬಿಗಿ ಭದ್ರತೆಯ ನಡುವೆ ನಡೆದ ಈ ಕಾರ್ಯಕ್ರಮದಲ್ಲಿ ಸಾವಿರಾರು ಜನರು ಭಾಗವಹಿಸಿದ್ದರು.
01:29 PM (IST) Dec 06
ಜಾರಿ ನಿರ್ದೇಶನಾಲಯವು ಉದ್ಯಮಿ ಅನಿಲ್ ಅಂಬಾನಿಯವರ ₹1,120 ಕೋಟಿ ಮೌಲ್ಯದ ಹೆಚ್ಚುವರಿ ಆಸ್ತಿಗಳನ್ನು ಮುಟ್ಟುಗೋಲು ಹಾಕಿಕೊಂಡಿದೆ. ಇದರೊಂದಿಗೆ, ಯೆಸ್ ಬ್ಯಾಂಕ್ ಸಾಲ ವಂಚನೆಗೆ ಸಂಬಂಧಿಸಿದ ತನಿಖೆಯಲ್ಲಿ ಮುಟ್ಟುಗೋಲು ಹಾಕಿಕೊಂಡ ಒಟ್ಟು ಆಸ್ತಿಗಳ ಮೌಲ್ಯ ₹10,117 ಕೋಟಿಗೆ ಏರಿದೆ.
01:12 PM (IST) Dec 06
ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ನಿರ್ಣಾಯಕ ಮೂರನೇ ಏಕದಿನ ಪಂದ್ಯದಲ್ಲಿ, ಟೀಂ ಇಂಡಿಯಾ ನಾಯಕ ಕೆ ಎಲ್ ರಾಹುಲ್ ಟಾಸ್ ಗೆದ್ದು ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ. 20 ಪಂದ್ಯಗಳ ನಂತರ ಭಾರತ ಟಾಸ್ ಗೆದ್ದಿದ್ದು, ತಂಡದಲ್ಲಿ ತಿಲಕ್ ವರ್ಮಾಗೆ ಅವಕಾಶ ನೀಡಲಾಗಿದೆ.
12:51 PM (IST) Dec 06
ವಿಶಾಖಪಟ್ಟಣ: ಭಾರತ ಹಾಗೂ ದಕ್ಷಿಣ ಆಫ್ರಿಕಾ ನಡುವಿನ ಮೂರನೇ ಹಾಗೂ ನಿರ್ಣಾಯಕ ಪಂದ್ಯ ಆರಂಭಕ್ಕೆ ಕೆಲವೇ ಗಂಟೆ ಬಾಕಿ ಉಳಿದಿದೆ. ಹೀಗಿರುವಾಗಲೇ ಹರಿಣಗಳ ಪಡೆಗೆ ಬಿಗ್ ಶಾಕ್ ಎದುರಾಗಿದ್ದು, ತಂಡದ ಇಬ್ಬರು ಆಟಗಾರರು ಪಂದ್ಯದಿಂದ ಹೊರಬಿದ್ದಿದ್ದಾರೆ.
12:36 PM (IST) Dec 06
ಮನೆ ಮುಂದೆ ಹಸು ಸಗಣಿ ಹಾಕಿದ ವಿಚಾರಕ್ಕೆ ಸಂಬಂಧಿಕರ ನಡುವೆ ನಡೆದ ಜಗಳ ವಿಕೋಪಕ್ಕೆ ತಿರುಗಿ ಯುವಕನ ಕೊಲೆಯಲ್ಲಿ ಅಂತ್ಯವಾಗಿದೆ. ತಾಯಿ ಮತ್ತು ಅತ್ತೆಯ ಜಗಳ ಬಿಡಿಸಲು ಹೋದ ಕಾನೂನು ವಿದ್ಯಾರ್ಥಿಯನ್ನು ಚಾಕುವಿನಿಂದ ಇರಿದು ಹತ್ಯೆ ಮಾಡಲಾಗಿದೆ.
12:14 PM (IST) Dec 06
ನವದೆಹಲಿ: ಮದುವೆ ಮುಂದೂಡಿಕೆ ಬಳಿಕ ಭಾರತ ಮಹಿಳಾ ಕ್ರಿಕೆಟರ್ ಸ್ಮೃತಿ ಮಂಧನಾ ಇದೇ ಮೊದಲ ಸಲ ಸಾರ್ವಜನಿಕವಾಗಿ ಕಾಣಿಸಿಕೊಂಡಿದ್ದಾರೆ. ಆದರೆ ಆಕೆಯ ಎಂಗೇಜ್ಮೆಂಟ್ ರಿಂಗ್ ನಾಪತ್ತೆಯಾಗಿದೆ. ಈ ಕುರಿತಾದ ರಿಪೋರ್ಟ್ ಇಲ್ಲಿದೆ ನೋಡಿ.
11:43 AM (IST) Dec 06
ಇಲ್ಲೊಂದು ದೇಶದಲ್ಲಿ ಮನೆ ಕೆಲಸಕ್ಕಾಗಿ ಮಹಿಳೆಯರು ಗಂಡನನ್ನು ಬಾಡಿಗೆಗೆ ಪಡೆಯುತ್ತಾರೆ. ಹೌದು ಆ ದೇಶದಲ್ಲಿ ಲಿಂಗ ಅಸಮತೋಲನ ತೀವ್ರವಾಗಿದ್ದು, ಮಹಿಳೆಯರಿಗೆ ಹೋಲಿಸಿದರೆ ಪುರುಷರ ಸಂಖ್ಯೆ ತೀರ ಕಡಿಮೆ ಇದೆ. ಇದೇ ಕಾರಣಕ್ಕೆ ಇಲ್ಲಿ ಪುರುಷರನ್ನು ಮಹಿಳೆಯರು ದುಡ್ಡು ನೀಡಿ ಬಾಡಿಗೆಗೆ ಪಡೆದುಕೊಳ್ಳುತ್ತಾರೆ.
11:34 AM (IST) Dec 06
ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಏಕದಿನ ಸರಣಿಯ ನಿರ್ಣಾಯಕ ಮೂರನೇ ಪಂದ್ಯ ಇಂದು ವಿಶಾಖಪಟ್ಟಣದಲ್ಲಿ ನಡೆಯಲಿದೆ. ಬೌಲಿಂಗ್ ವಿಭಾಗದ ಬಗ್ಗೆ ಚಿಂತೆಯಲ್ಲಿರುವ ಟೀಂ ಇಂಡಿಯಾ, ಹ್ಯಾಟ್ರಿಕ್ ಶತಕದ ನಿರೀಕ್ಷೆಯಲ್ಲಿರುವ ವಿರಾಟ್ ಕೊಹ್ಲಿಯ ಬ್ಯಾಟಿಂಗ್ ಬಲವನ್ನು ನೆಚ್ಚಿಕೊಂಡಿದೆ.
11:20 AM (IST) Dec 06
10:45 AM (IST) Dec 06
ಸುಮಾರು 10 ವರ್ಷಗಳಿಂದ ಭದ್ರತಾ ಪಡೆಗಳಿಂದ ತಪ್ಪಿಸಿಕೊಂಡಿದ್ದ ಅಂತಾರಾಷ್ಟ್ರೀಯ ವನ್ಯಜೀವಿ ಕಳ್ಳಸಾಗಣೆಗಾರ್ತಿ ಯಾಂಗ್ಚೆನ್ ಲಾಚುಂಗ್ಪಾಳನ್ನು ಇಂಡೋ-ಚೀನಾ ಗಡಿಯಲ್ಲಿ ಬಂಧಿಸಲಾಗಿದೆ. ಮಧ್ಯಪ್ರದೇಶ ಹುಲಿ ದಾಳಿ ಪಡೆ ವನ್ಯಜೀವಿ ಅಪರಾಧ ನಿಯಂತ್ರಣ ಬ್ಯೂರೋ ಜಂಟಿಯಾಗಿ ನಡೆಸಿದ ಕಾರ್ಯಾಚರಣೆಯಲ್ಲಿ ಈ ಬಂಧನವಾಗಿದೆ.
09:43 AM (IST) Dec 06
ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ (ಕೆಎಸ್ಸಿಎ) ಚುನಾವಣೆಯ ಮತದಾರರ ಪಟ್ಟಿಯಲ್ಲಿ ಹಲವು ನಕಲಿ ಹಾಗೂ ಅಸ್ತಿತ್ವದಲ್ಲಿಲ್ಲದ ಕ್ಲಬ್ಗಳಿವೆ ಎಂದು ಗಂಭೀರ ಆರೋಪ ಕೇಳಿಬಂದಿದೆ. ಈ ಸಂಬಂಧ, ಅಭ್ಯರ್ಥಿ ವಿಎಂ ಮಂಜುನಾಥ್ ಅವರು ಚುನಾವಣಾ ಅಕ್ರಮ ತಡೆಯಲು ಆಗ್ರಹಿಸಿ ದೂರು ನೀಡಿದ್ದಾರೆ.
09:04 AM (IST) Dec 06
ವಿಶಾಖಪಟ್ಟಣಂನಲ್ಲಿ ನಡೆಯಲಿರುವ 3ನೇ ಏಕದಿನ ಪಂದ್ಯದಲ್ಲಿ ಭಾರತ ಮತ್ತು ದಕ್ಷಿಣ ಆಫ್ರಿಕಾ ಸರಣಿ ಗೆಲುವಿಗಾಗಿ ಸೆಣಸಲಿವೆ. 1-1ರಿಂದ ಸಮಬಲಗೊಂಡಿರುವ ಸರಣಿಯಲ್ಲಿ, ಭಾರತದ ಬ್ಯಾಟಿಂಗ್ ಕೊಹ್ಲಿ-ರೋಹಿತ್ ಮೇಲೆ ಅವಲಂಬಿತವಾಗಿದ್ದರೆ, ಬೌಲಿಂಗ್ ವಿಭಾಗವು ದುಬಾರಿಯಾಗಿದೆ.