LIVE NOW
Published : Jun 06, 2026, 05:15 AM ISTUpdated : Jun 06, 2026, 08:14 AM IST

India Latest News Live: ಫ್ರೆಂಚ್ ಓಪನ್ - ಅಲೆಕ್ಸಾಂಡರ್ ಜ್ವೆರೆವ್‌ ಫೈನಲ್‌ಗೆ ಲಗ್ಗೆ, ಚೊಚ್ಚಲ ಗ್ರ್ಯಾನ್‌ಸ್ಲಾಂ ಮೇಲೆ ಕಣ್ಣು!

ಸಾರಾಂಶ

ಇಂಫಾಲ: ಈಶಾನ್ಯ ರಾಜ್ಯ ಮಣಿಪುರದಲ್ಲಿ ಮತ್ತೆ ಹಿಂಸಾಚಾರ ನಡೆದಿದೆ. ಇಲ್ಲಿನ ಕಾಂಗ್‌ಪೋಕ್ಪಿ ಜಿಲ್ಲೆಯ ಮನೆಗೆ ಶಸ್ತ್ರಸಜ್ಜಿತ ದುಷ್ಕರ್ಮಿಗಳ ಗುಂಪೊಂದು ನುಗ್ಗಿ ಮೂವರನ್ನು ಹತ್ಯೆಗೈದಿದ್ದಾರೆ. ಮತ್ತೊಂದೆಡೆ ಗಲಭೆಯಲ್ಲಿ 7 ಮನೆಗಳು ಬೆಂಕಿಗಾಹುತಿಯಾಗಿವೆ.

ಜಿಲ್ಲೆಯ ಲೊಯಿಬೋಲ್‌ ಖುಲ್ಲೆನ್‌ ಗ್ರಾಮದಲ್ಲಿ ಬೆಳಗಿನ ಜಾವ 4 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ. ದುಷ್ಕರ್ಮಿಗಳು ಏಕಾಏಕಿ ಇಲ್ಲಿನ ನಾಗರಿಕರ ಮನೆಗಳಿಗೆ ಬೆಂಕಿ ಹಚ್ಚಿದ್ದಾರೆ. ಈ ವೇಳೆ ಎರಡು ಕಡೆಯವರ ನಡುವೆ ನಡೆದ ಗುಂಡಿನ ಕಾಳಗದಲ್ಲಿ ಮೂವರು ಸಾವನ್ನಪ್ಪಿದ್ದಾರೆ. ಘಟನೆಯಿಂದ ಭಯಗೊಂಡು ಕೆಲವು ಗ್ರಾಮಸ್ಥರು ಜೀವ ಉಳಿಸಿಕೊಳ್ಳಲು ಕಾಡಿನಲ್ಲಿ ಅಡಗಿ ಕುಳಿತ ಪ್ರಸಂಗವೂ ನಡೆಯಿತು.

08:14 AM (IST) Jun 06

ಫ್ರೆಂಚ್ ಓಪನ್ - ಅಲೆಕ್ಸಾಂಡರ್ ಜ್ವೆರೆವ್‌ ಫೈನಲ್‌ಗೆ ಲಗ್ಗೆ, ಚೊಚ್ಚಲ ಗ್ರ್ಯಾನ್‌ಸ್ಲಾಂ ಮೇಲೆ ಕಣ್ಣು!

ಫ್ರೆಂಚ್ ಓಪನ್ ಟೆನಿಸ್‌ ಟೂರ್ನಿಯಲ್ಲಿ ಅಲೆಕ್ಸಾಂಡರ್‌ ಜ್ವೆರೆವ್‌ ಪುರುಷರ ಸಿಂಗಲ್ಸ್ ಫೈನಲ್‌ಗೆ ಲಗ್ಗೆ ಇಟ್ಟಿದ್ದಾರೆ. ಮಹಿಳಾ ಸಿಂಗಲ್ಸ್ ಫೈನಲ್‌ನಲ್ಲಿ ರಷ್ಯಾದ ಮಿರ್ರಾ ಆ್ಯಂಡ್ರೀವಾ ಮತ್ತು ಪೋಲೆಂಡ್‌ನ ಮಜಾ ಚ್ವಾಲಿನ್ಸ್ಕಾ ಚೊಚ್ಚಲ ಗ್ರ್ಯಾನ್‌ಸ್ಲಾಂ ಪ್ರಶಸ್ತಿಗಾಗಿ ಸೆಣಸಲಿದ್ದಾರೆ.
Read Full Story

07:25 AM (IST) Jun 06

ಅಂಡಮಾನ್‌ ಕಡಲಲ್ಲಿ ನೈಸರ್ಗಿಕ ಅನಿಲ ಪತ್ತೆ; 1900 ಮೀಟರ್‌ಗಿಂತಲೂ ಹೆಚ್ಚು ಆಳದಲ್ಲಿರುವ ಬಾವಿ

ಆಯಿಲ್ ಇಂಡಿಯಾ ಲಿ. ಅಂಡಮಾನ್ ಸಮುದ್ರದಲ್ಲಿ ಹೊಸ ನೈಸರ್ಗಿಕ ಅನಿಲ ಬಾವಿಯನ್ನು ಪತ್ತೆ ಮಾಡಿದೆ. ಅಂಡಮಾನ್ ದ್ವೀಪದ ಪೂರ್ವ ಕರಾವಳಿಯಿಂದ 15 ಕಿ.ಮೀ. ದೂರದಲ್ಲಿರುವ ಶ್ರೀ ವಿಜಯಪುರಂ-3 ಬಾವಿಯಲ್ಲಿ ಅನಿಲದ ಉಪಸ್ಥಿತಿ ದೃಢಪಟ್ಟಿದೆ ಎಂದು ಕೇಂದ್ರ ಸಚಿವ ಹರ್ದೀಪ್ ಪುರಿ ತಿಳಿಸಿದ್ದಾರೆ.
Read Full Story

07:15 AM (IST) Jun 06

ನೋಟು ರದ್ದತಿ ಬಳಿಕ ವಂಚನೆಯ ₹6 ಕೋಟಿ ನೋಟು ಸುಟ್ಟಿದ್ದ ವ್ಯಕ್ತಿ! ಆರೋಪಿಯಿಂದ ತಪ್ಪೊಪ್ಪಿಗೆ

ಕೇರಳ ಲಾಟರಿ ಕಲ್ಯಾಣ ನಿಧಿ ವಂಚನೆ ಪ್ರಕರಣದ ಪ್ರಮುಖ ಆರೋಪಿಯು, ತಾನು ಲಪಟಾಯಿಸಿದ್ದ ₹14 ಕೋಟಿಗಳಲ್ಲಿ ₹6 ಕೋಟಿಯನ್ನು ಸುಟ್ಟುಹಾಕಿರುವುದಾಗಿ ವಿಚಾರಣೆ ವೇಳೆ ಒಪ್ಪಿಕೊಂಡಿದ್ದಾನೆ. 2016ರ ನೋಟು ರದ್ದತಿ ಬಳಿಕ ಹಳೆಯ ನೋಟುಗಳನ್ನು ಬದಲಾಯಿಸಲು ಸಾಧ್ಯವಾಗದ ಕಾರಣ ಈ ಕೃತ್ಯ ಎಸಗಿರುವುದಾಗಿ ಆತ ಬಾಯಿಬಿಟ್ಟಿದ್ದಾನೆ.
Read Full Story

05:37 AM (IST) Jun 06

ಮೋದಿ ನನ್ನ ಬೆಸ್ಟ್‌ ಫ್ರೆಂಡ್‌ ಎಂದ ಟ್ರಂಪ್; ಮಹತ್ವದ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ

ಭಾರತದ ಪ್ರಧಾನಿ ಮೋದಿಯವರನ್ನು ತಮ್ಮ ಆಪ್ತ ಸ್ನೇಹಿತ ಎಂದು ಕರೆದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಶೀಘ್ರದಲ್ಲೇ ಲಾಭದಾಯಕ ವ್ಯಾಪಾರ ಒಪ್ಪಂದದ ಸುಳಿವು ನೀಡಿದ್ದಾರೆ. ಮತ್ತೊಂದೆಡೆ, ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುಟಿನ್, ಮೋದಿ ಯಾವುದೇ ಒತ್ತಡಕ್ಕೆ ಮಣಿಯುವವರಲ್ಲ ಎಂದು ಪ್ರಶಂಸಿಸಿದ್ದಾರೆ. ವಾಣಿಜ್ಯ ಸಚಿವ ಪೀಯೂಷ್ ಗೋಯಲ್ ಜುಲೈನಲ್ಲಿ ಭಾರತ-ಅಮೆರಿಕ ಒಪ್ಪಂದದ ಮೊದಲ ಹಂತದ ನಿರೀಕ್ಷೆಯನ್ನು ವ್ಯಕ್ತಪಡಿಸಿದ್ದಾರೆ.
Read Full Story

05:30 AM (IST) Jun 06

ಅಣ್ಣಾಮಲೈ ರಾಜೀನಾಮೆಯಿಂದ ನಮಗೇನೂ ನಷ್ಟವಿಲ್ಲ, ನಮ್ಮದು ವಿಶ್ವದ ಅತಿದೊಡ್ಡ ಪಕ್ಷ ಎಂದ ಬಿಜೆಪಿ

ತಮಿಳುನಾಡು ಬಿಜೆಪಿ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಅವರು, ಭಾಷಾ ವಿಚಾರ ಮತ್ತು ಮೈತ್ರಿ ಕುರಿತ ಭಿನ್ನಮತದಿಂದಾಗಿ ಪಕ್ಷಕ್ಕೆ ಅಧಿಕೃತವಾಗಿ ರಾಜೀನಾಮೆ ನೀಡಿದ್ದಾರೆ. ಅವರು 'ವಿ ದ ಲೀಡರ್ಸ್‌ ಫೌಂಡೇಶನ್‌' ಮೂಲಕ ಹೊಸ ರಾಜಕೀಯ ಚಳವಳಿಯನ್ನು ಪ್ರಾರಂಭಿಸಿದ್ದು, ಭವಿಷ್ಯದಲ್ಲಿ ತಮ್ಮದೇ ಪಕ್ಷವನ್ನು ಕಟ್ಟಿ ಚುನಾವಣೆಯಲ್ಲಿ ಸ್ಪರ್ಧಿಸುವುದಾಗಿ ಘೋಷಿಸಿದ್ದಾರೆ.
Read Full Story

More Trending News