LIVE NOW
Published : May 06, 2026, 04:54 AM ISTUpdated : May 06, 2026, 07:27 AM IST

India Latest News Live: ಫ್ಯಾಷನ್‌ ಶೋನಲ್ಲಿ ₹142 ಕೋಟಿ ನೆಕ್ಲೇಸ್‌ ಧರಿಸಿದ ಉದ್ಯಮಿ ಸುಧಾ ರೆಡ್ಡಿ!

ಸಾರಾಂಶ

ಚಂಡೀಗಢ: ಚಂಡೀಗಢ ವಿಮಾನ ನಿಲ್ದಾಣದಲ್ಲಿ ಹೈದರಾಬಾದ್‌ಗೆ ಹೊರಡಲು ನಿಂತಿದ್ದ ಇಂಡಿಗೋ ವಿಮಾನದಲ್ಲಿ ಪ್ರಯಾಣಿಕರೊಬ್ಬರ ಪವರ್‌ ಬ್ಯಾಂಕ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಅದೃಷ್ಟವಶಾತ್‌ ದೊಡ್ಡ ಅನಾಹುತವೊಂದು ತಪ್ಪಿದ್ದು, ಮುಂಜಾಗ್ರತಾ ಕ್ರಮವಾಗಿ ಪ್ರಯಾಣಿಕರನ್ನು ಅಲ್ಲಿಂದ ತೆರವುಗೊಳಿಸಲಾಯಿತು.

ಪವರ್‌ ಬ್ಯಾಂಕ್‌ನಲ್ಲಿ ಬೆಂಕಿ ಹತ್ತಿಕೊಳ್ಳುತ್ತಿದ್ದಂತೆ ಓವರ್‌ಹೆಡ್‌ಬಿನ್‌ಗಳಲ್ಲಿ ಹೊಗೆ ಕಾಣಿಸಿಕೊಂಡಿದೆ. ಆದರೆ ಘಟನೆಯಲ್ಲಿ ಯಾವುದೇ ಪ್ರಯಾಣಿಕರಿಗೆ ಗಾಯವಾಗಿಲ್ಲ.

ಈ ಬಗ್ಗೆ ಇಂಡಿಗೋ ಪ್ರಕಟಣೆ ಹೊರಡಿಸಿದ್ದು, ‘ಹೈದರಾಬಾದ್‌ನಿಂದ ಚಂಡೀಗಢಕ್ಕೆ ಪ್ರಯಾಣಿಸಿದ್ದ ಇಂಡಿಗೋ ವಿಮಾನ ಲ್ಯಾಂಡಿಂಗ್‌ ಬಳಿಕ ಪ್ರಯಾಣಿಕರ ವೈಯಕ್ತಿಕ ಎಲೆಕ್ಟ್ರಾನಿಕ್‌ ಉಪಕರಣಗಳಿಗೆ ಬೆಂಕಿ ಹತ್ತಿಕೊಂಡಿದೆ. ಸುರಕ್ಷತೆಯ ದೃಷ್ಟಿಯಿಂದ ಪ್ರಯಾಣಿಕರನ್ನು ಅಲ್ಲಿಂದ ಸ್ಥಳಾಂತರಿಸಲಾಯಿತು’ ಎಂದಿದೆ.

07:27 AM (IST) May 06

ಫ್ಯಾಷನ್‌ ಶೋನಲ್ಲಿ ₹142 ಕೋಟಿ ನೆಕ್ಲೇಸ್‌ ಧರಿಸಿದ ಉದ್ಯಮಿ ಸುಧಾ ರೆಡ್ಡಿ!

ಹೈದರಾಬಾದ್ ಮೂಲದ ಉದ್ಯಮಿ ಮತ್ತು ಕೋಟ್ಯಧಿಪತಿ ಸುಧಾ ರೆಡ್ಡಿ ಸುಮಾರು 142 ಕೋಟಿ ರು. ಮೌಲ್ಯದ ನೆಕ್ಲೇಸ್ ಧರಿಸಿ, ದಕ್ಷಿಣ ಭಾರತೀಯ ಪಾರಂಪರಿಕ ವಸ್ತ್ರಭೂಷಣದೊಂದಿಗೆ ಎಲ್ಲರ ಗಮನ ಸೆಳೆದಿದ್ದಾರೆ.

Read Full Story

06:38 AM (IST) May 06

4 ರಾಜ್ಯಗಳಲ್ಲಿ ಕಾಂಗ್ರೆಸ್‌ಗೆ ಮುಸ್ಲಿಂ ಶಾಸಕರದ್ದೇ ಭಾರೀ ಬಲ ಅಚ್ಚರಿ; ಅಭ್ಯರ್ಥಿಗಳ ಗೆಲುವಿನ ದರ ಶೇ.80

ಪಂಚರಾಜ್ಯಗಳ ಚುನಾವಣಾ ಫಲಿತಾಂಶದಲ್ಲಿ, ಕಾಂಗ್ರೆಸ್‌ನಿಂದ ಗೆದ್ದ ಹೆಚ್ಚಿನ ಅಭ್ಯರ್ಥಿಗಳು ಮುಸ್ಲಿಮರಾಗಿದ್ದಾರೆ, ವಿಶೇಷವಾಗಿ ಅಸ್ಸಾಂನಲ್ಲಿ 19 ವಿಜೇತರಲ್ಲಿ 18 ಮಂದಿ ಮುಸ್ಲಿಮರಾಗಿದ್ದಾರೆ. ಇದಲ್ಲದೆ, ಕೇರಳದಲ್ಲಿ ಬಿಜೆಪಿ ಉತ್ತಮ ಪ್ರದರ್ಶನ ನೀಡಿದ್ದು, ಬಂಗಾಳದ ಮುಸ್ಲಿಂ ಬಾಹುಳ್ಯದ ಜಿಲ್ಲೆಗಳಲ್ಲಿಯೂ ತನ್ನ ಸ್ಥಾನಗಳನ್ನು ಹೆಚ್ಚಿಸಿಕೊಂಡಿದೆ.
Read Full Story

05:03 AM (IST) May 06

West Bengal - ಸಿಎಂ ಸ್ಥಾನ ಬಿಡಲ್ಲ ಎಂದು ಮಮತಾ ಬ್ಯಾನರ್ಜಿ ಹಠ; ಮುಂದೇನು ಮಾಡಬಹುದು?

ಪಶ್ಚಿಮ ಬಂಗಾಳ ಚುನಾವಣೆಯಲ್ಲಿ ಸೋತರೂ, ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ರಾಜೀನಾಮೆ ನೀಡಲು ನಿರಾಕರಿಸಿದ್ದಾರೆ. ಈ ಫಲಿತಾಂಶವನ್ನು 'ಜನಾದೇಶವಲ್ಲ, ಪಿತೂರಿ' ಎಂದು ಕರೆದಿರುವ ಅವರು, ಬೀದಿಗಿಳಿದು ಹೋರಾಟ ಮುಂದುವರಿಸುವುದಾಗಿ ಹೇಳಿದ್ದಾರೆ. ಸಂವಿಧಾನದ ಪ್ರಕಾರ, ಅವರ ಅವಧಿ ಮುಗಿದ ನಂತರ ರಾಜ್ಯಪಾಲರು ಅವರನ್ನು ವಜಾಗೊಳಿಸಬಹುದು.
Read Full Story

More Trending News