ಢಾಕಾ: ಬಾಂಗ್ಲಾದೇಶದ ಹಂಗಾಮಿ ಸರ್ಕಾರದ ಮುಖ್ಯ ಸಲಹೆಗಾರ ಮೊಹಮ್ಮದ್ ಯೂನಸ್ ಮನೆ ಎದುರು ಶುಕ್ರವಾರ ನೂರಾರು ಸಂಖ್ಯೆಯಲ್ಲಿ ಸರ್ಕಾರಿ ನೌಕರರು ಮತ್ತು ಅಧಿಕಾರಿಗಳು ಜಮಾಯಿಸಿ ಯೂನಸ್ ವಿರುದ್ಧ ಪ್ರತಿಭಟನೆ ನಡೆಸಿದರು. ಪರಿಣಾಮ ಭದ್ರತಾ ಸಿಬ್ಬಂದಿ ಜೊತೆ ಸಂಘರ್ಷದಲ್ಲಿ 15 ಮಂದಿ ತೀವ್ರವಾಗಿ ಗಾಯಗೊಂಡರು.
ಬಾಂಗ್ಲಾ ಸರ್ಕಾರಿ ನೌಕರರಿಗೆ 7ನೇ ರಾಷ್ಟ್ರೀಯ ವೇತನ ಶ್ರೇಣಿಯನ್ನು ಜಾರಿಗೊಳಿಸಬೇಕೆಂದು ಢಾಕಾದ ಜಮುನಾದಲ್ಲಿರುವ ಯೂನಸ್ ಅಧಿಕೃತ ನಿವಾಸಕ್ಕೆ ನೌಕರರು ಮುತ್ತಿಗೆ ಹಾಕಿದರು. ಈ ವೇಳೆ ಅಲ್ಲಿದ್ದ ಭದ್ರತಾ ಸಿಬ್ಬಂದಿ ಜನರನ್ನು ಹತ್ತಿಕ್ಕಲು ಯತ್ನಿಸಿದ್ದಾರೆ. ಪರಿಸ್ಥಿತಿ ವಿಕೋಪಕ್ಕೆ ತಿರುಗಿದ ಪರಿಣಾಮ ಪೊಲೀಸರು ಲಾಠಿ ಪ್ರಹಾರ ಮತ್ತು ಅಶ್ರುವಾಯು ಸಿಡಿಸಿದ್ದಾರೆ. ಇದರಿಂದ 15 ಜನರು ಗಾಯಗೊಂಡಿದ್ದಾರೆ.
09:21 AM (IST) Feb 07
08:52 AM (IST) Feb 07
ಹಣ ಅಂದ್ರೆ ಯಾರಿಗೆ ತಾನೇ ಇಷ್ಟ ಇಲ್ಲ ಹೇಳಿ? ಪ್ರತಿಯೊಬ್ಬರಿಗೂ ದುಡ್ಡು ಬೇಕು, ಅದಕ್ಕಾಗಿಯೇ ಹಗಲಿರುಳು ದುಡಿಯುತ್ತಾರೆ. ಕೆಲವೊಮ್ಮೆ ಇದೇ ಹಣ ಕನಸಿನಲ್ಲೂ ಕಾಣಿಸಿಕೊಳ್ಳುತ್ತೆ. ಹಾಗಾದ್ರೆ ಕನಸಲ್ಲಿ ಹಣ ಕಂಡ್ರೆ ಏನರ್ಥ? ಇದು ಶುಭವೋ ಅಶುಭವೋ? ಸ್ವಪ್ನ ಶಾಸ್ತ್ರ ಹೇಳೋದೇನು?
07:42 AM (IST) Feb 07
ತಿರುಪತಿ ಲಡ್ಡು ಬೆರಕೆ ಪ್ರಕರಣದ ಕುರಿತು ಎಸ್ಐಟಿ ನಡೆಸಿದ ತನಿಖೆಯಲ್ಲಿ ರಾಸಾಯನಿಕ ಮತ್ತು ಪ್ರಾಣಿಗಳ ಕೊಬ್ಬು ಬೆರೆಸಿರುವ ಬಗ್ಗೆ ಸಾಕ್ಷ್ಯ ಸಿಕ್ಕಿದೆ ಎಂದು ಕೇಂದ್ರ ಸಚಿವ ರಾಮ್ ಮೋಹನ್ ನಾಯ್ಡು ಹೇಳಿದ್ದಾರೆ. ಎನ್ಡಿಡಿಬಿ ವರದಿಯನ್ನು ಉಲ್ಲೇಖಿಸಿ ಅವರು ಈ ಮಾಹಿತಿ ನೀಡಿದ್ದಾರೆ. ವರದಿಯಲ್ಲೇನಿದೆ?
07:23 AM (IST) Feb 07
ಬಿಜೆಪಿ ಲಕ್ಷಾಂತರ ರೂಪಾಯಿ ಖರ್ಚು ಮಾಡಿ ಜಾಹೀರಾತಿನ ಮೂಲಕ ಸುಳ್ಳನ್ನು ಸತ್ಯ ಮಾಡಲು ಹೊರಟಿದೆ ಎಂದು ಪರಿಷತ್ ಸದಸ್ಯ ಬಿ.ಕೆ.ಹರಿಪ್ರಸಾದ್ ಆರೋಪಿಸಿದ್ದಾರೆ. ಮನಮೋಹನ್ ಸಿಂಗ್ ಕಾಲದ ಮನರೇಗಾ ಯೋಜನೆಯನ್ನು ಬುಡಮೇಲು ಮಾಡಲು ಯತ್ನಿಸುತ್ತಿದ್ದು, ಗಾಂಧೀಜಿಯ ಸಿದ್ಧಾಂತ ಕೊಲ್ಲಲು ಬಿಜೆಪಿ ಮುಂದಾಗಿದೆ ಎಂದು ಟೀಕೆ.