ನವದೆಹಲಿ: ಆರ್ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಪುತ್ರಿ ರೋಹಿಣಿ ಆಚಾರ್ಯ ಪುತ್ರ ಆದಿತ್ಯ ಆಚಾರ್ಯ ಅವರು ಸಿಂಗಾಪುರದಲ್ಲಿ ಎರಡು ವರ್ಷಗಳ ಕಡ್ಡಾಯ ಸೇನಾ ಸೇವೆಗೆ ಸೇರ್ಪಡೆಗೊಂಡಿದ್ದಾರೆ. ಈ ಬಗ್ಗೆ ರೋಹಿಣಿ ಜಾಲತಾಣದಲ್ಲಿ ಭಾವನಾತ್ಮಕ ಪೋಸ್ಟ್ ಹಂಚಿಕೊಂಡಿದ್ದು, ‘ ಇವತ್ತು ನನಗೆ ಹೆಮ್ಮೆಯಾಗಿದೆ, ಪದವಿಪೂರ್ವ ಶಿಕ್ಷಣ ಮುಗಿಸಿದ ನಂತರ ಹಿರಿಯ ಮಗ ಆದಿತ್ಯ ಕೇವಲ 18ನೇ ವಯಸ್ಸಿನಲ್ಲಿ 2 ವರ್ಷಗಳ ಮಿಲಿಟರಿ ತರಬೇತಿಗೆ ಹೋಗಿದ್ದಾನೆ’ ಎಂದಿದ್ದಾರೆ. ಸಿಂಗಾಪುರದ ಕಾನೂನಿನ ಪ್ರಕಾರ, ಅಲ್ಲಿನ ಪ್ರಜೆಗಳು 18 ವರ್ಷ ಪೂರೈಸಿದ ಬಳಿಕ 2 ವರ್ಷ ಕಡ್ಡಾಯ ಮಿಲಿಟರಿ ಸೇವೆ ಸಲ್ಲಿಸಬೇಕು.

10:52 PM (IST) Jan 07
ವೇದಾಂತ ಅಧ್ಯಕ್ಷ ಅನಿಲ್ ಅಗರ್ವಾಲ್ ಅವರು ತಮ್ಮ ಮಗ ಅಗ್ನಿವೇಶ್ (49) ಅಮೆರಿಕದಲ್ಲಿ ಹೃದಯಾಘಾತದಿಂದ ನಿಧನರಾದರು ಎಂದು ಘೋಷಿಸಿದ್ದಾರೆ. ಇದು ತಮ್ಮ ಜೀವನದ ಅತ್ಯಂತ ಕರಾಳ ದಿನ ಎಂದು ಕರೆದಿದ್ದಾರೆ.
09:40 PM (IST) Jan 07
Union Budget 2026: ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅಧ್ಯಕ್ಷತೆಯಲ್ಲಿ ನಡೆದ ಸಂಸದೀಯ ವ್ಯವಹಾರಗಳ ಸಂಪುಟ ಸಮಿತಿ (CCPA) ಸಭೆಯಲ್ಲಿ, ಜನವರಿ 7ರ ಬುಧವಾರದಂದು ಮುಂಬರುವ ಸಂಸತ್ತಿನ ಬಜೆಟ್ ಅಧಿವೇಶನದ ಪ್ರಮುಖ ದಿನಾಂಕಗಳಿಗೆ ಅನುಮೋದನೆ ನೀಡಲಾಗಿದೆ
09:17 PM (IST) Jan 07
Leela Palace Udaipur Fined ₹10 Lakh for Guest Privacy Violation 2025 ಜನವರಿ 26ರಿಂದ ವಾರ್ಷಿಕ ಬಡ್ಡಿಯ ಶೇ. 9 ರಷ್ಟು ಬಡ್ಡಿಯೊಂದಿಗೆ ರೂ. 55,000 ರೂಮ್ ಬಾಡಿಗೆಯನ್ನು ಮರುಪಾವತಿಸುವಂತೆ ಆಯೋಗವು ಉದಯಪುರ ಲೀಲಾ ಪ್ಯಾಲೇಸ್ಗೆ ಸೂಚನೆ ನೀಡಿದೆ.
08:21 PM (IST) Jan 07
Giant Bluefin Tuna Sold for Record ₹29 Crore at Tokyo Fish Auction ಜಪಾನ್ನ ಟೋಕಿಯೋದಲ್ಲಿ 243 ಕೆಜಿಯ ಬೃಹತ್ ಮೀನು ಬರೋಬ್ಬರಿ 29 ಕೋಟಿಗೆ ಮಾರಾಟವಾಗಿದೆ. ಇದೇ ಮೀನು ಶಾಪ್ಗಳಲ್ಲಿ ಪ್ರತಿ ಕೆಜಿಗೆ 11 ಲಕ್ಷ ರೂಪಾಯಿಯಂತೆ ಮಾರಾಟವಾಗಿದೆ.
07:43 PM (IST) Jan 07
ಹಾಸ್ಯನಟಿ ಭಾರ್ತಿ ಸಿಂಗ್ ಇತ್ತೀಚೆಗೆ ತಮ್ಮ ಎರಡನೇ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ಹೆಣ್ಣು ಮಗುವಿನ ನಿರೀಕ್ಷೆಯಲ್ಲಿದ್ದ ಅವರು, ಈ ಬಗ್ಗೆ ಪಪಾರಾಜಿಗಳೊಂದಿಗೆ ಹಾಸ್ಯಮಯವಾಗಿ ಮಾತನಾಡಿದ್ದು, ಈ ವಿಡಿಯೋ ವೈರಲ್ ಆಗಿದೆ.
07:17 PM (IST) Jan 07
ಬಿಹಾರದ ಜ್ಯುವೆಲ್ಲರ್ಸ್ ಅಸೋಸಿಯೇಷನ್, ರಾಜ್ಯದಲ್ಲಿ ಹೆಚ್ಚುತ್ತಿರುವ ದರೋಡೆ ಪ್ರಕರಣಗಳನ್ನು ತಡೆಯಲು ಭದ್ರತಾ ಕಾರಣಗಳಿಗಾಗಿ ಚಿನ್ನದ ಅಂಗಡಿಗಳಲ್ಲಿ ಹಿಜಾಬ್, ನಖಾಬ್ ಹಾಗೂ ಹೆಲ್ಮೆಟ್ ಧರಿಸಿ ಪ್ರವೇಶಿಸುವುದನ್ನು ನಿಷೇಧಿಸಿದೆ. ಈ ನಿರ್ಧಾರವು ರಾಜಕೀಯ ವಿವಾದಕ್ಕೆ ಕಾರಣವಾಗಿದೆ.
06:49 PM (IST) Jan 07
06:03 PM (IST) Jan 07
ಮಲಯಾಳಂ ತಾರೆಯರಿಬ್ಬರ ನಡುವಿನ ಕಿತ್ತಾಟವೊಂದು ಈಗ ಸೋಷಿಯಲ್ ಮೀಡಿಯಾದಲ್ಲಿ ಆಡಿಕೊಳ್ಳುವವರ ಸರಕಾಗಿದೆ. ನಟಿ ಸ್ನೇಹಾ ಶ್ರೀಕುಮಾರ್ ವಿರುದ್ಧ ಕಲಾಮಂಡಲಂ ಸತ್ಯಭಾಮ ತೀವ್ರ ವಾಗ್ದಾಳಿ ನಡೆಸಿದ್ದು ಇವರಿಬ್ಬರ ಕಿತ್ತಾಟಕ್ಕೆ ಈಗ ಜನ ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ.
05:57 PM (IST) Jan 07
ಬೆಂಗಳೂರು: ಭಾರತ ಕ್ರಿಕೆಟ್ ದಂತಕಥೆ ಸಚಿನ್ ತೆಂಡೂಲ್ಕರ್ ಪುತ್ರ ಅರ್ಜುನ್ ತೆಂಡೂಲ್ಕರ್ ದಾಂಪತ್ಯ ಜೀವನಕ್ಕೆ ಕಾಲಿಡಲು ರೆಡಿಯಾಗಿದ್ದಾರೆ. ಮದುವೆ ಡೇಟ್ ಫಿಕ್ಸ್ ಆಗಿದೆ ಎಂದು ವರದಿಯಾಗಿದೆ.
05:20 PM (IST) Jan 07
ಇಲ್ಲೊಂದು ಕಡೆ ವ್ಯಕ್ತಿಯೊರ್ವ ತನ್ನ ಬೋಳು ತಲೆ ಮುಚ್ಚಿಟ್ಟು ಮದುವೆಯಾಗಿದ್ದು, ಈತನ ರಿಯಲ್ ಫೇಸ್ ನೋಡಿದ ಪತ್ನಿ ಈಗ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಈಗ ಮಹಿಳೆಯ ಪತಿ ಹಾಗೂ ಆತನ ನಾಲ್ವರು ಕುಟುಂಬ ಸದಸ್ಯರ ವಿರುದ್ಧ ಕೇಸು ದಾಖಲಿಸಿದ್ದಾರೆ.
05:07 PM (IST) Jan 07
ದಕ್ಷಿಣ ಆಫ್ರಿಕಾ ಅಂಡರ್ 19 ವಿರುದ್ಧದ ಮೂರನೇ ಯೂತ್ ಏಕದಿನ ಪಂದ್ಯದಲ್ಲಿ, ಭಾರತದ ನಾಯಕ ವೈಭವ್ ಸೂರ್ಯವಂಶಿ ಮತ್ತು ಆರೋನ್ ಜಾರ್ಜ್ ಸ್ಫೋಟಕ ಶತಕ ಸಿಡಿಸಿದ್ದಾರೆ. ಈ ಜೋಡಿಯ 227 ರನ್ಗಳ ಜೊತೆಯಾಟದ ನೆರವಿನಿಂದ ಭಾರತ ತಂಡವು 7 ವಿಕೆಟ್ಗೆ 388 ರನ್ಗಳ ಬೃಹತ್ ಮೊತ್ತ ಕಲೆಹಾಕಿದೆ.
04:22 PM (IST) Jan 07
ಹರ್ಯಾಣದ ಜಿಂದ್ನಲ್ಲಿ ಮಹಿಳೆಯೊಬ್ಬರು 10 ಹೆಣ್ಣು ಮಕ್ಕಳ ನಂತರ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ತಾಯಿ-ಮಗು ಆರೋಗ್ಯವಾಗಿದ್ದು, ಕುಟುಂಬದಲ್ಲಿ ಸಂತಸ ಮನೆಮಾಡಿದೆ. ಈ ಘಟನೆ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, 11 ಮಕ್ಕಳನ್ನು ಹೆತ್ತ ತಾಯಿಯ ಆರೋಗ್ಯದ ಬಗ್ಗೆ ಕಳವಳ ವ್ಯಕ್ತವಾಗಿದೆ.
04:12 PM (IST) Jan 07
2026ರ ಐಸಿಸಿ ಟಿ20 ವಿಶ್ವಕಪ್ಗೆ 15 ಸದಸ್ಯರ ನ್ಯೂಜಿಲೆಂಡ್ ತಂಡವನ್ನು ಪ್ರಕಟಿಸಲಾಗಿದ್ದು, ಅನುಭವಿ ಆಲ್ರೌಂಡರ್ ಮಿಚೆಲ್ ಸ್ಯಾಂಟ್ನರ್ ತಂಡವನ್ನು ಮುನ್ನಡೆಸಲಿದ್ದಾರೆ. ರಚಿನ್ ರವೀಂದ್ರ, ಡೆವೊನ್ ಕಾನ್ವೇ ಅವರಂತಹ ತಾರಾ ಆಟಗಾರರು ತಂಡದಲ್ಲಿದ್ದಾರೆ.
04:08 PM (IST) Jan 07
02:53 PM (IST) Jan 07
02:10 PM (IST) Jan 07
01:12 PM (IST) Jan 07
ಮುಸ್ತಾಫಿಜುರ್ ವಿವಾದದ ಹಿನ್ನೆಲೆಯಲ್ಲಿ, ಬಾಂಗ್ಲಾದೇಶ ಕ್ರಿಕೆಟ್ ಮಂಡಳಿಯು ತನ್ನ ಟಿ20 ವಿಶ್ವಕಪ್ ಪಂದ್ಯಗಳನ್ನು ಭಾರತದಿಂದ ಶ್ರೀಲಂಕಾಗೆ ಸ್ಥಳಾಂತರಿಸಲು ಐಸಿಸಿಗೆ ಮನವಿ ಮಾಡಿತ್ತು. ಈ ಬೇಡಿಕೆಯನ್ನು ತಿರಸ್ಕರಿಸಿದ ಐಸಿಸಿ, ಭಾರತದಲ್ಲಿ ಆಡದಿದ್ದರೆ ಟೂರ್ನಿಯಿಂದಲೇ ಹೊರಹೋಗುವಂತೆ ಎಚ್ಚರಿಕೆ ನೀಡಿದೆ.
01:04 PM (IST) Jan 07
ಹೈದರಾಬಾದ್ನಲ್ಲಿ, ಜೀವಂತ ಕುರಿ ಮತ್ತು ಆಡುಗಳಿಂದ ಸಿರಿಂಜ್ ಮೂಲಕ ಅಕ್ರಮವಾಗಿ ರಕ್ತ ತೆಗೆದು ಮಾರಾಟ ಮಾಡುತ್ತಿದ್ದ ಜಾಲವನ್ನು ಪೊಲೀಸರು ಭೇದಿಸಿದ್ದಾರೆ. ಆರೋಪಿಗಳು ಈ ರಕ್ತದ ಪ್ಯಾಕೆಟ್ಗಳ ಮೇಲೆ 'ಮಾನವ ರಕ್ತ' ಎಂದು ಲೇಬಲ್ ಮಾಡಿದ್ದರಿಂದ ಹಲವು ಅನುಮಾನಗಳು ಹುಟ್ಟಿವೆ.
12:18 PM (IST) Jan 07
ಬೆಂಗಳೂರು: 19ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿ ಆಯೋಜನೆಗೆ ಭರದ ಸಿದ್ದತೆಗಳು ಶುರುವಾಗಿವೆ. ಹೀಗಿರುವಾಗಲೇ ಬೆಂಗಳೂರಿನ ಎಂ ಚಿನ್ನಸ್ವಾಮಿ ಸ್ಟೇಡಿಯಂನಿಂದ ಐಪಿಎಲ್ ಪಂದ್ಯಗಳನ್ನು ಪುಣೆಗೆ ಶಿಫ್ಟ್ ಮಾಡಲು ಮಹಾರಾಷ್ಟ್ರ ಕ್ರಿಕೆಟ್ ಸಂಸ್ಥೆಯು ಬಿಸಿಸಿಐ ಮೇಲೆ ಒತ್ತಡ ಹೇರುತ್ತಿದೆ.
12:04 PM (IST) Jan 07
ಅಬುಧಾಬಿಯಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಕೇರಳ ಮೂಲದ ಒಂದೇ ಕುಟುಂಬದ ನಾಲ್ವರು ಮಕ್ಕಳು ದಾರುಣವಾಗಿ ಸಾವನ್ನಪ್ಪಿದ್ದಾರೆ. ಈ ದುರಂತದಲ್ಲಿ ಮಕ್ಕಳ ಪೋಷಕರು ಮತ್ತು ಓರ್ವ ಸಹೋದರಿ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
11:56 AM (IST) Jan 07
ಅಮೆರಿಕಾ ತನ್ನ ಆಕ್ರಮಣಕಾರಿ ನೀತಿಯಿಂದ ಹಲವು ದೇಶಗಳನ್ನು ಮಣಿಸಿದರೂ, ಅಣ್ವಸ್ತ್ರ ಹೊಂದಿರುವ ರಷ್ಯಾದ ಮೇಲೆ ದಾಳಿ ಮಾಡಲು ಹಿಂಜರಿಯುತ್ತದೆ. ಇದಕ್ಕೆ ಪ್ರಮುಖ ಕಾರಣ, ರಷ್ಯಾದ ನಾಯಕತ್ವವೇ ಸಂಪೂರ್ಣ ನಾಶವಾದರೂ ಅಮೆರಿಕಾದ ಮೇಲೆ ಸ್ವಯಂಚಾಲಿತವಾಗಿ ಪ್ರತಿದಾಳಿ ನಡೆಸುವ 'ಪೆರಿಮೀಟರ್' ಎಂಬ ರಹಸ್ಯ ವ್ಯವಸ್ಥೆ.
11:39 AM (IST) Jan 07
ನವದೆಹಲಿ: 12ನೇ ಆವೃತ್ತಿಯ ಇಂಡಿಯನ್ ಸೂಪರ್ ಲೀಗ್ ಟೂರ್ನಿ ಆರಂಭಕ್ಕೆ ಕೇಂದ್ರ ಸರ್ಕಾರ ಗ್ರೀನ್ ಸಿಗ್ನಲ್ ಕೊಟ್ಟಿದೆ. ಈ ಕುರಿತಾದ ಮಹತ್ವದ ಅಪ್ಡೇಟ್ಸ್ ಇಲ್ಲಿದೆ ನೋಡಿ.
11:29 AM (IST) Jan 07
ಅರ್ಹರಾದ ಎಲ್ಲರನ್ನೂ ಮತದಾರರ ಪಟ್ಟಿಯಲ್ಲಿ ಸೇರಿಸಲು ಕೇರಳ ಸರ್ಕಾರ ತುರ್ತು ಕ್ರಮಗಳನ್ನು ಕೈಗೊಂಡಿದೆ. ದಾಖಲೆಗಳಿಲ್ಲದವರಿಗೆ ಉಚಿತವಾಗಿ ದಾಖಲೆಗಳನ್ನು ಒದಗಿಸಲು ಮತ್ತು ಆನ್ಲೈನ್ ಅರ್ಜಿ ಸಲ್ಲಿಕೆಗೆ ಸಹಾಯ ಮಾಡಲು ಸ್ಥಳೀಯ ಮಟ್ಟದಲ್ಲಿ ಸಹಾಯ ಕೇಂದ್ರಗಳನ್ನು ಸ್ಥಾಪಿಸಲಾಗುತ್ತಿದೆ.
10:08 AM (IST) Jan 07
ಕೋಲ್ಕತಾ: 2026ರ ಐಪಿಎಲ್ ಟೂರ್ನಿಯಲ್ಲಿ ಹೊರಬಿದ್ದ ಬಾಂಗ್ಲಾದೇಶದ ವೇಗಿ ಮುಸ್ತಾಫಿಜುರ್ ರಹಮಾನ್ಗೆ ಇದೀಗ ಮತ್ತೊಂದು ಶಾಕ್ ಎದುರಾಗಿದ್ದು, ಐಪಿಎಲ್ನಿಂದ ಒಂದೇ ಒಂದು ರುಪಾಯಿ ಸಿಗಲ್ಲ ಎಂದು ವರದಿಯಾಗಿದೆ. ಈ ಕುರಿತಾದ ರಿಪೋರ್ಟ್ ಇಲ್ಲಿದೆ ನೋಡಿ.
09:18 AM (IST) Jan 07
ದುಬೈ: 2026ರ ಐಸಿಸಿ ಟಿ20 ವಿಶ್ವಕಪ್ ಟೂರ್ನಿಯನ್ನಾಡಲು ನಾವು ಭಾರತಕ್ಕೆ ಬರಲ್ಲ ಎಂದಿದ್ದ ಬಾಂಗ್ಲಾದೇಶ ತಂಡಕ್ಕೆ ಐಸಿಸಿ ಮುಟ್ಟಿಸಿದೆ. ಈ ಕುರಿತಾದ ರಿಪೋರ್ಟ್ ಇಲ್ಲಿದೆ ನೋಡಿ