ನವದೆಹಲಿ: ನಟ ಅಮಿತಾಬ್ ಬಚ್ಚನ್, ರಾಮಜನ್ಮಭೂಮಿ ಅಯೋಧ್ಯೆಯಲ್ಲಿ ಬರೋಬ್ಬರಿ 35 ಕೋಟಿ ರು. ಹಣ ನೀಡಿ 2.67 ಎಕರೆ ಭೂಮಿಯನ್ನು ಖರೀದಿಸಿದ್ದಾರೆ. ಖಾಸಗಿ ರಿಯಾಲ್ಟಿ ಸಂಸ್ಥೆ ಹೌಸ್ ಆಫ್ ಅಭಿನಂದನ್ ಲೋಧಾ (ಎಚ್ಒಎಬಿಎಲ್) ಕಂಪನಿಯಿಂದ ಅಮಿತಾಬ್ ಬಚ್ಚನ್ ಜಾಗ ಖರೀದಿ ಮಾಡಿದ್ದಾರೆ. ಇದಕ್ಕೂ ಮುನ್ನ 2024ರ ಜನವರಿಯಲ್ಲಿ ಬಚ್ಚನ್ ಇದೇ ಕಂಪನಿಯ ದಿ ಸರಯೂ ಪ್ರಾಜೆಕ್ಟ್ನಲ್ಲಿ ಅಯೋಧ್ಯೆಯಲ್ಲಿ 14.5 ಕೋಟಿ ರು. ಮೌಲ್ಯದಲ್ಲಿ 10,000 ಚ.ಅಡಿ ಜಾಗ ಖರೀದಿ ಮಾಡಿದ್ದರು.

12:55 PM (IST) Mar 07
ಅಂತರರಾಷ್ಟ್ರೀಯ ಮಹಿಳಾ ದಿನದ ಅಂಗವಾಗಿ, ಝೀಲೋ ಎಲೆಕ್ಟ್ರಿಕ್ಸ್ ವಿಶೇಷವಾಗಿ ಮಹಿಳೆಯರಿಗಾಗಿ 'ನೈಟ್+ ರಾಣಿ' ಆವೃತ್ತಿಯ ಎಲೆಕ್ಟ್ರಿಕ್ ಸ್ಕೂಟರ್ ಅನ್ನು ಬಿಡುಗಡೆ ಮಾಡಿದೆ. ಮಹಿಳೆಯರಲ್ಲಿ ಆತ್ಮವಿಶ್ವಾಸವನ್ನು ಹೆಚ್ಚಿಸುವ ಸಂಕೇತವಾಗಿ 'ರಾಣಿ' ಎಂಬ ಹೆಸರನ್ನು ಹೊಂದಿದೆ. ಇಲ್ಲಿವೆ ವಿಶೇಷತೆ ಡಿಟೇಲ್ಸ್
12:55 PM (IST) Mar 07
ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿಪಕ್ಷಗಳು ಅವಿಶ್ವಾಸ ಗೊತ್ತುವಳಿ ಮಂಡಿಸಿದ್ದು, ಕಾಂಗ್ರೆಸ್ ತನ್ನ ಸಂಸದರಿಗೆ ವಿಪ್ ಜಾರಿಗೊಳಿಸಿದೆ. ಆರಂಭದಲ್ಲಿ ಹಿಂದೇಟು ಹಾಕಿದ್ದ ಟಿಎಂಸಿ ಕೂಡಾ ಕಾಂಗ್ರೆಸ್ಗೆ ಬೆಂಬಲ ಸೂಚಿಸಿದೆ.
12:55 PM (IST) Mar 07
ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ 22ನೇ ಕಂತಿನ ಹಣವು ಮಾರ್ಚ್ 13ರಂದು ಜಮೆಯಾಗುವ ನಿರೀಕ್ಷೆಯಿದೆ ಎಂದು ಮಾಧ್ಯಮ ವರದಿಗಳು ತಿಳಿಸಿವೆ. ಆದರೆ, ಇ-ಕೆವೈಸಿ, ಭೂ ಪರಿಶೀಲನೆ ಪೂರ್ಣಗೊಳಿಸದ ಹಾಗೂ ಕೆಲವು ರಾಜ್ಯಗಳಲ್ಲಿ 'ಫಾರ್ಮರ್ ಐಡಿ' ಹೊಂದಿರದ ರೈತರು ವಂಚಿತರಾಗುವ ಸಾಧ್ಯತೆಯಿದೆ.
12:53 PM (IST) Mar 07
12:37 PM (IST) Mar 07
ಟಿ20 ವಿಶ್ವಕಪ್ 2026ರ ಫೈನಲ್ನಲ್ಲಿ ಟೀಂ ಇಂಡಿಯಾ ನ್ಯೂಜಿಲೆಂಡ್ ತಂಡವನ್ನು ಎದುರಿಸಲಿದೆ. ಈ ಪಂದ್ಯ ಗೆದ್ದರೆ, ಭಾರತ ತಂಡವು ಮೂರು ಅಪರೂಪದ ವಿಶ್ವ ದಾಖಲೆಗಳನ್ನು ತನ್ನ ಖಾತೆಗೆ ಸೇರಿಸಿಕೊಳ್ಳಲಿದೆ. ಆ ದಾಖಲೆಗಳು ಯಾವುವು ಎಂಬುದನ್ನು ಇಲ್ಲಿ ನೋಡೋಣ.
12:21 PM (IST) Mar 07
ಬೆಂಗಳೂರಿನ ನಿಟ್ಟೆ ಮೀನಾಕ್ಷಿ ಕಾಲೇಜಿನಲ್ಲಿ ಇಂಜಿನಿಯರಿಂಗ್ ಓದಿದ್ದ ಬಾಲೇಂದ್ರ ಶಾ, ನೇಪಾಳದ ಸಾರ್ವತ್ರಿಕ ಚುನಾವಣೆಯಲ್ಲಿ ಭರ್ಜರಿ ಜಯ ಸಾಧಿಸಿದ್ದಾರೆ. ಅವರ ರಾಷ್ಟ್ರೀಯ ಸ್ವತಂತ್ರ ಪಕ್ಷ (ಆರ್ಎಸ್ಪಿ) ಪೂರ್ಣ ಬಹುಮತ ಪಡೆದಿದೆ.
11:40 AM (IST) Mar 07
2002ರ ಪತ್ರಕರ್ತ ರಾಮ್ ಚಂದರ್ ಛತ್ರಪತಿ ಹತ್ಯೆ ಪ್ರಕರಣದಲ್ಲಿ ಡೇರಾ ಮುಖ್ಯಸ್ಥ ಗುರ್ಮೀತ್ ರಾಮ್ ರಹೀಮ್ ಸಿಂಗ್ನನ್ನು ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್ ಖಲಾಸೆಗೊಳಿಸಿದೆ. ಈ ಮೂಲಕ ಸಿಬಿಐ ನ್ಯಾಯಾಲಯ ನೀಡಿದ್ದ ಜೀವಾವಧಿ ಶಿಕ್ಷೆಯನ್ನು ರದ್ದುಪಡಿಸಲಾಗಿದೆ.
11:37 AM (IST) Mar 07
ಭಾರತದ ಸ್ಮಾರ್ಟ್ಫೋನ್ ಮಾರುಕಟ್ಟೆಯಲ್ಲಿ ಬಜೆಟ್ ಗ್ರಾಹಕರನ್ನು ಗುರಿಯಾಗಿಸಿಕೊಂಡು ರಿಯಲ್ಮಿ ಕಂಪನಿ ತನ್ನ ಹೊಸ ಮಾಡೆಲ್ ಅನ್ನು ಪರಿಚಯಿಸಿದೆ. ಈ ಹೊಸ ಸ್ಮಾರ್ಟ್ಫೋನ್, ದೀರ್ಘಕಾಲ ಬಾಳಿಕೆ ಬರುವ ಬ್ಯಾಟರಿ ಮತ್ತು ಉತ್ತಮ ದೈನಂದಿನ ಬಳಕೆಯನ್ನು ಗಮನದಲ್ಲಿಟ್ಟುಕೊಂಡು ತಯಾರಿಸಲಾಗಿದೆ.
11:21 AM (IST) Mar 07
10:58 AM (IST) Mar 07
ಭಾನುವಾರ ನಡೆಯಲಿರುವ ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಟಿ20 ವಿಶ್ವಕಪ್ ಫೈನಲ್ ಪಂದ್ಯಕ್ಕೆ ಐಸಿಸಿ ಅಂಪೈರ್ಗಳ ಪಟ್ಟಿಯನ್ನು ಪ್ರಕಟಿಸಿದೆ. ಫೈನಲ್ ಪಂದ್ಯದ ಮುನ್ನ ರಿಕ್ಕಿ ಮಾರ್ಟಿನ್ ಅವರಿಂದ ಮನರಂಜನಾ ಕಾರ್ಯಕ್ರಮ ನಡೆಯಲಿದೆ.
10:43 AM (IST) Mar 07
ಇಸ್ರೇಲ್ ರಕ್ಷಣಾ ಪಡೆ (IDF) ಇರಾನ್ನ ಹೆಲಿಕಾಪ್ಟರ್ ಅನ್ನು ಧ್ವಂಸಗೊಳಿಸಿದೆ ಎಂದು ಹೇಳಲಾದ ವಿಡಿಯೋವನ್ನು ಬಿಡುಗಡೆ ಮಾಡಿದೆ. ಆದರೆ, ಇದು ನಿಜವಾದ ಹೆಲಿಕಾಪ್ಟರ್ ಅಲ್ಲ, ಬದಲಿಗೆ ನೆಲದ ಮೇಲೆ ಬಿಡಿಸಿದ ನಕಲಿ ಚಿತ್ರ ಎಂದು ನೆಟ್ಟಿಗರು ಟೀಕಿಸುತ್ತಿದ್ದಾರೆ.
08:45 AM (IST) Mar 07
08:33 AM (IST) Mar 07
08:23 AM (IST) Mar 07
ಭಾರತದೊಂದಿಗಿನ ವ್ಯಾಪಾರ ಒಪ್ಪಂದವು ಅಮೆರಿಕದ ಹಿತಾಸಕ್ತಿಗೆ ಅನುಗುಣವಾಗಿರಲಿದೆ ಎಂದು ಅಮೆರಿಕದ ವಿದೇಶಾಂಗ ಉಪ ಸಚಿವ ಕ್ರಿಸ್ಟೋಫರ್ ಲ್ಯಾಂಡೌ ಸ್ಪಷ್ಟಪಡಿಸಿದ್ದಾರೆ. ಭಾರತವು ಚೀನಾದಂತೆ ತಮ್ಮ ಪ್ರತಿಸ್ಪರ್ಧಿಯಾಗಲು ಬಿಡುವುದಿಲ್ಲ ಎಂದು ಅವರು ಹೇಳಿದ್ದಾರೆ.
08:12 AM (IST) Mar 07
ಇರಾನ್ ಮೇಲೆ ಮತ್ತೊಂದು ಬೃಹತ್ ದಾಳಿಗೆ ಅಮೆರಿಕ ಸಜ್ಜಾಗುತ್ತಿದ್ದು, ತನ್ನ ಶಕ್ತಿಶಾಲಿ ಸ್ಟೆಲ್ತ್ ಬಾಂಬರ್ಗಳನ್ನು ಬ್ರಿಟಿಷ್ ನೆಲೆಗಳಿಗೆ ರವಾನಿಸಿದೆ. ಅಮೆರಿಕದ ಪಡೆಗಳನ್ನು ಗುರಿಯಾಗಿಸಲು ಇರಾನ್ಗೆ ರಷ್ಯಾ ಗುಪ್ತಚರ ಮಾಹಿತಿ ನೀಡುತ್ತಿದೆ ಎಂದು ವಾಷಿಂಗ್ಟನ್ ಪೋಸ್ಟ್ ವರದಿ ಮಾಡಿದೆ.
07:54 AM (IST) Mar 07
ನಿತೀಶ್ ಕುಮಾರ್ ರಾಜ್ಯಸಭೆಗೆ ಹೋಗುವ ಸಾಧ್ಯತೆಯಿದ್ದು, ಬಿಹಾರದ ಮುಂದಿನ ಮುಖ್ಯಮಂತ್ರಿ ಸ್ಥಾನಕ್ಕೆ ಬಿಜೆಪಿ ನಾಲ್ವರ ಹೆಸರನ್ನು ಪರಿಗಣಿಸುತ್ತಿದೆ. ಮತ್ತೊಂದೆಡೆ, ಜಮ್ಮು ಕಾಶ್ಮೀರ ಕ್ರಿಕೆಟ್ ಮಂಡಳಿಯ ಹಗರಣದಲ್ಲಿ ಮಾಜಿ ಸಿಎಂ ಫಾರೂಕ್ ಅಬ್ದುಲ್ಲಾ ವಿರುದ್ಧ ಚಾರ್ಜ್ಶೀಟ್ ದಾಖಲಿಸಲು ಕೋರ್ಟ್ ಆದೇಶಿಸಿದೆ.
07:38 AM (IST) Mar 07
ಇರಾನ್ ಸಂಘರ್ಷದಿಂದಾಗಿ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾತೈಲ ಪೂರೈಕೆ ಅಸ್ತವ್ಯಸ್ತಗೊಂಡಿರುವ ಹಿನ್ನೆಲೆಯಲ್ಲಿ, ಅಮೆರಿಕವು ಭಾರತೀಯ ರಿಫೈನರಿಗಳಿಗೆ ರಷ್ಯಾದಿಂದ ತೈಲ ಖರೀದಿಸಲು 30 ದಿನಗಳ ತಾತ್ಕಾಲಿಕ ಅನುಮತಿ ನೀಡಿದೆ.