LIVE NOW
Published : May 07, 2026, 07:11 AM ISTUpdated : May 07, 2026, 08:54 AM IST

India Latest News Live: ತೆರೆ ಮೇಲಿನ ಕೃಷ್ಣನನ್ನು ನೋಡಿ ಕಾಲಿಗೆ ಬಿದ್ದ ಯುವತಿ, ಪೂಜೆ ಮಾಡಿ ರಾಖಿ ಕಟ್ಟಿ ನಮನ

ಸಾರಾಂಶ

ಲಖನೌ: ತಮಿಳುನಾಡು ಹಾಗೂ ಪಶ್ಚಿಮ ಬಂಗಾಳದಲ್ಲಿ ಇಂಡಿಯಾ ಕೂಟದ ಪಕ್ಷಗಳಿಗೆ ಭಾರೀ ಪರಾಭವ ಉಂಟಾದ ಬೆನ್ನಲ್ಲೇ, ಚುನಾವಣಾ ರಣನೀತಿ ಸಂಸ್ಥೆ ಐ-ಪ್ಯಾಕ್‌ ಜೊತೆ ಅಖಿಲೇಶ್‌ ಯಾದವ್‌ ನೇತೃತ್ವದ ಸಮಾಜವಾದಿ ಪಕ್ಷ ಸಂಬಂಧ ಕಡಿದುಕೊಂಡಿದೆ.

ಚುನಾವಣಾ ತಂತ್ರಗಾರ ಪ್ರಶಾಂತ್ ಕಿಶೋರ್‌ ಸ್ಥಾಪಿಸಿದ್ದ ಹಾಗೂ ಈಗ ವಿನೇಶ್‌ ಚಂದೇಲ್‌ ಉಸ್ತುವಾರಿಯಲ್ಲಿದ್ದ ಐ-ಪ್ಯಾಕ್‌, ಎಸ್‌ಪಿ ಜತೆ ಹಲವು ವಿಧಾನಸಭಾ ಕ್ಷೇತ್ರಗಳಲ್ಲಿ ಚುನಾವಣಾ ಸಲಹೆ ನೀಡುವ ಒಪ್ಪಂದ ಮಾಡಿಕೊಂಡಿತ್ತು. ಇದಕ್ಕೂ ಮುನ್ನ ಬಂಗಾಳದಲ್ಲಿ ಮಮತಾ ಬ್ಯಾನರ್ಜಿ ಪರ ರಣನೀತಿ ಹೆಣೆದಿತ್ತು. ಆದರೆ ಅದರ ರಣತಂತ್ರ ವಿಫಲವಾಗಿದೆ. ಆದ ಕಾರಣ ಯಾದವ್‌ ಈ ನಿರ್ಧಾರ ಘೋಷಿಸಿದ್ದಾರೆ. ಮುಂದಿನ ವರ್ಷ ನಡೆಯಲಿರುವ ಉತ್ತರ ಪ್ರದೇಶ ಚುನಾವಣೆಯಲ್ಲಿ ‘ಶೋಟೈಂ’ ಎಂಬ ಸಂಸ್ಥೆ ಜತೆ ಕೆಲಸ ಮಾಡುವುದಾಗಿ ತಿಳಿಸಿದ್ದಾರೆ.

ಚುನಾವಣೆಗೂ ಮುನ್ನ ಬಂಗಾಳದಲ್ಲಿ ನಡೆದ ಕಲ್ಲಿದ್ದಲು ಹಗರಣಕ್ಕೆ ಸಂಬಂಧಿಸಿದ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಐಪ್ಯಾಕ್‌ ಸ್ಥಾಪಕರಲ್ಲಿ ಒಬ್ಬರಾದ ವಿನೇಶ್ ಚಂದೇಲ್ ಬಂಧನವಾಗಿತ್ತು.

08:54 AM (IST) May 07

ತೆರೆ ಮೇಲಿನ ಕೃಷ್ಣನನ್ನು ನೋಡಿ ಕಾಲಿಗೆ ಬಿದ್ದ ಯುವತಿ, ಪೂಜೆ ಮಾಡಿ ರಾಖಿ ಕಟ್ಟಿ ನಮನ

'ಮಹಾಭಾರತ' ಧಾರಾವಾಹಿಯಲ್ಲಿ ಶ್ರೀಕೃಷ್ಣನ ಪಾತ್ರ ನಿರ್ವಹಿಸಿದ್ದ ನಟ ಸೌರಭ್ ರಾಜ್ ಜೈನ್ ಅವರನ್ನು ಕಂಡು ಯುವತಿಯೊಬ್ಬಳು ಭಾವುಕಳಾಗಿದ್ದಾಳೆ. ನಟನ ಕಾಲಿಗೆ ಬಿದ್ದು, ಪೂಜೆ ಸಲ್ಲಿಸಿ ರಾಖಿ ಕಟ್ಟುವ ಮೂಲಕ ತನ್ನ ಭಕ್ತಿಯನ್ನು ವ್ಯಕ್ತಪಡಿಸಿದ್ದು, ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
Read Full Story

08:11 AM (IST) May 07

West Bengal - ಬಿಜೆಪಿ ಬಾವುಟ ಹಾರಿಸುವಾಗ ಕಾರ್ಯಕರ್ತನ ಮೇಲೆ ಗುಂಡಿನ ದಾಳಿ, ಸ್ಥಿತಿ ಗಂಭೀರ!

ಪಶ್ಚಿಮ ಬಂಗಾಳದ ಬಸಿರ್‌ಹತ್‌ನಲ್ಲಿ ಪಕ್ಷದ ಬಾವುಟ ಹಾರಿಸುವ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ಬಿಜೆಪಿ ಕಾರ್ಯಕರ್ತ ರೋಹಿತ್ ರಾಯ್ ಮೇಲೆ ಗುಂಡಿನ ದಾಳಿ ನಡೆದಿದೆ. ಈ ದಾಳಿ ಹಿಂದೆ ಟಿಎಂಸಿ ಕೈವಾಡವಿದೆ ಎಂದು ಬಿಜೆಪಿ ಆರೋಪಿಸಿದ್ದು, ಇತ್ತೀಚೆಗೆ ಸುವೇಂದು ಅಧಿಕಾರಿ ಆಪ್ತನ ಹತ್ಯೆಯಾದ ಬೆನ್ನಲ್ಲೇ ಈ ಘಟನೆ ನಡೆದಿರುವುದು ರಾಜ್ಯದಲ್ಲಿನ ಚುನಾವಣೋತ್ತರ ಹಿಂಸಾಚಾರದ ತೀವ್ರತೆಯನ್ನು ತೋರಿಸುತ್ತದೆ.
Read Full Story

More Trending News