LIVE NOW
Published : Jun 08, 2026, 05:09 AM ISTUpdated : Jun 08, 2026, 09:52 AM IST

India Latest News Live: ರನ್‌ವೇಯಲ್ಲಿ ಇಳಿಯುತ್ತಿದ್ದಂತೆ ಪತನವಾದ ವಿಮಾನ; ಭಯಾನಕ ದೃಶ್ಯ ನೋಡಿ ಬೆಚ್ಚಿದ ವಿಶ್ವ

ಸಾರಾಂಶ

ಚೆನ್ನೈ: ತಮಿಳುನಾಡು ಸಿಎಂ ವಿಜಯ್‌ ಗೆದ್ದಿದ್ದ ಎರಡು ಕ್ಷೇತ್ರಗಳ ಪೈಕಿ ಅವರು ರಾಜೀನಾಮೆ ನೀಡಿದ್ದ ತಿರುಚ್ಚಿ ಪೂರ್ವದಿಂದ ಜನಪ್ರಿಯ ನಟ ರಾಘವ ಲಾರೆನ್ಸ್‌ ಕಣಕ್ಕಿಳಿಯಬಹುದು ಎನ್ನುವ ಗುಸುಗುಸು ರಾಜಕೀಯ ವಲಯದಲ್ಲಿ ಜೋರಾಗಿದೆ. ಹೀಗಾಗಿ ಈ ಬಗ್ಗೆ ನಟ ಎಕ್ಸ್‌ನಲ್ಲಿ ಪ್ರತಿಕ್ರಿಯಿಸಿದ್ದು, ಜೂ.11ಕ್ಕೆ ಮಹತ್ವದ ನಿರ್ಧಾರ ಪ್ರಕಟಿಸಿವುದಾಗಿ ಹೇಳಿಕೊಂಡಿದ್ದಾರೆ.

‘ಮಾಧ್ಯಮ ಮಿತ್ರರು ನನ್ನನ್ನು ಸಂಪರ್ಕಿಸಿ ಈ ಬಗ್ಗೆ ಸ್ಪಷ್ಟನೆ ನೀಡಿ ಎಂದು ಮನವಿ ಮಾಡಿಕೊಂಡಿದ್ದಾರೆ. ಊಹಾಪೋಹಗಳನ್ನು ಪರಿಹರಿಸಬೇಕೆಂದು ನಾನು ನಿರ್ಧರಿಸಿದ್ದೇನೆ. ಜೂ.10ರ ತನಕ ಬೆಂಜ್‌ ಸಿನಿಮಾದ ಚಿತ್ರೀಕರಣವಿದೆ. ಅದಾದ ಬಳಿಕ ಜೂ.11ರ 9.30ಕ್ಕೆ ಸುದ್ದಿಗೋಷ್ಠಿ ನಡೆಸಿ ಮಹತ್ವದ ನಿರ್ಧಾರ ಪ್ರಕಟಿಸುತ್ತೇನೆ’ ಎಂದಿದ್ದಾರೆ.

ಚುನಾವಣೆಯಲ್ಲಿ ತಿರುಚ್ಚಿ ಪೂರ್ವ ಮತ್ತು ಪೆರಂಬೂರು ಕ್ಷೇತ್ರದಿಂದ ಸ್ಪರ್ಧಿಸಿದ್ದ ಟಿವಿಕೆ ಮುಖ್ಯಸ್ಥ ವಿಜಯ್‌ ಎರಡರಲ್ಲಿಯೂ ಗೆದ್ದಿದ್ದರು. ಆ ಬಳಿಕ ನಿಯಮಗಳ ಪ್ರಕಾರ ತಿರುಚ್ಚಿಗೆ ರಾಜೀನಾಮೆ ನೀಡಿ ಪೆರಂಬೂರು ಉಳಿಸಿಕೊಂಡಿದ್ದರು.

ಕೆಲ ದಿನಗಳ ಹಿಂದೆ ನಟಿ ತ್ರಿಶಾ ಕೃಷ್ಣನ್‌ ಈ ಕ್ಷೇತ್ರದಿಂದ ಸ್ಪರ್ಧಿಸಬಹುದು ಅಂತಲೂ ವದಂತಿ ಹಬ್ಬಿತ್ತು.

09:52 AM (IST) Jun 08

ರನ್‌ವೇಯಲ್ಲಿ ಇಳಿಯುತ್ತಿದ್ದಂತೆ ಪತನವಾದ ವಿಮಾನ; ಭಯಾನಕ ದೃಶ್ಯ ನೋಡಿ ಬೆಚ್ಚಿದ ವಿಶ್ವ

ಡೊಮಿನಿಕನ್ ಗಣರಾಜ್ಯದ ಲಾ ರೊಮಾನಾ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಖಾಸಗಿ ಜೆಟ್ ತುರ್ತು ಲ್ಯಾಂಡಿಂಗ್ ವೇಳೆ ಪತನಗೊಂಡಿದೆ. ಟೆಕ್ಸಾಸ್‌ಗೆ ಹೊರಟಿದ್ದ ಈ ವಿಮಾನವು ರನ್‌ವೇಯಲ್ಲಿ ಇಳಿಯುವ ಮುನ್ನವೇ ಸ್ಪೋಟಗೊಂಡು, ಇಬ್ಬರು ಪೈಲಟ್‌ಗಳು ಮೃತಪಟ್ಟಿದ್ದಾರೆ.
Read Full Story

09:26 AM (IST) Jun 08

Breaking - ಫಿಲಿಪೈನ್ಸ್‌ನಲ್ಲಿ 7.7 ತೀವ್ರತೆಯ ಪ್ರಬಲ ಭೂಕಂಪ - ಸುನಾಮಿ ಆತಂಕ, ಎಚ್ಚರಿಕೆ ಸಂದೇಶ

ಫಿಲಿಪೈನ್ಸ್‌ನ ಮಿಂಡಾನಾವೊದಲ್ಲಿ 7.7 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದ್ದು, ಒಂದು ಗಂಟೆಯೊಳಗೆ ಮೂರು ಬಾರಿ ಭೂಮಿ ಕಂಪಿಸಿದೆ. ಈ ಭೂಕಂಪದ ಪರಿಣಾಮವಾಗಿ, ಫಿಲಿಪೈನ್ಸ್, ಇಂಡೋನೇಷ್ಯಾ ಮತ್ತು ಜಪಾನ್‌ನ ಕರಾವಳಿ ಪ್ರದೇಶಗಳಿಗೆ ಸುನಾಮಿ ಎಚ್ಚರಿಕೆ ನೀಡಲಾಗಿದೆ.
Read Full Story

09:21 AM (IST) Jun 08

ದೀದಿ ಅವಧಿಯಲ್ಲಿ ಸುಲಿಗೆ ಮಾಡಿದ್ದ TMC ನಾಯಕನ ತಲೆ ಬೋಳಿಸಿ, ಶೂ ಹಾರ ಹಾಕಿ ಮೆರವಣಿಗೆ ಮಾಡಿದ ಜನ! ವಿಡಿಯೋ ವೈರಲ್

ಪಶ್ಚಿಮ ಬಂಗಾಳದಲ್ಲಿ, ಭ್ರಷ್ಟಾಚಾರದ ಆರೋಪದ ಮೇಲೆ ಟಿಎಂಸಿ ನಾಯಕರು ಸಾರ್ವಜನಿಕರ ಆಕ್ರೋಶ ಮತ್ತು ಪೊಲೀಸ್ ಕ್ರಮವನ್ನು ಎದುರಿಸುತ್ತಿದ್ದಾರೆ. ಒಬ್ಬ ನಾಯಕನಿಗೆ ತಲೆ ಬೋಳಿಸಿ ಮೆರವಣಿಗೆ ಮಾಡಿದರೆ, ಮತ್ತೊಬ್ಬ ನಾಯಕ ಸೀರೆ ರಾಶಿಯಡಿ ಅಡಗಿ ಬಂಧನಕ್ಕೊಳಗಾಗಿದ್ದಾನೆ. ಇನ್ನೊಬ್ಬ ಕೌನ್ಸಿಲರ್ ಅಕ್ರಮವಾಗಿ ವಸೂಲಿ ಮಾಡಿದ ಹಣವನ್ನು ಹಿಂದಿರುಗಿಸಿದ್ದಾರೆ.
Read Full Story

09:01 AM (IST) Jun 08

ಅಮೆರಿಕಾದಲ್ಲಿ ಪಿಜ್ಜಾ ಡೆಲಿವರಿಗೆ ತೆರಳಿದ್ದ ಭಾರತದ ಯುವಕ ಅನ್ಶುಲ್ ಮೇಲೆ ಗುಂಡಿನ ದಾಳಿ

ಅಮೆರಿಕದ ಫಿಲಡೆಲ್ಫಿಯಾದಲ್ಲಿ ತೆಲಂಗಾಣ ಮೂಲದ 28 ವರ್ಷದ ಅನ್ಶುಲ್ ಕುಂಚ ಎಂಬ ಯುವಕನನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ. ಪಾರ್ಟ್-ಟೈಮ್ ಪಿಜ್ಜಾ ಡೆಲಿವರಿ ಮಾಡುತ್ತಿದ್ದ ಅವರನ್ನು, ನಕಲಿ ಆರ್ಡರ್ ನೀಡಿ ನಿರ್ಜನ ಪ್ರದೇಶಕ್ಕೆ ಕರೆಸಿ ಕೊಲೆ ಮಾಡಲಾಗಿದೆ ಎಂದು ಕುಟುಂಬಸ್ಥರು ಆರೋಪಿಸಿದ್ದು, ಇದೊಂದು ವ್ಯವಸ್ಥಿತ ಕೊಲೆ ಎಂಬ ಅನುಮಾನ ವ್ಯಕ್ತವಾಗಿದೆ.
Read Full Story

08:13 AM (IST) Jun 08

French Open 2026 - ಚೊಚ್ಚಲ ಗ್ರ್ಯಾನ್‌ಸ್ಲಾಂ ಗೆದ್ದ ಜರ್ಮನಿ ಟೆನಿಸಿಗ ಅಲೆಕ್ಸಾಂಡರ್ ಜ್ವೆರೆವ್

ಜರ್ಮನಿಯ ಅಲೆಕ್ಸಾಂಡರ್‌ ಜ್ವೆರೆವ್‌ ಫ್ರೆಂಚ್‌ ಓಪನ್ ಫೈನಲ್‌ನಲ್ಲಿ ಇಟಲಿಯ ಫ್ಲಾವಿಯೊ ಕೊಬೊಲಿ ಅವರನ್ನು ಮಣಿಸಿ ತಮ್ಮ ಚೊಚ್ಚಲ ಗ್ರ್ಯಾನ್‌ಸ್ಲಾಂ ಪ್ರಶಸ್ತಿಯನ್ನು ಗೆದ್ದಿದ್ದಾರೆ. ನಾಲ್ಕು ಗಂಟೆಗಳಿಗೂ ಹೆಚ್ಚು ಕಾಲ ನಡೆದ ರೋಚಕ ಐದು ಸೆಟ್‌ಗಳ ಪಂದ್ಯದಲ್ಲಿ ಜಯಗಳಿಸಿದ ಜ್ವೆರೆವ್, ನಾಲ್ಕನೇ ಫೈನಲ್ ಪ್ರಯತ್ನದಲ್ಲಿ ಈ ಐತಿಹಾಸಿಕ ಸಾಧನೆ ಮಾಡಿದ್ದಾರೆ.
Read Full Story

07:50 AM (IST) Jun 08

ಮಾನವ್ ಸ್ಪಿನ್ ಜಾದೂವಿಗೆ ಆಫ್ಘಾನಿಸ್ತಾನ ಕಂಗಾಲು! ಭಾರತದ ಹಿಡಿತದಲ್ಲಿ ಏಕೈಕ ಟೆಸ್ಟ್

ಅಫ್ಘಾನಿಸ್ತಾನ ವಿರುದ್ಧದ ಏಕೈಕ ಟೆಸ್ಟ್ ಪಂದ್ಯದಲ್ಲಿ, ಶುಭ್‌ಮನ್‌ ಗಿಲ್‌ ಅವರ ಶತಕದ ನೆರವಿನಿಂದ ಭಾರತ ಮೊದಲ ಇನ್ನಿಂಗ್ಸ್‌ನಲ್ಲಿ 564 ರನ್‌ ಗಳಿಸಿ ಡಿಕ್ಲೇರ್ ಮಾಡಿಕೊಂಡಿದೆ. ಬಳಿಕ, ಚೊಚ್ಚಲ ಪಂದ್ಯವಾಡುತ್ತಿರುವ ಯುವ ಸ್ಪಿನ್ನರ್‌ ಮಾನವ್‌ ಸುತಾರ್‌ ಅವರ ಮಾರಕ ದಾಳಿಗೆ ಸಿಲುಕಿದ ಅಫ್ಘಾನಿಸ್ತಾನ, ದಿನದಂತ್ಯಕ್ಕೆ 5 ವಿಕೆಟ್‌ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದೆ.
Read Full Story

07:24 AM (IST) Jun 08

Ayodhya ರಾಮಮಂದಿರಕ್ಕೆ ದೇಣಿಗೆ ಬಂದ ಕೋಟ್ಯಂತರ ಹಣ ಕಾಣೆ - ಅಖಿಲೇಶ್‌ ಯಾದವ್ ಗಂಭೀರ ಆರೋಪ

ಅಯೋಧ್ಯೆ ರಾಮ ಮಂದಿರದ ದೇಣಿಗೆಯಲ್ಲಿ ಕೋಟ್ಯಂತರ ರೂಪಾಯಿ ಕಾಣೆಯಾಗಿದೆ ಎಂದು ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್ ಯಾದವ್ ಆರೋಪಿಸಿದ್ದಾರೆ. ಮತ್ತೊಂದೆಡೆ, ಸ್ವಚ್ಛತೆಯ ಕಾರಣ ನೀಡಿ ಕಾಶಿ ನಗರದೊಳಗಿನ ಎಲ್ಲಾ ಮಾಂಸದಂಗಡಿಗಳನ್ನು ಹೊರಗೆ ಸ್ಥಳಾಂತರಿಸಲು ವಾರಾಣಸಿ ಪಾಲಿಕೆ ನಿರ್ಧರಿಸಿದೆ.
Read Full Story

07:09 AM (IST) Jun 08

ಕೇರಳದ ರಾಜಕೀಯವೇ ವಿಚಿತ್ರ - ಶಾಸಕ ರಾಜೀವ್‌ ಚಂದ್ರಶೇಖರ್‌ ಬಣ್ಣನೆ

ಕೇರಳ ಬಿಜೆಪಿ ಅಧ್ಯಕ್ಷ ರಾಜೀವ್ ಚಂದ್ರಶೇಖರ್, ಶಾಸಕರಾಗಿ ತಮ್ಮ ಮೊದಲ ವಿಧಾನಸಭೆ ಅಧಿವೇಶನದ ಅನುಭವವನ್ನು ಹಂಚಿಕೊಂಡಿದ್ದಾರೆ. ಕೇರಳದ ರಾಜಕೀಯ ಸಂಸ್ಕೃತಿಯು ಜನಸಾಮಾನ್ಯರ ನೈಜ ಸಮಸ್ಯೆಗಳಿಂದ ಸಂಪರ್ಕ ಕಡಿದುಕೊಂಡಿದ್ದು, ಅನಗತ್ಯ ವಿವಾದಗಳಲ್ಲೇ ಮುಳುಗಿದೆ ಎಂದು ಅವರು ಟೀಕಿಸಿದ್ದಾರೆ. 18 ವರ್ಷಗಳ ಸಂಸದೀಯ ಅನುಭವದ ನಂತರವೂ, ಇಲ್ಲಿನ ರಾಜಕೀಯ ತನಗೆ ವಿಚಿತ್ರವೆನಿಸಿದೆ ಎಂದು ಅವರು ಹೇಳಿದ್ದಾರೆ.
Read Full Story

07:00 AM (IST) Jun 08

3000 ಕೆಜಿ ಅವಲಕ್ಕಿ ತಯಾರಿಸಿ ವಿಶ್ವ ದಾಖಲೆ ಯತ್ನ; 400 KG ಪುಠಾಣಿ, 500 KG ಈರುಳ್ಳಿ, 300 KG ಎಣ್ಣೆ

ವಿಶ್ವ ಅವಲಕ್ಕಿ ದಿನದ ಅಂಗವಾಗಿ, ಪ್ರಸಿದ್ಧ ಪಾಕತಜ್ಞ ವಿಷ್ಣು ಮನೋಹರ್‌ ಅವರು 3,000 ಕೆಜಿ 'ತರ್ರಿ ಪೋಹಾ' ತಯಾರಿಸುವ ಮೂಲಕ ವಿಶ್ವ ದಾಖಲೆ ನಿರ್ಮಿಸಲು ಯತ್ನಿಸಿದ್ದಾರೆ. ನಾಗ್ಪುರದ ಅವಲಕ್ಕಿ ಸಂಸ್ಕೃತಿಯನ್ನು ವಿಶ್ವಕ್ಕೆ ಪರಿಚಯಿಸುವುದು ಈ ಬೃಹತ್ ಸಾಹಸದ ಮುಖ್ಯ ಉದ್ದೇಶವಾಗಿತ್ತು.
Read Full Story

06:49 AM (IST) Jun 08

ಇರಾನ್‌ ನಾಯಕರು ಬಲಿಷ್ಠರು, ಅದಕ್ಕೇ ಒಪ್ಪಂದಕ್ಕೆ ಬರ್ತಿಲ್ಲ - ಟ್ರಂಪ್ ಮೆಚ್ಚುಗೆಯ ರಹಸ್ಯವೇನು?

ಇರಾನ್‌ನ ನಾಯಕರು ಬಲಿಷ್ಠರು ಮತ್ತು ಹೆಮ್ಮೆಯುಳ್ಳವರು, ಆದರೆ ಅಂತಿಮವಾಗಿ ಅಮೆರಿಕದೊಂದಿಗೆ ಒಪ್ಪಂದಕ್ಕೆ ಬರಲೇಬೇಕಾಗುತ್ತದೆ ಎಂದು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಈ ಸತ್ಯವನ್ನು ಒಪ್ಪಿಕೊಳ್ಳಲು ಅವರಿಗೆ ಸಮಯ ಬೇಕಾಗುತ್ತದೆ ಎಂದೂ ಅವರು ಸ್ಪಷ್ಟಪಡಿಸಿದ್ದಾರೆ. 

Read Full Story

06:21 AM (IST) Jun 08

ಜೋಜಿಲಾ ಸುರಂಗ ಕಾಮಗಾರಿ ಅಂತಿಮ ಘಟ್ಟಕ್ಕೆ; ಭಾರತದ ಮೂಲಸೌಕರ್ಯ ಇತಿಹಾಸದಲ್ಲಿ ಹೊಸ ಅಧ್ಯಾಯ

ಜಮ್ಮು-ಕಾಶ್ಮೀರ ಮತ್ತು ಲಡಾಖ್ ನಡುವೆ ವರ್ಷಪೂರ್ತಿ ಸಂಪರ್ಕ ಕಲ್ಪಿಸುವ ಮಹತ್ವಾಕಾಂಕ್ಷಿ ಜೋಜಿಲಾ ರಸ್ತೆ ಸುರಂಗ ಯೋಜನೆ ಅಂತಿಮ ಹಂತದಲ್ಲಿದೆ. ಸಮುದ್ರ ಮಟ್ಟದಿಂದ 11,578 ಅಡಿ ಎತ್ತರದಲ್ಲಿ ನಿರ್ಮಿಸಲಾದ ಈ ಸುರಂಗವು, ವಿಶ್ವದ ಅತಿ ಉದ್ದದ ಏಕ-ಟ್ಯೂಬ್ ದ್ವಿಮುಖ ರಸ್ತೆ ಸುರಂಗವಾಗಿದೆ.

Read Full Story

More Trending News