ಚೆನ್ನೈ: ತಮಿಳುನಾಡು ಸಿಎಂ ವಿಜಯ್ ಗೆದ್ದಿದ್ದ ಎರಡು ಕ್ಷೇತ್ರಗಳ ಪೈಕಿ ಅವರು ರಾಜೀನಾಮೆ ನೀಡಿದ್ದ ತಿರುಚ್ಚಿ ಪೂರ್ವದಿಂದ ಜನಪ್ರಿಯ ನಟ ರಾಘವ ಲಾರೆನ್ಸ್ ಕಣಕ್ಕಿಳಿಯಬಹುದು ಎನ್ನುವ ಗುಸುಗುಸು ರಾಜಕೀಯ ವಲಯದಲ್ಲಿ ಜೋರಾಗಿದೆ. ಹೀಗಾಗಿ ಈ ಬಗ್ಗೆ ನಟ ಎಕ್ಸ್ನಲ್ಲಿ ಪ್ರತಿಕ್ರಿಯಿಸಿದ್ದು, ಜೂ.11ಕ್ಕೆ ಮಹತ್ವದ ನಿರ್ಧಾರ ಪ್ರಕಟಿಸಿವುದಾಗಿ ಹೇಳಿಕೊಂಡಿದ್ದಾರೆ.
‘ಮಾಧ್ಯಮ ಮಿತ್ರರು ನನ್ನನ್ನು ಸಂಪರ್ಕಿಸಿ ಈ ಬಗ್ಗೆ ಸ್ಪಷ್ಟನೆ ನೀಡಿ ಎಂದು ಮನವಿ ಮಾಡಿಕೊಂಡಿದ್ದಾರೆ. ಊಹಾಪೋಹಗಳನ್ನು ಪರಿಹರಿಸಬೇಕೆಂದು ನಾನು ನಿರ್ಧರಿಸಿದ್ದೇನೆ. ಜೂ.10ರ ತನಕ ಬೆಂಜ್ ಸಿನಿಮಾದ ಚಿತ್ರೀಕರಣವಿದೆ. ಅದಾದ ಬಳಿಕ ಜೂ.11ರ 9.30ಕ್ಕೆ ಸುದ್ದಿಗೋಷ್ಠಿ ನಡೆಸಿ ಮಹತ್ವದ ನಿರ್ಧಾರ ಪ್ರಕಟಿಸುತ್ತೇನೆ’ ಎಂದಿದ್ದಾರೆ.
ಚುನಾವಣೆಯಲ್ಲಿ ತಿರುಚ್ಚಿ ಪೂರ್ವ ಮತ್ತು ಪೆರಂಬೂರು ಕ್ಷೇತ್ರದಿಂದ ಸ್ಪರ್ಧಿಸಿದ್ದ ಟಿವಿಕೆ ಮುಖ್ಯಸ್ಥ ವಿಜಯ್ ಎರಡರಲ್ಲಿಯೂ ಗೆದ್ದಿದ್ದರು. ಆ ಬಳಿಕ ನಿಯಮಗಳ ಪ್ರಕಾರ ತಿರುಚ್ಚಿಗೆ ರಾಜೀನಾಮೆ ನೀಡಿ ಪೆರಂಬೂರು ಉಳಿಸಿಕೊಂಡಿದ್ದರು.
ಕೆಲ ದಿನಗಳ ಹಿಂದೆ ನಟಿ ತ್ರಿಶಾ ಕೃಷ್ಣನ್ ಈ ಕ್ಷೇತ್ರದಿಂದ ಸ್ಪರ್ಧಿಸಬಹುದು ಅಂತಲೂ ವದಂತಿ ಹಬ್ಬಿತ್ತು.
09:52 AM (IST) Jun 08
09:26 AM (IST) Jun 08
09:21 AM (IST) Jun 08
09:01 AM (IST) Jun 08
08:13 AM (IST) Jun 08
07:50 AM (IST) Jun 08
07:24 AM (IST) Jun 08
07:09 AM (IST) Jun 08
07:00 AM (IST) Jun 08
06:49 AM (IST) Jun 08
ಇರಾನ್ನ ನಾಯಕರು ಬಲಿಷ್ಠರು ಮತ್ತು ಹೆಮ್ಮೆಯುಳ್ಳವರು, ಆದರೆ ಅಂತಿಮವಾಗಿ ಅಮೆರಿಕದೊಂದಿಗೆ ಒಪ್ಪಂದಕ್ಕೆ ಬರಲೇಬೇಕಾಗುತ್ತದೆ ಎಂದು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಈ ಸತ್ಯವನ್ನು ಒಪ್ಪಿಕೊಳ್ಳಲು ಅವರಿಗೆ ಸಮಯ ಬೇಕಾಗುತ್ತದೆ ಎಂದೂ ಅವರು ಸ್ಪಷ್ಟಪಡಿಸಿದ್ದಾರೆ.
06:21 AM (IST) Jun 08
ಜಮ್ಮು-ಕಾಶ್ಮೀರ ಮತ್ತು ಲಡಾಖ್ ನಡುವೆ ವರ್ಷಪೂರ್ತಿ ಸಂಪರ್ಕ ಕಲ್ಪಿಸುವ ಮಹತ್ವಾಕಾಂಕ್ಷಿ ಜೋಜಿಲಾ ರಸ್ತೆ ಸುರಂಗ ಯೋಜನೆ ಅಂತಿಮ ಹಂತದಲ್ಲಿದೆ. ಸಮುದ್ರ ಮಟ್ಟದಿಂದ 11,578 ಅಡಿ ಎತ್ತರದಲ್ಲಿ ನಿರ್ಮಿಸಲಾದ ಈ ಸುರಂಗವು, ವಿಶ್ವದ ಅತಿ ಉದ್ದದ ಏಕ-ಟ್ಯೂಬ್ ದ್ವಿಮುಖ ರಸ್ತೆ ಸುರಂಗವಾಗಿದೆ.