ಕೋಲ್ಕತಾ: ‘ಚುನಾವಣೆ ವೇಳೆ ಪಕ್ಷವು ಕೊಟ್ಟಿದ್ದ ಎಲ್ಲಾ ಭರವಸೆಗಳನ್ನು ಈಡೇರಿಸುತ್ತೇವೆ’ ಎಂದು ಪ.ಬಂಗಾಳದ ನಿಯೋಜಿತ ಸಿಎಂ ಸುವೇಂದು ಅಧಿಕಾರಿ ಭರವಸೆ ನೀಡಿದ್ದಾರೆ.
ಸಿಎಂ ಹುದ್ದೆಗೆ ತಮ್ಮ ಆಯ್ಕೆಯ ಬಳಿಕ ಶಾಸಕರನ್ನು ಉದ್ದೇಶಿಸಿ ಮಾತನಾಡಿದ ಅವರು, ‘ಪ್ರಧಾನಿ ನರೇಂದ್ರ ಮೋದಿ ಅವರು ಹೇಳಿದಂತೆ ರಾಜ್ಯದಲ್ಲೀಗ ಭಯವು ಹೋಗಿ ಭರವಸೆ ಬಂದಿದೆ. ಬಂಗಾಳದ ಜನ ನಮಗೆ ಐತಿಹಾಸಿಕ ಜನಾದೇಶ ನೀಡಿದ್ದಾರೆ’ ಎಂದು ಹರ್ಷ ವ್ಯಕ್ತಪಡಿಸಿದರು.
‘ನಮ್ಮ ಪ್ರಣಾಳಿಕೆಯಲ್ಲಿದ್ದ ಎಲ್ಲಾ ಭರವಸೆಗಳನ್ನು ಪೂರ್ಣಗೊಳಿಸುತ್ತೇವೆ. ಬಂಗಾಳ ಜನರ ಆಕಾಂಕ್ಷೆಗಳನ್ನು ಈಡೇರಿಸಲು ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರ ಒಟ್ಟಿಗೆ ಕೆಲಸ ಮಾಡುವುದು ಅತ್ಯಗತ್ಯ’ ಎನ್ನುವ ಮೂಲಕ ಡಬಲ್ ಎಂಜಿನ್ ಸರ್ಕಾರ ಉತ್ತಮ ಆಡಳಿತ ಕೊಡಲಿದೆ ಎಂಬ ವಾಗ್ದಾನವನ್ನೂ ಅಧಿಕಾರಿ ಮಾಡಿದರು.
09:55 PM (IST) May 09
ಬಂಗಾಳದಲ್ಲಿ ಬಿಜೆಪಿಗೆ ಅಧಿಕಾರ ಬಾಂಗ್ಲಾದೇಶ, ಪಾಕಿಸ್ತಾನದ ಕೆಲ ಉಗ್ರ ಸಂಘಟನೆಗಳನ್ನು ಕೆರಳಿಸಿದೆ. ಈ ಗೆಲುವಿನ ಬೆನ್ನಲ್ಲೇ ದೆಹಲಿ ಬಿಜೆಪಿ ಪ್ರಧಾನ ಕಚೇರಿ ಮೇಲೆ ಉಗ್ರರ ದಾಳಿ ಸಾಧ್ಯತೆಯನ್ನು ಗುಪ್ತಚರ ಇಲಾಖೆ ನೀಡಿದೆ.
09:46 PM (IST) May 09
ಏರ್ಪೋರ್ಟ್ನಲ್ಲಿ ನಟ ಶಾಹಿದ್ ಕಪೂರ್ ಜೊತೆ ವಯಸ್ಸಾದ ವ್ಯಕ್ತಿಯೊಬ್ಬರು ನಡೆದುಕೊಂಡ ರೀತಿ ಈಗ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಆ ವ್ಯಕ್ತಿಯ ಕಾಳಜಿ ಮತ್ತು ಅದಕ್ಕೆ ಶಾಹಿದ್ ತೋರಿದ ವಿನಯವನ್ನು ಜನ ಮೆಚ್ಚಿಕೊಂಡಿದ್ದಾರೆ.
09:22 PM (IST) May 09
ಗ್ಲೋಬಲ್ ಪಾಪ್ ಐಕಾನ್ ರಿಹಾನಾ ತಮ್ಮ ಕಾಲಿನ ಮೇಲೆ ಒಂದು ಹೊಸ ಟ್ಯಾಟೂ ಹಾಕಿಸಿಕೊಂಡಿದ್ದಾರೆ. ಇದರ ವಿಶೇಷತೆ ಏನೆಂದರೆ, ಈ ಟ್ಯಾಟೂವನ್ನು ಡಿಸೈನ್ ಮಾಡಿದ್ದು ರಾಪರ್ A$AP Rocky ಜೊತೆಗಿನ ಅವರ ಮೂವರು ಮಕ್ಕಳು!
09:05 PM (IST) May 09
08:49 PM (IST) May 09
ಬಾಲಿವುಡ್ ನಟಿ ದಿಶಾ ಪಟಾನಿ ನಟನೆಯ 'ದಿ ಪೋರ್ಟಲ್ ಆಫ್ ಫೋರ್ಸ್' ಚಿತ್ರದ ಟ್ರೇಲರ್ ರಿಲೀಸ್ ಆಗಿದ್ದು, ಇದರಲ್ಲಿ ಅವರು ಎರಡು ಬಣಗಳ ನಡುವೆ ಸಿಲುಕುವ 'ಜೆಸ್ಸಿಕಾ' ಎಂಬ ವಿಶೇಷ ಶಕ್ತಿಯುಳ್ಳ ಪಾತ್ರ ಮಾಡಿದ್ದಾರೆ.
08:49 PM (IST) May 09
ಸಿನಿಮಾ ಪರದೆಯ ಮೇಲೆ ನೂರಾರು ವಿಲನ್ಗಳನ್ನು ಏಕಾಂಗಿಯಾಗಿ ಚಚ್ಚಿ ಹಾಕುವ, ಬಾಕ್ಸ್ ಆಫೀಸ್ನಲ್ಲಿ ಕೋಟಿ ಕೋಟಿ ಹಣದ ಲೇಕ್ಕಾಚಾರ ಮಾಡುವ 'ದಳಪತಿ' ವಿಜಯ್ ಅವರ ಹಳೆಯ ರಿಪೋರ್ಟ್ ಕಾರ್ಡ್ ಈಗ ಇಡೀ ಸೌತ್ ಇಂಡಿಯಾದಲ್ಲಿ ಸಖತ್ ಸೌಂಡ್ ಮಾಡುತ್ತಿದೆ.
08:47 PM (IST) May 09
ಆಟಾಗಾರರು ಅಪರಿಚಿತರು, ಸೋಶಿಯಲ್ ಮೀಡಿಯಾದಲ್ಲಿ ಪರಿಚಯಸ್ಥರು ಐಪಿಎಲ್ ಸ್ಟಾರ್ ಆಟಗಾರರನ್ನು ಹೊಟೆಲ್ ರೂಂಗಳಲ್ಲಿ ಭೇಟಿಯಾಗುತ್ತಿದ್ದಾರೆ. ಭ್ರಷ್ಟಾಚಾರ ವಿರೋಧಿ ದಳ ಅಧಿಕಾರಿಗಳ ಈ ಕುರಿತ ತಂಡದ ಮ್ಯಾನೇಜರ್ ಕರೆಯಿಸಿ ವಿಚಾರಣೆ ನಡೆಸಿದ್ದಾರೆ. ಕೆಲ ಸ್ಫೋಟಕ ಮಾಹಿತಿಗಳು ಬಯಲಾಗಿದೆ.
08:27 PM (IST) May 09
ನಟಿ ಜ್ಯೋತಿ ಕೃಷ್ಣ ತಮ್ಮ ತೂಕ ಹೆಚ್ಚಳದ ಬಗ್ಗೆ ಮಾತನಾಡಿದ್ದಾರೆ. ಪ್ರಯಾಣ ಮತ್ತು ಮಾನಸಿಕ ಒತ್ತಡದಿಂದಾಗಿ 81 ಕೆ.ಜಿ ತೂಕ ಹೆಚ್ಚಾಗಿತ್ತು, ಇದರಿಂದ ಆತ್ಮವಿಶ್ವಾಸ ಕಡಿಮೆಯಾಗಿತ್ತು ಎಂದು ಜ್ಯೋತಿ ಕೃಷ್ಣ ಹೇಳಿದ್ದಾರೆ.
08:21 PM (IST) May 09
ವಿಜಯ್ ನಿವಾಸದ ಮುಂದೆ ಶನಿವಾರ ಬೆಳ್ಳಂಬೆಳಗ್ಗೆಯೇ ಅಭಿಮಾನಿಗಳ ಸಾಗರವೇ ಹರಿದುಬಂದಿತ್ತು. ಕಿಕ್ಕಿರಿದು ಸೇರಿದ್ದ ಫ್ಯಾನ್ಸ್ ಕಂಡು ವಿಜಯ್, ಪ್ರೀತಿಯ ಪತ್ನಿ ರಶ್ಮಿಕಾ ಮಂದಣ್ಣ ಅವರ ಕೈ ಹಿಡಿದು ಬಾಲ್ಕನಿಗೆ ಆಗಮಿಸಿದರು. ದಂಪತಿಗಳಿಬ್ಬರೂ ಮುಗುಳ್ನಗುತ್ತಾ ಕೈ ಬೀಸುತ್ತಿದ್ದ ದೃಶ್ಯ ವೈರಲ್ ಆಗಿದೆ.
08:15 PM (IST) May 09
ಎಲ್ಲಾ ಕಸರತ್ತು ಬಳಿಕ ನಟ ವಿಜಯ್ ಟಿವಿಕೆ ಪಕ್ಷ 120 ಶಾಸಕರ ಬೆಂಬಲದೊಂದಿಗೆ ಸರ್ಕಾರ ರಚನೆ ಮಾಡುತ್ತಿದೆ. ನಾಳೆ 3.45ಕ್ಕೆ ನಟ ವಿಜಯ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.
07:28 PM (IST) May 09
ದಕ್ಷಿಣ ಭಾರತದ ಚಿತ್ರರಂಗವನ್ನು ಆಳಿದ ನಟಿ ಸಿಮ್ರಾನ್, ಪ್ರೇಕ್ಷಕರ ಹಾಟ್ ಫೇವರಿಟ್. ಬಾಲಿವುಡ್ ಮೂಲಕವೇ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟರೂ, ಸಿಮ್ರಾನ್ ಹೆಚ್ಚು ಸಕ್ರಿಯರಾಗಿದ್ದು ತಮಿಳು, ತೆಲುಗು, ಕನ್ನಡ ಮತ್ತು ಮಲಯಾಳಂ ಚಿತ್ರಗಳಲ್ಲಿ.
07:15 PM (IST) May 09
ಸೀಟು ಸಿಗದೆ ಅಜ್ಜನ ಪಕ್ಕ ರೈಲು ಕೋಚ್ನ ನೆಲದಲ್ಲಿ ಮಲಗಿದ್ದ 6 ವರ್ಷದ ಬಾಲಕಿ ಮೇಲೆ ಲೈ0ಗಿಕ ದೌರ್ಜನ್ಯ ಎಸಗಿದ ಘಟನೆ ನಡೆದಿದೆ. ಘಟನೆ ಸಂಬಂಧ 40ರ ಹರೆಯದ ಆರೋಪಿಯನ್ನು ಬಂಧಿಸಲಾಗಿದೆ.
07:03 PM (IST) May 09
ಚಿತ್ರರಂಗದಲ್ಲಿ ಫ್ಯಾನ್ಸ್ ಕಾತುರದಿಂದ ಕಾಯುತ್ತಿರುವ ಸಿನಿಮಾ ಅಂದ್ರೆ ಅದು ಮೋಹನ್ಲಾಲ್-ಜೀತು ಜೋಸೆಫ್ ಜೋಡಿಯ 'ದೃಶ್ಯಂ 3'. ಈ ಸಿನಿಮಾ ಮೇ 21 ರಂದು ಮೋಹನ್ಲಾಲ್ ಅವರ ಹುಟ್ಟುಹಬ್ಬದ ದಿನದಂದೇ ವಿಶ್ವಾದ್ಯಂತ ರಿಲೀಸ್ ಆಗುತ್ತಿದೆ.
06:45 PM (IST) May 09
ರಣವೀರ್ ಸಿಂಗ್ ನಟನೆಯ ಧುರಂಧರ್-1 ಚಿತ್ರ ಹಿಟ್ ಆಗಿದೆ. ಧುರಂಧರ್-2 ಚಿತ್ರವೂ ಸೂಪರ್ ಡ್ಯೂಪರ್ ಹಿಟ್ ಆಗಿದೆ. ಇದೀಗ ಮುಂದಿನ ಭಾಗದ ಬಗ್ಗೆ ಸಹ ನಿರ್ಮಾಪಕಿ ಜ್ಯೋತಿ ದೇಶಪಾಂಡೆ ಸುಳಿವು ಕೊಟ್ಟಿದ್ದಾರೆ.
06:41 PM (IST) May 09
06:35 PM (IST) May 09
ತಮಿಳುನಾಡು ರಾಜ್ಯಪಾಲರು ತಮ್ಮ ಕೇರಳ ಪ್ರವಾಸ ರದ್ದು ಮಾಡಿ ನಟ ವಿಜಯ್ ಜೊಸೆಫ್ ಭೇಟಿಗೆ ಸಮಯ ನೀಡಿದ್ದಾರೆ. ನಾಳೆ ನಟ ವಿಜಯ್ ಜೊಸೆಫ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸುವ ಸಾಧ್ಯತೆ ಇದೆ.
06:12 PM (IST) May 09
ಸರ್ಕಾರ ರಚನೆ ಕಸರತ್ತು, ಪ್ರಮಾಣವಚನ ಸಂಭ್ರಮಗಳ ನಡುವೆ ರಾಜಕೀಯ ಬಿರುಗಾಳಿ ಎದ್ದಿದೆ. ಬರೋಬ್ಬರಿ 100 ಕೋಟಿ ರೂಪಾಯಿ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಆಪ್ ಸಚಿವ ಅರೆಸ್ಟ್ ಆಗಿದ್ದಾರೆ.
06:04 PM (IST) May 09
05:44 PM (IST) May 09
ವಿಸಿಕೆ ಬೆಂಬಲ ಘೋಷಿಸಿದ ಬೆನ್ನಲ್ಲೇ ನಟ ವಿಜಯ್ ಅವರ ಟಿವಿಕೆ ಸರ್ಕಾರ ರಚನೆ ಹಾದಿ ಸುಗಮಗೊಂಡಿದೆ. ಆದರೆ ತಮಿಳುನಾಡು ರಾಜಕೀಯದಲ್ಲಿ ಮತ್ತೊಂದು ಟ್ವಿಸ್ಟ್ ಎದುರಾಗಿದೆ. ಇದೀಗ ಎಐಎಡಿಎಂಕೆಯ 30 ಬಂಡಾಯ ನಾಯಕರು ಇಪಿಎಸ್ ಮನೆಗೆ ದೌಡಾಯಿಸಿದ್ದಾರೆ.
05:41 PM (IST) May 09
ತಮಿಳುನಾಡಿನಲ್ಲಿ ಸರ್ಕಾರ ರಚಿಸಲು ಮುಂದಾಗಿರುವ ನಟ ವಿಜಯ್ ಅವರ ಟಿವಿಕೆ ಪಕ್ಷಕ್ಕೆ ಕಾಂಗ್ರೆಸ್, ವಿಸಿಕೆ ಹಾಗೂ ಐಯುಎಂಎಲ್ ಬೆಂಬಲ ನೀಡಿವೆ, ಇದರಿಂದ ಶಾಸಕರ ಬಲ 120ಕ್ಕೆ ಏರಿದೆ. ಸರ್ಕಾರ ರಚನೆಗೆ ಹಕ್ಕು ಮಂಡಿಸಲು ಸಂಜೆ 6 ಗಂಟೆಗೆ ರಾಜ್ಯಪಾಲರನ್ನು ಭೇಟಿಯಾಗಲಿದ್ದಾರೆ.
05:17 PM (IST) May 09
ಮಮತಾ ಬ್ಯಾನರ್ಜಿ ಸರ್ಕಾರದಲ್ಲಿ ತಮ್ಮ ಪಕ್ಷದ ಬೆಂಬಲದ, ನಾಯಕರ ಪತ್ರಿಕೆ, ತಮ್ಮ ಪರವಾಗಿರುವ ಪತ್ರಿಕೆ, ಮಾಧ್ಯಮಗಳಿಗೆ ಜಾಹೀರಾತು ನೀಡುವ ಪದ್ಧತಿ ಇತ್ತು. ಇದೀಗ ಬಿಜೆಪಿ ಸರ್ಕಾರ ಬಂದ ಬೆನ್ನಲ್ಲೇ ಸಿಪಿಎಂ ಪಕ್ಷದ ಪತ್ರಿಕೆಗೆ ಜಾಹೀರಾತು ಸಿಕ್ಕಿದೆ.
05:13 PM (IST) May 09
ದಳಪತಿ ವಿಜಯ್ ತಮಿಳುನಾಡು ಚುನಾವಣೆಯಲ್ಲಿ ವಿಜಯ ಸಾಧಿಸಿ ಸಿಎಂ ಆಗುವ ಹೊಸ್ತಿಲಿನಲ್ಲಿರೋವಾಗ, ತ್ರಿಷಾ ಹೆಸರು ಕೂಡ ಸಿಕ್ಕಾಪಟ್ಟೆ ಸದ್ದು ಮಾಡ್ತಾ ಇದೆ. ದಳಪತಿ ಗೆಳತಿ ತ್ರಿಷಾ ಕೂಡ ಪಾಲಿಟಿಕ್ಸ್ಗೆ ಬರ್ತಾರೆ ಅಂತ ಸುದ್ದಿಯಾಗ್ತಾ ಇದೆ.
05:12 PM (IST) May 09
ನಟ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (TVK) ಪಕ್ಷವು ವಿಸಿಕೆ ಬೆಂಬಲದೊಂದಿಗೆ ಸರ್ಕಾರ ರಚಿಸಲು ಬೇಕಾದ 118 ಸ್ಥಾನಗಳ ಮ್ಯಾಜಿಕ್ ನಂಬರ್ ತಲುಪಿದೆ. ಈ ಮೂಲಕ ತಮಿಳುನಾಡಿನಲ್ಲಿ 62 ವರ್ಷಗಳ ದ್ರಾವಿಡ ಪಕ್ಷಗಳ ಆಡಳಿತಕ್ಕೆ ತೆರೆಬಿದ್ದಿದ್ದು, ಮೊದಲ ಬಾರಿಗೆ ಮೈತ್ರಿ ಸರ್ಕಾರ ಅಸ್ತಿತ್ವಕ್ಕೆ ಬರಲಿದೆ.
04:55 PM (IST) May 09
ನ್ಯಾಯ ವಿಳಂಬದಿಂದ ಬೇಸತ್ತ ನಾಗ್ಪುರದ 200 ಮಹಿಳೆಯರು, ಸರಣಿ ಅ*ತ್ಯಾಚಾರ ಮತ್ತು ಕೊಲೆಗಳನ್ನು ಮಾಡಿ ಪದೇ ಪದೇ ಜಾಮೀನು ಪಡೆಯುತ್ತಿದ್ದ ರೇಪಿಸ್ಟ್ ಅಕ್ಕು ಯಾದವ್ನನ್ನು ಕೋರ್ಟ್ ಆವರಣದಲ್ಲೇ ಬರ್ಬರವಾಗಿ ಹತ್ಯೆ ಮಾಡಿದರು. ದಶಕಗಳ ಕಾಲ ನೋವುಂಡಿದ್ದ ಮಹಿಳೆಯರು 15 ನಿಮಿಷಗಳಲ್ಲಿ ತಮ್ಮ ಆಕ್ರೋಶವನ್ನು ತೀರಿಸಿಕೊಂಡರು, ನಂತರ ಕೋರ್ಟ್ ಇವರನ್ನು ಖುಲಾಸೆಗೊಳಿಸಿತು.
04:53 PM (IST) May 09
ತಮಿಳುನಾಡಿನಲ್ಲಿ ಡಿಎಂಕೆ, ಎಐಡಿಎಂಕೆಯನ್ನ ಹಿಂದಿಕ್ಕಿ ವಿಜಯ್ ನಾಯಕತ್ವದ ಟಿವಿಕೆ ಪಾರ್ಟಿ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. ದಳಪತಿ ವಿಜಯ್ ಗುರುವಾರವೇ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸ್ತಾರೆ ಅಂತ ಹೇಳಲಾಗಿತ್ತು.
04:43 PM (IST) May 09
04:26 PM (IST) May 09
ಡಿಎಂಕೆ ಹಾಗೂ ಎಡಿಎಂಕೆ ಪಕ್ಷಗಳು ಹೀನಾಯ ಸೋಲಿನ ಪರಿಣಾಮ ಅಷ್ಟಿಷ್ಟಲ್ಲ. ಇದು ತಮಿಳು ಚಿತ್ರರಂಗದ ಮೇಲೆ ಅದರಲ್ಲೂ ಪ್ರಭಾವಿ ಹೀರೋಗಳಿಗೆ ನಡುಕ ಹುಟ್ಟಿಸಿದೆ. ದಶಕಗಳ ಬಳಿಕ ಇವರಿಬ್ಬರು ಒಂದಾಗಿ ತೆರೆ ಹಂಚಿಕೊಳ್ಳೋ ಕನಸು ಕಂಡಿದ್ರು.
04:13 PM (IST) May 09
ದಳಪತಿ ವಿಜಯ್ರ ಟಿವಿಕೆ ಪಾರ್ಟಿ ತಮಿಳುನಾಡಿನಲ್ಲಿ ಜಯಭೇರಿ ಬಾರಿಸ್ತಾ ಇದ್ದ ಹಾಗೇನೇ , ಎಲ್ಲರ ಚಿತ್ತ ದಳಪತಿ ಗೆಳತಿ ತ್ರಿಷಾ ಕಡೆಗೆ ತಿರುಗಿಕೊಂಡಿದೆ. ಸೋಷಿಯಲ್ ಮಿಡಿಯಾದಲ್ಲಿ ತ್ರಿಷಾದೇ ಸದ್ದು, ಸುದ್ದಿ.
03:51 PM (IST) May 09
ಪ್ರಸಕ್ತ ಐಪಿಎಲ್ ಸೀಸನ್ನಲ್ಲಿ ಸಾಂಪ್ರದಾಯಿಕ ಟಿವಿ ವೀಕ್ಷಕರ ಸಂಖ್ಯೆ ಗಣನೀಯವಾಗಿ ಕುಸಿದಿದ್ದು, ಡಿಜಿಟಲ್ ವೇದಿಕೆಗಳಲ್ಲಿ ದಾಖಲೆ ಮಟ್ಟದಲ್ಲಿ ಏರಿಕೆ ಕಂಡಿದೆ. ವೀಕ್ಷಕರು ಟಿವಿಯಿಂದ ಸ್ಮಾರ್ಟ್ಫೋನ್ಗಳಿಗೆ ಸ್ಥಳಾಂತರಗೊಂಡಿದ್ದಾರೆ.
03:36 PM (IST) May 09
ತಮಿಳುನಾಡು ರಾಜಕೀಯಲ್ಲಿ ಮೇಲಿಂದ ಮೇಲೆ ತಿರುವು ಪಡೆದುಕೊಳ್ಳುತ್ತಿದೆ. ಇದೀಗ ಎಡಪ್ಪಾಡಿ ಕೆ ಪಳನಿಸ್ವಾಮಿ ಮಾಡಿದ ಪೋಸ್ಟ್ ನಟ ವಿಜಯ್ ಸಿಎಂ ಆಗೋದು ಖಚಿತಪಡಿಸುತ್ತಿದೆಯಾ? ಇಪಿಎಸ್ ಪೋಸ್ಟ್ನಲ್ಲಿ ಏನಿದೆ?
03:25 PM (IST) May 09
03:01 PM (IST) May 09
ಅಭಿಷೇಕ್ ಬಚ್ಚನ್ ಅವರ ಮದುವೆಯ ಆಭರಣ ಮತ್ತು ಇತ್ತೀಚೆಗೆ ಈಶಾ ಅಂಬಾನಿ ಮೆಟ್ ಗಾಲಾದಲ್ಲಿ ಧರಿಸಿದ್ದ ಆಭರಣದ ನಡುವಿನ ಅಚ್ಚರಿಯ ಹೋಲಿಕೆ ಸಾಮಾಜಿಕ ಜಾಲತಾಣದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಬಚ್ಚನ್ ಕುಟುಂಬವು ತಮ್ಮ ಪಾರಂಪರಿಕ ಆಭರಣವನ್ನು ಅಂಬಾನಿಗಳಿಗೆ ಮಾರಾಟ ಮಾಡಿದೆಯೇ ಎಂದು ಪ್ರಶ್ನಿಸಿದ್ದಾರೆ.
02:27 PM (IST) May 09
01:33 PM (IST) May 09
01:26 PM (IST) May 09
70 ವರ್ಷದ ವ್ಯಕ್ತಿ ತಮಗಿಂತ 50 ವರ್ಷ ಚಿಕ್ಕ ಯುವತಿಯನ್ನು ನಾಲ್ಕನೇ ಮದುವೆಯಾಗಿದ್ದಾರೆ. ಈ ಮದುವೆಯಿಂದಾಗಿ ಅವರ ಎರಡನೇ ಪತ್ನಿ ಆಸ್ತಿ ಕಬಳಿಕೆ ಮತ್ತು ಜೀವಬೆದರಿಕೆ ಆರೋಪದ ಮೇಲೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಈ ಘಟನೆಯು ಸಾಮಾಜಿಕ ಜಾಲತಾಣದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದೆ.
01:01 PM (IST) May 09
12:19 PM (IST) May 09
ಅಮೆರಿಕದ ರಕ್ಷಣಾ ಇಲಾಖೆ 'ಪೆಂಟಗನ್' ದಶಕಗಳಷ್ಟು ಹಳೆಯದಾದ 'ಹಾರುವ ತಟ್ಟೆ' (UFO) ಕುರಿತ ರಹಸ್ಯ ದಾಖಲೆಗಳನ್ನು ಬಿಡುಗಡೆ ಮಾಡಿದೆ. ಗಗನಯಾತ್ರಿಗಳು ಕಂಡ ವಿಚಿತ್ರ ಬೆಳಕುಗಳು, ಹ್ಯೂಮನಾಯ್ಡ್ಗಳ ಉಲ್ಲೇಖಗಳಿದ್ದರೂ, ಇವು ಪರಕೀಯ ಜೀವಿಗಳೇ ಎಂಬುದಕ್ಕೆ ಯಾವುದೇ ಪುರಾವೆಗಳಿಲ್ಲ ಎಂದು ಪೆಂಟಗನ್ ಸ್ಪಷ್ಟಪಡಿಸಿದೆ.
11:44 AM (IST) May 09
ದಶಕಗಳ ನಂತರ ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದಿದೆ. ಕೋಲ್ಕತ್ತಾದ ಬ್ರಿಗೇಡ್ ಪೆರೇಡ್ ಮೈದಾನದಲ್ಲಿ ನಡೆದ ಭವ್ಯ ಸಮಾರಂಭದಲ್ಲಿ ಸುವೇಂದು ಅಧಿಕಾರಿ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.
10:05 AM (IST) May 09
ವಿಜ್ಞಾನಿಗಳು ಶನಿಗ್ರಹದ ಉಪಗ್ರಹವಾದ ಟೈಟಾನ್ ಅನ್ನು ಮಾನವನ ಮುಂದಿನ ಸಂಭಾವ್ಯ ನೆಲೆಯಾಗಿ ಪರಿಗಣಿಸುತ್ತಿದ್ದಾರೆ. ನಾಸಾದ 'ಡ್ರಾಗನ್ಫ್ಲೈ' ಯೋಜನೆ ಮತ್ತು ಮುಂಬರುವ ಶೃಂಗಸಭೆಯು ಈ ನಿಟ್ಟಿನಲ್ಲಿ ಪ್ರಮುಖ ಹೆಜ್ಜೆಗಳಾಗಿದ್ದು, ಅಲ್ಲಿನ ವಿಪರೀತ ಶೀತದಂತಹ ಸವಾಲುಗಳ ನಡುವೆಯೂ ಟೈಟಾನ್ ಅನ್ನು ಆಕರ್ಷಕವಾಗಿಸಿದೆ.
09:30 AM (IST) May 09
ಆಪರೇಷನ್ ಸಿಂದೂರಕ್ಕೆ ಒಂದು ವರ್ಷ ತುಂಬಿದ ಹಿನ್ನೆಲೆಯಲ್ಲಿ ಜೈಪುರದಲ್ಲಿ ನಡೆದ ಮಾಧ್ಯಮ ಸಂವಾದದಲ್ಲಿ ಭಾರತೀಯ ಸೇನಾಧಿಕಾರಿಗಳು ಇಂಗ್ಲಿಷ್ನಲ್ಲಿ ಮಾತನಾಡಿದ್ದಕ್ಕೆ ಪಾಕಿಸ್ತಾನದ ಸೇನಾ ವಕ್ತಾರ ಅಹ್ಮದ್ ಷರೀಫ್ ಚೌಧರಿ ಪ್ರಶ್ನಿಸಿದ್ದಾರೆ.