ಕೋಲ್ಕತಾ: ಪ.ಬಂಗಾಳದಲ್ಲಿ ಚುನಾವಣಾಪ್ರಚಾರದಲ್ಲಿ ತೊಡಗಿರುವ ಪ್ರಧಾನಿ ನರೇಂದ್ರ ಮೋದಿ 7ನೇ ವೇತನ ಆಯೋಗ ಜಾರಿ ಸೇರಿ 6 ಗ್ಯಾರಂಟಿಗಳನ್ನು ಗುರುವಾರ ಘೋಷಿಸಿದ್ದಾರೆ. ಹಲ್ಲಿಯಾದಲ್ಲಿ ನಡೆದ ಚುನಾವಣಾ ರ್ಯಾಲಿಯಲ್ಲಿ ಮಾತನಾಡಿದ ಅವರು, 'ಬಂಗಾಳದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ಕಾನೂನು ಸುವ್ಯವಸ್ಥೆ ಸ್ಥಾಪಿಸುತ್ತೇವೆ. ಒಳನುಸುಳುಕೋರರನ್ನು ಹೊರಹಾಕುತ್ತೇವೆ, 7ನೇ ವೇತನ ಆಯೋಗ ಜಾರಿಗೆ ತರುತ್ತೇವೆ, ಮಹಿಳಾ ಸುರಕ್ಷತೆಗೆ ಆದ್ಯತೆ ನೀಡುತ್ತೇವೆ. ಇವು ಮೋದಿಯ ಗ್ಯಾರಂಟಿ' ಎಂದು ಹೇಳಿದರು.
12:08 AM (IST) Apr 11
11:04 PM (IST) Apr 10
10:53 PM (IST) Apr 10
10:05 PM (IST) Apr 10
ಕಾರ್ಗಿಲ್ ಯುದ್ಧದ ಹೀರೋ, 'ಲಡಾಖ್ ಸಿಂಹ' ಖ್ಯಾತಿಯ ಮಹಾವೀರ ಚಕ್ರ ಪುರಸ್ಕೃತ ಕರ್ನಲ್ ಸೋನಮ್ ವಾಂಗ್ಚುಕ್ ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ. 1999ರ 'ಆಪರೇಷನ್ ವಿಜಯ್' ಕಾರ್ಯಾಚರಣೆಯಲ್ಲಿ ತೋರಿದ ಅದಮ್ಯ ಸಾಹಸಕ್ಕಾಗಿ ಅವರು ಪ್ರಸಿದ್ಧರಾಗಿದ್ದರು.
09:18 PM (IST) Apr 10
ಅಹಮದಾಬಾದ್ನಲ್ಲಿ ದೋಸೆ ಹಿಟ್ಟು ಸೇವಿಸಿ ಇಬ್ಬರು ಮಕ್ಕಳು ಸಾವನ್ನಪ್ಪಿದ ಘಟನೆಗೆ ಆಘಾತಕಾರಿ ತಿರುವು ಸಿಕ್ಕಿದೆ. ಇದು ಫುಡ್ ಪಾಯ್ಸನಿಂಗ್ ಅಲ್ಲ, ಬದಲಿಗೆ ಕೀಟನಾಶಕ ಸೇವನೆಯಿಂದಾದ ಸಾವು ಎಂದು ಪೊಲೀಸರ ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. ದಂಪತಿಯ ಅನುಮಾನಾಸ್ಪದ ನಡವಳಿಕೆ ಮತ್ತು ಹೇಳಿಕೆಗಳು ಇದೊಂದು ಕುಟುಂಬ ಆತ್ಮಹ*ತ್ಯಾ ಯತ್ನವಿರಬಹುದೆಂಬ ಶಂಕೆಯನ್ನು ಹುಟ್ಟುಹಾಕಿದೆ.
08:40 PM (IST) Apr 10
ಡಿಜಿಟಲ್ ವಂಚನೆ ತಡೆಯಲು, ಆರ್ಬಿಐ ₹10,000 ಕ್ಕಿಂತ ಹೆಚ್ಚಿನ ಆನ್ಲೈನ್ ಹಣ ವರ್ಗಾವಣೆಗೆ ಒಂದು ಗಂಟೆಯ ವಿಳಂಬವನ್ನು ಪ್ರಸ್ತಾಪಿಸಿದೆ. ಈ ಹೊಸ ನಿಯಮವು ಗ್ರಾಹಕರಿಗೆ ತಪ್ಪಾದ ವಹಿವಾಟುಗಳನ್ನು ರದ್ದುಗೊಳಿಸಲು ಅವಕಾಶ ನೀಡಲಿದೆ.
08:08 PM (IST) Apr 10
ಚಾವುಂಡಿ ದೈವವನ್ನು ಅನುಕರಿಸಿ ಅಪಹಾಸ್ಯ ಮಾಡಿದ ಪ್ರಕರಣದಲ್ಲಿ ನಟ ರಣವೀರ್ ಸಿಂಗ್ ಕರ್ನಾಟಕ ಹೈಕೋರ್ಟ್ಗೆ ಬೇಷರತ್ ಕ್ಷಮೆ ಯಾಚಿಸಿದ್ದಾರೆ. ಹಿಂದಿನ ಕ್ಷಮೆಯಾಚನೆ ಪ್ರಾಮಾಣಿಕವಾಗಿಲ್ಲ ಎಂಬ ಆರೋಪದ ಹಿನ್ನೆಲೆಯಲ್ಲಿ, ಪರಿಷ್ಕೃತ ಅಫಿಡವಿಟ್ ಸಲ್ಲಿಸಿ, ‘ದೇವಸ್ಥಾನಕ್ಕೆ ಭೇಟಿ ನೀಡುವುದಾಗಿಯೂ ತಿಳಿಸಿದ್ದಾರೆ.
07:22 PM (IST) Apr 10
06:41 PM (IST) Apr 10
05:37 PM (IST) Apr 10
ಅಭಿಮಾನಿಗಳ ಪಾಲಿಗೆ ಇದು ಕೇವಲ ಸಿನಿಮಾವಲ್ಲ, ಇದು ತಮ್ಮ ನೆಚ್ಚಿನ ನಟನ ಸಿನಿರಂಗದ 'ಲಾಸ್ಟ್ ಶೋ'. ಇಂತಹ ಭಾವನಾತ್ಮಕ ಚಿತ್ರಕ್ಕೆ ಈ ರೀತಿ ಸೋರಿಕೆ ಮತ್ತು ಕಾನೂನು ವಿಘ್ನಗಳು ಎದುರಾಗುತ್ತಿರುವುದು ವಿಜಯ್ ಅಭಿಮಾನಿಗಳಲ್ಲಿ ಬೇಸರ ಮೂಡಿಸಿದೆ. ಚಿತ್ರತಂಡವು ಶೀಘ್ರದಲ್ಲೇ ಈ ಎಲ್ಲಾ ಅಡೆತಡೆಗಳನ್ನು ದಾಟಿ ಬರುತ್ತದೆ ಎಂದು ಎಲ್ಲರೂ ಕಾತರದಿಂದ ಕಾಯುತ್ತಿದ್ದಾರೆ.
05:02 PM (IST) Apr 10
ಕುಂಭಮೇಳದಲ್ಲಿ ಖ್ಯಾತಿ ಪಡೆದಿದ್ದ ಮೋನಾಲಿಸಾಳ ವಿವಾಹವು ಇದೀಗ ವಿವಾದಕ್ಕೆ ಕಾರಣವಾಗಿದೆ. ತನಿಖೆಯಲ್ಲಿ ಆಕೆ ಅಪ್ರಾಪ್ತೆ ಎಂದು ದೃಢಪಟ್ಟಿದ್ದು, ಆಕೆಯ ಪತಿ ಫರ್ಮಾನ್ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.
04:38 PM (IST) Apr 10
ಭ್ರಷ್ಟಾಚಾರದ ಆರೋಪದ ಮೇಲೆ ಅಮಾನತುಗೊಂಡಿರುವ ಕಿಶನ್ಗಂಜ್ ಎಸ್ಡಿಪಿಒ ಗೌತಮ್ ಕುಮಾರ್ ಅವರ ಮನೆಯ ಕೆಲಸದಾಕೆ ಪಾರೋ, ಅವರ ಬೇನಾಮಿ ಆಸ್ತಿಯನ್ನು ನಿರ್ವಹಿಸುತ್ತಿದ್ದಳು. ಸೋಷಿಯಲ್ ಮೀಡಿಯಾ ರೀಲ್ಸ್ನಿಂದ ಆಕೆಯ ಅದ್ದೂರಿ ಜೀವನ ಬಯಲಾಗಿದೆ.
03:39 PM (IST) Apr 10
ಕೆಲ ದಿನಗಳ ಹಿಂದೆ ಹೈದರಾಬಾದ್ ವ್ಯಕ್ತಿಯೊಬ್ಬರು ಹಾಕಿದ್ದ ಟ್ವಿಟ್ಟರ್ ಪೋಸ್ಟ್ ಒಂದು ಸಿಕ್ಕಾಪಟ್ಟೆ ವೈರಲ್ ಆಗಿತ್ತು. ತಮ್ಮ ಮೂರು ತಿಂಗಳ ಹಿಂದೆ ಕಳವಾದ ಸ್ಕೂಟರ್ಗೆ ಸಂಬಂಧಿಸಿದಂತೆ ಅವರಿಗೆ ಬಂದ ಟ್ರಾಫಿಕ್ ಚಲನ್ಗೆ ಸಂಬಂಧಿಸಿದ ಪೋಸ್ಟ್ ಅದಾಗಿತ್ತು. ಇದಾದ ಬಳಿಕ ಈಗ ಕಡೆಗೂ ಕಳ್ಳನ ಬಂಧನವಾಗಿದೆ.
03:04 PM (IST) Apr 10
12:51 PM (IST) Apr 10
ಸಮಂತಾ ಅವರು ತಮ್ಮ ಇನ್ಸ್ಟಾಗ್ರಾಮ್ ಸ್ಟೋರಿಯಲ್ಲಿ 'ಡಕಾಯಿತ' ಚಿತ್ರದ ಪೋಸ್ಟರ್ ಹಂಚಿಕೊಳ್ಳುವ ಮೂಲಕ ಚಿತ್ರದ ನಿರ್ಮಾಪಕಿ ಸುಪ್ರಿಯಾ ಯರ್ಲಾಗಡ್ಡ ಅವರನ್ನು ವಿಶೇಷವಾಗಿ ಕೊಂಡಾಡಿದ್ದಾರೆ. "ನಿಮ್ಮ ಕೆಲಸ, ನಿಮ್ಮ ಛಲ ಮತ್ತು ಸಿನಿಮಾದ ಮೇಲಿರುವ ನಿಮ್ಮ ಪ್ರೀತಿಯನ್ನು ನಾನು ಹತ್ತಿರದಿಂದ ನೋಡಿದ್ದೇನೆ. ಸುಪ್ರಿಯಾ, ನಿಮಗಿಂತ ಹೆಚ್ಚು ಬ್ಲಾಕ್ಬಸ್ಟರ್ ಯಶಸ್ಸಿಗೆ ಬೇರೆ ಯಾರೂ ಅರ್ಹರಿಲ್ಲ' ಎಂದಿದ್ದಾರೆ.
11:51 AM (IST) Apr 10
ಸದ್ಯ ಸಲ್ಮಾನ್ ಖಾನ್ ಅವರು ತಮ್ಮ ಮುಂಬರುವ ಯುದ್ಧ ಆಧಾರಿತ ಚಿತ್ರ 'ಮಾತೃಭೂಮಿ: ಮೇ ವಾರ್ ರೆಸ್ಟ್ ಇನ್ ಪೀಸ್' ಚಿತ್ರದ ಬಿಡುಗಡೆಯ ನಿರೀಕ್ಷೆಯಲ್ಲಿದ್ದಾರೆ. ಶುಕ್ರವಾರವಷ್ಟೇ ಚಿತ್ರದ ಹೊಸ ಹಾಡು 'ಮೇರಾ ಜೀ ನಹೀ ಭರಾ' ಬಿಡುಗಡೆಯಾಗಿದ್ದು, ಚಿತ್ರದಲ್ಲಿನ ಹೊಸ ಪ್ರತಿಭೆಗಳನ್ನು ಈ ಹಾಡಿನ ಮೂಲಕ ಪರಿಚಯಿಸಲಾಗಿದೆ.
11:06 AM (IST) Apr 10
US-Iran ceasefire deal : ಅಮೆರಿಕ-ಇರಾನ್ ನಡುವೆ ಬುಧವಾರ ಏರ್ಪಟ್ಟ 2 ವಾರಗಳ ತಾತ್ಕಾಲಿಕ ಕದನ ವಿರಾಮ ಕುರಿತ ಗೊಂದಲ ಗುರುವಾರವೂ ಮುಂದುವರಿದಿದೆ. ಈ ಗೊಂದಲಕ್ಕೆ ಕಾರಣ ಮಧ್ಯವರ್ತಿಯಾಗಿ ಕೆಲಸ ಮಾಡಿದ ಪಾಕಿಸ್ತಾನ ಎಂಬ ಆರೋಪ ಕೇಳಿ ಬರುತ್ತಿದೆ.
09:37 AM (IST) Apr 10
ಕೊರೋನಾ ಸಮಯದಲ್ಲಿ ಡಿಎಂಕೆ ಅಧಿಕಾರದಲ್ಲಿದ್ದರೆ ಸಿಎಂ ಸ್ಟಾಲಿನ್ ಸಾಯುತ್ತಿದ್ದರು ಎಂದು ಎಡಪ್ಪಾಡಿ ಪಳನಿಸ್ವಾಮಿ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಇದಕ್ಕೆ ತಿರುಗೇಟು ನೀಡಿರುವ ಸ್ಟಾಲಿನ್, ‘ಜನರಿಗಾಗಿ ಸಾಯಲು ಹೆದರುವುದಿಲ್ಲ’ ಎಂದು ಹೇಳಿದ್ದಾರೆ.
09:16 AM (IST) Apr 10
ಅಮೆರಿಕ, ಇರಾನ್ ಮತ್ತು ಇಸ್ರೇಲ್ ನಡುವಿನ ಕದನವಿರಾಮದ ಅನ್ವಯ, ಹೋರ್ಮುಜ್ ಜಲಸಂಧಿಯಲ್ಲಿ ದಿನಕ್ಕೆ 15 ಹಡಗುಗಳಿಗೆ ಇರಾನ್ ಅನುಮತಿಯೊಂದಿಗೆ ಸಾಗಲು ಅವಕಾಶ ನೀಡಲಾಗಿದೆ. ಆದರೆ, ಜಲಸಂಧಿಯ ರಕ್ಷಣೆಗೆ ಮುಂದಾಗುವಂತೆ ಅಮೆರಿಕ ಅಧ್ಯಕ್ಷ ಟ್ರಂಪ್ ಯುರೋಪಿಯನ್ ಒಕ್ಕೂಟಕ್ಕೆ ಕರೆ ನೀಡಿದ್ದಾರೆ.
08:51 AM (IST) Apr 10
08:26 AM (IST) Apr 10
ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ದೇಶದ ಅತ್ಯಂತ ಬಡ ಮುಖ್ಯಮಂತ್ರಿ ಎನಿಸಿಕೊಂಡಿದ್ದು, ಕಳೆದ 5 ವರ್ಷಗಳಲ್ಲಿ ಅವರ ಆಸ್ತಿ 1.35 ಲಕ್ಷ ರು. ಇಳಿಕೆಯಾಗಿದೆ. ಚುನಾವಣಾ ಅಫಿಡವಿಟ್ ಪ್ರಕಾರ, ಅವರ ಪ್ರಸ್ತುತ ಆಸ್ತಿ ಕೇವಲ 15.37 ಲಕ್ಷ ರು. ಅವರ ಬಳಿ ಸ್ವಂತ ವಾಹನವಿಲ್ಲ ಮತ್ತು ಯಾವುದೇ ಹೂಡಿಕೆ ಇಲ್ಲ.
07:42 AM (IST) Apr 10
ಎಲ್ಲಾ ದೇವಾಲಯ ಮತ್ತು ಮಠಗಳಿಗೆ ಪ್ರತಿಯೊಬ್ಬರಿಗೂ ಪ್ರವೇಶವಿರಬೇಕು ಎಂದು ಸುಪ್ರೀಂ ಕೋರ್ಟ್ ಅಭಿಪ್ರಾಯಪಟ್ಟಿದೆ. ಶಬರಿಮಲೆ ಸೇರಿದಂತೆ ದೇಗುಲ ಪ್ರವೇಶ ನಿರ್ಬಂಧಕ್ಕೆ ಸಂಬಂಧಿಸಿದ ಅರ್ಜಿಗಳ ವಿಚಾರಣೆ ವೇಳೆ, ಯಾವುದೇ ಪಂಗಡವನ್ನು ಹೊರಗಿಡುವುದು ಹಿಂದೂ ಧರ್ಮಕ್ಕೆ ಹಾನಿಕಾರಕ ಎಂದು ಸಾಂವಿಧಾನಿಕ ಪೀಠ ಹೇಳಿದೆ.