LIVE NOW
Published : Apr 10, 2026, 07:21 AM ISTUpdated : Apr 10, 2026, 11:06 AM IST

India latest news live: ಪಾಕ್ ಎಡವಟ್ಟಿನಿಂದ ಲೆಬನಾನ್ ಗೊಂದಲ - ಬೇರೆ ಬೇರೆ ಸಂಧಾನ ಪ್ರತಿ ಹಂಚಿ ಎಡವಟ್ಟು - ಇಸ್ರೇಲ್ ದಾಳಿಗೆ ಲೆಬನಾನ್‌ಲ್ಲಿ 300 ಬಲಿ

ಸಾರಾಂಶ

ಕೋಲ್ಕತಾ: ಪ.ಬಂಗಾಳದಲ್ಲಿ ಚುನಾವಣಾಪ್ರಚಾರದಲ್ಲಿ ತೊಡಗಿರುವ ಪ್ರಧಾನಿ ನರೇಂದ್ರ ಮೋದಿ 7ನೇ ವೇತನ ಆಯೋಗ ಜಾರಿ ಸೇರಿ 6 ಗ್ಯಾರಂಟಿಗಳನ್ನು ಗುರುವಾರ ಘೋಷಿಸಿದ್ದಾರೆ. ಹಲ್ಲಿಯಾದಲ್ಲಿ ನಡೆದ ಚುನಾವಣಾ ರ್ಯಾಲಿಯಲ್ಲಿ ಮಾತನಾಡಿದ ಅವರು, 'ಬಂಗಾಳದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ಕಾನೂನು ಸುವ್ಯವಸ್ಥೆ ಸ್ಥಾಪಿಸುತ್ತೇವೆ. ಒಳನುಸುಳುಕೋರರನ್ನು ಹೊರಹಾಕುತ್ತೇವೆ, 7ನೇ ವೇತನ ಆಯೋಗ ಜಾರಿಗೆ ತರುತ್ತೇವೆ, ಮಹಿಳಾ ಸುರಕ್ಷತೆಗೆ ಆದ್ಯತೆ ನೀಡುತ್ತೇವೆ. ಇವು ಮೋದಿಯ ಗ್ಯಾರಂಟಿ' ಎಂದು ಹೇಳಿದರು.

 

11:06 AM (IST) Apr 10

ಪಾಕ್ ಎಡವಟ್ಟಿನಿಂದ ಲೆಬನಾನ್ ಗೊಂದಲ - ಬೇರೆ ಬೇರೆ ಸಂಧಾನ ಪ್ರತಿ ಹಂಚಿ ಎಡವಟ್ಟು - ಇಸ್ರೇಲ್ ದಾಳಿಗೆ ಲೆಬನಾನ್‌ಲ್ಲಿ 300 ಬಲಿ

US-Iran ceasefire deal : ಅಮೆರಿಕ-ಇರಾನ್ ನಡುವೆ ಬುಧವಾರ ಏರ್ಪಟ್ಟ 2 ವಾರಗಳ ತಾತ್ಕಾಲಿಕ ಕದನ ವಿರಾಮ ಕುರಿತ ಗೊಂದಲ ಗುರುವಾರವೂ ಮುಂದುವರಿದಿದೆ. ಈ ಗೊಂದಲಕ್ಕೆ ಕಾರಣ ಮಧ್ಯವರ್ತಿಯಾಗಿ ಕೆಲಸ ಮಾಡಿದ ಪಾಕಿಸ್ತಾನ ಎಂಬ ಆರೋಪ ಕೇಳಿ ಬರುತ್ತಿದೆ.

Read Full Story

09:37 AM (IST) Apr 10

COVID ಟೈಂನಲ್ಲಿ ಡಿಎಂಕೆ ಅಧಿಕಾರದಲ್ಲಿದ್ದಿದ್ರೆ ಸ್ಟಾಲಿನ್ ಸತ್ತೋಗಿರ್ತಿದ್ರು; ಪಳನಿಸ್ವಾಮಿ

ಕೊರೋನಾ ಸಮಯದಲ್ಲಿ ಡಿಎಂಕೆ ಅಧಿಕಾರದಲ್ಲಿದ್ದರೆ ಸಿಎಂ ಸ್ಟಾಲಿನ್‌ ಸಾಯುತ್ತಿದ್ದರು ಎಂದು ಎಡಪ್ಪಾಡಿ ಪಳನಿಸ್ವಾಮಿ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಇದಕ್ಕೆ ತಿರುಗೇಟು ನೀಡಿರುವ ಸ್ಟಾಲಿನ್, ‘ಜನರಿಗಾಗಿ ಸಾಯಲು ಹೆದರುವುದಿಲ್ಲ’ ಎಂದು ಹೇಳಿದ್ದಾರೆ.

Read Full Story

09:16 AM (IST) Apr 10

ಹೋರ್ಮುಜ್ ಮೂಲಕ ನಿತ್ಯ 15 ಹಡಗು ಸಾಗಲು ಇರಾನ್ ಅಸ್ತು - ಹೋರ್ಮುಜ್ ಜಲಸಂಧಿ ರಕ್ಷಣೆಗೆ ಧಾವಿಸಿ - ಇ.ಯು.ಗೆ ಟ್ರಂಪ್ ಕರೆ

ಅಮೆರಿಕ, ಇರಾನ್ ಮತ್ತು ಇಸ್ರೇಲ್ ನಡುವಿನ ಕದನವಿರಾಮದ ಅನ್ವಯ, ಹೋರ್ಮುಜ್ ಜಲಸಂಧಿಯಲ್ಲಿ ದಿನಕ್ಕೆ 15 ಹಡಗುಗಳಿಗೆ ಇರಾನ್ ಅನುಮತಿಯೊಂದಿಗೆ ಸಾಗಲು ಅವಕಾಶ ನೀಡಲಾಗಿದೆ. ಆದರೆ, ಜಲಸಂಧಿಯ ರಕ್ಷಣೆಗೆ ಮುಂದಾಗುವಂತೆ ಅಮೆರಿಕ ಅಧ್ಯಕ್ಷ ಟ್ರಂಪ್ ಯುರೋಪಿಯನ್ ಒಕ್ಕೂಟಕ್ಕೆ ಕರೆ ನೀಡಿದ್ದಾರೆ.

Read Full Story

08:51 AM (IST) Apr 10

ಪಂಚರಾಜ್ಯ ಚುನಾವಣೆ - ಕೇರಳ, ಪುದುಚೇರಿ, ಅಸ್ಸಾಂನಲ್ಲಿ ದಾಖಲೆಯ ಮತದಾನ

ಕೇರಳ, ಅಸ್ಸಾಂ ಮತ್ತು ಪುದುಚೇರಿ ರಾಜ್ಯಗಳಲ್ಲಿ ಗುರುವಾರ ದಾಖಲೆಯ ಮತದಾನ ನಡೆದಿದೆ. ಪುದುಚೇರಿಯಲ್ಲಿ ಸಾರ್ವಕಾಲಿಕ ಗರಿಷ್ಠ ಶೇ.89.08, ಅಸ್ಸಾಂನಲ್ಲಿ ಶೇ.85.04 ಮತ್ತು ಕೇರಳದಲ್ಲಿ ಶೇ.78 ರಷ್ಟು ಮತದಾನವಾಗಿದ್ದು, ಸಣ್ಣಪುಟ್ಟ ಗಲಾಟೆಗಳನ್ನು ಹೊರತುಪಡಿಸಿ ಮತದಾನ ಪ್ರಕ್ರಿಯೆ ಶಾಂತಿಯುತವಾಗಿತ್ತು.
Read Full Story

08:26 AM (IST) Apr 10

ಸ್ವಂತ ಕಾರೂ ಇಲ್ಲದ ದೇಶದ ಅತ್ಯಂತ ಬಡ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ - ದೀದಿ ಆಸ್ತಿ ಬರೀ 15.4 ಲಕ್ಷ

ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ದೇಶದ ಅತ್ಯಂತ ಬಡ ಮುಖ್ಯಮಂತ್ರಿ ಎನಿಸಿಕೊಂಡಿದ್ದು, ಕಳೆದ 5 ವರ್ಷಗಳಲ್ಲಿ ಅವರ ಆಸ್ತಿ 1.35 ಲಕ್ಷ ರು. ಇಳಿಕೆಯಾಗಿದೆ. ಚುನಾವಣಾ ಅಫಿಡವಿಟ್ ಪ್ರಕಾರ, ಅವರ ಪ್ರಸ್ತುತ ಆಸ್ತಿ ಕೇವಲ 15.37 ಲಕ್ಷ ರು. ಅವರ ಬಳಿ ಸ್ವಂತ ವಾಹನವಿಲ್ಲ ಮತ್ತು ಯಾವುದೇ ಹೂಡಿಕೆ ಇಲ್ಲ.

Read Full Story

07:42 AM (IST) Apr 10

Supreme Court on temple entry - ಕೆಲವು ಪಂಗಡಗಳಿಗೆ ದೇಗುಲ ಪ್ರವೇಶ ನಿರ್ಬಂಧ ಹಿಂದೂ ಧರ್ಮಕ್ಕೆ ಮಾರಕ - ಸುಪ್ರೀಂ

ಎಲ್ಲಾ ದೇವಾಲಯ ಮತ್ತು ಮಠಗಳಿಗೆ ಪ್ರತಿಯೊಬ್ಬರಿಗೂ ಪ್ರವೇಶವಿರಬೇಕು ಎಂದು ಸುಪ್ರೀಂ ಕೋರ್ಟ್‌ ಅಭಿಪ್ರಾಯಪಟ್ಟಿದೆ. ಶಬರಿಮಲೆ ಸೇರಿದಂತೆ ದೇಗುಲ ಪ್ರವೇಶ ನಿರ್ಬಂಧಕ್ಕೆ ಸಂಬಂಧಿಸಿದ ಅರ್ಜಿಗಳ ವಿಚಾರಣೆ ವೇಳೆ, ಯಾವುದೇ ಪಂಗಡವನ್ನು ಹೊರಗಿಡುವುದು ಹಿಂದೂ ಧರ್ಮಕ್ಕೆ ಹಾನಿಕಾರಕ  ಎಂದು ಸಾಂವಿಧಾನಿಕ ಪೀಠ ಹೇಳಿದೆ.

Read Full Story

More Trending News