ಮೋದಿ ಮತ್ತೆ ಗೆದ್ದರೆ ಇನ್ಮುಂದೆ ದೇಶದಲ್ಲಿ ಎಲೆಕ್ಷನ್‌ ಇರಲ್ಲ; ಮೋದಿ ಜಯಿಸಿದರೆ ಸರ್ವಾಧಿಕಾರ ಶುರು: ಖರ್ಗೆ

Published : Jan 30, 2024, 09:32 AM IST
ಮೋದಿ ಮತ್ತೆ ಗೆದ್ದರೆ ಇನ್ಮುಂದೆ ದೇಶದಲ್ಲಿ ಎಲೆಕ್ಷನ್‌ ಇರಲ್ಲ; ಮೋದಿ ಜಯಿಸಿದರೆ ಸರ್ವಾಧಿಕಾರ ಶುರು: ಖರ್ಗೆ

ಸಾರಾಂಶ

ಬಿಜೆಪಿ ಮತ್ತು ಅವರ ಸಿದ್ದಾಂತವಾದಿಗಳಾದ ಆರ್‌ಎಸ್‌ಎಸ್‌ನವರು ಒಂದು ರೀತಿ ವಿಷವಿದ್ದಂತೆ ಹಾಗಾಗಿ ಜನ ಅವರಿಂದ ದೂರವಿರಬೇಕು. ಭಾರತದಲ್ಲಿ ಪ್ರಜಾಪ್ರಭುತ್ವವನ್ನು ಕಾಪಾಡಿಕೊಳ್ಳಲು ಇದು ಜನರಿಗಿರುವ ಕೊನೆ ಆಯ್ಕೆಯಾಗಿದೆ ಎಂದು ಖರ್ಗೆ ಹೇಳಿದರು.

ಭುವನೇಶ್ವರ (ಜನವರಿ 30, 2024): ಪ್ರಜಾಪ್ರಭುತ್ವವನ್ನ ಉಳಿಸಿಕೊಳ್ಳಲು 2024ರಲ್ಲಿ ನಡೆಯುವ ಚುನಾವಣೆಯೇ ದೇಶದ ಜನರಿಗಿರುವ ಕೊನೆಯ ಅವಕಾಶ. ಒಂದು ವೇಳೆ ಈ ಚುನಾವಣೆಯಲ್ಲೂ ಮೋದಿ ಜಯಗಳಿಸಿದರೆ ಮುಂದಿನ ದಿನಗಳಲ್ಲಿ ದೇಶದಲ್ಲಿ ಚುನಾವಣೆಯೇ ಇರುವುದಿಲ್ಲ, ಸರ್ವಾಧಿಕಾರ ಆರಂಭವಾಗುತ್ತದೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.

ಸೋಮವಾರ ಇಲ್ಲಿ ನಡೆದ ರ್‍ಯಾಲಿಯನ್ನುದ್ದೇಶಿಸಿ ಮಾತನಾಡಿದ ಖರ್ಗೆ, ಬಿಜೆಪಿ ಮತ್ತು ಅವರ ಸಿದ್ದಾಂತವಾದಿಗಳಾದ ಆರ್‌ಎಸ್‌ಎಸ್‌ನವರು ಒಂದು ರೀತಿ ವಿಷವಿದ್ದಂತೆ ಹಾಗಾಗಿ ಜನ ಅವರಿಂದ ದೂರವಿರಬೇಕು. ಭಾರತದಲ್ಲಿ ಪ್ರಜಾಪ್ರಭುತ್ವವನ್ನು ಕಾಪಾಡಿಕೊಳ್ಳಲು ಇದು ಜನರಿಗಿರುವ ಕೊನೆ ಆಯ್ಕೆಯಾಗಿದೆ ಎಂದು ಹೇಳಿದರು.

ಇದನ್ನು ಓದಿ: ವಿದ್ಯಾರ್ಥಿ, ಯುವಜನರಲ್ಲಿ ಕೌಶಲ್ಯ ವೃದ್ಧಿಸಿ: ಮಲ್ಲಿಕಾರ್ಜುನ ಖರ್ಗೆ ಕಿವಿಮಾತು!

ಇದೇ ವೇಳೆ ಇಂಡಿಯಾ ಮೈತ್ರಿಕೂಟವನ್ನು ತೊರೆದ ಜೆಡಿಯು ನಾಯಕ ನಿತೀಶ್‌ ಕುಮಾರ್‌ ಬಗ್ಗೆ ಪ್ರತಿಕ್ರಿಯಿಸಿದ ಅವರು, ಒಬ್ಬ ವ್ಯಕ್ತಿ ಪಕ್ಷ ತೊರೆಯುವುದರಿಂದ ನಾವು ದುರ್ಬಲಗೊಳ್ಳುವುದಿಲ್ಲ. ನಾವು ಬಿಜೆಪಿಯನ್ನು ಸೋಲಿಸುತ್ತೇವೆ ಎಂದು ಹೇಳಿದರು.
ಇದನ್ನೂ ಓದಿ: ನಿತೀಶ್‌ ನಿರ್ಗಮನ: ಇಂಡಿಯಾ ಕೂಟಕ್ಕೆ ಆಘಾತ; ಸೀಟು ಹಂಚಿಕೆಗೆ ಕಾಂಗ್ರೆಸ್‌ಗೆ ತಲೆನೋವು!

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

22 ಕಾರ್ಮಿಕರ ಸಾಗಿಸುತ್ತಿದ್ದ ಟ್ರಕ್ ಭೀಕರ ಅಪಘಾತದಲ್ಲಿ 17 ಸಾವು, 4 ದಿನ ಬಳಿಕ ಘಟನೆ ಬೆಳಕಿಗೆ
ಪ್ರತಿಷ್ಠಿತ ಶಾಲೆಯ ಮೇಲೆ ಐಟಿ ರೈಡ್: ಕೋಟಿ ಕೋಟಿ ಹಣ ಪತ್ತೆ: ಹಣ ಎಣಿಸುವ ಯಂತ್ರ ತರಿಸಿದ ಅಧಿಕಾರಿಗಳು