ಭಾರತಕ್ಕೆ ಕೊರೋನಾ 3ನೇ ಅಲೆ ಅಪಾಯವಿದೆಯಾ? AIIMS ನಿರ್ದೇಶಕರ ಉತ್ತರ!

Published : Jun 19, 2021, 07:53 PM IST
ಭಾರತಕ್ಕೆ ಕೊರೋನಾ 3ನೇ ಅಲೆ ಅಪಾಯವಿದೆಯಾ? AIIMS ನಿರ್ದೇಶಕರ ಉತ್ತರ!

ಸಾರಾಂಶ

ಭಾರತಕ್ಕೆ 3ನೇ ಅಲೆ ಕುರಿತು ಎಚ್ಚರಿಕೆ ನೀಡಿದ ಏಮ್ಸ್ ನಿರ್ದೇಶಕ 2ನೇ ಅಲೆ ನಿಯಂತ್ರಣಕ್ಕೆ ಬರುತ್ತಿರುವ ಬೆನ್ನಲ್ಲೇ ಎಚ್ಚರಿಕೆ ಮಾರ್ಗಸೂಚಿ ಪಾಲಿಸದಿದ್ದರೆ 3ನೇ ಅಲೆ ನಿಯಂತ್ರಣ ಅಸಾಧ್ಯ

ನವದೆಹಲಿ(ಜೂ.19): ಭಾರತದಲ್ಲಿ ಕೊರೋನಾ ಸಂಕಷ್ಟ ಸದ್ಯಕ್ಕೆ ಮುಗಿಯುವ ಲಕ್ಷಣಗಳು ಗೋಚರಿಸುತ್ತಿಲ್ಲ. 2ನೇ ಅಲೆ ನಿಯಂತ್ರಣ ಬರುತ್ತಿದೆ ಅನ್ನುವಷ್ಟರಲ್ಲೇ 3ನೇ ಅಲೆ ಮಾತುಗಳು ಕೇಳಿ ಬರುತ್ತಿದೆ. ಇದೀಗ ದೆಹಲಿ ಏಮ್ಸ್ ನಿರ್ದೇಶಕ ರಂದೀಪ್ ಗುಲೇರಿಯಾ 3ನೇ ಅಲೆ ಎಚ್ಚರಿಕೆ ನೀಡಿದ್ದಾರೆ.

ದೇಶದಲ್ಲಿ 7ನೇ ಡೆಲ್ಟಾ​ ಪ್ಲ​ಸ್‌ ವೈರಸ್‌ ಕೇಸ್‌ ಪತ್ತೆ!...

ಕೊರೋನಾ ವೈರಸ್ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ನಿರ್ಬಂಧಗಳು, ಜನದಟ್ಟಣೆ ಆಗದಂತೆ ನೋಡಿಕೊಳ್ಳಬೇಕು. ಸಭೆ ಸಮಾರಂಭದ ಮೇಲಿನ ನಿರ್ಭಂಧ ಮುಂದುವರಿಸಬೇಕು. ಸಣ್ಣ ಎಡವಟ್ಟಿನಿಂದ 3ನೇ ಅಲೆ ಹರಡಿದರೆ, ನಿಯಂತ್ರಣ ಅಸಾಧ್ಯವಾಗಲಿದೆ ಎಂದು ಗುಲೇರಿಯಾ ಎಚ್ಚರಿಸಿದ್ದಾರೆ.

ಕೊರೋನಾ ಸೋಂಕು ಹಾಟ್‌ಸ್ಪಾಟ್ ಕೇಂದ್ರಗಳನ್ನು ಗುರುತಿಸಿ ಲಾಕ್‌ಡೌನ್ ಮಾಡಬೇಕು. ಯಾವುದೇ ಕಾರಣಕ್ಕೂ ನಿರ್ಲಕ್ಷ್ಯ ಸಲ್ಲದು. ನಾಗರೀಕರಾಗಿರಲಿ, ಸರ್ಕಾರವಾಗಿರಲಿ ಮುಂಜಾಗ್ರತೆ ಅಗತ್ಯ ಎಂದು ಗುಲೇರಿಯಾ ಹೇಳಿದ್ದಾರೆ.

3ನೇ ಅಲೆ ಎದುರಿಸುವ ಸಿದ್ಧತೆ: 1 ಲಕ್ಷ ಕೋವಿಡ್‌ ಯೋಧರ ಕೌಶಲ್ಯಾಭಿವೃದ್ಧಿ!...

3ನೇ ಅಲೆ ಮಕ್ಕಳಿಗೆ ತೀವ್ರ ಅಪಾಯ ತಂದೊಡ್ಡಲಿದೆ ಅನ್ನೋ ವರದಿಗೆ ಯಾವುದೇ ಪುರಾವೆ ಇಲ್ಲ ಎಂದು ಗುಲೇರಿಯಾ ಹೇಳಿದ್ದಾರೆ. ಮೊದಲ ಅಲೆ ಬಳಿಕ ವಹಿಸಿದ ನಿರ್ಲಕ್ಷ್ಯದಿಂದ 2ನೇ ಅಲೆ ಭೀಕರವಾಗಿ ಕಾಡಿದೆ. ಇದೀಗ ಮತ್ತೆ ಅದೆ ಪುನಾರವರ್ತಿಸಿದರೆ 3ನೇ ಅಲೆ ಇನ್ನೂ ಭೀಕರವಾಗಿರಲಿದೆ ಎಂದು ಗುಲೇರಿಯಾ ಹೇಳಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ದಿನಕ್ಕೆರಡು ಬಾರಿ ಠಾಣೆಗೆ ಹಾಜರಾಗಲು ಸೂಚನೆ, ಆದೇಶ ಪ್ರಶ್ನಿಸಿದ ಆರೋಪಿಗೆ 1 ಲಕ್ಷ ರೂ ಪರಿಹಾರ
Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!