
ನವದೆಹಲಿ(ಜೂ.28): ಪೂರ್ವ ಲಡಾಖ್ನ ಗಲ್ವಾನ್ ಕಣಿವೆಯಲ್ಲಿ ಚೀನಾದ ಯುದ್ಧ ವಿಮಾನಗಳು ಹಾಗೂ ಹೆಲಿಕಾಪ್ಟರ್ಗಳ ಹಾರಾಟ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಭಾರತ ತನ್ನ ಬಳಿ ಇರುವ ಅತ್ಯಾಧುನಿಕ ಕ್ಷಿಪಣಿ ಹೊಡೆದುರುಳಿಸುವ ವ್ಯವಸ್ಥೆಗಳನ್ನು ಗಡಿಯಲ್ಲಿ ನಿಯೋಜನೆ ಮಾಡಿದೆ. ಇದರಿಂದಾಗಿ ಮಾತುಕತೆ ಮೂಲಕ ಬಗೆಹರಿಯಬಹುದು ಎಂದು ಊಹಿಸಲಾಗಿದ್ದ ಗಲ್ವಾನ್ ಬಿಕ್ಕಟ್ಟು, ಮತ್ತಷ್ಟುವಿಷಮ ಪರಿಸ್ಥಿತಿಯತ್ತ ಹೊರಳುತ್ತಿದ್ದು ಗಡಿಯಲ್ಲಿ ಕುದಿಯುವ ವಾತಾವರಣ ಕಂಡುಬರುತ್ತಿದೆ.
ಭಾರತ ಜೊತೆ ಸಂಘರ್ಷ: ಮಡಿದ ಸೈನಿಕರಿಗೆ ಚೀನಾ ಪತ್ರಿಕೆ ಕಂಬನಿ!
ಕ್ಷಿಪಣಿ ದಾಳಿ ಮೂಲಕ ಭಾರತದ ಮೇಲೆ ಆಕ್ರಮಣ ಮಾಡುವ ದುಸ್ಸಾಹಕ್ಕೆ ಚೀನಾ ಇಳಿಯುವ ಸಾಧ್ಯತೆಗಳೂ ಇರುವ ಕಾರಣ, ನೆಲದಿಂದ ಆಗಸಕ್ಕೆ ಚಿಮ್ಮಿ ದಾಳಿಗೆ ಬರುವ ಕ್ಷಿಪಣಿಗಳನ್ನು ಅತ್ಯಂತ ಕ್ಷಿಪ್ರಗತಿಯಲ್ಲಿ ನಾಶಗೊಳಿಸುವ ವ್ಯವಸ್ಥೆಗಳನ್ನು ಭೂಸೇನೆ ಹಾಗೂ ವಾಯುಪಡೆಗಳೆರಡೂ ನಿಯೋಜಿಸಿವೆ. ಅತ್ಯಧಿಕ ಸಾಮರ್ಥ್ಯದ ಕ್ಷಿಪಣಿ ಹೊಡೆವ ವ್ಯವಸ್ಥೆ ಮಿತ್ರ ರಾಷ್ಟ್ರವೊಂದರಿಂದ ಭಾರತಕ್ಕೆ ಶೀಘ್ರದಲ್ಲೇ ಲಭ್ಯವಾಗಲಿದೆ. ಅದನ್ನೂ ಲಡಾಖ್ ವಲಯಕ್ಕೇ ನಿಯೋಜಿಸಿ, ಚೀನಾ ದಾಳಿಯನ್ನು ಎದುರಿಸಲು ಭಾರತ ಸಜ್ಜಾಗಲಿದೆ ಎಂದು ಮೂಲಗಳು ತಿಳಿಸಿವೆ. ಈಗಾಗಲೇ ಗಡಿಯಲ್ಲಿ ಭಾರತೀಯ ಸೇನೆ ಸುಕೋಯ್ ಎಂಕೆಐಎಸ್, ಅಪಾಚೆ ಕಾಪ್ಟರ್, ಬೋಯಿಂಗ್ 47 ಚಿನೂಕ್ ಸೇರಿದಂತೆ ನಾನಾ ರೀತಿಯ ಯುದ್ಧ ವಿಮಾನ ಮತ್ತು ಕಾಪ್ಟರ್ಗಳನ್ನು ನಿಯೋಜಿಸಿದೆ.
ಈ ನಡುವೆ, ಭಾರತ ಹೊಂದಿರುವ ಸುಖೋಯ್ ದರ್ಜೆಯ ಯುದ್ಧ ವಿಮಾನವನ್ನು ಚೀನಾ ಕೂಡ ಗಡಿಯತ್ತ ತಂದಿದೆ. ಅಲ್ಲದೆ ಚೀನಾದ ಬಾಂಬರ್ ವಿಮಾನಗಳು ಗಡಿಯ 10 ಕಿ.ಮೀ. ಸರಹದ್ದಿನಲ್ಲಿ ಹಾರಾಡುತ್ತಿರುವುದನ್ನು ಭದ್ರತಾ ಪಡೆಗಳು ಕಂಡಿವೆ. ಹೀಗಾಗಿ ಚೀನಾದ ಯಾವುದೇ ವಿಮಾನಗಳು ಕಣ್ತಪ್ಪಿ ಹಾರಾಡದಂತೆ ಅತ್ಯುನ್ನತ ನಿಗಾ ವಹಿಸಲಾಗಿದೆ.
ಚೀನಾ ಮತ್ತೆ ಕುತಂತ್ರ: ಶಾಂತಿ ಮಂತ್ರ ಪಠಿಸುತ್ತಲೇ ಹೆಲಿಪ್ಯಾಡ್ ನಿರ್ಮಾಣ!
ಶತ್ರು ದೇಶದಿಂದ ಶರವೇಗದಲ್ಲಿ ಬರುವ ಯುದ್ಧ ವಿಮಾನ ಹಾಗೂ ಡ್ರೋನ್ಗಳನ್ನು ಕ್ಷಣಾರ್ಧದಲ್ಲಿ ಆಗಸದಲ್ಲೇ ಛಿದ್ರಗೊಳಿಸುವ ಆಕಾಶ್ ಕ್ಷಿಪಣಿ ವ್ಯವಸ್ಥೆ ಭಾರತದ ಬಳಿ ಇದೆ. ಪರ್ವತ ಪ್ರದೇಶಗಳಲ್ಲಿ ನಿಯೋಜನೆ ಮಾಡುವ ಸಲುವಾಗಿ ಅದನ್ನು ಮೇಲ್ದರ್ಜೆಗೆ ಕೂಡ ಏರಿಸಲಾಗಿದೆ. ಆದರೆ ಇದೀಗ ಅದನ್ನೇ ಗಡಿಯಲ್ಲಿ ನಿಯೋಜಿಸಲಾಗಿದೆಯೇ ಎಂಬುದು ತಿಳಿದುಬಂದಿಲ್ಲ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ