ಮ್ಯಾನ್ಮಾರ್‌ನಲ್ಲಿ ಸೇನೆ-ಬಂಡುಕೋರರ ಸಂಘರ್ಷ : ಭದ್ರತೆಗಾಗಿ ಮ್ಯಾನ್ಮಾರ್‌ ಗಡಿಗೆ ಬೇಲಿ: ಅಮಿತ್‌ ಶಾ

Published : Jan 21, 2024, 10:15 AM IST
ಮ್ಯಾನ್ಮಾರ್‌ನಲ್ಲಿ ಸೇನೆ-ಬಂಡುಕೋರರ ಸಂಘರ್ಷ : ಭದ್ರತೆಗಾಗಿ ಮ್ಯಾನ್ಮಾರ್‌ ಗಡಿಗೆ ಬೇಲಿ: ಅಮಿತ್‌ ಶಾ

ಸಾರಾಂಶ

ಮ್ಯಾನ್ಮಾರ್‌ನಲ್ಲಿ ನಡೆಯುತ್ತಿರುವ ಆಂತರಿಕ ಸಂಘರ್ಷದ ಬೆನ್ನಲ್ಲೇ ದೇಶದ ಭದ್ರತೆಗಾಗಿ ಅಕ್ರಮ ಪ್ರವೇಶ ತಡೆಯುವುದಕ್ಕಾಗಿ ಮ್ಯಾನ್ಮಾರ್‌ ಹಾಗೂ ಭಾರತದ ಗಡಿಯಲ್ಲಿ ಬೇಲಿ ನಿರ್ಮಿಸಲಾಗುವುದು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.

ಗುವಾಹಟಿ: ಮ್ಯಾನ್ಮಾರ್‌ನಲ್ಲಿ ನಡೆಯುತ್ತಿರುವ ಆಂತರಿಕ ಸಂಘರ್ಷದ ಬೆನ್ನಲ್ಲೇ ದೇಶದ ಭದ್ರತೆಗಾಗಿ ಅಕ್ರಮ ಪ್ರವೇಶ ತಡೆಯುವುದಕ್ಕಾಗಿ ಮ್ಯಾನ್ಮಾರ್‌ ಹಾಗೂ ಭಾರತದ ಗಡಿಯಲ್ಲಿ ಬೇಲಿ ನಿರ್ಮಿಸಲಾಗುವುದು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ. ಅಸ್ಸಾಂನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ‘ಬಾಂಗ್ಲಾದೇಶದ ಗಡಿಯಲ್ಲಿ ಬೇಲಿ ನಿರ್ಮಾಣ ಮಾಡಿದಂತೆ, ಮ್ಯಾನ್ಮಾರ್‌ ಗಡಿಗೂ ಬೇಲಿ ನಿರ್ಮಾಣ ಮಾಡಲು ಪ್ರಧಾನಿ ನರೇಂದ್ರ ಮೋದಿ ಅವರು ನಿರ್ಧರಿಸಿದ್ದಾರೆ. ಅಲ್ಲದೇ ಮ್ಯಾನ್ಮಾರ್‌ ಮತ್ತು ಭಾರತದ ನಡುವೆ ಇರುವ ಮುಕ್ತ ಓಡಾಟ ಒಪ್ಪಂದವು ಸಹ ಶೀಘ್ರ ಅಂತ್ಯಗೊಳ್ಳಲಿದೆ’ ಎಂದು ಹೇಳಿದರು.

ಮ್ಯಾನ್ಮಾರ್‌ನಲ್ಲಿ ಆರಂಭವಾಗಿರುವ ಸಂಘರ್ಷದಿಂದಾಗಿ ಹೆಚ್ಚಿನ ಸಂಖ್ಯೆಯಲ್ಲಿ ವಲಸಿಗರು ಭಾರತವನ್ನು ಪ್ರವೇಶಿಸಬಹುದು, ಇದು ಭದ್ರತಾ ಸಮಸ್ಯೆಗಳನ್ನು ಉಂಟು ಕಾರಣವಾಗಲಿದೆ ಎಂಬ ಮಿಜೋರಂ ಸೇರಿದಂತೆ ಈಶಾನ್ಯ ರಾಜ್ಯಗಳ ಆತಂದ ಬಳಿಕ ಅಮಿತ್‌ ಶಾ ನಿರ್ಧಾರ ಪ್ರಕಟಿಸಿದ್ದಾರೆ.

ಈಗಿನ ನಿಯಮ ಏನು?:

ಮ್ಯಾನ್ಮಾರ್ ಭಾರತದೊಂದಿಗೆ 1643 ಕಿ.ಮೀ. ಉದ್ದದ ಗಡಿಯನ್ನು ಹಂಚಿಕೊಂಡಿದ್ದು, ಮುಕ್ತ ಓಡಾಟ ಒಪ್ಪಂದದ ಪ್ರಕಾರ ಉಭಯ ದೇಶಗಳ ಗಡಿಯಿಂದ 16 ಕಿ.ಮೀ. ದೂರದವರೆಗೆ ವೀಸಾ ಇಲ್ಲದೇ ಪ್ರಯಾಣ ನಡೆಸಬಹುದಿತ್ತು.

ಮಲಗೋದು ಭಾರತದಲ್ಲಿ ತಿನ್ನೋದು ಫಾರಿನ್‌ನಲ್ಲಿ: ಬಾರ್ಡರ್‌ನಲ್ಲಿರುವ ವಿಶೇಷ ಮನೆ ಇದು...!

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ರೈತರಿಗಾಗಿ ಮಸೂದೆ ಮಂಡಿಸಿದ ಸಂಸದ ಡಾ.ಕೆ.ಸುಧಾಕರ್: ಹೈನುಗಾರರು-ಹೂವು ಬೆಳೆಗಾರರಿಗೆ ದೊಡ್ಡ ಆಶಾಕಿರಣ
ಇಂದಿಗೋ ನಾಳೆಗೋ ಎನ್ನುವಂತಿಲ್ಲ, ತಕ್ಷಣದಿಂದಲೇ ಪ್ರಯಾಣಿಕರಿಗೆ ಹಣ ರೀಫಂಡ್‌ ಮಾಡಿ; ಇಂಡಿಗೋಗೆ ಸೂಚಿಸಿದ ಸರ್ಕಾರ!