ದುಬೈ: ತನ್ನ ಸರ್ವೋಚ್ಚ ನಾಯಕ ಆಯತೊಲ್ಲಾ ಖಮೇನಿ ಹತ್ಯೆಯಿಂದ ಆಕ್ರೋಶಗೊಂಡಿರುವ ಇರಾನ್, ಶತ್ರು ದೇಶಗಳ ಮೇಲೆ ಭಾನುವಾರ ಪ್ರತೀಕಾರದ ದಾಳಿ ಆರಂಭಿಸಿದೆ. ಶನಿವಾರ ದಾಳಿ ನಡೆಸಿದ್ದ ಬಹುತೇಕ ಎಲ್ಲಾ ಕೊಲ್ಲಿ ದೇಶಗಳ ಮೇಲೆ ಭಾನುವಾರ ಕೂಡಾ ಕ್ಷಿಪಣಿ ಮತ್ತು ಡ್ರೋನ್ ಬಳಸಿ ದಾಳಿ ನಡೆಸಿದೆ. ಇದರಿಂದ ದುಬೈ ಸೇರಿದಂತೆ ಯುಎಇ, ಕುವೈತ್, ಬಹ್ರೈನ್, ಜೋರ್ಡನ್, ಸೌದಿ ಅರೇಬಿಯಾ ತತ್ತರಿಸಿವೆ.
08:53 AM (IST) Mar 02
ಇರಾನ್-ಇಸ್ರೇಲ್ ಯುದ್ಧದ ಕಾರಣ ಮಧ್ಯಪ್ರಾಚ್ಯ ದೇಶಗಳಲ್ಲಿ ಸಿಲುಕಿರುವ ಕನ್ನಡಿಗರ ನೆರವಿಗಾಗಿ ಕರ್ನಾಟಕ ಸರ್ಕಾರವು ರಾಜ್ಯ ಮತ್ತು ಜಿಲ್ಲಾ ಮಟ್ಟದಲ್ಲಿ 24/7 ತುರ್ತು ಕಾರ್ಯಾಚರಣಾ ಕೇಂದ್ರಗಳನ್ನು ಸ್ಥಾಪಿಸಿದೆ. ಸಂಕಷ್ಟದಲ್ಲಿರುವವರನ್ನು ಸುರಕ್ಷಿತವಾಗಿ ವಾಪಸ್ ಕರೆತರಲು ಸರ್ಕಾರ ಪ್ರಯತ್ನಿಸುತ್ತಿದೆ.
08:08 AM (IST) Mar 02
ಇರಾನ್-ಇಸ್ರೇಲ್ ಯುದ್ಧದ ಪರಿಣಾಮವಾಗಿ ವಿಮಾನ ಸಂಚಾರ ಸ್ಥಗಿತಗೊಂಡಿದ್ದು, ನೂರಾರು ಕನ್ನಡಿಗರು ವಿದೇಶದಲ್ಲಿ ಸಿಲುಕಿದ್ದಾರೆ. ಶಾಸಕರು, ವಿದ್ಯಾರ್ಥಿಗಳು ಹಾಗೂ ಪ್ರವಾಸಿಗರು ಸೇರಿದಂತೆ ಹಲವರು ತಾಯ್ನಾಡಿಗೆ ಮರಳಲು ಸಾಧ್ಯವಾಗದೆ ಸಂಕಷ್ಟದಲ್ಲಿದ್ದು, ತಮ್ಮನ್ನು ಸುರಕ್ಷಿತವಾಗಿ ಕರೆತರಲು ಸರ್ಕಾರಕ್ಕೆ ಮನವಿ.
07:08 AM (IST) Mar 02
ಟಿ20 ವಿಶ್ವಕಪ್ನ ನಿರ್ಣಾಯಕ ಸೂಪರ್-8 ಪಂದ್ಯದಲ್ಲಿ, ವೆಸ್ಟ್ಇಂಡೀಸ್ ವಿರುದ್ಧ ಭಾರತ 5 ವಿಕೆಟ್ಗಳ ರೋಚಕ ಜಯ ಸಾಧಿಸಿ ಸೆಮಿಫೈನಲ್ ಪ್ರವೇಶಿಸಿದೆ. ಸಂಜು ಸ್ಯಾಮ್ಸನ್ ಅವರ ಅಜೇಯ 97 ರನ್ಗಳ ಏಕಾಂಗಿ ಹೋರಾಟದಿಂದಾಗಿ ತಂಡ ಗೆಲುವಿನ ದಡ ಸೇರಿತು.