LIVE NOW
Published : Mar 02, 2026, 06:39 AM ISTUpdated : Mar 02, 2026, 08:53 AM IST

India News Live: ಕನ್ನಡಿಗರ ನೆರವಿಗೆ 24*7 ಹೆಲ್ಪ್‌ಲೈನ್, ಕನ್ನಡಿಗರನ್ನು ಸುರಕ್ಷಿತವಾಗಿ ಕರೆತನ್ನಿ - ಕೇಂದ್ರಕ್ಕೆ ರಾಜ್ಯ ಪತ್ರ

ಸಾರಾಂಶ

ದುಬೈ: ತನ್ನ ಸರ್ವೋಚ್ಚ ನಾಯಕ ಆಯತೊಲ್ಲಾ ಖಮೇನಿ ಹತ್ಯೆಯಿಂದ ಆಕ್ರೋಶಗೊಂಡಿರುವ ಇರಾನ್‌, ಶತ್ರು ದೇಶಗಳ ಮೇಲೆ ಭಾನುವಾರ ಪ್ರತೀಕಾರದ ದಾಳಿ ಆರಂಭಿಸಿದೆ. ಶನಿವಾರ ದಾಳಿ ನಡೆಸಿದ್ದ ಬಹುತೇಕ ಎಲ್ಲಾ ಕೊಲ್ಲಿ ದೇಶಗಳ ಮೇಲೆ ಭಾನುವಾರ ಕೂಡಾ ಕ್ಷಿಪಣಿ ಮತ್ತು ಡ್ರೋನ್‌ ಬಳಸಿ ದಾಳಿ ನಡೆಸಿದೆ. ಇದರಿಂದ ದುಬೈ ಸೇರಿದಂತೆ ಯುಎಇ, ಕುವೈತ್‌, ಬಹ್ರೈನ್‌, ಜೋರ್ಡನ್‌, ಸೌದಿ ಅರೇಬಿಯಾ ತತ್ತರಿಸಿವೆ.

 

08:53 AM (IST) Mar 02

ಕನ್ನಡಿಗರ ನೆರವಿಗೆ 24*7 ಹೆಲ್ಪ್‌ಲೈನ್, ಕನ್ನಡಿಗರನ್ನು ಸುರಕ್ಷಿತವಾಗಿ ಕರೆತನ್ನಿ - ಕೇಂದ್ರಕ್ಕೆ ರಾಜ್ಯ ಪತ್ರ

ಇರಾನ್‌-ಇಸ್ರೇಲ್‌ ಯುದ್ಧದ ಕಾರಣ ಮಧ್ಯಪ್ರಾಚ್ಯ ದೇಶಗಳಲ್ಲಿ ಸಿಲುಕಿರುವ ಕನ್ನಡಿಗರ ನೆರವಿಗಾಗಿ ಕರ್ನಾಟಕ ಸರ್ಕಾರವು ರಾಜ್ಯ ಮತ್ತು ಜಿಲ್ಲಾ ಮಟ್ಟದಲ್ಲಿ 24/7 ತುರ್ತು ಕಾರ್ಯಾಚರಣಾ ಕೇಂದ್ರಗಳನ್ನು ಸ್ಥಾಪಿಸಿದೆ. ಸಂಕಷ್ಟದಲ್ಲಿರುವವರನ್ನು ಸುರಕ್ಷಿತವಾಗಿ ವಾಪಸ್ ಕರೆತರಲು ಸರ್ಕಾರ ಪ್ರಯತ್ನಿಸುತ್ತಿದೆ.

Read Full Story

08:08 AM (IST) Mar 02

ಕೊಲ್ಲಿ ಯುದ್ದ - ಸಂಕಷ್ಟದಲ್ಲಿ 150ಕ್ಕೂ ಹೆಚ್ಚು ಕನ್ನಡಿಗರು! ಯುದ್ದಾತಂಕದ ಬಗ್ಗೆ ಡ್ರೋನ್ ಪ್ರತಾಪ್ ಹೇಳಿದ್ದೇನು?

ಇರಾನ್-ಇಸ್ರೇಲ್ ಯುದ್ಧದ ಪರಿಣಾಮವಾಗಿ ವಿಮಾನ ಸಂಚಾರ ಸ್ಥಗಿತಗೊಂಡಿದ್ದು, ನೂರಾರು ಕನ್ನಡಿಗರು ವಿದೇಶದಲ್ಲಿ ಸಿಲುಕಿದ್ದಾರೆ. ಶಾಸಕರು, ವಿದ್ಯಾರ್ಥಿಗಳು ಹಾಗೂ ಪ್ರವಾಸಿಗರು ಸೇರಿದಂತೆ ಹಲವರು ತಾಯ್ನಾಡಿಗೆ ಮರಳಲು ಸಾಧ್ಯವಾಗದೆ ಸಂಕಷ್ಟದಲ್ಲಿದ್ದು, ತಮ್ಮನ್ನು ಸುರಕ್ಷಿತವಾಗಿ ಕರೆತರಲು ಸರ್ಕಾರಕ್ಕೆ ಮನವಿ.

Read Full Story

07:08 AM (IST) Mar 02

ಟಿ20 ವಿಶ್ವಕಪ್ - ನಿನ್ನೆ ನಡೆದ ಭಾರತ-ವೆಸ್ಟ್ ಇಂಡೀಸ್ ನಡುವಿನ ಮ್ಯಾಚ್ ಗೆದ್ದಿದ್ದು ಯಾರು?

ಟಿ20 ವಿಶ್ವಕಪ್‌ನ ನಿರ್ಣಾಯಕ ಸೂಪರ್‌-8 ಪಂದ್ಯದಲ್ಲಿ, ವೆಸ್ಟ್‌ಇಂಡೀಸ್‌ ವಿರುದ್ಧ ಭಾರತ 5 ವಿಕೆಟ್‌ಗಳ ರೋಚಕ ಜಯ ಸಾಧಿಸಿ ಸೆಮಿಫೈನಲ್‌ ಪ್ರವೇಶಿಸಿದೆ. ಸಂಜು ಸ್ಯಾಮ್ಸನ್‌ ಅವರ ಅಜೇಯ 97 ರನ್‌ಗಳ ಏಕಾಂಗಿ ಹೋರಾಟದಿಂದಾಗಿ ತಂಡ ಗೆಲುವಿನ ದಡ ಸೇರಿತು.  

Read Full Story

More Trending News