LIVE NOW
Published : Apr 19, 2026, 07:01 AM ISTUpdated : Apr 19, 2026, 12:15 PM IST

India News Live: ಒಂದೇ ಗಂಟೆಯಲ್ಲಿ 7 ಸುಳ್ಳು - ಟ್ರಂಪ್ ವಿರುದ್ದ ಇಸ್ರೇಲ್ ಇರಾನ್ ಎರಡೂ ದೇಶಗಳ ಆಕ್ರೋಶ

ಸಾರಾಂಶ

ಟೆಹ್ರಾನ್: ಶುಕ್ರವಾರವಷ್ಟೇ ಹೋರ್ಮುಜ್ ಜಲಸಂಧಿಯನ್ನು ವಾಣಿಜ್ಯ ಹಡಗುಗಳ ಮುಕ್ತ ಸಂಚಾರಕ್ಕೆ ತೆರವು ಮಾಡಿದ್ದ ಇರಾನ್, ಶನಿವಾರ ಪುನಃ ಅದನ್ನು ಬಂದ್ ಮಾಡಿದೆ. ಅದರ ಬೆನ್ನಲ್ಲೇ, 'ಭಾರತ ನಮ್ಮ ಮಿತ್ರ. ಅದರ ಹಡಗುಗಳ ಮೇಲೆ ನಾವು ಕ್ರಮ ಜರು ಗಿಸಲ್ಲ' ಎನ್ನುತ್ತಿದ್ದ ಇರಾನ್ ರಾಗ ಬದಲಿಸಿದೆ ಹಾಗೂ ಜಲಸಂಧಿ ದಾಟಿ ಭಾರತದತ್ತ ಹೊರಟಿದ್ದ 14 ಹಡಗುಗಳನ್ನು ತಡೆದಿದೆ. ಈ ಪೈಕಿ ಒಂದು ಹಡಗಿನ ಮೇಲೆ ಗುಂಡಿನ ದಾಳಿ ಕೂಡಾ ನಡೆದಿದೆ. ಇದರ ನಡುವೆ ಭಾರತದ ಒಂದು ಹಡಗು ಮಾತ್ರ ಜಲಸಂಧಿ ದಾಟುವಲ್ಲಿ ಯಶಸ್ವಿಯಾಗಿದೆ. ಮತ್ತೊಂದೆಡೆ ಬ್ರಿಟನ್ ಕೂಡಾ ತನ್ನ 2 ವಾಣಿಜ್ಯ ಹಡಗಿನ ಮೇಲೆ ಹೋರ್ಮುಜ್‌ನಲ್ಲಿ ಗುಂಡಿನ ದಾಳಿ ನಡೆದಿದ್ದಾಗಿ ಹೇಳಿಕೊಂಡಿದೆ. ಗುಂಡಿನ ದಾಳಿಯ ಘಟನೆ ಬಗ್ಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿರುವ ಭಾರತದ ವಿದೇಶಾಂಗ ಸಚಿವಾಲಯ, ನವದೆಹಲಿಯಲ್ಲಿನ ಇರಾನ್ ರಾಯಭಾರಿ ಮೊಹಮ್ಮದ್ ಫಥಾಲಿ ಅವರನ್ನು ಕರೆಸಿ ತನ್ನ ಆಕ್ರೋಶ ವ್ಯಕ್ತಪಡಿಸಿದೆ.

us iran talks restart conditions trump hormuz strait irgc approval islamabad negotiations middle east crisis

12:15 PM (IST) Apr 19

ಒಂದೇ ಗಂಟೆಯಲ್ಲಿ 7 ಸುಳ್ಳು - ಟ್ರಂಪ್ ವಿರುದ್ದ ಇಸ್ರೇಲ್ ಇರಾನ್ ಎರಡೂ ದೇಶಗಳ ಆಕ್ರೋಶ

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಇಸ್ರೇಲ್-ಲೆಬನಾನ್ ಕದನ ವಿರಾಮದ ಬಗ್ಗೆ ಗೊಂದಲಕಾರಿ ಹೇಳಿಕೆ ನೀಡಿ ಮಿತ್ರರಾಷ್ಟ್ರವನ್ನೇ ಇಕ್ಕಟ್ಟಿಗೆ ಸಿಲುಕಿಸಿದ್ದಾರೆ. ಮತ್ತೊಂದೆಡೆ, ಹೋರ್ಮುಜ್ ಜಲಸಂಧಿ ವಿಚಾರದಲ್ಲಿ ಇರಾನ್‌ಗೆ ಎಚ್ಚರಿಕೆ ನೀಡಿದ್ದು, ಇದಕ್ಕೆ ಇರಾನ್ ಆಕ್ರೋಶ ವ್ಯಕ್ತಪಡಿಸಿದೆ.

Read Full Story

11:34 AM (IST) Apr 19

ಡೆಲ್ಲಿ ಎದುರು ಆರ್‌ಸಿಬಿ ಸೋತಿದ್ದು ಹೇಗೆ? ಬೆಂಗಳೂರು ತಂಡದ ಸೋಲಿಗೆ ಈ ನಾಲ್ವರೇ ಕಾರಣ! ನೀವೇನಂತೀರಾ?

ತವರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಸೋಲನುಭವಿಸಿದೆ. ಜಿತೇಶ್ ಶರ್ಮಾ ಅವರ ಮಂದಗತಿಯ ಬ್ಯಾಟಿಂಗ್, ಪ್ರಮುಖ ಬೌಲರ್‌ಗಳ ವೈಫಲ್ಯ ಹಾಗೂ ಎದುರಾಳಿ ತಂಡದ ಆಟಗಾರರ ಉತ್ತಮ ಪ್ರದರ್ಶನ ಆರ್‌ಸಿಬಿ ಸೋಲಿಗೆ ಪ್ರಮುಖ ಕಾರಣಗಳಾಗಿವೆ.
Read Full Story

11:20 AM (IST) Apr 19

2ನೇ ಮಗುವಿನ ನಿರೀಕ್ಷೆಯಲ್ಲಿ ದೀಪಿಕಾ ರಣ್ವೀರ್ - ಮಗಳು ದುವಾ ಕೈಯಲ್ಲಿ ಗುಡ್‌ನ್ಯೂಸ್ ತಿಳಿಸಿದ ದೀಪ್ವೀರ್‌

ಬಾಲಿವುಡ್ ತಾರಾ ದಂಪತಿ ದೀಪಿಕಾ ಪಡುಕೋಣೆ ಮತ್ತು ರಣ್ವೀರ್ ಸಿಂಗ್ ಅವರು ತಮ್ಮ ಎರಡನೇ ಮಗುವಿನ ನಿರೀಕ್ಷೆಯಲ್ಲಿದ್ದಾರೆ. ಈ ಸಿಹಿ ಸುದ್ದಿಯನ್ನು ಅವರು ಸೋಶಿಯಲ್ ಮೀಡಿಯಾದಲ್ಲಿ ತಮ್ಮ ಮೊದಲ ಮಗುವಿನ ಕೈಯಲ್ಲಿರುವ ಫೋಟೋದೊಂದಿಗೆ ಹಂಚಿಕೊಂಡಿದ್ದು, ಅಭಿಮಾನಿಗಳಿಂದ ಶುಭಾಶಯ ಹರಿದು ಬರುತ್ತಿವೆ.

Read Full Story

11:05 AM (IST) Apr 19

ಸಿಕ್ಕಿಂ ಟೆಮಿ ಚಹಾ ಪುಡಿ ದಾಖಲೆಯ ಬೆಲೆಗೆ ಸೇಲ್ - 1 ಕೇಜಿಗೆ ಬರೋಬ್ಬರಿ 27,000 ರೂ.ಗೆ ಸೇಲ್

ಸಿಕ್ಕಿಂನ ಟೆಮಿ ಚಹಾ ಪುಡಿ ದಾಖಲೆಯ ₹27,000ಕ್ಕೆ ಮಾರಾಟವಾಗಿದೆ. ಬಿಜೆಪಿ ಹಿರಿಯ ನಾಯಕ ಬಲ್ಬೀರ್ ಪುಂಜ್ ನಿಧನರಾಗಿದ್ದು, ಸಿಇಸಿ ಜ್ಞಾನೇಶ್ ಕುಮಾರ್ ಪದಚ್ಯುತಿಗೆ ವಿಪಕ್ಷಗಳು ಮತ್ತೆ ಯತ್ನಿಸುತ್ತಿವೆ. ದೇಶದಲ್ಲಿ ಎಲ್‌ಪಿಜಿ ಬೇಡಿಕೆ ಸಹಜ ಸ್ಥಿತಿಗೆ ಮರಳಿದೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ.
Read Full Story

10:25 AM (IST) Apr 19

ವಿದೇಶಿ ದೇಣಿಗೆಗೆ ಕಡಿವಾಣಕ್ಕೆ ಫಾದರ್ ಕಿಡಿ - ದೇಗುಲದ ಚಿನ್ನ ಸಮಾಜ ಸೇವೆಗೆ ಬಳಸಲಿ ಎಂದ ಫಾದರ್ ಪೌಲ್

ಕೇಂದ್ರದ ಎಫ್‌ಸಿಆರ್‌ಎ ತಿದ್ದುಪಡಿ ವಿಧೇಯಕದ ಹಿನ್ನೆಲೆಯಲ್ಲಿ, ದೇವಸ್ಥಾನಗಳಲ್ಲಿರುವ ಚಿನ್ನವನ್ನು ಜನರ ಸೇವೆಗೆ ಬಳಸಬೇಕು ಎಂದು ಕೇರಳದ ಫಾದರ್ ಪೌಲ್ ಥಲೈಕಾಡ್ ಹೇಳಿದ್ದಾರೆ. ಚರ್ಚ್ ಹಣವನ್ನು ಸಮಾಜ ಸೇವೆಗೆ ಬಳಸುವಂತೆ ದೇಗುಲದ ಸಂಪತ್ತನ್ನೂ ಬಳಸಬೇಕು ಎಂಬ ಅವರ ಹೇಳಿಕೆ ವಿವಾದ ಸೃಷ್ಟಿಸಿದೆ.

Read Full Story

10:23 AM (IST) Apr 19

Pakistan Payments - ಪಾಕಿಸ್ತಾನದಲ್ಲಿ ಗೂಗಲ್ ಪೇ ಇದೆಯಾ? ಅಲ್ಲಿನ ಜನ ಡಿಜಿಟಲ್ ಪೇಮೆಂಟ್ ಮಾಡ್ತಾರಾ?

ಭಾರತದಲ್ಲಿ ಡಿಜಿಟಲ್ ಪೇಮೆಂಟ್ ಆ್ಯಪ್‌ಗಳು ನಮ್ಮ ದಿನನಿತ್ಯದ ಬದುಕಿನ ಭಾಗವಾಗಿವೆ. ಆದರೆ ಪಾಕಿಸ್ತಾನದಲ್ಲಿ ಪರಿಸ್ಥಿತಿ ಸ್ವಲ್ಪ ಭಿನ್ನವಾಗಿದೆ. ಅಲ್ಲೂ ಡಿಜಿಟಲ್ ಪೇಮೆಂಟ್‌ಗಳಿವೆ, ಆದರೆ ಅಲ್ಲಿನ ವ್ಯವಸ್ಥೆ ಭಾರತಕ್ಕಿಂತ ಬೇರೆಯಾಗಿದೆ.
Read Full Story

10:09 AM (IST) Apr 19

ರಾಜ್ಯಸಭೆ ಸಚಿವಾಲಯದ ನೂತನ ಕಾರ್ಯದರ್ಶಿಯಾಗಿ ಕನ್ನಡಿಗ ಸೋಮಶೇಖರ್ ನೇಮಕ

ಕೋಲಾರ ಮೂಲದ ಡಾ. ಕೆ.ಎಸ್. ಸೋಮಶೇಖರ್ ಅವರು ರಾಜ್ಯಸಭೆ ಸಚಿವಾಲಯದ ನೂತನ ಕಾರ್ಯದರ್ಶಿಯಾಗಿ ನೇಮಕಗೊಂಡಿದ್ದಾರೆ. ಕಳೆದ ಮೂರು ದಶಕಗಳಿಂದ ಸಂಸದೀಯ ಸೇವೆಯಲ್ಲಿರುವ ಇವರು, ಭಾಷಾಂತರಕಾರರಾಗಿ ವೃತ್ತಿ ಆರಂಭಿಸಿ ಇದೀಗ ಉನ್ನತ ಹುದ್ದೆಗೇರಿದ್ದಾರೆ.
Read Full Story

09:54 AM (IST) Apr 19

ಟಾಯ್ ಕಾರ್ ಟೆರರ್ ಗ್ಯಾಂಗ್ ದೆಹಲಿ ಪೊಲೀಸರ ಬಲೆಗೆ - ಆಟಿಕೆ ಕಾರಿಗೆ IED ಜೋಡಿಸುತ್ತಿದ್ದಾಗಲೇ 4 ಶಂಕಿತ ಉಗ್ರರು ಅರೆಸ್ಟ್

ದೆಹಲಿ ಪೊಲೀಸರು ನಾಲ್ವರು ಮೂಲಭೂತವಾದಿಗಳನ್ನು ಬಂಧಿಸುವ ಮೂಲಕ ಭಾರೀ ಉಗ್ರ ದಾಳಿಯ ಸಂಚನ್ನು ವಿಫಲಗೊಳಿಸಿದ್ದಾರೆ. ಆರೋಪಿಗಳು ರಿಮೋಟ್ ಕಂಟ್ರೋಲ್ಡ್ ಆಟಿಕೆ ಕಾರು ಬಳಸಿ ಸ್ಫೋಟ ನಡೆಸಲು ಯೋಜಿಸಿದ್ದರು ಮತ್ತು ದೇಶದಲ್ಲಿ ಖಲೀಫತ್ ಸ್ಥಾಪಿಸುವ ಉದ್ದೇಶ ಹೊಂದಿದ್ದರು ಎಂಬುದು ತನಿಖೆಯಿಂದ ತಿಳಿದು ಬಂದಿದೆ. 

Read Full Story

09:47 AM (IST) Apr 19

ನಾತು ಕಾಲಂ | ಸೋಲು ಗೊತ್ತಿದ್ದೂ ಮೋದಿ ಮಹಿಳಾ ಬಿಲ್‌ ತಂದಿದ್ದು ಏಕೆ? - ನಮೋ- ಅಮಿತ್‌ ಶಾ ಜೋಡಿಯ ಲೆಕ್ಕ ತಪ್ಪಿದ್ದು ಎಲ್ಲಿ?

ಬಹುಮತವಿಲ್ಲದಿದ್ದರೂ, ಮೋದಿ ಸರ್ಕಾರವು ಮಹಿಳಾ ಮೀಸಲಾತಿ ಮತ್ತು ಕ್ಷೇತ್ರ ಪುನರ್‌ವಿಂಗಡಣೆ ಮಸೂದೆಗಳನ್ನು ಜಾರಿಗೆ ತರಲು ಪ್ರಯತ್ನಿಸಿತು. ಆದರೆ, ರಾಜಕೀಯ ಲೆಕ್ಕಾಚಾರಗಳು ವಿಫಲವಾದ ಕಾರಣ ಈ ಪ್ರಯತ್ನ ಸೋತಿದ್ದು, ಇದು ದಕ್ಷಿಣದ ರಾಜ್ಯಗಳು ಮತ್ತು ವಿಪಕ್ಷಗಳಲ್ಲಿ ಆತಂಕ ಸೃಷ್ಟಿಸಿದೆ.
Read Full Story

09:46 AM (IST) Apr 19

ಆ ನಟನಿಂದ ಬ್ರಹ್ಮಾನಂದಂ ಕೆರಿಯರ್ ಕ್ಲೋಸ್? ಎಲ್ಲ ಮುಗೀತು ಅಂದ್ಕೊಂಡಿದ್ದಾಗ ನಡೆದಿದ್ದೇನು?

ಒಬ್ಬ ನಟನಿಂದಾಗಿ ಹಾಸ್ಯ ದಿಗ್ಗಜ ಬ್ರಹ್ಮಾನಂದಂ ಅವರ ಕೆರಿಯರ್​ ಬಹುತೇಕ ಮುಗಿದೇ ಹೋಗಿತ್ತು. ಆ ನಟನ ಬಗ್ಗೆ ಕಾರ್ಯಕ್ರಮವೊಂದರಲ್ಲಿ ಬ್ರಹ್ಮಾನಂದಂ ಹೇಳಿದ ಮಾತುಗಳು ಈಗ ವೈರಲ್ ಆಗಿವೆ. ಯಾರದು ಆ ನಟ? ಈ ಫೋಟೋ ಸ್ಟೋರಿಯಲ್ಲಿದೆ ಮಾಹಿತಿ.
Read Full Story

08:29 AM (IST) Apr 19

IPL 2026 - ನಿನ್ನೆ ನಡೆದ ಆರ್‌ಸಿಬಿ - ಡೆಲ್ಲಿ ಕ್ಯಾಪಿಟಲ್ಸ್ ನಡುವಿನ ಮ್ಯಾಚ್ ಗೆದ್ದಿದ್ದು ಯಾರು?

ಬ್ಯಾಟಿಂಗ್‌ನಲ್ಲಿ ಕೊನೆಯ ಓವರ್‌ಗಳಲ್ಲಿ ಹಿನ್ನಡೆ ಅನುಭವಿಸಿದ ಆರ್‌ಸಿಬಿ, ಬೌಲಿಂಗ್‌ನಲ್ಲಿ 15 ರನ್ ರಕ್ಷಿಸಿಕೊಳ್ಳಲಾಗದೆ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಸೋಲೊಪ್ಪಿಕೊಂಡಿತು. ಕೆ.ಎಲ್. ರಾಹುಲ್ ಮತ್ತು ಸ್ಟಬ್ಸ್ ಅವರ ಅರ್ಧಶತಕಗಳ ನೆರವಿನಿಂದ ಡೆಲ್ಲಿ 6 ವಿಕೆಟ್‌ಗಳ ಜಯ ಸಾಧಿಸಿ, ಚಿನ್ನಸ್ವಾಮಿಯಲ್ಲಿ ಆರ್‌ಸಿಬಿಯ ಗೆಲುವಿನ ಓಟಕ್ಕೆ ತಡೆಯೊಡ್ಡಿತು.
Read Full Story

More Trending News