Published : Feb 06, 2026, 06:56 AM ISTUpdated : Feb 07, 2026, 06:12 AM IST

India News Live: ವಿವಾದಗಳ ನಡುವೆ ಟಿ20 ವಿಶ್ವಕಪ್ ಸಮರ; ಇಂದಿನಿಂದ 10ನೇ ಆವೃತ್ತಿಯ ಚುಟುಕು ವಿಶ್ವಕಪ್‌ಗೆ ಚಾಲನೆ!

ಸಾರಾಂಶ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ಮೇಲೆ ಬುಧವಾರ ಲೋಕಸಭೆಯೊಳಗೆ ದೈಹಿಕವಾಗಿ ಹಲ್ಲೆ ನಡೆಸಲು ಕಾಂಗ್ರೆಸ್ ಸದಸ್ಯರು ಯೋಜಿಸಿದ್ದರು. ಜೊತೆಗೆ ಈ ಕೃತ್ಯ ಮುಚ್ಚಿಡುವ ಸಲುವಾಗಿಯೇ ಮಹಿಳಾ ಸಂಸದೆಯರನ್ನು ಮೋದಿ ಕೂರುವ ಸ್ಥಳದ ಸುತ್ತಲೂ ಸುತ್ತುವರೆದು ನಿಲ್ಲಿಸುವ ಯೋಜನೆ ರೂಪಿಸಲಾಗಿತ್ತು ಎಂದು ಗಂಭೀರ ಆರೋಪವೊಂದು ಕೇಳಿಬಂದಿದೆ. ಮೂಲಗಳನ್ನು ಉಲ್ಲೇಖಿಸಿ ಎಎನ್‌ಐ ಸುದ್ದಿಸಂಸ್ಥೆ ಇಂಥದ್ದೊಂದು ಸುದ್ದಿ ಪ್ರಕಟಿಸಿದೆ. ರಾಷ್ಟ್ರಪತಿಗಳ ಭಾಷಣದ ಮೇಲಿನ ವಂದನಾ ನಿರ್ಣಯದ ಮೇಲೆ ಬುಧವಾರ ಸಂಜೆ 5 ಗಂಟೆಗೆ ಪ್ರಧಾನಿ ನರೇಂದ್ರ ಮೋದಿ ಲೋಕಸಭೆಯಲ್ಲಿ ಮಾತನಾ ಬೇಕಿತ್ತು. ಆದರೆ ಇದಕ್ಕೂ ಮುನ್ನ ವಿಪಕ್ಷದ ಮಹಿಳಾ ಸದಸ್ಯರು ಪ್ರಧಾನಿ ಕೂರುವ ಸ್ಥಳದತ್ತ ಧಾವಿಸಿ ಇಡೀ ಪ್ರದೇಶವನ್ನು ಸುತ್ತುವರೆದು, ಬಿಜೆಪಿಯ ಪುರುಷ ಸದಸ್ಯರ ಜೊತೆ ವಾಕ್ಸಮರಕ್ಕೆ ಇಳಿದಿದ್ದರು.

ಈ ಘಟನೆಯನ್ನು ಪುಷ್ಟಿಕರಿಸುವಂತೆ ಲೋಕಸಭೆಯ ಸ್ಪೀಕರ್ ಓಂ ಬಿರ್ಲಾ ಸ್ಪೋಟಕ ಹೇಳಿಕೆ ನೀಡಿದ್ದಾರೆ. ಬುಧವಾರ ಲೋಕಸಭೆಯಲ್ಲಿ ವಿಪಕ್ಷದ ಮಹಿಳಾ ಸದಸ್ಯರು ಪ್ರಧಾನಿ ಕೂರುವ ಸ್ಥಳವನ್ನು ಸುತ್ತುವರೆದರು ಆ ಬಳಿಕ ಅನಿವಾರ್ಯವಾಗಿ ಮೋದಿ ಭಾಷಣ ರದ್ದುಪಡಿಸಿ ಕಲಾಪವನ್ನೇ ಮುಂದೂಡಿದ ಘಟನೆ ಬಗ್ಗೆ ಸ್ಪೀಕರ್ ಈ ಬಿರ್ಲಾ ಗುರುವಾರ ಪ್ರತಿಕ್ರಿಯೆ ನೀಡಿದ್ದಾರೆ.

 

06:12 AM (IST) Feb 07

ವಿವಾದಗಳ ನಡುವೆ ಟಿ20 ವಿಶ್ವಕಪ್ ಸಮರ; ಇಂದಿನಿಂದ 10ನೇ ಆವೃತ್ತಿಯ ಚುಟುಕು ವಿಶ್ವಕಪ್‌ಗೆ ಚಾಲನೆ!

2026ರ ಐಸಿಸಿ ಟಿ20 ವಿಶ್ವಕಪ್‌ಗೆ ಭಾರತ ಮತ್ತು ಶ್ರೀಲಂಕಾ ಜಂಟಿ ಆತಿಥ್ಯ ವಹಿಸುತ್ತಿವೆ. ಆದರೆ, ಪಾಕಿಸ್ತಾನ ಮತ್ತು ಬಾಂಗ್ಲಾದೇಶದ ವಿವಾದಗಳಿಂದಾಗಿ ಈ ಬಾರಿಯ ಟೂರ್ನಿಯು ಆರಂಭಕ್ಕೂ ಮುನ್ನವೇ ಸುದ್ದಿಯಲ್ಲಿದೆ. ಈ ಲೇಖನವು ಟೂರ್ನಿಯ ಇತಿಹಾಸ, ಸ್ವರೂಪ, ಮತ್ತು ವಿವಾದಗಳ ಸಂಪೂರ್ಣ ಚಿತ್ರಣ ನೀಡುತ್ತದೆ.
Read Full Story

11:57 PM (IST) Feb 06

ಪಕ್ಷಿಗೂ ಗೊತ್ತಾಗಿದೆ ಚಿನ್ನ ದುಬಾರಿ, ಜ್ಯೂವೆಲ್ಲರಿ ಶಾಪ್‌ನಿಂದ ₹1 ಲಕ್ಷ ಮೌಲ್ಯದ ಸರ ಎಗರಿಸಿದ ಪಾರಿವಾಳ

ಪಕ್ಷಿಗೂ ಗೊತ್ತಾಗಿದೆ ಚಿನ್ನ ದುಬಾರಿ, ಜ್ಯೂವೆಲ್ಲರಿ ಶಾಪ್‌ನಿಂದ ₹1 ಲಕ್ಷ ಮೌಲ್ಯದ ಸರ ಎಗರಿಸಿದ ಪಾರಿವಾಳ, ಪಾರಿವಾಳದ ದೃಶ್ಯಗಳು ಸೆರೆಯಾಗಿದೆ. ಇದು ಅಚ್ಚರಿಯಾದರೂ ಸತ್ಯ, ಕೊನೆಗೆ ಏನಾಯ್ತು 

Read Full Story

11:11 PM (IST) Feb 06

ಸಿಜೆ ರಾಯ್ ಬೆನಲ್ಲೇ ಮತ್ತೊಬ್ಬ ಉದ್ಯಮಿ ದುರಂತ ಸಾವು, 17 ಫ್ಲೋರ್‌ನಿಂದ ಜಿಗಿದ ಮುಲ್ತಾನಿ ಬೇಕರಿ ಮಾಲೀಕ

ಸಿಜೆ ರಾಯ್ ಬೆನಲ್ಲೇ ಮತ್ತೊಬ್ಬ ಉದ್ಯಮಿ ದುರಂತ ಸಾವು, ಜನಪ್ರಿಯ ಮುಲ್ತಾನಿ ಬೇಕರಿ ಮಾಲೀಕ, ಶ್ರೀಮಂತ ಉದ್ಯಮಿ ಸುನಿಲ್ ಮೋತಿಲಾಲ್ ಬದುಕು ಅಂತ್ಯಗೊಳಿಸಿದ್ದಾರೆ. ಕೆಲವೇ ದಿನಗಳ ಅಂತರದಲ್ಲಿ ಉದ್ಯಮ ಜಗತ್ತು ಬೆಚ್ಚಿ ಬಿದ್ದಿದೆ.

 

Read Full Story

09:18 PM (IST) Feb 06

ಭಾರತಕ್ಕೆ 6ನೇ ಅ19 ವಿಶ್ವಕಪ್ ಟ್ರೋಫಿ, 1988ರಿಂದ 2026ರ ವರೆಗೆ ಕಪ್ ಗೆದ್ದ ತಂಡಗಳ ಫುಲ್ ಲಿಸ್ಟ್

ಭಾರತಕ್ಕೆ 6ನೇ ಅ19 ವಿಶ್ವಕಪ್ ಟ್ರೋಫಿ, 1988ರಿಂದ 2026ರ ವರೆಗೆ ಕಪ್ ಗೆದ್ದ ತಂಡಗಳ ಫುಲ್ ಲಿಸ್ಟ್ ಇಲ್ಲಿದೆ. ಗರಿಷ್ಠ ಟ್ರೋಫಿ ಗೆದ್ದ ತಂಡ ಯಾವುದು? ಯಾರೆಲ್ಲಾ ಟ್ರೋಫಿ ಗೆದ್ದಿದ್ದಾರೆ?

Read Full Story

08:46 PM (IST) Feb 06

ತಿರುಪತಿ ತಿಮ್ಮಪ್ಪನ ಲಡ್ಡುಗೆ 'ಟಾಯ್ಲೆಟ್ ಕ್ಲೀನಿಂಗ್ ರಾಸಾಯನಿಕ'ದ ತುಪ್ಪ ಬಳಕೆ; ಸಿಎಂ ಚಂದ್ರಬಾಬು ನಾಯ್ಡು

ತಿರುಪತಿ ಲಡ್ಡು ತಯಾರಿಸಲು ಬಳಸುವ ತುಪ್ಪದಲ್ಲಿ ಬಾತ್‌ರೂಮ್ ಕ್ಲೀನಿಂಗ್ ರಾಸಾಯನಿಕ ಮತ್ತು ಪ್ರಾಣಿಗಳ ಕೊಬ್ಬನ್ನು ಬಳಸಲಾಗಿದೆ ಎಂದು ಆಂಧ್ರ ಸಿಎಂ ಚಂದ್ರಬಾಬು ನಾಯ್ಡು ಆರೋಪಿಸಿದ್ದಾರೆ. ಹಿಂದಿನ ಜಗನ್ ಸರ್ಕಾರದ ಅವಧಿಯಲ್ಲಿ ಈ ಕಲಬೆರಕೆ ನಡೆದಿದ್ದು, ಇದು ದೇವರ ವಿರುದ್ಧದ ಮಹಾಪಾಪ ಎಂದು ಹೇಳಿದ್ದಾರೆ. 

Read Full Story

08:36 PM (IST) Feb 06

ಒಂದೇ ಪಂದ್ಯದಲ್ಲಿ 5 ವಿಶ್ವದಾಖಲೆ, ಕ್ರಿಕೆಟ್ ಜಗತ್ತನ್ನೇ ಬೆಚ್ಚಿ ಬೀಳಿಸಿದ ಯುವ ಆಟಗಾರ ವೈಭವ್

ಒಂದೇ ಪಂದ್ಯದಲ್ಲಿ 5 ವಿಶ್ವದಾಖಲೆ, ಕ್ರಿಕೆಟ್ ಜಗತ್ತನ್ನೇ ಬೆಚ್ಚಿ ಬೀಳಿಸಿದ ಯುವ ಆಟಗಾರ ವೈಭವ್ ಸೂರ್ಯವಂಶಿ, ಅಂಡರ್ 19 ಫೈನಲ್ ಪಂದ್ಯದಲ್ಲಿ ವೈಭವ್ ಸೂರ್ಯವಂಶಿ 175 ರನ್ ಹಲವು ದಾಖಲೆಗಳನ್ನು ಪುಡಿ ಮಾಡಿದೆ. ದಾಖಲೆ ಆಟದಿಂದ ಭಾರತ ಟ್ರೋಫಿ ಗೆದ್ದುಕೊಂಡಿದೆ. 

Read Full Story

08:29 PM (IST) Feb 06

'ನಾನು ಹೀಗೆ ಹೇಳಿದ್ರೆ ಹಾಕ್ತೀರಾ, ಹಾಗಿದ್ರೆ ಮಾತ್ರ ಹೇಳ್ತೀನಿ' ಎಂದ ನಟ ಕಿಶೋರ್​ ಮೋದಿ ಬಗ್ಗೆ ಏನಂದ್ರು ಕೇಳಿ!

ತಮ್ಮ 'ಮೆಲ್ಲಿಸೈ' ಚಿತ್ರದ ಪ್ರಚಾರದ ವೇಳೆ ಮಾತನಾಡಿದ ನಟ ಕಿಶೋರ್, ಜೀವನದಲ್ಲಿ ರಿವರ್ಸ್ ಹೋಗುವ ಅವಕಾಶ ಸಿಕ್ಕರೆ 2014ಕ್ಕೆ ಹೋಗುತ್ತಿದ್ದೆ ಎನ್ನುವ ಮೂಲಕ ಪ್ರಧಾನಿ ನರೇಂದ್ರ  ಮೋದಿ ಬಗ್ಗೆ ಏನು ಹೇಳಿದ್ರು ಕೇಳಿ. 

Read Full Story

08:27 PM (IST) Feb 06

15ರ ಪೋರನ ವೈಭವದ ಆಟಕ್ಕ ಒಲಿದ ಕಿರೀಟ, ಭಾರತಕ್ಕೆ 6ನೇ U19 ವಿಶ್ವಕಪ್ ಟ್ರೋಫಿ

15ರ ಪೋರನ ವೈಭವದ ಆಟಕ್ಕ ಒಲಿದ ಕಿರೀಟ, ಅಂಡರ್ 19 ವಿಶ್ವಕಪ್ ಫೈನಲ್ ಪಂದ್ಯದಲ್ಲಿ ವೈಭವ್ ಸೂರ್ಯವಂತಿ ದಾಖಲೆಯ ಆಟಕ್ಕೆ ಹಲವು ದಾಖಲೆ ಜೊತೆಗೆ ವಿಶ್ವಕಪ್ ಟ್ರೋಫಿ ಒಲಿದು ಬಂದಿದೆ. ಭಾರತ 6ನೇ ವಿಶ್ವಕಪ್ ಟ್ರೋಫಿ ಎತ್ತಿಹಿಡಿದಿದೆ. 

Read Full Story

07:39 PM (IST) Feb 06

ಹಳೇ ಸಿಮ್ ಕಾರ್ಡ್ ಬಿಸಾಡಿದ್ದೀರಾ? ಸಿಮ್‌ಗಳಿಂದ ಚಿನ್ನ ಹೊರತೆಗೆದು ₹27 ಲಕ್ಷ ಸಂಪಾದಿಸಿದ ಗುಜುರಿ ವ್ಯಾಪಾರಿ

ಹಳೇ ಸಿಮ್ ಕಾರ್ಡ್ ಬಿಸಾಡಿದ್ದೀರಾ? ನಿಷ್ಕ್ರೀಯಗೊಂಡ ಸಿಮ್ ಕಾರ್ಡ್‌ಗಳಿಂದ ಗುಜುರಿ ವ್ಯಾಪಾರಿ ಬರೋಬ್ಬರಿ 27 ಲಕ್ಷ ರೂಪಾಯಿ ಮೌಲ್ಯದ ಚಿನ್ನ ಹೊರತೆಗಿದಿದ್ದಾರೆ. ಇದೀಗ ಎಲ್ಲರೂ ಸಿಮ್ ಕಾರ್ಡ್ ಬ್ಯೂಸಿನೆಸ್‌ಗೆ ಇಳಿದಿದ್ದಾರೆ.

 

Read Full Story

07:18 PM (IST) Feb 06

ರಾಷ್ಟ್ರಪತಿಗಳ ಅಂಗರಕ್ಷಕ ಪಡೆ ಪಿಬಿಜಿಗೆ ಸೇರಲು ಭಾರತದ 3 ಜಾತಿಗಳ ಸೈನಿಕರಿಗೆ ಮಾತ್ರ ಅವಕಾಶ - ಇದಕ್ಕೇನು ಕಾರಣ?

ಭಾರತದ ರಾಷ್ಟ್ರಪತಿಗಳಿಗೆ ರಕ್ಷಣೆ ನೀಡುವ ರಾಷ್ಟ್ರಪತಿಗಳ ಅಂಗರಕ್ಷಕರ (President's Bodyguard)ಪಡೆಗೆ ಆಯ್ಕೆಯಾಗುವುದಕ್ಕೆ ಕೇವಲ 3 ಜಾತಿಗಳಿಗೆ ಮಾತ್ರ ಅವಕಾಶವಿದೆ ಎಂಬ ವಿಚಾರ ನಿಮಗೆ ಗೊತ್ತಾ ಹಾಗೂ ಅದು ಯಾಕೆ? ಈ ಬಗ್ಗೆ ಇಲ್ಲಿದೆ ಡಿಟೇಲ್ ಸ್ಟೋರಿ…

Read Full Story

06:46 PM (IST) Feb 06

ಪಾನಿಪೂರಿಗೆ 6000 ರೂ, ಉದ್ಯೋಗ ತೊರೆದು ಲಂಡನ್‌ನಲ್ಲಿ ಉದ್ಯಮ ಆರಂಭಿಸಿದ ಭಾರತದ ದಂಪತಿ

ಪಾನಿಪೂರಿಗೆ 6000 ರೂ, ಲಂಡನ್‌ನಲ್ಲಿ ಭಾರತದ ಪಾನಿಪೂರಿ ಬೆಲೆ ಇದು. ಭಾರತೀಯ ದಂಪತಿ ಲಂಡನ್‌ನಲ್ಲಿ ಇದೀಗ ಪಾನಿಪೂರಿ ಉದ್ಯಮ ಆರಂಭಿಸಿ ಯಶಸ್ವಿಯಾಗಿದ್ದಾರೆ. ಇದೀಗ ಈ ಟೆಕ್ಕಿ ದಂಪತಿಗಳ ರೆಸ್ಟೋರೆಂಟ್ ಭಾರಿ ಜನಪ್ರಿಯವಾಗಿದೆ.

Read Full Story

05:57 PM (IST) Feb 06

ಅಂಡರ್‌-19 ವಿಶ್ವಕಪ್ ಫೈನಲ್‌ನಲ್ಲಿ ಶತಕ ಚಚ್ಚಿದ ವೈಭವ್ ಸೂರ್ಯವಂಶಿ ಎಷ್ಟು ಶ್ರೀಮಂತ ಗೊತ್ತಾ? 14 ವರ್ಷದ ಆಟಗಾರನ ನೆಟ್‌ವರ್ತ್ ಎಷ್ಟು?

ಐಪಿಎಲ್ ಸೆನ್ಸೇಷನ್ ವೈಭವ್ ಸೂರ್ಯವಂಶಿ ಅಂತರಾಷ್ಟ್ರೀಯ ಕ್ರಿಕೆಟ್‌ನಲ್ಲೂ ಧೂಳೆಬ್ಬಿಸುತ್ತಿದ್ದಾರೆ. ಅಂಡರ್-19 ವಿಶ್ವಕಪ್ 2026ರ ಫೈನಲ್‌ನಲ್ಲಿ ಸ್ಫೋಟಕ ಬ್ಯಾಟಿಂಗ್ ಮಾಡಿದ್ದಾರೆ. ವೈಭವ್ ಸೂರ್ಯವಂಶಿ ಅವರ ನಿವ್ವಳ ಆಸ್ತಿ, ಸಂಬಳ ಮತ್ತು ದಾಖಲೆಗಳ ಸಂಪೂರ್ಣ ವಿವರ ಇಲ್ಲಿದೆ.
Read Full Story

05:54 PM (IST) Feb 06

10 ನಿಮಿಷದಲ್ಲಿ ಮನೆಗೆ ಬರುತ್ತೇನೆ, ಜಲಮಂಡಳಿ ನಿರ್ಲಕ್ಷ್ಯಕ್ಕೆ ಬಲಿಯಾದ ಅವಳಿ ಸಹೋದರನ ಕೊನೆಯ ಕರೆ

10 ನಿಮಿಷದಲ್ಲಿ ಮನೆಗೆ ಬರುತ್ತೇನೆ, ಜಲಮಂಡಳಿ ನಿರ್ಲಕ್ಷ್ಯಕ್ಕೆ ಬಲಿಯಾದ ಅವಳಿ ಸಹೋದರನ ಕೊನೆಯ ಕರೆ, ಅಷ್ಟಕ್ಕೂ ಈ ದುರಂತ ನಡೆದಿದ್ದು ಹೇಗೆ, ಇತ್ತೀಚೆಗೆ ಟೆಕ್ಕಿ ದುರಂತ ಸಾವಿನ ಬಳಿಕ ಮತ್ತೊಂದು ಘಟನೆ ನಡೆದಿದೆ.

 

Read Full Story

05:48 PM (IST) Feb 06

ಒಂದೇ ಇನ್ನಿಂಗ್ಸ್‌ನಲ್ಲಿ 7ನೇ ಸ್ಥಾನದಿಂದ ನಂ.1 ಸ್ಥಾನಕ್ಕೆ ಜಿಗಿದ ವೈಭವ್! 30 ಸಿಕ್ಸರ್, 41 ಬೌಂಡರಿ ಸಿಡಿಸಿದ ಸೂರ್ಯವಂಶಿ!

19 ವರ್ಷದೊಳಗಿನವರ ವಿಶ್ವಕಪ್ ಫೈನಲ್‌ನಲ್ಲಿ ಒಂದೇ ಒಂದು ಇನ್ನಿಂಗ್ಸ್‌ನಿಂದ ವೈಭವ್ ಸೂರ್ಯವಂಶಿ, ಟೂರ್ನಿಯ ಟಾಪ್ ರನ್ ಸ್ಕೋರರ್ ಆಗಿ ಹೊರಹೊಮ್ಮಿದ್ದಾರೆ. ಇಂಗ್ಲೆಂಡ್ ವಿರುದ್ಧ 175 ರನ್ ಗಳಿಸುವ ಮೂಲಕ ಅವರು ಈ ಸಾಧನೆ ಮಾಡಿದ್ದಾರೆ.  

Read Full Story

05:33 PM (IST) Feb 06

ಗೌತಮ್ ಗಂಭೀರ್ ನೀಲಿಗಣ್ಣಿನ ಹುಡುಗ ಟಿ20 ವಿಶ್ವಕಪ್‌ನಿಂದ ಔಟ್! ಟೀಂ ಇಂಡಿಯಾಗೆ ದೊಡ್ಡ ಹಿನ್ನಡೆ?

10ನೇ ಆವೃತ್ತಿಯ ಐಸಿಸಿ ಟಿ20 ವಿಶ್ವಕಪ್ ಆರಂಭಕ್ಕೂ ಮುನ್ನವೇ ಹಾಲಿ ಚಾಂಪಿಯನ್ ಭಾರತ ತಂಡಕ್ಕೆ ಆಘಾತ ಎದುರಾಗಿದೆ. ತಂಡದ ಪ್ರತಿಭಾನ್ವಿತ ಆಲ್ರೌಂಡರ್ ಹರ್ಷಿತ್ ರಾಣಾ ಗಾಯದ ಸಮಸ್ಯೆಯಿಂದ ಟೂರ್ನಿಯಿಂದ ಹೊರಬೀಳುವ ಸಾಧ್ಯತೆಯಿದ್ದು, ಅವರ ಬದಲಿಗೆ ಮೊಹಮ್ಮದ್ ಸಿರಾಜ್ ತಂಡ ಸೇರಬಹುದು ಎಂದು ವರದಿಯಾಗಿದೆ.
Read Full Story

04:26 PM (IST) Feb 06

ಕಚ್ಚಾತೈಲ ಖರೀದಿಗೆ ಭಾರತದ ಬಳಿ ಇದೆ ಹಲವು ಆಯ್ಕೆ - ಯಾವುದೇ ದೇಶದಿಂದಲೂ ತೈಲ ಖರೀದಿಸಲು ಭಾರತ ಸ್ವತಂತ್ರವಾಗಿದೆ - ರಷ್ಯಾ

ರಷ್ಯಾದಿಂದ ಭಾರತದ ಕಚ್ಚಾ ತೈಲ ಆಮದು ಪ್ರಮಾಣವು 38 ತಿಂಗಳಲ್ಲೇ ಕನಿಷ್ಠ ಮಟ್ಟಕ್ಕೆ ಕುಸಿದಿದೆ. ಡಿಸೆಂಬರ್ 2025ರ ವರದಿಗಳ ಪ್ರಕಾರ, ರಷ್ಯಾದ ತೈಲದ ಪಾಲು ಗಣನೀಯವಾಗಿ ಕಡಿಮೆಯಾಗಿದ್ದು, ಅಮೆರಿಕದಿಂದ ಆಮದು ಹೆಚ್ಚಾಗಿದೆ. ಇದು ಭಾರತ ತನ್ನ ಇಂಧನ ಮೂಲಗಳನ್ನು ವೈವಿಧ್ಯಗೊಳಿಸುತ್ತಿರುವ ಸ್ಪಷ್ಟ ಸೂಚನೆಯಾಗಿದೆ.

Read Full Story

04:22 PM (IST) Feb 06

ಇಸ್ಲಾಮಾಬಾದ್ ಮಸೀದಿಯಲ್ಲಿ ಶುಕ್ರವಾರದ ಪ್ರಾರ್ಥನೆ ವೇಳೆ ಭೀಕರ ಬಾಂಬ್ ದಾಳಿ, 10ಕ್ಕೂ ಹೆಚ್ಚು ಮಂದಿ ಬಲಿ

ಪಾಕಿಸ್ತಾನದ ಇಸ್ಲಾಮಾಬಾದ್‌ನ ಶಿಯಾ ಮಸೀದಿಯೊಂದರಲ್ಲಿ ಶುಕ್ರವಾರದ ಪ್ರಾರ್ಥನೆ ವೇಳೆ ನಡೆದ ಬಾಂಬ್ ಸ್ಫೋಟದಲ್ಲಿ 10ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದಾರೆ. ಈ ಘಟನೆಯಲ್ಲಿ ಹಲವರು ಗಾಯಗೊಂಡಿದ್ದು, ಇದೊಂದು ಭಯೋತ್ಪಾದಕ ದಾಳಿ ಎಂದು ಪೊಲೀಸರು ಶಂಕಿಸಿದ್ದಾರೆ. 

Read Full Story

04:15 PM (IST) Feb 06

'ಬರೆದಿಟ್ಟುಕೊಳ್ಳಿ, ಪಾಕಿಸ್ತಾನ ಯೂ-ಟರ್ನ್ ಹೊಡೆಯುತ್ತೆ'; ಭಾರತ-ಪಾಕ್ ಪಂದ್ಯ ನಡೆಯೋದು ಪಕ್ಕಾ ಎಂದ ಟೀಂ ಇಂಡಿಯಾ ಮಾಜಿ ಕ್ರಿಕೆಟಿಗ!

ಟಿ20 ವಿಶ್ವಕಪ್‌ನಲ್ಲಿ ಭಾರತ ವಿರುದ್ಧದ ಪಂದ್ಯವನ್ನು ಬಹಿಷ್ಕರಿಸುವುದಾಗಿ ಪಾಕಿಸ್ತಾನ ಬೆದರಿಕೆ ಹಾಕಿದೆ. ಆದರೆ, ಇದು ಬಾಂಗ್ಲಾದೇಶದ ಚುನಾವಣೆಗೆ ಸಂಬಂಧಿಸಿದ ರಾಜಕೀಯ ತಂತ್ರವಾಗಿದ್ದು, ಪಾಕಿಸ್ತಾನ ಶೀಘ್ರದಲ್ಲೇ ತನ್ನ ನಿರ್ಧಾರದಿಂದ ಹಿಂದೆ ಸರಿಯಲಿದೆ ಎಂದು ಚೇತನ್ ಶರ್ಮಾ ಭವಿಷ್ಯ ನುಡಿದಿದ್ದಾರೆ.

Read Full Story

03:29 PM (IST) Feb 06

ನೆರೆ ರಾಜ್ಯದಲ್ಲಿ ಕಾಗೆಗಳ ಸರಣಿ ಸಾವಿನ ಆಘಾತಕಾರಿ ಸತ್ಯ ಪರೀಕ್ಷೆಯಲ್ಲಿ ಬಯಲು, ಜನರಲ್ಲಿ ಆತಂಕ

ನೆರೆ ರಾಜ್ಯದಲ್ಲಿ ಕಾಗೆಗಳ ಸರಣಿ ಸಾವಿನ ಆಘಾತಕಾರಿ ಸತ್ಯ ಪರೀಕ್ಷೆಯಲ್ಲಿ ಬಯಲು, ನಗರದ ಹಲೆವೆಡೆ ಕಾಗೆಗಳು ಸತ್ತು ಬಿದ್ದಿದೆ. ಇದು ಆಪತ್ತಿನ ಸೂಚನೆ ಎಂದು ಹಲವರು ಮಾತನಾಡಿಕೊಳ್ಳುತ್ತಿದ್ದರೆ, ಪರೀಕ್ಷೆಯಲ್ಲಿ ಆಘಾತಕಾರಿ ಆಂಶ ಬಯಲಾಗಿದೆ.

 

Read Full Story

02:50 PM (IST) Feb 06

ಕಾರಿನಲ್ಲಿ ಕುಳಿತಿದ್ದ ಒಬೆರಾಯ್ ಮೇಲೆ ಗುಂಡಿನ ದಾಳಿ, ಆಪ್ ನಾಯಕನ ದುರಂತ ಸಾವಿನ CCTV ದೃಶ್ಯ ಸೆರೆ

ಕಾರಿನಲ್ಲಿ ಕುಳಿತಿದ್ದ ಒಬೆರಾಯ್ ಮೇಲೆ ಗುಂಡಿನ ದಾಳಿ, ಮುಸುಕುದಾರಿ ಅಪರಿಚಿತ ವ್ಯಕ್ತಿಯಿಂದ ದಾಳಿ ನಡೆದಿದೆ. ಹಲವು ಸುತ್ತಿನ ಗುಂಡಿನ ದಾಳಿ ನಡೆಸಿದ ವ್ಯಕ್ತಿ ಸ್ಥಳದಿಂದ ಪರಾರಿಯಾಗಿದ್ದಾನೆ.

 

Read Full Story

02:49 PM (IST) Feb 06

ಅಂಡರ್-19 ವಿಶ್ವಕಪ್ ಫೈನಲ್‌ - ಇಂಗ್ಲೆಂಡ್‌ ಬೌಲರ್‌ಗಳನ್ನು ಚೆಂಡಾಡಿ ಚೊಚ್ಚಲ ಶತಕ ಚಚ್ಚಿದ ವೈಭವ್ ಸೂರ್ಯವಂಶಿ! ಸಿಕ್ಸರ್‌ನಲ್ಲೂ ಹೊಸ ದಾಖಲೆ

ಹರಾರೆ: 2026ರ ಐಸಿಸಿ ಅಂಡರ್-19 ವಿಶ್ವಕಪ್ ಟೂರ್ನಿಯ ಫೈನಲ್‌ನಲ್ಲಿ ಭಾರತ ಹಾಗೂ ಇಂಗ್ಲೆಂಡ್ ತಂಡಗಳು ಮುಖಾಮುಖಿಯಾಗಿದ್ದು, ಭಾರತ ಭರ್ಜರಿ ಆರಂಭ ಪಡೆದಿದೆ. ಇದರ ಜತೆಗೆ ಯುವ ಕ್ರಿಕೆಟಿಗ ವೈಭವ್ ಸೂರ್ಯವಂಶಿ ಚೊಚ್ಚಲ ಅಂಡರ್-19 ವಿಶ್ವಕಪ್ ಶತಕ ಸಿಡಿಸುವ ಮೂಲಕ ಅಪರೂಪದ ದಾಖಲೆ ಬರೆದಿದ್ದಾರೆ.

 

Read Full Story

02:26 PM (IST) Feb 06

ಹನುಮಾನ್ ಪ್ರತಿಮೆಗೆ ನಿರಂತರ ಸುತ್ತು ಹೊಡೆದು ಸುದ್ದಿಯಾಗಿದ್ದ ನಾಯಿ ಅಸ್ವಸ್ಥ - ಪಶುಆಸ್ಪತ್ರೆಗೆ ದಾಖಲು

ಉತ್ತರ ಪ್ರದೇಶದ ಬಿಜ್ನೋರ್‌ನಲ್ಲಿ ಹನುಮಾನ್ ದೇಗುಲದ ಪ್ರತಿಮೆಗೆ ನಿರಂತರ ಪ್ರದಕ್ಷಿಣೆ ಹಾಕುತ್ತಿದ್ದ ಶ್ವಾನ ನಿರ್ಜಲೀಕರಣದಿಂದ ಅಸ್ವಸ್ಥಗೊಂಡಿದ್ದು, ಆ ಶ್ವಾನವನ್ನು ಪ್ರಾಣಿಪ್ರಿಯರು ಆಸ್ಪತ್ರೆಗೆ ದಾಖಲಿಸಿದ್ದಾರೆ. ಶ್ವಾನವು ಈಗ ಚೇತರಿಸಿಕೊಳ್ಳುತ್ತಿದೆ ಎಂದು ವರದಿಯಾಗಿದೆ.

Read Full Story

01:45 PM (IST) Feb 06

ಮೈ ಸುಡುವ ಜ್ವರದ ನಡುವೆಯೂ ಆರ್‌ಸಿಬಿಗೆ ಕಪ್ ಗೆಲ್ಲಿಸಿಕೊಟ್ಟ ಕ್ಯಾಪ್ಟನ್ ಸ್ಮೃತಿ ಮಂಧನಾ! ಬ್ರೇಕ್‌ಅಪ್ ನೋವು ಮರೆಸಿದ ಫೈನಲ್ ಗೆಲುವು

ಸ್ಮೃತಿ ಮಂಧನಾ ನಾಯಕತ್ವದ ಆರ್‌ಸಿಬಿ, ವುಮೆನ್ಸ್ ಪ್ರೀಮಿಯರ್ ಲೀಗ್ ಫೈನಲ್‌ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರೋಚಕ ಜಯ ಸಾಧಿಸಿ ಚಾಂಪಿಯನ್ ಆಗಿದೆ. ಈ ಗೆಲುವಿನಲ್ಲಿ 87 ರನ್ ಸಿಡಿಸಿ ಪ್ರಮುಖ ಪಾತ್ರವಹಿಸಿದ ಮಂಧನಾ, ತೀವ್ರ ಜ್ವರದ ನಡುವೆಯೂ ಫೈನಲ್ ಪಂದ್ಯವನ್ನಾಡಿದ್ದರು ಎಂಬ ಸತ್ಯ ಬಹಿರಂಗವಾಗಿದೆ.

Read Full Story

01:43 PM (IST) Feb 06

15 ವರ್ಷದ ಗೆಳತಿಗೆ ಮಗು ಕರುಣಿಸಿ 13ನೇ ವಯಸ್ಸಿಗೆ ತಂದೆಯಾದ ಬಾಲಕ!

ಬ್ರಿಟನ್‌ನಲ್ಲಿ 13 ವರ್ಷದ ಆಲ್ಫಿ ಪ್ಯಾಟನ್ ತಂದೆಯಾಗಿದ್ದಾನೆ ಎಂಬ ಸುದ್ದಿ ವ್ಯಾಪಕ ಚರ್ಚೆಗೆ ಕಾರಣವಾಯಿತು. ಆದರೆ, ಡಿಎನ್‌ಎ ಪರೀಕ್ಷೆಯ ನಂತರ  ಜೈವಿಕ ತಂದೆಯಲ್ಲ ಎಂಬ ಸತ್ಯ ಬಹಿರಂಗವಾಯಿತು. ಈ ಪ್ರಕರಣವು ಬ್ರಿಟನ್‌ನಲ್ಲಿ  ಲೈಂಗಿಕ ಶಿಕ್ಷಣದ ಅಗತ್ಯತೆಯ ಬಗ್ಗೆ ಗಂಭೀರ ಚರ್ಚೆಯನ್ನು ಹುಟ್ಟುಹಾಕಿತು.

Read Full Story

01:24 PM (IST) Feb 06

ಮೃತಪಟ್ಟ ವ್ಯಕ್ತಿ 48 ಗಂಟೆಗಳ ನಂತರ ಶವಾಗಾರದಲ್ಲಿ ಕಿರುಚುತ್ತಲ್ಲೇ ಎದ್ದ - ಸತ್ತು ಬದುಕಿದವನಿಗೆ ಕಾದಿತ್ತು ಮತ್ತೊಂದು ಆಘಾತ

ದಕ್ಷಿಣ ಆಫ್ರಿಕಾದಲ್ಲಿ, ಕಾರು ಅಪಘಾತದಲ್ಲಿ ಮೃತಪಟ್ಟಿದ್ದಾನೆಂದು ಘೋಷಿಸಲಾದ ವ್ಯಕ್ತಿಯೊಬ್ಬ, ಶವಾಗಾರದ ಫ್ರೀಜರ್‌ನಲ್ಲಿ 48 ಗಂಟೆಗಳ ನಂತರ ಎಚ್ಚರಗೊಂಡಿದ್ದಾನೆ. ಈ ಘಟನೆಯ ನಂತರ ಆತ ಚೇತರಿಸಿಕೊಂಡರೂ, ಆತನಿಗೆ ಮತ್ತೊಂದು ಆಘಾತ ಕಾದಿತ್ತು. ಏನದು?

Read Full Story

12:45 PM (IST) Feb 06

U19 World Cup Final - 6ನೇ ಕಿರೀಟದ ಮೇಲೆ ಕಣ್ಣಿಟ್ಟ ಭಾರತ, ಇಂಗ್ಲೆಂಡ್ ವಿರುದ್ಧ ಫೈನಲ್ ಫೈಟ್; ಎಲ್ಲರ ಚಿತ್ತ ವೈಭವ್ ಸೂರ್ಯವಂಶಿ ಮೇಲೆ!

ಅಂಡರ್-19 ವಿಶ್ವಕಪ್‌ನಲ್ಲಿ ಆರನೇ ಬಾರಿಗೆ ಕಿರೀಟ ಗೆಲ್ಲುವ ಗುರಿಯೊಂದಿಗೆ ಭಾರತ ಇಂದು ಫೈನಲ್‌ನಲ್ಲಿ ಇಂಗ್ಲೆಂಡ್ ತಂಡವನ್ನು ಎದುರಿಸಲಿದೆ. ಟೂರ್ನಿಯುದ್ದಕ್ಕೂ ಉತ್ತಮ ಫಾರ್ಮ್‌ನಲ್ಲಿರುವ ಭಾರತದ ಬ್ಯಾಟಿಂಗ್ ಲೈನ್-ಅಪ್ ಮೇಲೆ ತಂಡದ ಭರವಸೆ ನಿಂತಿದೆ.
Read Full Story

12:34 PM (IST) Feb 06

ಸ್ಟೇಟ್​ ಬ್ಯಾಂಕ್​ನಲ್ಲಿದ್ದ 2 ಕೋಟಿ ಮೌಲ್ಯದ ಚಿನ್ನ- ಬೆಳ್ಳಿ ಗಾಯಬ್​ - ಸಿಬ್ಬಂದಿ ಕೈವಾಡ? ಹೌಹಾರಿದ ಗ್ರಾಹಕರು

 ಎಸ್‌ಬಿಐ ಶಾಖೆಯಲ್ಲಿ ಗ್ರಾಹಕರೊಬ್ಬರ 2 ಕೋಟಿ ರೂ. ಮೌಲ್ಯದ ಚಿನ್ನಾಭರಣಗಳಿದ್ದ ಬ್ಯಾಂಕ್ ಲಾಕರ್ ನಿಗೂಢವಾಗಿ ಕಣ್ಮರೆಯಾಗಿದೆ. ಲಾಕರ್‌ಗೆ ಬಾಡಿಗೆ ಕಡಿತವಾಗುತ್ತಿದ್ದರೂ, ಬ್ಯಾಂಕ್ ಅದನ್ನು ಬೇರೆಯವರಿಗೆ ಹಂಚಿಕೆ ಮಾಡಿರುವುದಾಗಿ ಹೇಳಿದ್ದು, ಇದು ಬ್ಯಾಂಕ್ ಸಿಬ್ಬಂದಿಯ ಕೈವಾಡದ ಶಂಕೆಗೆ ಕಾರಣವಾಗಿದೆ.

Read Full Story

12:06 PM (IST) Feb 06

ಮಕ್ಕಳಿಗಾಗಿ ಹಂಬಲಿಸುವವರಿಗೆ ವರದಾನ ಈ ದೇವಾಲಯ - ನಟ ಶೈನ್​ ಶೆಟ್ಟಿ ದೇಗುಲ ದರ್ಶನ

ಮಕ್ಕಳಿಲ್ಲದೆ ಕೊರಗುತ್ತಿರುವ ದಂಪತಿ ದೇವರ ಮೊರೆ ಹೋಗುವುದು ಸಾಮಾನ್ಯ. ನಟ ಶೈನ್ ಶೆಟ್ಟಿ ಅವರು  ಸಂತಾನ ಭಾಗ್ಯ ಕರುಣಿಸುವ  ನಾಗ ದೇವಸ್ಥಾನದ ಬಗ್ಗೆ ಮಾಹಿತಿ ಹಂಚಿಕೊಂಡಿದ್ದಾರೆ. ಇಲ್ಲಿ ಹರಕೆ ಹೊತ್ತು ಪೂಜೆ ಸಲ್ಲಿಸಿದರೆ ಫಲ ಪ್ರಾಪ್ತಿಯಾಗುತ್ತದೆ ಎಂದು ಹೇಳಲಾಗುತ್ತದೆ.

Read Full Story

11:52 AM (IST) Feb 06

ಭಾರತ ಅಮೆರಿಕಾ ವ್ಯಾಪಾರ ಒಪ್ಪಂದಕ್ಕೆ ಪ್ರಧಾನಿ ಕರೆ ಬಹಳ ಅಗತ್ಯವಾಗಿತ್ತು - ಜೈಶಂಕರ್ ಪುತ್ರ ಧ್ರುವ್ ಜೈಶಂಕರ್

Dhruv Jaishankar on US-India relations: ಭಾರತ-ಅಮೆರಿಕಾ ವ್ಯಾಪಾರ ಒಪ್ಪಂದದಲ್ಲಿನ ಹಠಾತ್ ಪ್ರಗತಿಗೆ ಕಾರಣಗಳನ್ನು ವಿದೇಶಾಂಗ ಸಚಿವ ಎಸ್. ಜೈಶಂಕರ್ ಅವರ ಪುತ್ರ ಧ್ರುವ್ ಜೈಶಂಕರ್ ವಿವರಿಸಿದ್ದು ಡಿಟೇಲ್ ಸ್ಟೋರಿ ಇಲ್ಲಿದೆ.

Read Full Story

10:16 AM (IST) Feb 06

ಚಿನ್ನ-ಬೆಳ್ಳಿ ಬೆಲೆಯಲ್ಲಿ ಮಹಾಪತನ; ಶುಭ ಶುಕ್ರವಾರ ಬೆಳ್ಳಂಬೆಳಗ್ಗೆ ಚಿನ್ನ ₹2,000 ಕುಸಿತ! ಬೆಂಗಳೂರಲ್ಲಿ ಪ್ರತಿ 10 ಗ್ರಾಮ್ ಚಿನ್ನದ ಬೆಲೆ ಎಷ್ಟು?

ಬೆಂಗಳೂರು: ಚಿನ್ನ ಹಾಗೂ ಬೆಳ್ಳಿ ಖರೀದಿಸುವವರ ಪಾಲಿಗೆ ಇಂದು ಬೆಳ್ಳಂಬೆಳಗ್ಗೆ ಸಿಹಿ ಸುದ್ದಿ ಸಿಕ್ಕಿದೆ. ಕೊಂಚ ಏರಿಕೆ ಕಂಡಿದ್ದ ಚಿನ್ನ ಹಾಗೂ ಬೆಳ್ಳಿ ಬೆಲೆಯಲ್ಲಿ ಗುರುವಾರದಿಂದ ಇಳಿಕೆ ಕಾಣಲಾರಂಭಿಸಿದ್ದು, ಇಂದು ಕೂಡಾ ಚಿನ್ನ ಹಾಗೂ ಬೆಳ್ಳಿ ಬೆಲೆಯಲ್ಲಿ ಭರ್ಜರಿ ಇಳಿಕೆ ಕಂಡಿದೆ. ಈ ಅಪ್‌ಡೇಟ್ಸ್ ಇಲ್ಲಿದೆ.

 

Read Full Story

10:06 AM (IST) Feb 06

26ರ ಹರೆಯಕ್ಕೆ CEO ಆದ ಫೋರ್ಬ್ಸ್‌ ಪಟ್ಟಿಯಲ್ಲಿ ಸ್ಥಾನ ಗಿಟ್ಟಿಸಿದ ಯುವತಿ ವಿರುದ್ಧ ಭಾರಿ ವಂಚನೆ ಆರೋಪ

ಫೋರ್ಬ್ಸ್ 30 ಅಂಡರ್ 30 ಪಟ್ಟಿಯಲ್ಲಿದ್ದ, ಕಾಲ್ಡರ್ ಫಿನ್‌ಟೆಕ್ ಸ್ಟಾರ್ಟ್ಅಪ್ ಸಂಸ್ಥಾಪಕಿ ಗೋಕ್ಸೆ ಗುವೆನ್ ವಿರುದ್ಧ ಅಮೆರಿಕದಲ್ಲಿ ಭಾರಿ ವಂಚನೆ ಆರೋಪ ಕೇಳಿಬಂದಿದೆ. ಹೂಡಿಕೆದಾರರಿಗೆ ಸುಳ್ಳು ಮಾಹಿತಿ ನೀಡಿ ಸುಮಾರು $7 ಮಿಲಿಯನ್ ಡಾಲರ್ ಹಣ ಸಂಗ್ರಹಿಸಿದ ಆರೋಪವನ್ನು ಅವರು ಎದುರಿಸುತ್ತಿದ್ದಾರೆ.
Read Full Story

09:41 AM (IST) Feb 06

Baba Vanga Prediction - 2026ರ ವೇಳೆಗೆ ಚಿನ್ನ, ಬೆಳ್ಳಿ ಬೆಲೆ ಎಷ್ಟಾಗುತ್ತೆ? ಬಾಬಾ ವಂಗಾ ಭವಿಷ್ಯ ನಿಜವಾಗುತ್ತಾ?

ಚಿನ್ನ ಮತ್ತು ಬೆಳ್ಳಿಯ ಬೆಲೆಗಳು ಗಗನಕ್ಕೇರುತ್ತಿವೆ. ಈ ಬೆಲೆ ಏರಿಕೆಯ ಬಗ್ಗೆ ತಜ್ಞರು ತಮ್ಮದೇ ಆದ ಅಂದಾಜುಗಳನ್ನು ಮಾಡುತ್ತಿದ್ದಾರೆ. ಇದರ ನಡುವೆಯೇ, ಬಾಬಾ ವಂಗಾ ಅವರ ಭವಿಷ್ಯವಾಣಿಗಳು ಈಗ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿವೆ.
Read Full Story

09:20 AM (IST) Feb 06

ಸತತ ಎರಡು ದಿನಗಳ ಬಳಿಕ ಮತ್ತೆ ಕುಸಿದ ಚಿನ್ನದ ಬೆಲೆ! ಬೆಳ್ಳಿ ಬೆಲೆಯಲ್ಲೂ ಮಹಾ ಕುಸಿತ! ಇಳಿಕೆ ಕಾರಣ ಏನು? ಬಂಗಾರದ ಬೆಲೆ ಎಷ್ಟು?

ಬೆಂಗಳೂರು: ಡಿಸೆಂಬರ್ 30ರಿಂದ ನಿರಂತರವಾಗಿ ಇಳಿಕೆ ಕಂಡಿದ್ದ ಚಿನ್ನ ಹಾಗೂ ಬೆಳ್ಳಿ ದರದಲ್ಲಿ ಕಳೆದೆರಡು ದಿನ ಮತ್ತೆ ಏರುಗತಿ ಕಂಡಿತ್ತು. ಇದೀಗ ಮತ್ತೆ ಚಿನ್ನದ ಬೆಲೆಯಲ್ಲಿ ಇಳಿಕೆ ಕಂಡಿರುವುದು ಗ್ರಾಹಕರ ಮುಖದಲ್ಲಿ ಮಂದಹಾಸ ಮೂಡುವಂತೆ ಮಾಡಿದೆ. ಫೆಬ್ರವರಿ 05ರಂದು ಚಿನ್ನ ಹಾಗೂ ಬೆಳ್ಳಿಯ ಬೆಲೆ ಎಷ್ಟಿತ್ತು?

 

Read Full Story

08:54 AM (IST) Feb 06

ಈಗಾಗಲೇ ಮದ್ವೆಯಾಗಿರುವ ಮಹಿಳೆ, ತನಗೆ ಮದ್ವೆ ಭರವಸೆ ನೀಡಿ ಅತ್ಯಾ*ಚಾರವೆಸಗಿದರು ಎಂದು ದೂರುವಂತಿಲ್ಲ - ಸುಪ್ರೀಂಕೋರ್ಟ್‌

ವಿವಾಹಿತ ಮಹಿಳೆಯೊಬ್ಬಳು ಇನ್ನೊಬ್ಬ ಪುರುಷನೊಂದಿಗೆ ದೈಹಿಕ ಸಂಬಂಧ ಹೊಂದಿದ್ದು, ಆತ ಮದುವೆಯಾಗುವುದಾಗಿ ಸುಳ್ಳು ಭರವಸೆ ನೀಡಿದ್ದರೂ ಅತ್ಯಾ*ಚಾರ ಪ್ರಕರಣ ದಾಖಲಿಸಲು ಸಾಧ್ಯವಿಲ್ಲ ಎಂದು ಸುಪ್ರೀಂಕೋರ್ಟ್ ತೀರ್ಪು ನೀಡಿದೆ. 

Read Full Story

08:23 AM (IST) Feb 06

WPL 2026 - ಎರಡನೇ ಸಲ ಕಪ್ ಗೆಲ್ಲಿಸಿ ಮತ್ತೆ ಗುಡುಗಿದ ಸ್ಮೃತಿ ಮಂಧನಾ! ಆರ್‌ಸಿಬಿ ಫ್ಯಾನ್ಸ್ ದಿಲ್ ಖುಷ್!

ವಡೋದರಾ: 2026ನೇ ಸಾಲಿನ ವುಮೆನ್ಸ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಸ್ಮೃತಿ ಮಂಧನಾ ನೇತೃತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಚಾಂಪಿಯನ್ ಪಟ್ಟ ಅಲಂಕರಿಸಿದೆ. ಇದರ ಬೆನ್ನಲ್ಲೇ ಸ್ಮೃತಿ ಮಂಧನಾ ಆರ್‌ಸಿಬಿ ಅಭಿಮಾನಿಗಳು ಹೃದಯ ಗೆಲ್ಲುವಂತ ಮಾತುಗಳನ್ನಾಡಿದ್ದಾರೆ.

 

Read Full Story

More Trending News