ನವದೆಹಲಿ (ಏ.18): ಲೋಕಸಭೆ, ವಿಧಾನಸಭೆಗಳಲ್ಲಿ ಶೇ.33 ಮಹಿಳಾ ಮೀಸಲಾತಿ ನೀಡಲು ಉದ್ದೇಶಿಸಿದ್ದ 'ಸಂವಿಧಾನ (131ನೇ ತಿದ್ದುಪಡಿ) ಮಸೂದೆ -2026' ಲೋಕಸಭೆಯಲ್ಲಿ ಶುಕ್ರವಾರ ಸೋಲು ಕಂಡಿದೆ. ಈ ಮೂಲಕ 2029ರ ಲೋಕಸಭೆ ಚುನಾವಣೆಯಿಂದ ಶೇ.33 ಮಹಿಳಾ ಮೀಸಲು ಜಾರಿಗೊಳಿಸುವ ಮೋದಿ ಸರ್ಕಾರದ ಕನಸು ಭಗ್ನವಾಗಿದೆ. ಸಾಂವಿಧಾನಿಕ ತಿದ್ದುಪಡಿ ಆದ ಕಾರಣ ಅಂಗೀಕಾರಕ್ಕೆ ಅಗತ್ಯವಾಗಿದ್ದ 3ನೇ 2ರಷ್ಟು ಬಹುಮತ ಬಾರದೇ ಮಸೂದೆಗೆ 54 ಮತ ಅಂತರದಿಂದ ಸೋಲಾಗಿದೆ. ಅದರೊಂದಿಗೆ ಇಂದಿನ ರಾಷ್ಟ್ರೀಯ, ರಾಜಕೀಯ, ಚುನಾವಣೆ, ವಾಣಿಜ್ಯ, ಟೆಕ್ನಾಲಜಿ ಹಾಗೂ ಎಂಟರ್ಟೇನ್ಮೆಂಟ್ನ ಸುದ್ದಿಗಳ ವಿವರಗಳ ಲೈವ್ ಬ್ಲಾಗ್..
08:45 PM (IST) Apr 18
ಲೋಕಸಭೆಯಲ್ಲಿ ನಾರಿಶಕ್ತಿ ವಂದನಾ ಮಸೂದೆ ಅಂಗೀಕಾರವಾಗದ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ದೇಶದ ಮಹಿಳೆಯರಲ್ಲಿ ಕ್ಷಮೆ ಯಾಚಿಸಿದ್ದಾರೆ. ಮಸೂದೆ ವಿಫಲವಾಗಲು ಕಾಂಗ್ರೆಸ್, ಡಿಎಂಕೆ ಸೇರಿದಂತೆ ವಿಪಕ್ಷಗಳೇ ಕಾರಣ ಎಂದು ಆರೋಪಿಸಿದ ಅವರು, ವಿಪಕ್ಷಗಳು ನಾರಿಶಕ್ತಿಗೆ ಅವಮಾನ ಮಾಡಿವೆ ಎಂದು ವಾಗ್ದಾಳಿ ನಡೆಸಿದರು.
08:13 PM (IST) Apr 18
1981ರಲ್ಲಿ ಕ್ರಾಂತಿ ಕುಮಾರ್ ನಿರ್ಮಾಣದಲ್ಲಿ 'ಕಿರಾಯಿ ರೌಡಿಲು' ಚಿತ್ರ ತೆರೆಕಂಡಿತ್ತು. ಇದರಲ್ಲಿ ಚಿರಂಜೀವಿ, ಮೋಹನ್ ಬಾಬು, ರಾಧಿಕಾ ಮುಖ್ಯಭೂಮಿಕೆಯಲ್ಲಿದ್ದರು. ಕೋದಂಡ ರಾಮಿರೆಡ್ಡಿ ಈ ಚಿತ್ರದ ನಿರ್ದೇಶಕರು.
08:03 PM (IST) Apr 18
ಮಹಿಳೆಯೊಬ್ಬರು ಮಲಬದ್ಧತೆಯಿಂದಾಗಿ ಶೌಚಾಲಯದಲ್ಲಿ ಅತಿಯಾಗಿ ಆಯಾಸಗೊಂಡ ಪರಿಣಾಮ, ತಮ್ಮ 10 ವರ್ಷಗಳ ನೆನಪಿನ ಶಕ್ತಿಯನ್ನು ತಾತ್ಕಾಲಿಕವಾಗಿ ಕಳೆದುಕೊಂಡಿದ್ದಾರೆ. ಈ ಬಗ್ಗೆ ವೈದ್ಯರು ಏನು ಹೇಳ್ತಾರೆ? ಈ ಸಮಸ್ಯೆಗೆ ಕಾರಣ ಏನು?
07:38 PM (IST) Apr 18
ಡಕಾಯಿತ್ ಸಿನಿಮಾ ಯಶಸ್ಸಿನ ನಂತರ ನಟ ಅಡಿವಿ ಶೇಷ್ ಮತ್ತೆ ಫಾರ್ಮ್ಗೆ ಮರಳಿದ್ದಾರೆ. ಕಂಟೆಂಟ್ ಇರುವ ಸಿನಿಮಾಗಳನ್ನೇ ಆಯ್ಕೆ ಮಾಡಿಕೊಳ್ಳುವ ಈ ನಟ, ಇದೀಗ ತಮ್ಮ ಸಂಭಾವನೆಯನ್ನು ಹೆಚ್ಚಿಸಿಕೊಂಡಿದ್ದಾರೆ ಎನ್ನಲಾಗಿದೆ. ಹಾಗಾದರೆ ಅವರು ಎಷ್ಟು ಕೋಟಿ ಬೇಡಿಕೆ ಇಡುತ್ತಿದ್ದಾರೆ?
07:21 PM (IST) Apr 18
ಸಿನಿಮಾ ಇಂಡಸ್ಟ್ರಿಯಲ್ಲಿ ನಟರ ಮಕ್ಕಳು ನಟರಾಗೋದೇ ಹೆಚ್ಚು. ಆದರೆ 'ಭೂತ್ ಬಂಗ್ಲಾ' ಸ್ಟಾರ್ ಅಕ್ಷಯ್ ಕುಮಾರ್ ಮಗನ ವಿಷಯದಲ್ಲಿ ಇದು ಸುಳ್ಳಾಗಿದೆ. ಅಕ್ಷಯ್ ಪ್ರಕಾರ, ಅವರ ಮಗ ಆರವ್ ಭಾಟಿಯಾಗೆ ಸಿನಿಮಾಗಳಲ್ಲಿ ಕೆಲಸ ಮಾಡಲು ಇಷ್ಟವಿಲ್ಲವಂತೆ.
06:23 PM (IST) Apr 18
ಸಿನೆಮಾ ರಂಗದ ಗ್ಲಾಮರ್ ಜಗತ್ತಿನಲ್ಲಿದ್ದರೂ ಮಾಧವನ್ ಎಂದಿಗೂ ವಿವಾದಗಳಿಗೆ ಸಿಲುಕಿದವರಲ್ಲ. ಸರಿತಾ ಸದಾ ಮಾಧವನ್ ಅವರಿಗೆ ಬೆನ್ನೆಲುಬಾಗಿ ನಿಂತಿದ್ದಾರೆ. ಇಂದಿಗೂ ಸಿನೆಮಾ ಕಾರ್ಯಕ್ರಮಗಳಲ್ಲಿ ಈ ಜೋಡಿ ಒಟ್ಟಾಗಿ ಕಾಣಿಸಿಕೊಂಡಾಗ ಅಭಿಮಾನಿಗಳು ಸಂಭ್ರಮಿಸುತ್ತಾರೆ. ಇವರಿಗೆ ವೇದಾಂತ್ ಎಂಬ ಮಗನಿದ್ದಾನೆ.
06:21 PM (IST) Apr 18
06:06 PM (IST) Apr 18
05:54 PM (IST) Apr 18
05:52 PM (IST) Apr 18
ತಾಯಿ ಪರ್ವೀನ್ ಖಾನ್ ನಿಧನದ ನಂತರ ನಟಿ ಜರೀನ್ ಖಾನ್ ಮೊದಲ ಬಾರಿಗೆ ಮೌನ ಮುರಿದಿದ್ದಾರೆ. ಅಮ್ಮನೇ ನನ್ನ ಪ್ರಪಂಚ, ನನ್ನ ಎಲ್ಲವೂ ಆಗಿದ್ದರು. ನನ್ನ ಹೃದಯದಲ್ಲಿ ನಿರಂತರ ನೋವಿದೆ ಮತ್ತು ಖಾಲಿತನ ಕಾಡುತ್ತಿದೆ ಎಂದು ಸೋಷಿಯಲ್ ಮೀಡಿಯಾದಲ್ಲಿ ಭಾವುಕರಾಗಿ ಬರೆದುಕೊಂಡಿದ್ದಾರೆ.
05:38 PM (IST) Apr 18
ಲಾಸ್ ವೇಗಾಸ್ನಲ್ಲಿ ನಡೆದ ಸಿನಿಮಾಕಾನ್ ಈವೆಂಟ್ನಲ್ಲಿ ನಟ ವಿದ್ಯುತ್ ಜಮ್ವಾಲ್ ತಮ್ಮ 'ಸ್ಟ್ರೀಟ್ ಫೈಟರ್' ಚಿತ್ರದ ಟ್ರೈಲರ್ ಲಾಂಚ್ ವೇಳೆ ಗಾಯತ್ರಿ ಮಂತ್ರ ಪಠಿಸಿ ಎಲ್ಲರ ಗಮನ ಸೆಳೆದಿದ್ದಾರೆ. ಅವರ ಈ ನಡೆಗೆ ಸಹನಟರಾದ ನೋವಾ ಸೆಂಟಿನಿಯೊ ಮತ್ತು ಜೇಸನ್ ಮೊಮೊವಾ ಮಂತ್ರಮುಗ್ಧರಾಗಿದ್ದಾರೆ.
05:31 PM (IST) Apr 18
ಬೆಂಗಳೂರು: 2026ರ ಐಪಿಎಲ್ ಟೂರ್ನಿಯಲ್ಲಿಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ತಂಡಗಳು ಮುಖಾಮುಖಿಯಾಗಿದ್ದು, ಈ ಪಂದ್ಯದಲ್ಲಿ ಸ್ಪೋಟಕ ಬ್ಯಾಟರ್ ಟಿಮ್ ಡೇವಿಡ್ ಅತಿವೇಗವಾಗಿ ಶತಕ ಸಿಡಿಸಿ ಹೊಸ ದಾಖಲೆ ನಿರ್ಮಿಸಿದ್ದಾರೆ. ಈ ಕುರಿತಾದ ರಿಪೋರ್ಟ್ ಇಲ್ಲಿದೆ ನೋಡಿ.
05:05 PM (IST) Apr 18
ಈ ಪೋಸ್ಟ್ನ ಮುಖ್ಯ ಉದ್ದೇಶವೇ ದಿವಂಗತ ತಾಯಿ ತೇಜಿ ಬಚ್ಚನ್ ಅವರನ್ನು ನೆನಪಿಸಿಕೊಳ್ಳುವುದಾಗಿತ್ತು. ಬಾಲ್ಯದಲ್ಲಿ ತಾಯಿ ತಮಗೆ ಮಾಡುತ್ತಿದ್ದ 'ಮನೆಮದ್ದು' ಉಪಚಾರವನ್ನು ಅಮಿತಾಭ್ ವಿವರಿಸಿದ್ದಾರೆ.
04:47 PM (IST) Apr 18
04:45 PM (IST) Apr 18
ಐಪಿಎಲ್ನಲ್ಲಿ ಮುಂಬೈ ಇಂಡಿಯನ್ಸ್ ಬೌಲರ್ಗಳಾದ ಶಾರ್ದೂಲ್ ಠಾಕೂರ್ ಮತ್ತು ದೀಪಕ್ ಚಹಾರ್ ಅವರ ಕಳಪೆ ಪ್ರದರ್ಶನಕ್ಕೆ ಮಾಜಿ ಕ್ರಿಕೆಟಿಗ ಕೃಷ್ಣಮಾಚಾರಿ ಶ್ರೀಕಾಂತ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಇಬ್ಬರು ಆಟಗಾರರಿಗೆ ಸಂಬಳ ಕೊಟ್ಟು ಮನೆಗೆ ಕಳುಹಿಸುವಂತೆ ಸಲಹೆ ನೀಡಿದ್ದು, ಜಸ್ಪ್ರೀತ್ ಬುಮ್ರಾಗೆ ವಿಶ್ರಾಂತಿ ಅಗತ್ಯವಿದೆ ಎಂದು ಹೇಳಿದ್ದಾರೆ.
04:44 PM (IST) Apr 18
'ಹಾಯ್ ನಾನ್ನ' ಖ್ಯಾತಿಯ ನಿರ್ದೇಶಕ ಶೌರ್ಯುವ್ ಜೊತೆ ನಟ ವಿಜಯ್ ದೇವರಕೊಂಡ ತಮ್ಮ ಹೊಸ ಸಿನಿಮಾವನ್ನು ಘೋಷಿಸಿದ್ದಾರೆ. ಇದೊಂದು ದೊಡ್ಡ ಮಟ್ಟದ, ಪೌರಾಣಿಕ ಹಿನ್ನೆಲೆಯುಳ್ಳ ಚಿತ್ರವಾಗಲಿದೆ.
03:58 PM (IST) Apr 18
03:55 PM (IST) Apr 18
ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ತಿದ್ದುಪಡಿ ಮಸೂದೆ ಸೋತ ನಂತರ, ಪ್ರಧಾನಿ ನರೇಂದ್ರ ಮೋದಿ ಇಂದು ರಾತ್ರಿ 8:30ಕ್ಕೆ ದೇಶವನ್ನುದ್ದೇಶಿಸಿ ಮಾತನಾಡಲಿದ್ದಾರೆ. ವಿಪಕ್ಷಗಳ ಒಗ್ಗಟ್ಟಿನಿಂದಾಗಿ ಸರ್ಕಾರದ ಪ್ರಯತ್ನ ವಿಫಲವಾಗಿದೆ.
03:20 PM (IST) Apr 18
ಬೆಳ್ಳಿತೆರೆಯ ಮೇಲೆ ರಾಣಿಯಂತೆ ಮೆರೆದ ಜಯಪ್ರದಾ ಅವರ ಈ ಮಾತುಗಳು ಸಿನೆಮಾ ರಂಗದ ಗ್ಲಾಮರ್ ಅಡಿಯಲ್ಲೂ ಎಂತಹ ಕರಾಳ ಸತ್ಯಗಳು ಅಡಗಿರುತ್ತವೆ ಎಂಬುದಕ್ಕೆ ಸಾಕ್ಷಿಯಾಗಿದೆ. ಅಭಿಮಾನಿಗಳು ಅವರ ಧೈರ್ಯಕ್ಕೆ ಮೆಚ್ಚುಗೆ ಸೂಚಿಸುತ್ತಿದ್ದು, "ನೀವು ಇಂದಿಗೂ ನಮಗೆ ಸ್ಫೂರ್ತಿ" ಎಂದಿದ್ದಾರೆ.
02:28 PM (IST) Apr 18
01:31 PM (IST) Apr 18
ಖ್ಯಾತ ಕಿರುತೆರೆ ನಟಿ ಚಾಹತ್ ಖನ್ನಾ, ಮುಸ್ಲಿಂ ಯುವಕನನ್ನು ಮದುವೆಯಾಗಿ ಮತಾಂತರಗೊಂಡಿದ್ದರು. ಆರಂಭದಲ್ಲಿ ಜಾತ್ಯತೀತಳು ಎಂದು ಹೇಳಿದ್ದ ಅವರು, ನಂತರ ತಾನು ಅನುಭವಿಸಿದ ಚಿತ್ರಹಿಂಸೆ ಮತ್ತು ದೌರ್ಜನ್ಯದ ಬಗ್ಗೆ ಹೇಳಿಕೊಂಡಿದ್ದಾರೆ. ಇದೀಗ ತಮ್ಮ ತಪ್ಪಿನ ಅರಿವಾಗಿ, ಸನಾತನ ಧರ್ಮಕ್ಕೆ ಮರಳಿದ್ದಾರೆ.
01:16 PM (IST) Apr 18
ಆರ್ಥಿಕ ಸಂಕಷ್ಟದ ನಡುವೆ ಮಗನ ಬಹುದಿನಗಳ ಬಿರಿಯಾನಿ ಕನಸು ಈಡೇರಿಸಿದ ತಂದೆ, ಜನ ಭಾವುಕ, ಈ ವಿಡಿಯೋ ಭಾರಿ ಸದ್ದು ಮಾಡುತ್ತಿದೆ. ಬಿರಿಯಾನಿ ಬೆಲೆಯಿಂದ ಖರೀದಿ ಸಾಧ್ಯವಾಗಿರಲಿಲ್ಲ. ಮಗನ ಖುಷಿ, ತಂದೆ ಸಾರ್ಥಕತೆಯ ಭಾವಕ್ಕೆ ಹಲವರು ಕಮೆಂಟ್ ಮಾಡಿದ್ದಾರೆ.
12:48 PM (IST) Apr 18
12:47 PM (IST) Apr 18
12:40 PM (IST) Apr 18
ಉದ್ಘಾಟನೆಗೆ ರಾಷ್ಟ್ರಧ್ವಜದ ರಿಬ್ಬನ್ ಕಟ್ ಮಾಡಲು ನಿರಾಕರಿಸಿದ ಸಿಎಂ ಒಮರ್, ಆಯೋಜರ ವಿರುದ್ಧ ಬಿಜೆಪಿ ಗರಂ ಆಗಿದೆ. ಕಟ್ಟಿದ ರಿಬ್ಬನ್ ತೆಗಿಸಿ ಸುರಕ್ಷಿತವಾಗಿಡುವಂತೆ ಓಮರ್ ಅಬ್ದುಲ್ಲಾ ಸೂಚಿಸಿದ ವಿಡಿಯೋ ಭಾರಿ ಸಂಚಲನ ಸೃಷ್ಟಿಸಿದೆ.
12:35 PM (IST) Apr 18
11:57 AM (IST) Apr 18
ಬೆಂಗಳೂರು: ಧರ್ಮಗ್ರಂಥಗಳಲ್ಲಿ ಅಕ್ಷಯ ತೃತೀಯವನ್ನು ಅತ್ಯಂತ ಶುಭ ದಿನವೆಂದು ಪರಿಗಣಿಸಲಾಗಿದೆ. ಇದೇ ಕಾರಣಕ್ಕೆ ಜನರು ಮದುವೆ, ಗೃಹಪ್ರವೇಶದಂತಹ ಶುಭ ಕಾರ್ಯಗಳನ್ನು ಯಾವುದೇ ಮುಹೂರ್ತ ನೋಡದೆ ಈ ದಿನ ಮಾಡುತ್ತಾರೆ. ಈ ದಿನ ಚಿನ್ನ ಖರೀದಿಸುವುದಕ್ಕೂ ವಿಶೇಷ ಮಹತ್ವವಿದೆ.
11:51 AM (IST) Apr 18
ರಾಸಲೀಲೆ ಕೇಸ್ ನಾಸಿಕ್ ಗುರೂಜಿ ಆಪ್ತ, ಪತ್ನಿ ಅಪಘಾತದಲ್ಲಿ ಸಾವು, ಅನುಮಾನ ಹೆಚ್ಚಿಸಿದ ಆ್ಯಕ್ಸಿಡೆಂಟ್, ಗುರೂಜಿ ಜೈಲು ಸೇರಿದ್ದರೂ ಪ್ರಭಾವ ಬಳಸಿ ತನ್ನ ವಿರುದ್ಧ ಸಾಕ್ಷ್ಯ ಸಿಗದಂತೆ ಮಾಡುತ್ತಿದ್ದಾರೆ ಅನ್ನೋ ಗಂಭೀರ ಆರೋಪ ಕೇಳಿಬಂದಿದೆ.
11:39 AM (IST) Apr 18
09:59 AM (IST) Apr 18
ಗುಜರಾತ್ ಟೈಟಾನ್ಸ್ ವಿರುದ್ಧದ ಪಂದ್ಯದಲ್ಲಿ ಕೆಕೆಆರ್ ಆಟಗಾರ ಕ್ಯಾಮರೂನ್ ಗ್ರೀನ್ ಬಾರಿಸಿದ ಸಿಕ್ಸರ್, ಮೈದಾನದಲ್ಲಿದ್ದ 'ಟಾಟಾ ಸಿಯೆರಾ' ಕಾರಿಗೆ ಬಡಿಯಿತು. ಈ ಕಾರಣದಿಂದಾಗಿ, ಟಾಟಾ ಸಂಸ್ಥೆಯು ಗ್ರಾಮೀಣ ಕ್ರಿಕೆಟ್ ಅಭಿವೃದ್ಧಿಗೆ 5 ಲಕ್ಷ ರೂಪಾಯಿ ದೇಣಿಗೆ ನೀಡಲಿದೆ.
09:58 AM (IST) Apr 18
09:14 AM (IST) Apr 18
07:34 AM (IST) Apr 18
ಬೆಂಗಳೂರಿನ ಹೆಸರಘಟ್ಟದ ಸರ್ಕಾರಿ ಪೌಲ್ಟ್ರಿ ಫಾರಂನಲ್ಲಿ H5N1 ವೈರಸ್ (ಹಕ್ಕಿ ಜ್ವರ) ಪತ್ತೆಯಾಗಿದೆ. ಮುನ್ನೆಚ್ಚರಿಕಾ ಕ್ರಮವಾಗಿ, 7,444 ಕೋಳಿಗಳನ್ನು ನಾಶಪಡಿಸಲಾಗಿದ್ದು, ಸುತ್ತಮುತ್ತಲಿನ ಪ್ರದೇಶದಲ್ಲಿ ಕಣ್ಗಾವಲು ಇರಿಸಲಾಗಿದೆ. ಇದು ಈ ವರ್ಷ ರಾಜ್ಯದಲ್ಲಿ ವರದಿಯಾದ ಮೊದಲ ಹಕ್ಕಿ ಜ್ವರ ಪ್ರಕರಣವಾಗಿದೆ.
07:33 AM (IST) Apr 18
ಲೋಕಸಭೆಯಲ್ಲಿ ಮಹಿಳಾ ಮೀಸಲು ಮಸೂದೆಯು ಸೋಲು ಕಂಡಿದೆ. ಈ ಸೋಲನ್ನು ಮುಂಬರುವ ಚುನಾವಣೆಗಳಲ್ಲಿ ರಾಜಕೀಯ ಅಸ್ತ್ರವಾಗಿ ಬಳಸಲು ಬಿಜೆಪಿ ಸಜ್ಜಾಗಿದ್ದರೆ, ವಿಪಕ್ಷಗಳು ಇದನ್ನು ಸಂವಿಧಾನಕ್ಕೆ ಸಂದ ಜಯವೆಂದು ಸಂಭ್ರಮಿಸುತ್ತಿವೆ. ಈ ಬೆಳವಣಿಗೆಯ ಆಡಳಿತ ಮತ್ತು ವಿರೋಧ ಪಕ್ಷಗಳ ನಡುವೆ ವಾಕ್ಸಮರಕ್ಕೆ ಕಾರಣವಾಗಿದೆ.
07:33 AM (IST) Apr 18
ಮಹಿಳಾ ಮೀಸಲು ಮಸೂದೆ ಚರ್ಚೆಯ ವೇಳೆ, ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರು ತಮಗೂ ಮತ್ತು ಪ್ರಧಾನಿ ಮೋದಿಗೂ 'ಪತ್ನಿ ಸಮಸ್ಯೆ' ಇಲ್ಲ ಎಂದು ಹಾಸ್ಯ ಚಟಾಕಿ ಹಾರಿಸಿದರು. ಇದರಿಂದ ಸದನದಲ್ಲಿ ನಗೆಗಡಲು ಉಂಟಾಯಿತು, ಇದಕ್ಕೆ ಗೃಹ ಸಚಿವ ಅಮಿತ್ ಶಾ ತಿರುಗೇಟು ನೀಡಿದರು.