LIVE NOW
Published : Apr 18, 2026, 07:31 AM ISTUpdated : Apr 18, 2026, 09:59 AM IST

India News Live: ಕ್ಯಾಮರೂನ್‌ ಗ್ರೀನ್‌ ಭರ್ಜರಿ ಸಿಕ್ಸರ್‌, ಕೊಟ್ಟ ಮಾತಿನಂತೆ ನಡೆದುಕೊಂಡ ಟಾಟಾ ಮೋಟಾರ್ಸ್‌!

ಸಾರಾಂಶ

ನವದೆಹಲಿ (ಏ.18): ಲೋಕಸಭೆ, ವಿಧಾನಸಭೆಗಳಲ್ಲಿ ಶೇ.33 ಮಹಿಳಾ ಮೀಸಲಾತಿ ನೀಡಲು ಉದ್ದೇಶಿಸಿದ್ದ 'ಸಂವಿಧಾನ (131ನೇ ತಿದ್ದುಪಡಿ) ಮಸೂದೆ -2026' ಲೋಕಸಭೆಯಲ್ಲಿ ಶುಕ್ರವಾರ ಸೋಲು ಕಂಡಿದೆ. ಈ ಮೂಲಕ 2029ರ ಲೋಕಸಭೆ ಚುನಾವಣೆಯಿಂದ ಶೇ.33 ಮಹಿಳಾ ಮೀಸಲು ಜಾರಿಗೊಳಿಸುವ ಮೋದಿ ಸರ್ಕಾರದ ಕನಸು ಭಗ್ನವಾಗಿದೆ. ಸಾಂವಿಧಾನಿಕ ತಿದ್ದುಪಡಿ ಆದ ಕಾರಣ ಅಂಗೀಕಾರಕ್ಕೆ ಅಗತ್ಯವಾಗಿದ್ದ 3ನೇ 2ರಷ್ಟು ಬಹುಮತ ಬಾರದೇ ಮಸೂದೆಗೆ 54 ಮತ ಅಂತರದಿಂದ ಸೋಲಾಗಿದೆ. ಅದರೊಂದಿಗೆ ಇಂದಿನ ರಾಷ್ಟ್ರೀಯ, ರಾಜಕೀಯ, ಚುನಾವಣೆ, ವಾಣಿಜ್ಯ, ಟೆಕ್ನಾಲಜಿ ಹಾಗೂ ಎಂಟರ್‌ಟೇನ್‌ಮೆಂಟ್‌ನ ಸುದ್ದಿಗಳ ವಿವರಗಳ ಲೈವ್‌ ಬ್ಲಾಗ್‌..

 

09:59 AM (IST) Apr 18

ಕ್ಯಾಮರೂನ್‌ ಗ್ರೀನ್‌ ಭರ್ಜರಿ ಸಿಕ್ಸರ್‌, ಕೊಟ್ಟ ಮಾತಿನಂತೆ ನಡೆದುಕೊಂಡ ಟಾಟಾ ಮೋಟಾರ್ಸ್‌!

ಗುಜರಾತ್ ಟೈಟಾನ್ಸ್ ವಿರುದ್ಧದ ಪಂದ್ಯದಲ್ಲಿ ಕೆಕೆಆರ್ ಆಟಗಾರ ಕ್ಯಾಮರೂನ್ ಗ್ರೀನ್ ಬಾರಿಸಿದ ಸಿಕ್ಸರ್, ಮೈದಾನದಲ್ಲಿದ್ದ 'ಟಾಟಾ ಸಿಯೆರಾ' ಕಾರಿಗೆ ಬಡಿಯಿತು. ಈ ಕಾರಣದಿಂದಾಗಿ, ಟಾಟಾ ಸಂಸ್ಥೆಯು ಗ್ರಾಮೀಣ ಕ್ರಿಕೆಟ್ ಅಭಿವೃದ್ಧಿಗೆ 5 ಲಕ್ಷ ರೂಪಾಯಿ ದೇಣಿಗೆ ನೀಡಲಿದೆ.

Read Full Story

09:58 AM (IST) Apr 18

ಚಿನ್ನಸ್ವಾಮಿಯಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಎದುರು ಸೇಡು ತೀರಿಸಿಕೊಳ್ಳಲು ರೆಡಿಯಾದ ಆರ್‌ಸಿಬಿ!

ತವರಿನಲ್ಲಿ ಸತತ ಗೆಲುವಿನ ನಿರೀಕ್ಷೆಯಲ್ಲಿರುವ ಆರ್‌ಸಿಬಿ, ಡೆಲ್ಲಿ ಕ್ಯಾಪಿಟಲ್ಸ್‌ ವಿರುದ್ಧ ಸೇಡು ತೀರಿಸಿಕೊಳ್ಳಲು ಸಜ್ಜಾಗಿದೆ. ಅಮೋಘ ಫಾರ್ಮ್‌ನಲ್ಲಿರುವ ವಿರಾಟ್ ಕೊಹ್ಲಿ ಹಾಗೂ ಮಧ್ಯಮ ಓವರ್‌ಗಳಲ್ಲಿ ಮಿಂಚುತ್ತಿರುವ ರಜತ್ ಪಾಟೀದಾರ್ ತಂಡದ ಪ್ರಮುಖ ಶಕ್ತಿಯಾಗಿದ್ದು, ಕಳೆದ ಬಾರಿ ತವರಿನಲ್ಲೇ ಸೋತಿದ್ದ ಆರ್‌ಸಿಬಿ ಈ ಬಾರಿ ಗೆಲ್ಲುವ ವಿಶ್ವಾಸದಲ್ಲಿದೆ.
Read Full Story

09:14 AM (IST) Apr 18

IPL 2026 - ನಿನ್ನೆ ನಡೆದ ಗುಜರಾತ್ ಟೈಟಾನ್ಸ್-ಕೋಲ್ಕತಾ ನೈಟ್ ರೈಡರ್ಸ್ ನಡುವಿನ ಮ್ಯಾಚ್ ಗೆದ್ದಿದ್ದು ಯಾರು?

ಶುಭ್‌ಮನ್ ಗಿಲ್ ಅವರ ಸ್ಫೋಟಕ ಬ್ಯಾಟಿಂಗ್ ನೆರವಿನಿಂದ ಗುಜರಾತ್ ಟೈಟಾನ್ಸ್ ತಂಡವು ಕೋಲ್ಕತಾ ನೈಟ್ ರೈಡರ್ಸ್ ವಿರುದ್ಧ 5 ವಿಕೆಟ್‌ಗಳ ಜಯ ಸಾಧಿಸಿದೆ. ಈ ಸೋಲಿನೊಂದಿಗೆ ಕೆಕೆಆರ್ ಐದನೇ ಸೋಲನ್ನು ಅನುಭವಿಸಿದರೆ, ಗುಜರಾತ್ ತನ್ನ ಮೂರನೇ ಗೆಲುವನ್ನು ದಾಖಲಿಸಿತು.
Read Full Story

07:34 AM (IST) Apr 18

ತಮಿಳುನಾಡು, ಬಿಹಾರ ಬಳಿಕ ಇದೀಗ ರಾಜ್ಯಕ್ಕೆ ಕಾಲಿಟ್ಟ ಹಕ್ಕಿಜ್ವರ, 7444 ಕೋಳಿ ನಾಶ!

ಬೆಂಗಳೂರಿನ ಹೆಸರಘಟ್ಟದ ಸರ್ಕಾರಿ ಪೌಲ್ಟ್ರಿ ಫಾರಂನಲ್ಲಿ H5N1 ವೈರಸ್ (ಹಕ್ಕಿ ಜ್ವರ) ಪತ್ತೆಯಾಗಿದೆ. ಮುನ್ನೆಚ್ಚರಿಕಾ ಕ್ರಮವಾಗಿ, 7,444 ಕೋಳಿಗಳನ್ನು ನಾಶಪಡಿಸಲಾಗಿದ್ದು, ಸುತ್ತಮುತ್ತಲಿನ ಪ್ರದೇಶದಲ್ಲಿ ಕಣ್ಗಾವಲು ಇರಿಸಲಾಗಿದೆ. ಇದು ಈ ವರ್ಷ ರಾಜ್ಯದಲ್ಲಿ ವರದಿಯಾದ ಮೊದಲ ಹಕ್ಕಿ ಜ್ವರ ಪ್ರಕರಣವಾಗಿದೆ.

 

Read Full Story

07:33 AM (IST) Apr 18

Women s Reservation Defeat: ವಿಪಕ್ಷಗಳಿಗೆ ಮಹಿಳಾ ವಿರೋಧಿ ಹಣೆಪಟ್ಟಿ, ಕಾಂಗ್ರೆಸ್ಸನ್ನು ಇಕ್ಕಟ್ಟಿಗೆ ಸಿಲುಕಿಸಲು ಬಿಜೆಪಿಗೆ ರಾಜಕೀಯ ಅಸ್ತ್ರ?

ಲೋಕಸಭೆಯಲ್ಲಿ ಮಹಿಳಾ ಮೀಸಲು ಮಸೂದೆಯು ಸೋಲು ಕಂಡಿದೆ. ಈ ಸೋಲನ್ನು ಮುಂಬರುವ ಚುನಾವಣೆಗಳಲ್ಲಿ ರಾಜಕೀಯ ಅಸ್ತ್ರವಾಗಿ ಬಳಸಲು ಬಿಜೆಪಿ ಸಜ್ಜಾಗಿದ್ದರೆ, ವಿಪಕ್ಷಗಳು ಇದನ್ನು ಸಂವಿಧಾನಕ್ಕೆ ಸಂದ ಜಯವೆಂದು ಸಂಭ್ರಮಿಸುತ್ತಿವೆ. ಈ ಬೆಳವಣಿಗೆಯ ಆಡಳಿತ ಮತ್ತು ವಿರೋಧ ಪಕ್ಷಗಳ ನಡುವೆ ವಾಕ್ಸಮರಕ್ಕೆ ಕಾರಣವಾಗಿದೆ.

 

Read Full Story

07:33 AM (IST) Apr 18

'ನಂಗೂ ಮೋದಿಗೂ ಹೆಂಡತಿ ಸಮಸ್ಯೆ ಇಲ್ಲ': ರಾಹುಲ್ ಗಾಂಧಿ | ಪ್ರಿಯಾಂಕಾ ನೋಡಿ ಕಲಿಯಿರಿ ಎಂದ ಶಾ

ಮಹಿಳಾ ಮೀಸಲು ಮಸೂದೆ ಚರ್ಚೆಯ ವೇಳೆ, ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರು ತಮಗೂ ಮತ್ತು ಪ್ರಧಾನಿ ಮೋದಿಗೂ 'ಪತ್ನಿ ಸಮಸ್ಯೆ' ಇಲ್ಲ ಎಂದು ಹಾಸ್ಯ ಚಟಾಕಿ ಹಾರಿಸಿದರು. ಇದರಿಂದ ಸದನದಲ್ಲಿ ನಗೆಗಡಲು ಉಂಟಾಯಿತು, ಇದಕ್ಕೆ ಗೃಹ ಸಚಿವ ಅಮಿತ್ ಶಾ ತಿರುಗೇಟು ನೀಡಿದರು.

 

Read Full Story

More Trending News