Published : Aug 28, 2026, 07:35 AM ISTUpdated : Aug 28, 2026, 11:33 AM IST

National News Live: Central Nepal floods - ನೇಪಾಳ ಭೀಕರ ಪ್ರವಾಹಕ್ಕೆ ಭಾರತ ಸ್ಪಂದನೆ, ನಿರ್ಮಲಾ ಸೀತಾರಾಮನ್ ವಿಶೇಷ ಪ್ರಾರ್ಥನೆ

ಸಾರಾಂಶ

ನವದೆಹಲಿ (ಆ.28): ಕಳೆದ ಮೂರೂವರೆ ದಶಕಗಳಲ್ಲೇ ಭೀಕರ ಭೀಕರ ಪ್ರವಾಹಕ್ಕೆ ಸಿಲುಕಿರುವ ನೇಪಾಳದಲ್ಲಿ ಮೃತಪಟ್ಟವರ ಸಂಖ್ಯೆ 360ಕ್ಕೆ ಏರಿಕೆಯಾಗಿದ್ದು, 1000ಕ್ಕೂ ಹೆಚ್ಚು ಜನ ನಾಪತ್ತೆ ಆಗಿದ್ದಾರೆ. ದುರಂತದಲ್ಲಿ ನಾಪತ್ತೆಯಾಗಿರುವ 288 ಭಾರತೀಯರು ಸೇರಿದಂತೆ ನೂರಾರು ಜನರಿಗಾಗಿ ರಕ್ಷಣಾ ಪಡೆಗಳು ಸಮರೋಪಾದಿಯಲ್ಲಿ ಶೋಧ ಕಾರ್ಯಾಚರಣೆ ಮುಂದುವರಿಸಿದ್ದು, ದೇಶದ ಆಧುನಿಕ ಇತಿಹಾಸದಲ್ಲೇ ಇದು ಅತ್ಯಂತ ಭೀಕರ ನೈಸರ್ಗಿಕ ದುರಂತವಾಗಿ ಮಾರ್ಪಟ್ಟಿದೆ.ಅದರೊಂದಿಗೆ ಇಂದಿನ ರಾಷ್ಟ್ರೀಯ, ರಾಜಕೀಯ, ಚುನಾವಣೆ, ವಾಣಿಜ್ಯ, ಟೆಕ್ನಾಲಜಿ ಹಾಗೂ ಎಂಟರ್‌ಟೇನ್‌ಮೆಂಟ್‌ನ ಸುದ್ದಿಗಳ ವಿವರಗಳ ಲೈವ್‌ ಬ್ಲಾಗ್‌..

Central Nepal floods Indian Leaders Rally Support for Flood Hit Nepal

11:33 AM (IST) Aug 28

Central Nepal floods - ನೇಪಾಳ ಭೀಕರ ಪ್ರವಾಹಕ್ಕೆ ಭಾರತ ಸ್ಪಂದನೆ, ನಿರ್ಮಲಾ ಸೀತಾರಾಮನ್ ವಿಶೇಷ ಪ್ರಾರ್ಥನೆ

ಕೆನಡಾದಲ್ಲಿ ನೇಪಾಳ ಪ್ರವಾಹ ಸಂತ್ರಸ್ತರಿಗಾಗಿ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಪ್ರಾರ್ಥನೆ ಸಲ್ಲಿಸಿದ್ದಾರೆ. ಸಂಸದ ಮೊಹಿಬುಲ್ಲಾ ನದ್ವಿ ಅವರು ಭಾರತ ನೆರವು ನೀಡಬೇಕೆಂದು ಒತ್ತಾಯಿಸಿದರೆ, ಛತ್ತೀಸ್‌ಗಢ ಸಿಎಂ ವಿಷ್ಣು ದೇವ್ ಸಾಯಿ ಕಾಣೆಯಾದವರ ಬಗ್ಗೆ ಕಳವಳ ವ್ಯಕ್ತಪಡಿಸಿ ಸಹಾಯವಾಣಿ ಆರಂಭಿಸಿದ್ದಾರೆ.

Read Full Story

07:35 AM (IST) Aug 28

Nepal Floods: 3 ದಶಕದ ಭೀಕರ ಪ್ರವಾಹಕ್ಕೆ ಪುಟ್ಟ ದೇಶ ತತ್ತರ, 400ರ ಗಡಿಯ ಸನಿಹ ಸಾವಿನ ಸಂಖ್ಯೆ

ಕಳೆದ ಮೂರೂವರೆ ದಶಕಗಳಲ್ಲೇ ಭೀಕರ ಪ್ರವಾಹಕ್ಕೆ ತುತ್ತಾಗಿರುವ ನೇಪಾಳದಲ್ಲಿ 360ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದು, ಸಾವಿರಾರು ಜನ ನಾಪತ್ತೆಯಾಗಿದ್ದಾರೆ. ಈ ದುರಂತದಲ್ಲಿ ಕರ್ನಾಟಕದ 8 ಮಂದಿ ಸಿಲುಕಿದ್ದು, ಅವರ ರಕ್ಷಣೆಗಾಗಿ ರಾಜ್ಯ ಸರ್ಕಾರ ಸಹಾಯವಾಣಿ ತೆರೆದಿದೆ.

 

Read Full Story

More Trending News