ನವದೆಹಲಿ (ಜೂ.20): ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ) ಸಂಸದರ ಬಂಡಾಯ ಮಹಾರಾಷ್ಟ್ರದಲ್ಲಿ ಬಿರುಗಾಳಿ ಎಬ್ಬಿಸಿದ ಬೆನ್ನಲ್ಲೇ, ಶರದ್ ಪವಾರ್ ನೇತೃತ್ವದ ಎನ್ಸಿಪಿ-ಎಸ್ಪಿಯ ಹಲವಾರು ಸಂಸದರು ತಮ್ಮ ಸಂಪರ್ಕದಲ್ಲಿದ್ದಾರೆ ಎಂದು ಅಜಿತ್ ಪವಾರ್ ಅವರ ಎನ್ಸಿಪಿ ಹೇಳಿದೆ. ಈ ಮೂಲಕ ಈಗಾಗಲೇ ಒಮ್ಮೆ ಹೋಳಾಗಿರುವ ಪಕ್ಷ ಮತ್ತೊಮ್ಮೆ ಹೋಳಾಗುವ ಭೀತಿ ಎದುರಾಗಿದೆ. ಇತ್ತ ಟಿಎಂಸಿ, ಸೇನೆ (ಯುಬಿಟಿ) ಬಂಡಾಯದ ಹೊಡೆತಕ್ಕೆ ಸಿಲುಕಿರುವ ಇಂಡಿ ಮೈತ್ರಿಕೂಟಕ್ಕೆ ಮತ್ತೊಂದು ಏಟು ಬೀಳುವ ಸಾಧ್ಯತೆಯಿದೆ.ಆದರೆ ಎನ್ಸಿಪಿ-ಎಸ್ಪಿ ನಾಯಕರು ಇದನ್ನು ಅಲ್ಲಗಳೆದಿದ್ದಾರೆ. ಅದರೊಂದಿಗೆ ಇಂದಿನ ರಾಷ್ಟ್ರೀಯ, ರಾಜಕೀಯ, ಚುನಾವಣೆ, ವಾಣಿಜ್ಯ, ಟೆಕ್ನಾಲಜಿ ಹಾಗೂ ಎಂಟರ್ಟೇನ್ಮೆಂಟ್ನ ಸುದ್ದಿಗಳ ವಿವರಗಳ ಲೈವ್ ಬ್ಲಾಗ್..
11:07 AM (IST) Jun 20
10:19 AM (IST) Jun 20
ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಪ್ರಧಾನಿ ನರೇಂದ್ರ ಮೋದಿ ಅವರನ್ನು 'ಮಹಾನ್ ನಾಯಕ' ಮತ್ತು 'ಅತ್ಯಂತ ಕಠಿಣ ವ್ಯಕ್ತಿ' ಎಂದು ಶ್ಲಾಘಿಸಿದ್ದಾರೆ. ಭಾರತಕ್ಕೆ ರಾಜಕೀಯ ಸ್ಥಿರತೆ ತಂದ ಮೋದಿ, ವಿಶ್ವದ ಇಬ್ಬರು ಶ್ರೇಷ್ಠ ನಾಯಕರಲ್ಲಿ ಒಬ್ಬರು ಎಂದು ಟ್ರಂಪ್ ಬಣ್ಣಿಸಿದ್ದಾರೆ.
09:08 AM (IST) Jun 20
Home investment strategy in india: ದೇಶದಲ್ಲಿ ಸ್ವಂತ ಮನೆ ಅನ್ನೋದು ಬಹುತೇಕರ ಜೀವನದ ಕನಸು. ಅದರಲ್ಲೂ ಒಂದು ಕೋಟಿ ರೂಪಾಯಿ ಬಜೆಟ್ ಇದ್ದರೆ, ಸ್ವಂತ ಮನೆ ಕಟ್ಟಬೇಕಾ ಅಥವಾ ಅಪಾರ್ಟ್ಮೆಂಟ್ನಲ್ಲಿ ಫ್ಲಾಟ್ ಖರೀದಿಸಬೇಕಾ ಅನ್ನೋ ಗೊಂದಲ ಅನೇಕರಲ್ಲಿ ಮೂಡುತ್ತದೆ. ಈ ಪ್ರಶ್ನೆಗೆ ಉತ್ತರ ಇಲ್ಲಿದೆ ನೋಡಿ.
08:39 AM (IST) Jun 20
08:21 AM (IST) Jun 20
ಜಿ7 ಶೃಂಗದಲ್ಲಿ ಇಟಲಿ ಪ್ರಧಾನಿ ಜಾರ್ಜಿಯಾ ಮೆಲೋನಿ ತನ್ನೊಂದಿಗೆ ಫೋಟೋ ತೆಗೆಸಿಕೊಳ್ಳಲು ಬೇಡಿಕೊಂಡರು ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಈ ಹೇಳಿಕೆಯನ್ನು 'ಕಟ್ಟುಕತೆ' ಎಂದು ತಳ್ಳಿಹಾಕಿದ ಮೆಲೋನಿ, ಇಟಲಿ ಯಾರನ್ನೂ ಬೇಡುವುದಿಲ್ಲ ಎಂದು ತಿರುಗೇಟು ನೀಡಿದ್ದಾರೆ.
07:55 AM (IST) Jun 20
ಶಾಂತಿ ಒಪ್ಪಂದದ ಅಡಿಯಲ್ಲಿ ಇರಾನ್ಗೆ 28 ಲಕ್ಷ ಕೋಟಿ ರು. ಪರಿಹಾರ ನೀಡುವ ಪ್ರಶ್ನೆಯೇ ಇಲ್ಲ, 10 ಸೆಂಟ್ಸ್ ಕೂಡ ಸಿಗುವುದಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಘೋಷಿಸಿದ್ದಾರೆ. ಇದೇ ವೇಳೆ, ಇಸ್ರೇಲ್ ದಾಳಿ ಹಿನ್ನೆಲೆಯಲ್ಲಿ ಅಮೆರಿಕ-ಇರಾನ್ ನಡುವಿನ ಸ್ವಿಸ್ ಸಂಧಾನ ಸಭೆ ಮುಂದೂಡಲ್ಪಟ್ಟಿದೆ.
07:45 AM (IST) Jun 20
ಅಜಿತ್ ಪವಾರ್ ನೇತೃತ್ವದ ಎನ್ಸಿಪಿ, ಶರದ್ ಪವಾರ್ ಬಣದ ಹಲವು ಸಂಸದರು ತಮ್ಮ ಸಂಪರ್ಕದಲ್ಲಿದ್ದಾರೆ ಎಂದು ಹೇಳಿಕೊಂಡಿದೆ. ಇದು ಪಕ್ಷದಲ್ಲಿ ಮತ್ತೊಂದು ವಿಭಜನೆಯ ಆತಂಕ ಸೃಷ್ಟಿಸಿದೆ.