LIVE NOW
Published : May 28, 2026, 07:56 AM ISTUpdated : May 28, 2026, 08:58 AM IST

India News Live Updates: IPL 2026 ರಾಜಸ್ಥಾನ ರಾಯಲ್ಸ್-ಗುಜರಾತ್ ಟೈಟಾನ್ಸ್ ನಡುವಿನ ಕ್ವಾಲಿಫೈಯರ್ ಮ್ಯಾಚ್ ಎಲ್ಲಿ? ಯಾವಾಗ? ಇಲ್ಲಿದೆ ಕಂಪ್ಲೀಟ್ ಡೀಟೈಲ್ಸ್

ಸಾರಾಂಶ

ನವದೆಹಲಿ: ಮತದಾರರಪಟ್ಟಿ ಪರಿಷ್ಕರಣೆ (ಎಸ್‌ಐಆರ್‌) ನಡೆಸುವ ಹಕ್ಕನ್ನು ಚುನಾವಣಾ ಆಯೋಗ ಹೊಂದಿದೆ ಎಂದು ಸ್ಪಷ್ಟಪಡಿಸಿರುವ ಸುಪ್ರೀಂಕೋರ್ಟ್‌, ನ್ಯಾಯಸಮ್ಮತ ಚುನಾವಣೆ ನಡೆಸುವ ಸಂವಿಧಾನದ ಆಶಯಕ್ಕೆ ವಿಶೇಷ ಮತಪಟ್ಟಿ ಪರಿಷ್ಕರಣೆ ಜೀವಸೆಲೆ ಎಂದು ಬಣ್ಣಿಸಿದೆ. ಈ ಮೂಲಕ ಚುನಾವಣಾ ಆಯೋಗದ ಹಕ್ಕನ್ನು ಪ್ರಶ್ನಿಸಿದ್ದ ಅರ್ಜಿಗಳನ್ನು ವಜಾ ಮಾಡಿದೆ. ಅಲ್ಲದೆ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟ ಕೂಡಲೇ ಅದು ಅವರ ಕಾನೂನಾತ್ಮಕವಾಗಿ ಪೌರತ್ವವನ್ನೇನು ರದ್ದುಪಡಿಸುವುದಿಲ್ಲ ಎಂದೂ ಸ್ಪಷ್ಟಪಡಿಸಿದೆ.

Rajasthan Royals vs Gujarat Titans

08:58 AM (IST) May 28

IPL 2026 ರಾಜಸ್ಥಾನ ರಾಯಲ್ಸ್-ಗುಜರಾತ್ ಟೈಟಾನ್ಸ್ ನಡುವಿನ ಕ್ವಾಲಿಫೈಯರ್ ಮ್ಯಾಚ್ ಎಲ್ಲಿ? ಯಾವಾಗ? ಇಲ್ಲಿದೆ ಕಂಪ್ಲೀಟ್ ಡೀಟೈಲ್ಸ್

ಬೆಂಗಳೂರು: 2026ರ ಐಪಿಎಲ್ ಟೂರ್ನಿಯಲ್ಲಿ ಇದೀಗ ಎಲಿಮಿನೇಟರ್ ಪಂದ್ಯ ಮುಕ್ತಾಯವಾಗಿದ್ದು, ಕ್ವಾಲಿಫೈಯರ್-2 ಪಂದ್ಯಕ್ಕೆ ಕ್ಷಣಗಣನೆ ಶುರುವಾಗಿದೆ. ಇದೀಗ ಕ್ವಾಲಿಫೈಯರ್-2 ಮ್ಯಾಚ್ ಎಲ್ಲಿ? ಯಾವಾಗ? ನೇರ ಪ್ರಸಾರ ಎಲ್ಲಿ? ಎಷ್ಟು ಗಂಟೆಗೆ ಆರಂಭ ನೋಡೋಣ ಬನ್ನಿ.

 

Read Full Story

08:54 AM (IST) May 28

ED Raid - ಕೇರಳ ಮಾಜಿ ಸಿಎಂ ಪಿಣರಾಯಿ, ಅಳಿಯ, ಪುತ್ರಿಗೆ ಶಾಕ್, ಬೆಂಗಳೂರಿನ ಕಚೇರಿ ಸೇರಿ 10ಕ್ಕೂ ಹೆಚ್ಚು ಕಡೆ ಇಡಿ ದಾಳಿ

ಕೇರಳದ ಮಾಜಿ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರ ಪುತ್ರಿ ವೀಣಾ ಅವರಿಗೆ ಸೇರಿದ 'ಎಕ್ಸಾಲಾಜಿಕ್ ಸೊಲ್ಯೂಷನ್ಸ್' ಕಂಪನಿಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ (ಇ.ಡಿ) ಬೆಂಗಳೂರು ಮತ್ತು ಕೇರಳದ 6 ಕಡೆ ದಾಳಿ ನಡೆಸಿದೆ. ಸಿಎಂಆರ್‌ಎಲ್ ಕಂಪನಿಯು ಕಾನೂನುಬಾಹಿರವಾಗಿ ಹಣ ಪಾವತಿಸಿದ ಆರೋಪದ ಮೇಲೆ ಈ ಪರಿಶೀಲನೆ ನಡೆದಿದೆ.
Read Full Story

08:33 AM (IST) May 28

ಚುನಾವಣಾ ಆಯೋಗಕ್ಕೆ ಎಸ್‌ಐಆರ್‌ ನಡೆಸುವ ಹಕ್ಕಿದೆ, ಪರಿಷ್ಕರಣ ಸಂವಿಧಾನ, ಕಾನೂನು ವಿರೋಧಿ ಅಲ್ಲ - ಸುಪ್ರೀಂ

ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ (ಎಸ್‌ಐಆರ್‌) ನಡೆಸುವ ಚುನಾವಣಾ ಆಯೋಗದ ಹಕ್ಕನ್ನು ಸುಪ್ರೀಂ ಕೋರ್ಟ್ ಎತ್ತಿಹಿಡಿದಿದೆ. ನ್ಯಾಯಸಮ್ಮತ ಚುನಾವಣೆಗೆ ಇದು ಜೀವಸೆಲೆ ಎಂದು ಬಣ್ಣಿಸಿರುವ ನ್ಯಾಯಾಲಯ, ಈ ಪ್ರಕ್ರಿಯೆಯನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಗಳನ್ನು ವಜಾಗೊಳಿಸಿದೆ. 

Read Full Story

More Trending News