ದೇಶದಲ್ಲಿ ಒಂದು ವೇಳೆ ಇಂದೇ ಲೋಕಸಭಾ ಚುನಾವಣೆ ನಡೆದರೆ, ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್ಡಿಎ ಮೈತ್ರಿಕೂಟ 326 ಕ್ಷೇತ್ರಗಳಲ್ಲಿ ಭರ್ಜರಿ ಜಯಭೇರಿ ಬಾರಿಸಿ ಮತ್ತೆ ಅಧಿಕಾರದ ಚುಕ್ಕಾಣಿ ಹಿಡಿಯಲಿದೆ ಎಂದು ಇಂಡಿಯಾ ಟುಡೆ-ಸಿವೋಟರ್ ನಡೆಸಿದ ‘ಮೂಡ್ ಆಫ್ ದಿ ನೇಷನ್’ ಸಮೀಕ್ಷೆ ತಿಳಿಸಿದೆ.
ಪ್ರಧಾನಿ ಮೋದಿ ಅವರ ನಾಯಕತ್ವದ ಮೇಲೆ ದೇಶದ ಜನತೆಗೆ ಇರುವ ವಿಶ್ವಾಸ ಇನ್ನೂ ಭದ್ರವಾಗಿದೆ ಎಂಬುದನ್ನು ಸಮೀಕ್ಷೆ ಸ್ಪಷ್ಟಪಡಿಸಿದೆಯಾದರೂ, ಕಳೆದ ಸಮೀಕ್ಷೆಗೆ ಹೋಲಿಸಿದರೆ ಎನ್ಡಿಎ ಸ್ಥಾನಗಳಲ್ಲಿ ಕೊಂಚ ಇಳಿಕೆ ಕಂಡುಬಂದಿದೆ. ಕಳೆದ ಜನವರಿಯಲ್ಲಿ ನಡೆದಿದ್ದ ಸಮೀಕ್ಷೆಯಲ್ಲಿ ಎನ್ಡಿಎಗೆ 352 ಸ್ಥಾನಗಳನ್ನು ಅಂದಾಜಿಸಲಾಗಿತ್ತು. ಇದೀಗ 26 ಸೀಟುಗಳ ಕುಸಿತದೊಂದಿಗೆ 326 ಸ್ಥಾನಗಳನ್ನು ಅಂದಾಜಿಸಲಾಗಿದೆ.
07:59 AM (IST) Aug 28
ಚೀನಾ-ನೇಪಾಳ ಗಡಿಯ ಸಮೀಪ ಟಿಬೆಟ್ನಲ್ಲಿ ಸಂಭವಿಸಿದ ಭೂಕಂಪ ಮತ್ತು ಹಿಮಪಾತದಿಂದಾಗಿ ಕೈಲಾಸ ಮಾನಸ ಸರೋವರ ಯಾತ್ರೆಗೆ ತೆರಳಿದ್ದ ಭಾರತೀಯ ಯಾತ್ರಿಕರು ಪ್ರವಾಹದಲ್ಲಿ ಸಿಲುಕಿದ್ದಾರೆ. ಉಸಿರಾಟದ ತೊಂದರೆ, ಆಹಾರ-ನೀರಿನ ಕೊರತೆಯಿಂದ ಬಳಲುತ್ತಿರುವ ಯಾತ್ರಿಕರು, ತಮ್ಮನ್ನು ರಕ್ಷಿಸುವಂತೆ ಪ್ರಧಾನಿ ನರೇಂದ್ರ ಮೋದಿಯವರಿಗೆ ಮನವಿ ಮಾಡಿದ್ದಾರೆ.
ಬೆಜಿಂಗ್; ಚೀನಾ-ನೇಪಾಳ ಗಡಿಯ ಸಮೀಪವಿರುವ ಟಿಬೆಟ್ನಲ್ಲಿ ಸಂಭವಿಸಿದ ಭಾರಿ ಭೂಕಂಪ ಹಾಗೂ ಹಿಮಪಾತದ ಪರಿಣಾಮವಾಗಿ ಪ್ರವಾಹ ಪರಿಸ್ಥಿತಿ ನಿರ್ಮಾಣಗೊಂಡಿದ್ದು, ಸದ್ಯ ಭಾರತೀಯ ಯಾತ್ರಿಕರು ಸಾವು-ಬದುಕಿನ ನಡುವೆ ಕಠಿಣ ಹೋರಾಟ ನಡೆಸುತ್ತಿದ್ದಾರೆ. ಪವಿತ್ರ ಕೈಲಾಸ ಮಾನಸ ಸರೋವರ ಯಾತ್ರೆಗೆ ತೆರಳಿದ್ದ ಅನೇಕ ಭಾರತೀಯ ಪ್ರವಾಸಿಗರು ಈ ವಿನಾಶಕಾರಿ ದುರಂತದಲ್ಲಿ ಸಿಲುಕಿಕೊಂಡಿದ್ದು, ಅವರ ಸುರಕ್ಷತೆ ಕುರಿತು ತೀವ್ರ ಆತಂಕ ಎದುರಾಗಿದೆ.