ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಇದೇ ಮೊದಲ ಬಾರಿಗೆ ವಿವಿಧ ಇಲಾಖೆಗಳ ಮೌಲ್ಯಮಾಪನ ಮಾಡಿ ರ್ಯಾಂಕಿಂಗ್ ನೀಡಿದ್ದು, ಇದರ ಆಧಾರದ ಮೇಲೆ ಸಚಿವರಾದ ಪ್ರಹ್ಲಾದ್ ಜೋಶಿ ಅವರ ಗ್ರಾಹಕರ ವ್ಯವಹಾರಗಳ ಸಚಿವಾಲಯವು ನಂ.1 ಸ್ಥಾನ ಪಡೆದಿದೆ. ಗ್ರಾಹಕರ ವ್ಯವಹಾರಗಳ ಇಲಾಖೆಯು ಗ್ರಾಹಕರ ಕುಂದು-ಕೊರತೆ ಪರಿಹಾರ ಮತ್ತು ಪಶ್ಚಿಮ ಏಷ್ಯಾ ಯುದ್ಧದಿಂದಾಗಿ ಎದುರಾಗಿರುವ ಬಿಕ್ಕಟ್ಟು ನಿಭಾಯಿಸುವ ವಿಚಾರದಲ್ಲಿ ಅತ್ಯುತ್ತಮವಾಗಿ ಕಾರ್ಯನಿರ್ವಹಿಸಿದ ಇಲಾಖೆ ಎಂಬ ಗೌರವಕ್ಕೆ ಪಾತ್ರವಾಗಿದೆ.
ಮೋದಿ ಜತೆ ಭೇಟಿ । ಶ್ವೇತಭವನಕ್ಕೆ ಭೇಟಿ ನೀಡಲು ಆಹ್ವಾನ
ಅಮೆರಿಕ ವಿದೇಶಾಂಗ ಸಚಿವ ಮಾರ್ಕೊ ರುಬಿಯೊ 4 ದಿನಗಳ ಭಾರತ ಭೇಟಿಗೆ ಆಗಮಿಸಿದ್ದು, ಇದರ ಭಾಗವಾಗಿ ಪ್ರಧಾನಿ ನರೇಂದ್ರ ಮೋದಿ ಜತೆ ದ್ವಿಪಕ್ಷೀಯ ಸಂಬಂಧಗಳ ಕುರಿತು ಶನಿವಾರ ಯಶಸ್ವಿ ಚರ್ಚೆ ನಡೆಸಿದ್ದಾರೆ. ಈ ವೇಳೆ ಅವರು ಶ್ವೇತಭವನಕ್ಕೆ ಭೇಟಿ ನೀಡುವಂತೆ ಮೋದಿ ಅವರನ್ನು ಆಹ್ವಾನಿಸಿದ್ದಾರೆ.
10:19 AM (IST) May 24
09:55 AM (IST) May 24
ಕೇರಳ ಬಿಜೆಪಿ ಅಧ್ಯಕ್ಷ ರಾಜೀವ್ ಚಂದ್ರಶೇಖರ್ ಅವರು, 'ಕಾಕ್ರೋಚ್ ಜನತಾ ಪಾರ್ಟಿ'ಯು ಭಾರತವನ್ನು ಅಸ್ಥಿರಗೊಳಿಸಲು ಮತ್ತು ಪ್ರಧಾನಿ ಮೋದಿಯವರನ್ನು ಗುರಿಯಾಗಿಸಲು ನಡೆಸುತ್ತಿರುವ ಗಡಿಯಾಚೆಗಿನ ಕಾರ್ಯಾಚರಣೆಯ ಭಾಗವಾಗಿದೆ ಎಂದು ಆರೋಪಿಸಿದ್ದಾರೆ. ಇದಕ್ಕೆ ವಿಪಕ್ಷಗಳ ಕೆಲವು ವಿಪಕ್ಷಗಳ ಕುಮ್ಮಕ್ಕು?
09:01 AM (IST) May 24
ಲಖನೌ: ಶ್ರೇಯಸ್ ಅಯ್ಯರ್ ಸ್ಪೋಟಕ ಶತಕ ಹಾಗೂ ಬೌಲರ್ಗಳ ಸಂಘಟಿತ ಪ್ರದರ್ಶನದ ನೆರವಿನಿಂದ ಲಖನೌ ಸೂಪರ್ ಜೈಂಟ್ಸ್ ಎದುರು ಪಂಜಾಬ್ ಕಿಂಗ್ಸ್ ಭರ್ಜರಿ ಗೆಲುವು ಸಾಧಿಸಿದೆ. ಈ ಗೆಲುವಿನೊಂದಿಗೆ ಪಂಜಾಬ್ ಪ್ಲೇ ಆಫ್ ಕನಸು ಜೀವಂತವಾಗಿಟ್ಟುಕೊಂಡರೇ, ಮತ್ತೊಂದು ತಂಡ ಪ್ಲೇ ಆಫ್ ರೇಸ್ನಿಂದ ಔಟ್ ಆಗಿದೆ.