ನವದೆಹಲಿ: ದೇಶಾದ್ಯಂತ ಸಂಚಲನ ಸೃಷ್ಟಿಸಿದ್ದ ನೀಟ್ ಸೋರಿಕೆ ವಿವಾದ ತಣ್ಣಗಾಗುವ ಮುನ್ನವೇ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್ಟಿಎ) ನಡೆಸಿದ ಯುಜಿಸಿ-ನೆಟ್ ಪ್ರಶ್ನೆಪತ್ರಿಕೆಯೂ ಸೋರಿಕೆಯಾದ ಗಂಭೀರ ಆರೋಪ ಕೇಳಿಬಂದಿದೆ. ಈ ಹಿನ್ನೆಲೆಯಲ್ಲಿ, ಆರೋಪದ ಕುರಿತು ಕೂಲಕಂಷವಾಗಿ ಪರಿಶೀಲನೆ ನಡೆಸುವಂತೆ ಶಿಕ್ಷಣ ಸಚಿವಾಲಯವು ಎನ್ಟಿಎಗೆ ಸೂಚನೆ ನೀಡಿದೆ.
ಪ್ರಧಾನಿ ಮೋದಿ ಆಸ್ಟ್ರೇಲಿಯಾ ಪ್ರವಾಸದ ಫಲಶ್ರುತಿಯಾಗಿ, ಅಲ್ಲಿನ ಫ್ಲಿಂಡರ್ಸ್ ವಿವಿಗೆ ಬೆಂಗಳೂರಿನಲ್ಲಿ ಕ್ಯಾಂಪಸ್ ತೆರೆಯಲು ಅನುಮೋದನೆ ದೊರಕಿದೆ. ಭಾರತ-ಆಸ್ಟ್ರೇಲಿಯಾ ಶೈಕ್ಷಣಿಕ ಸಹಕಾರ ಬಲಪಡಿಸುವ ನಿಟ್ಟಿನಲ್ಲಿ, ಈ ಮಹತ್ವದ ಕ್ರಮ ಕೈಗೊಳ್ಳಲಾಗಿದೆ. ಇದೇ ವೇಳೆ, ವಿಕ್ಟೋರಿಯಾ ವಿವಿಗೆ ಹರ್ಯಾಣದ ಗುರುಗ್ರಾಮದಲ್ಲಿ ಕ್ಯಾಂಪಸ್ ತೆರೆಯಲು ಅನುಮೋದನೆ ನೀಡಲಾಗಿದೆ ಎಂದು ವಿದೇಶಾಂಗ ಸಚಿವಾಲಯ ತಿಳಿಸಿದೆ.
ಸತತ 2ನೇ ದಿನವೂ ಅಮೆರಿಕ ಮತ್ತು ಇರಾನ್ ನಡುವೆ ಭೀಕರ ಯುದ್ಧ ನಡೆದಿದ್ದು, ಮಧ್ಯಪ್ರಾಚ್ಯದಲ್ಲಿನ ಉದ್ವಿಗ್ನ ಪರಿಸ್ಥಿತಿ ಮತ್ತಷ್ಟು ಉಲ್ಬಣವಾಗುವಂತೆ ಮಾಡಿದೆ. ಬುಧವಾರ ಇರಾನ್ನ 80ಕ್ಕೂ ಹೆಚ್ಚು ಸ್ಥಳಗಳ ಮೇಲೆ ದಾಳಿ ಮಾಡಿದ್ದ ಅಮೆರಿಕ ಸೇನೆ, ಅಧ್ಯಕ್ಷ ಟ್ರಂಪ್ ಎಚ್ಚರಿಕೆ ನೀಡಿದಂತೆ ಗುರುವಾರ ಇರಾನ್ನ 90ಕ್ಕೂ ಹೆಚ್ಚು ಆಯಕಟ್ಟಿನ ಪ್ರದೇಶಗಳ ಮೇಲೆ ಭೀಕರ ದಾಳಿ ನಡೆಸಿದೆ.
11:27 AM (IST) Jul 10
11:17 AM (IST) Jul 10
ಅಮೆರಿಕ-ಇಸ್ರೇಲ್ ದಾಳಿಯಲ್ಲಿ ಹತರಾದ ಇರಾನ್ ಸರ್ವೋಚ್ಚ ನಾಯಕ ಖಮೇನಿ ಅವರ ಅಂತ್ಯಕ್ರಿಯೆಯು 4 ತಿಂಗಳ ಬಳಿಕ ಮಶಾದ್ನಲ್ಲಿ ಕೋಟ್ಯಂತರ ಜನರ ಸಮ್ಮುಖದಲ್ಲಿ ನೆರವೇರಿತು. ಈ ಸಂದರ್ಭದಲ್ಲಿ ಪ್ರತೀಕಾರದ ಕರೆಗಳು ಮೊಳಗಿದ್ದು, ಅಮೆರಿಕ ಮತ್ತು ಇರಾನ್ ನಡುವೆ ಮತ್ತೆ ಸಂಘರ್ಷ ತೀವ್ರಗೊಂಡಿದೆ.
10:50 AM (IST) Jul 10
10:35 AM (IST) Jul 10
ಅಯೋಧ್ಯೆ ರಾಮಮಂದಿರದ ಹುಂಡಿ ಹಣ ಕಳವು ಪ್ರಕರಣದಲ್ಲಿ, ಟ್ರಸ್ಟ್ ಸಿಬ್ಬಂದಿ ಸೇರಿದಂತೆ ಹಲವರನ್ನು ಬಂಧಿಸಲಾಗಿದೆ. ಈ ಕಳವು ಪ್ರಕರಣವನ್ನು ವಿಪಕ್ಷಗಳು ರಾಜಕೀಯ ಅಸ್ತ್ರವಾಗಿ ಬಳಸಿಕೊಂಡು, ರಾಮಮಂದಿರ ಅಭಿಯಾನದ ಮೂಲಕ ಪುನರುಜ್ಜೀವನಗೊಂಡ ಹಿಂದೂ ರಾಷ್ಟ್ರೀಯತೆಯ ಮೌಲ್ಯಗಳಿಗೆ ಧಕ್ಕೆ ತರಲು ಯತ್ನ?
10:19 AM (IST) Jul 10
10:13 AM (IST) Jul 10
ಜಮ್ಮು ಮತ್ತು ಕಾಶ್ಮೀರದಲ್ಲಿ, ಶಾಲಾ ಪಠ್ಯಪುಸ್ತಕಗಳಲ್ಲಿ ಪ್ರತ್ಯೇಕತಾವಾದಿಗಳನ್ನು ಮತ್ತು ಭಯೋತ್ಪಾದಕರನ್ನು ವೈಭವೀಕರಿಸಿದ ಸಂಬಂಧ ವಿವಾದ ಭುಗಿಲೆದ್ದಿರುವ ಬೆನ್ನಲ್ಲೆ ಒಮರ್ ಅಬ್ದುಲ್ಲಾ ಸರ್ಕಾರ ಮಹತ್ವ ನಿರ್ಧಾರ. ಎಲ್ಲ ಸರ್ಕಾರಿ ಶಾಲೆಗಳ ಪಠ್ಯ-ಪುಸ್ತಕಗಳನ್ನ ಪರಿಶೀಲಿಸಿ ವರದಿ ನೀಡುವಂತೆ ಸೂಚಿಸಿದೆ.
09:58 AM (IST) Jul 10
09:01 AM (IST) Jul 10