ನವದೆಹಲಿ (ಏ.13): ಇಡೀ ವಿಶ್ವದ ಗಮನ ಸೆಳೆದಿದ್ದ, ಮಧ್ಯಪ್ರಾಚ್ಯದಲ್ಲಿ ಶಾಂತಿ ಸ್ಥಾಪನೆಯ ಭರವಸೆ ಮೂಡಿಸಿದ್ದ ಇರಾನ್-ಅಮೆರಿಕ ನಡುವಿನ ಸಂಧಾನ ಮಾತುಕತೆ ಯಾವುದೇ ಒಪ್ಪಂದವಿಲ್ಲದೆ ಭಾನುವಾರ ಅಂತ್ಯಗೊಂಡಿದೆ. ಪಾಕಿಸ್ತಾನದ ಇಸ್ಲಾಮಾಬಾದ್ನಲ್ಲಿ ಸುಮಾರು 21 ಗಂಟೆಗಳಿಂದ ನಡೆಯುತ್ತಿದ್ದ ಮ್ಯಾರಥಾನ್ ಮಾತುಕತೆ ಅರ್ಧಕ್ಕೇ ಮೊಟಕುಗೊಳಿಸಿ ಅಮೆರಿಕ ಮತ್ತು ಇರಾನ್ ನಿಯೋಗ ಸ್ವದೇಶಕ್ಕೆ ವಾಪಸಾಗಿದೆ. ಅದರೊಂದಿಗೆ ಇಂದಿನ ರಾಷ್ಟ್ರೀಯ, ರಾಜಕೀಯ, ಚುನಾವಣೆ, ವಾಣಿಜ್ಯ, ಟೆಕ್ನಾಲಜಿ ಹಾಗೂ ಎಂಟರ್ಟೇನ್ಮೆಂಟ್ನ ಸುದ್ದಿಗಳ ವಿವರಗಳ ಲೈವ್ ಬ್ಲಾಗ್..
12:32 PM (IST) Apr 13
12:05 PM (IST) Apr 13
ಕೇವಲ ಗ್ಲಾಮರ್ ಪಾತ್ರಗಳಿಗೆ ಸೀಮಿತವಾಗದೆ, ನಾಯಕ ಪ್ರಧಾನ ಸಿನಿಮಾಗಳ ಮೂಲಕ ಬಾಕ್ಸ್ ಆಫೀಸ್ ಧೂಳಿಪಟ ಮಾಡುವ ತಾಕತ್ತು ಅವರಿಗಿದೆ. ಸದ್ಯ ನಯನತಾರಾ ಅವರ ಡೈರಿ ಮುಂದಿನ ಎರಡು-ಮೂರು ವರ್ಷಗಳವರೆಗೆ ಭರ್ತಿಯಾಗಿದ್ದು, ಅಕ್ಷರಶಃ ಅವರು 'ಬ್ಯುಸಿ ಆಕ್ಟ್ರೆಸ್' ಆಗಿದ್ದಾರೆ.
11:42 AM (IST) Apr 13
ವಿವಾಹಿತ ಮಹಿಳೆಯನ್ನು ಆಕೆಯ ಗಂಡನ ಮನೆಯ ಅಡುಗೆ ಮನೆಗೆ ಪ್ರವೇಶಿಸದಂತೆ ತಡೆಯುವುದು ಐಪಿಸಿ ಸೆಕ್ಷನ್ 498A ಅಡಿಯಲ್ಲಿ 'ಮಾನಸಿಕ ಕ್ರೌರ್ಯ' ಎಂದು ಬಾಂಬೆ ಹೈಕೋರ್ಟ್ನ ನಾಗ್ಪುರ ಪೀಠವು ಮಹತ್ವದ ತೀರ್ಪು ನೀಡಿದೆ.
11:25 AM (IST) Apr 13
ಸುಮಾರು 12,000ಕ್ಕೂ ಹೆಚ್ಚು ಹಾಡುಗಳಿಗೆ ಧ್ವನಿಯಾಗಿದ್ದ ಆಶಾ ಭೋಸ್ಲೆ ಅವರಿಗೆ ದಾದಾಸಾಹೇಬ್ ಫಾಲ್ಕೆ ಸೇರಿದಂತೆ ನೂರಾರು ಗೌರವಗಳು ಸಂದಿವೆ. ಕೇವಲ ಹಿಂದಿಯಷ್ಟೇ ಅಲ್ಲದೆ, ಭಾರತದ ಹಲವು ಭಾಷೆಗಳಲ್ಲಿ, ವಿದೇಶಿ ಭಾಷೆಗಳಲ್ಲಿ ಕೂಡ ಆಶಾ ಭೋಸ್ಲೆ ಹಾಡಿದ್ದರು.
11:21 AM (IST) Apr 13
ಜಾರ್ಖಂಡ್ನಲ್ಲಿ 9 ತಿಂಗಳಿನಿಂದ ನಾಪತ್ತೆಯಾಗಿದ್ದ ಯುವತಿಯ ಪ್ರಕರಣವನ್ನು ಹೈಕೋರ್ಟ್ ಎಚ್ಚರಿಸಿದ 24 ಗಂಟೆಗಳಲ್ಲಿ ಪೊಲೀಸರು ಭೇದಿಸಿದ್ದಾರೆ. ಪ್ರಿಯಕರನಿಂದಲೇ ಹತ್ಯೆಯಾಗಿದ್ದ ಯುವತಿಯ ಅಸ್ಥಿಪಂಜರ ಪತ್ತೆಯಾಗಿದೆ.
10:35 AM (IST) Apr 13
09:21 AM (IST) Apr 13
08:41 AM (IST) Apr 13
08:31 AM (IST) Apr 13
07:56 AM (IST) Apr 13
ಅರುಣಾಚಲ ಪ್ರದೇಶದ 27 ಸ್ಥಳಗಳಿಗೆ ಚೀನಾ ಹೊಸ ಹೆಸರುಗಳನ್ನು ಇಟ್ಟಿದೆ. ಇದಕ್ಕೆ ತೀಕ್ಷ್ಣವಾಗಿ ಪ್ರತಿಕ್ರಿಯಿಸಿರುವ ಭಾರತ, ಅರುಣಾಚಲ ಪ್ರದೇಶವು ದೇಶದ ಅವಿಭಾಜ್ಯ ಅಂಗವಾಗಿದ್ದು, ಇಂತಹ ದುರುದ್ದೇಶಪೂರಿತ ಪ್ರಯತ್ನಗಳಿಂದ ವಾಸ್ತವ ಬದಲಾಗುವುದಿಲ್ಲ ಎಂದು ಸ್ಪಷ್ಟಪಡಿಸಿದೆ.
07:40 AM (IST) Apr 13
07:27 AM (IST) Apr 13
ಎಐಎಡಿಎಂಕೆ ನಾಯಕ ಪಳನಿಸ್ವಾಮಿ ಅವರು ಡಿಎಂಕೆ ಪಕ್ಷದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ತಮಿಳುನಾಡಿಗೆ ಮಾರಕವಾದ ಮೇಕೆದಾಟು ಯೋಜನೆಗೆ ಮುಂದಾಗಿರುವ ಕರ್ನಾಟಕದ ಡಿಸಿಎಂ ಡಿಕೆಶಿ ಜೊತೆ ಡಿಎಂಕೆ ಜಂಟಿ ಪ್ರಚಾರ ನಡೆಸಿರುವುದು ಜನರ ಹಿತಕ್ಕೆ ವಿರುದ್ಧ ಎಂದಿದ್ದಾರೆ.
07:12 AM (IST) Apr 13
ಪಾಕಿಸ್ತಾನದ ಮಧ್ಯಸ್ಥಿಕೆಯಲ್ಲಿ ನಡೆದ ಇರಾನ್-ಅಮೆರಿಕ ಸಂಧಾನ ಮಾತುಕತೆ ವಿಫಲಗೊಂಡಿದೆ. ಅಣ್ವಸ್ತ್ರ ಯೋಜನೆ ವಿಚಾರದಲ್ಲಿ ಉಭಯ ದೇಶಗಳು ಪಟ್ಟು ಸಡಿಲಿಸದ ಕಾರಣ ಮಾತುಕತೆ ಮುರಿದುಬಿದ್ದಿದ್ದು, ಇದು ಮಧ್ಯಪ್ರಾಚ್ಯದಲ್ಲಿ ಮತ್ತೊಮ್ಮೆ ಯುದ್ಧದ ಭೀತಿ ಸೃಷ್ಟಿಸಿದೆ.