ನವದೆಹಲಿ (ಆ.15): ದೇಶಕ್ಕೆ ಸ್ವಾತಂತ್ರ್ಯ ಸಿಕ್ಕು 80ನೇ ವರ್ಷದ ದಿನಾಚರಣೆಯನ್ನು ಇಂದು ಸಂಭ್ರಮದಿಂದ ಆಚರಿಸಲಾಗುತ್ತಿದೆ.ದೆಹಲಿಯಲ್ಲಿ ಇಂದು ಪ್ರಧಾನಿ ನರೇಂದ್ರ ಮೋದಿ ಸತತ 13ನೇ ಸಲ ಧ್ವಜಾರೋಹಣ ಮಾಡಿದ್ದಾರೆ. ಅದರೊಂದಿಗೆ ಕೆಂಪುಕೋಟೆಯಲ್ಲಿ ಇದೇ ಮೊದಲ ಬಾರಿಗೆ ವಂದೇ ಮಾತರಂ ಗೀತೆಯನ್ನು ಗಾಯನ ಮಾಡಲಾಗುತ್ತದೆ. ಸ್ವಚ್ಛತಾ ಕಾರ್ಮಿಕರು ಸೇರಿ 5 ಸಾವಿರ ಮಂದಿಗೆ ಕಾರ್ಯಕ್ರಮಕ್ಕೆ ಆಹ್ವಾನ ನೀಡಲಾಗಿದೆ. ಇದೇ ವೇಳೆ ಮೋದಿ ಜೆನ್ಝೀ ಹೋರಾಟದ ಬಗ್ಗೆ ತಮ್ಮ ಭಾಷಣದಲ್ಲಿ ಮಾತನಾಡುತ್ತಾರೆಯೇ ಎನ್ನುವ ಕುತೂಹಲವೂ ವ್ಯಕ್ತವಾಗಿದೆ. ಕರ್ನಾಟಕ ಸೇರಿದಂತೆ ವಿವಿಧ ರಾಜ್ಯಗಳಲ್ಲಿ ಅದ್ದೂರಿಯಾಗಿ ಸ್ವಾತಂತ್ರ್ಯೋತ್ಸವದ ಆಚರಣೆ ಮಾಡಲಾಗುತ್ತಿದ್ದು, ಬೆಂಗಳೂರಿನ ವಿಧಾನಸೌಧದ ಎದುರು ಇದೇ ಮೊದಲ ಬಾರಿಗೆ ಫ್ರೀಡಮ್ ಹಬ್ಬದ ಆಚರಣೆ ನಡೆಯಲಿದೆ. ಅದರೊಂದಿಗೆ ಇಂದಿನ ರಾಷ್ಟ್ರೀಯ, ರಾಜಕೀಯ, ಚುನಾವಣೆ, ವಾಣಿಜ್ಯ, ಟೆಕ್ನಾಲಜಿ ಹಾಗೂ ಎಂಟರ್ಟೇನ್ಮೆಂಟ್ನ ಸುದ್ದಿಗಳ ವಿವರಗಳ ಲೈವ್ ಬ್ಲಾಗ್..
10:09 AM (IST) Aug 15
80ನೇ ಸ್ವಾತಂತ್ರ್ಯ ದಿನಾಚರಣೆಯಂದು ಪ್ರಧಾನಿ ಮೋದಿ 78 ನಿಮಿಷಗಳ ಕಾಲ ಭಾಷಣ ಮಾಡಿದರು. ಇದು ಕಳೆದ ನಾಲ್ಕು ವರ್ಷಗಳಲ್ಲೇ ಅತ್ಯಂತ ಕಡಿಮೆ ಅವಧಿಯ ಭಾಷಣವಾಗಿದ್ದು, 2025ರ 103 ನಿಮಿಷಗಳ ಸುದೀರ್ಘ ಭಾಷಣಕ್ಕೆ ವ್ಯತಿರಿಕ್ತವಾಗಿದೆ.
09:54 AM (IST) Aug 15
ಕೇರಳ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯು (KSRTC) ಆಲಪ್ಪುಳ-ಬೆಂಗಳೂರು ಮಾರ್ಗದಲ್ಲಿ 'ವಂದೇ ಭಾರತ್' ಮಾದರಿಯ ಹೊಸ 'ಎಕ್ಸಿಕ್ಯೂಟಿವ್ ಕ್ಲಾಸ್' ಬಸ್ ಸೇವೆಯನ್ನು ಆರಂಭಿಸಿದೆ. ಈ ಐಷಾರಾಮಿ ಬಸ್ನಲ್ಲಿ ಶೌಚಾಲಯ, ಪ್ಯಾಂಟ್ರಿ, ಮತ್ತು ವೈಯಕ್ತಿಕ ಮನರಂಜನಾ ಪರದೆಗಳಂತಹ ವಿಶ್ವದರ್ಜೆಯ ಸೌಲಭ್ಯಗಳಿವೆ.
09:54 AM (IST) Aug 15
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರು ಸ್ವಾತಂತ್ರ್ಯ ದಿನದಂದು ದೇಶವಾಸಿಗಳಿಗೆ ಶುಭ ಕೋರಿದ್ದಾರೆ. ನಿಜವಾದ ಸ್ವಾತಂತ್ರ್ಯವೆಂದರೆ ಸಂವಿಧಾನಬದ್ಧ ಸಮಾನತೆ, ನ್ಯಾಯ, ಘನತೆ ಎಂದು ಪ್ರತಿಪಾದಿಸಿದ ಅವರು ಇಂದು ಸಾಂವಿಧಾನಿಕ ಮೌಲ್ಯಗಳಿಗೆ ಸವಾಲು ಎದುರಾಗಿದೆ ಮೋದಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.
09:45 AM (IST) Aug 15
09:36 AM (IST) Aug 15
ಪ್ರಧಾನಿ ನರೇಂದ್ರ ಮೋದಿ ಅವರು ಸ್ವಾತಂತ್ರ್ಯ ದಿನಾಚರಣೆಯ ಭಾಷಣದಲ್ಲಿ, ಭಾರತವು ಸಶಸ್ತ್ರ ನಕ್ಸಲಿಸಂ ಅನ್ನು ಯಶಸ್ವಿಯಾಗಿ ನಿರ್ಮೂಲನೆ ಮಾಡಿದೆ ಎಂದು ಘೋಷಿಸಿದರು. ಆದರೆ, ಸಮಾಜದಲ್ಲಿ ಅಶಾಂತಿ ಸೃಷ್ಟಿಸಲು ಯತ್ನಿಸುತ್ತಿರುವ 'ದಿಮಾಗಿ ನಕ್ಸಲರು' ಎಂಬ ಹೊಸ ಸವಾಲಿನ ಬಗ್ಗೆ ಎಚ್ಚರಿಕೆ ನೀಡಿದ್ದಾರೆ.
09:21 AM (IST) Aug 15
09:18 AM (IST) Aug 15
ಸ್ವಾತಂತ್ರ್ಯ ದಿನದಂದು ಶ್ರೀನಗರದ ಐತಿಹಾಸಿಕ ಲಾಲ್ ಚೌಕ್ನಲ್ಲಿ ಅಹಮದಾಬಾದ್ನ ಪ್ರವಾಸಿ ಅರುಣ್ ಹರ್ಯಾನಿ ಮೈತುಂಬಾ ತ್ರಿವರ್ಣ ಧ್ವಜದ ಬಣ್ಣ ಬಳಿದುಕೊಂಡು ಗಮನ ಸೆಳೆದಿದ್ದಾರೆ. 2022ರಿಂದ ಕಾಶ್ಮೀರಕ್ಕೆ ಭೇಟಿ ನೀಡುತ್ತಿರುವ ಪ್ರವಾಸಿಗ ಈ ಬಾರಿ ಬದಲಾವಣೆ ಬಗ್ಗೆ ತಮ್ಮ ಅನುಭವ ಹಂಚಿಕೊಂಡಿದ್ದಾರೆ.
08:49 AM (IST) Aug 15
80ನೇ ಸ್ವಾತಂತ್ರ್ಯ ದಿನಾಚರಣೆಯಂದು ಪ್ರಧಾನಿ ನರೇಂದ್ರ ಮೋದಿಯವರು 2047ರ ವೇಳೆಗೆ ಭಾರತವನ್ನು ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನಾಗಿ ಮಾಡುವ ಗುರಿ ಪ್ರಕಟಿಸಿದ್ದಾರೆ.
08:42 AM (IST) Aug 15
08:03 AM (IST) Aug 15
80ನೇ ಸ್ವಾತಂತ್ರ್ಯ ದಿನಾಚರಣೆಯಂದು ಪ್ರಧಾನಿ ನರೇಂದ್ರ ಮೋದಿ ಕೆಂಪುಕೋಟೆಯಲ್ಲಿ ಧ್ವಜಾರೋಹಣ ನೆರವೇರಿಸಿದರು. ತಮ್ಮ ಭಾಷಣದಲ್ಲಿ, 2047ರ ವೇಳೆಗೆ 'ವಿಕಸಿತ ಭಾರತ' ನಿರ್ಮಾಣದಲ್ಲಿ ಯುವಶಕ್ತಿಯ ಪಾತ್ರವನ್ನು ಒತ್ತಿಹೇಳಿದ ಅವರು, ದೇಶದ ಆರ್ಥಿಕ ಪ್ರಗತಿಯನ್ನು ಶ್ಲಾಘಿಸಿದರು.