ನವದೆಹಲಿ:ಪರೀಕ್ಷಾ ಸುಧಾರಣಾ ಟಾಸ್ಕ್ ಫೋರ್ಸ್ ಸದಸ್ಯರಾಗಿ ಪ್ರಧಾನಿ ನರೇಂದ್ರ ಮೋದಿ ಅವರಿಂದ ನೇಮಕವಾದ ಐಐಟಿ ಮದ್ರಾಸ್ ನಿರ್ದೇಶಕ ವಿ. ಕಾಮಕೋಟಿ ಅವರನ್ನು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ‘ಗೋಮೂತ್ರ ತಜ್ಞ’ ಎಂದು ಟೀಕಿಸಿದ್ದನ್ನು ಖಂಡಿಸಿ, 215 ಶಿಕ್ಷಣ ತಜ್ಞರು ಪ್ರಿಯಾಂಕಾ ಅವರಿಗೆ ಬಹಿರಂಗ ಪತ್ರ ಬರೆದಿದ್ದಾರೆ. ಪಕುಲಪತಿಗಳು ಮತ್ತು ಮಾಜಿ ಉಪಕುಲಪತಿಗಳು ಸೇರಿದಂತೆ ಅನೇಕರು ಇದರಲ್ಲಿದ್ದಾರೆ.
‘ಕಾಮಕೋಟಿ ಅವರನ್ನು ನೀವು ಟೀಕಿಸಿದ್ದು ನಮಗೆ ನಿರಾಶೆ ತಂದಿದೆ. ಆ ನಿರಾಶೆಯನ್ನು ವ್ಯಕ್ತಪಡಿಸಲು ನಾವು ಈ ಪತ್ರ ಬರೆಯುತ್ತಿದ್ದೇವೆ. ಪ್ರೊ। ಕಾಮಕೋಟಿ ಭಾರತದ ಅಗ್ರಗಣ್ಯ ವೈಜ್ಞಾನಿಕ ಮತ್ತು ತಾಂತ್ರಿಕ ಸಂಸ್ಥೆಗಳಲ್ಲಿ ಒಂದರ ಮುಖ್ಯಸ್ಥರಾಗಿದ್ದಾರೆ. ಪ್ರತಿ ಶಿಕ್ಷಣ ತಜ್ಞರಂತೆ, ಅವರು ಸಹ ಊಹೆಗಳನ್ನು ಮಂಡಿಸಲು, ಸಾಂಪ್ರದಾಯಿಕ ಜ್ಞಾನವನ್ನು ಚರ್ಚಿಸಲು ಮತ್ತು ವೈಜ್ಞಾನಿಕ ಸಂವಾದಗಳಲ್ಲಿ ಭಾಗವಹಿಸಲು ಅರ್ಹರಾಗಿದ್ದಾರೆ. ಒಬ್ಬ ವಿದ್ವಾಂಸನನ್ನು ಅವರ ಅಭಿಪ್ರಾಯಗಳ ಸಾರವನ್ನು ತಿಳಿದು ಅಳೆಯುವ ಬದಲು, ಅವರಿಗೆ ಒಂದು ಹಣೆಪಟ್ಟಿ ಕಟ್ಟುವುದು ಸಲ್ಲದು ಎಂದಿದ್ದಾರೆ.
ಈ ಹಿಂದೆ ಕಾಮಕೋಟಿ ಗೋಮೂತ್ರದ ಮಹತ್ವದ ಬಗ್ಗೆ ಹೇಳಿದ್ದರು. ಪ್ರಿಯಾಂಕಾ ಇದನ್ನೇ ಮುಂದಿಟ್ಟುಕೊಂಡು ಕಾಮಕೋಟಿ ಗೋಮೂತ್ರ ತಜ್ಞ ಎಂದು ಟೀಕಿಸಿದ್ದರು.
12:34 PM (IST) Jul 31
11:51 AM (IST) Jul 31
11:20 AM (IST) Jul 31
ಪ್ರಖರ ಮಾತುಗಳಿಂದಲೇ ಎದುರಾಳಿಗಳನ್ನು ಮಣಿಸುತ್ತಿದ್ದ ಬಿಜೆಪಿ ರಾಷ್ಟ್ರೀಯ ವಕ್ತಾರ ಶೆಹಜಾದ್ ಪೂನವಾಲ ಬಿಜೆಪಿಯಿಂದ ಹೊರಬಂದಿದ್ದಾರೆ. ಸೋಶಿಯಲ್ ಮೀಡಿಯಾ, ಸುದ್ದಿಗೋಷ್ಠಿ, ಸುದ್ದಿ ವಾಹನಿಗಳ ಚರ್ಚೆಯಲ್ಲಿ ಪೂನಾವಾಲ ಹಲವರ ಬೆವರಿಳಿಸಿದ್ದಾರೆ. ದಿಢೀರ್ ರಾಜೀನಾಮೆ ಇದೀಗ ಕೋಲಾಹಲ ಸೃಷ್ಟಿಸಿದೆ.
10:59 AM (IST) Jul 31
ಆಷಾಢ ಮಾಸವನ್ನು 'ಶೂನ್ಯ ಮಾಸ' ಎಂದು ಕರೆಯಲಾಗುತ್ತದೆ. ಈ ಮಾಸದಲ್ಲಿ ಮದುವೆ, ಗೃಹಪ್ರವೇಶ, ಮುಂಜಿ ಮುಂತಾದ ಯಾವುದೇ ಶುಭ ಕಾರ್ಯಗಳನ್ನು ಮಾಡುವುದಿಲ್ಲ. ಹಾಗಾದರೆ ಈ ಆಷಾಢ ಅಥವಾ ಶೂನ್ಯ ಮಾಸದಲ್ಲಿ ಚಿನ್ನ ಅಥವಾ ಬೆಳ್ಳಿಯನ್ನು ಖರೀದಿಸುವುದು ಒಳ್ಳೆಯದೇ? ಇದರಿಂದ ಲಾಭವಾಗುತ್ತದೆಯೇ ಅಥವಾ ನಷ್ಟವೇ ಎಂಬ ಗೊಂದಲ ಹಲವರಲ್ಲಿದೆ. ಇದರ ಧಾರ್ಮಿಕ ಮತ್ತು ಆರ್ಥಿಕ ಹಿನ್ನೆಲೆ ಹಾಗೂ ಇಂದಿನ ಚಿನ್ನದ ದರದ ವಿವರ ಇಲ್ಲಿದೆ.
10:42 AM (IST) Jul 31
ಭಾರತದ ಎಲೆಕ್ಟ್ರಿಕ್ ವಾಹನ ಮಾರುಕಟ್ಟೆಗೆ ಕ್ವಾಂಟಮ್ ಎನರ್ಜಿ ಕಂಪನಿಯು ತನ್ನ ಹೊಸ 'ಪ್ಲಾಸ್ಮಾ' ಇ-ಸ್ಕೂಟರ್ ಅನ್ನು ಪರಿಚಯಿಸಿದೆ. ₹1.25 ಲಕ್ಷ ಎಕ್ಸ್-ಶೋರೂಂ ಬೆಲೆಯ ಈ ಸ್ಕೂಟರ್, ಒಂದೇ ಚಾರ್ಜ್ನಲ್ಲಿ 120 ಕಿಲೋಮೀಟರ್ ಮೈಲೇಜ್ ನೀಡುವುದಾಗಿ ಕಂಪನಿ ಹೇಳಿಕೊಂಡಿದೆ. ಯಾಕೆ ಈ ಬೈಕ್ ಖರೀದಿಸಬೇಕು ಎಂದರೆ..
09:56 AM (IST) Jul 31
09:39 AM (IST) Jul 31
ಸಾಮಾನ್ಯವಾಗಿ ರಸ್ತೆಗಳಲ್ಲಿರುವ ಗುಂಡಿಗಳು ಅಪಘಾತಗಳಿಗೆ ಕಾರಣವಾಗಿ ಜನರ ಪ್ರಾಣವನ್ನು ಬಲಿಪಡೆಯುತ್ತವೆ. ಆದರೆ, ಇಲ್ಲೊಂದು ಅಪರೂಪದ ಘಟನೆ ನಡೆದಿದ್ದು ರಸ್ತೆಯಲ್ಲಿದ್ದ ದೊಡ್ಡ ಗುಂಡಿಯೊಂದು ಸಾವಿನ ಮನೆಯತ್ತ ಸಾಗುತ್ತಿದ್ದ ಮಹಿಳೆಗೆ ಮರುಜೀವ ನೀಡಿದೆ! ಈ ಅಚ್ಚರಿಯ ಘಟನೆ ಆಂಧ್ರಪ್ರದೇಶದ ಏಲೂರು ಜಿಲ್ಲೆಯಲ್ಲಿ ನಡೆದಿದ್ದು, ಸ್ಥಳೀಯವಾಗಿ ಭಾರಿ ಚರ್ಚೆಗೆ ಕಾರಣವಾಗಿದೆ.
08:33 AM (IST) Jul 31