LIVE NOW
Published : May 02, 2026, 07:33 AM ISTUpdated : May 02, 2026, 08:41 AM IST

National News Live: ಮೇ ತಿಂಗಳಲ್ಲಿ ವರುಣನ ಆರ್ಭಟ - ವಾಡಿಕೆಗಿಂತ ಹೆಚ್ಚಿನ ಮಳೆ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ!

ಸಾರಾಂಶ

ನವದೆಹಲಿ (ಮೇ.2): ಪಶ್ಚಿಮ ಬಂಗಾಳದಲ್ಲಿರುವ ಅಕ್ರಮ ವಲಸಿಗರನ್ನು ಹೊರಹಾಕುವುದಾಗಿ ಘೋಷಿಸಿರುವ ಬಿಜೆಪಿಯು ರಾಜ್ಯದಲ್ಲಿ ಅಧಿಕಾರಕ್ಕೇರಲಿದೆ ಎಂಬ ಚುನಾವಣೋತ್ತರ ಸಮೀಕ್ಷೆಗಳ ಅಂದಾಜು, ನೆರೆಯ ಬಾಂಗ್ಲಾ ದೇಶದ ತಲೆನೋವಿಗೆ ಕಾರಣವಾಗಿದೆ. ಈ ಬಗ್ಗೆ ಬಾಂಗ್ಲಾದ ಎನ್‌ಸಿಪಿ ಸಂಸದ ಅಖ‌ರ್ ಹೊಸೈನಿ ಆತಂಕ ವ್ಯಕ್ತಪಡಿಸಿದ್ದಾರೆ. ಅದರೊಂದಿಗೆ ಇಂದಿನ ರಾಷ್ಟ್ರೀಯ, ರಾಜಕೀಯ, ಚುನಾವಣೆ, ವಾಣಿಜ್ಯ, ಟೆಕ್ನಾಲಜಿ ಹಾಗೂ ಎಂಟರ್‌ಟೇನ್‌ಮೆಂಟ್‌ನ ಸುದ್ದಿಗಳ ವಿವರಗಳ ಲೈವ್‌ ಬ್ಲಾಗ್‌..

 

08:41 AM (IST) May 02

ಮೇ ತಿಂಗಳಲ್ಲಿ ವರುಣನ ಆರ್ಭಟ - ವಾಡಿಕೆಗಿಂತ ಹೆಚ್ಚಿನ ಮಳೆ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ!

ಭಾರತೀಯ ಹವಾಮಾನ ಇಲಾಖೆಯು (IMD) ಮೇ ತಿಂಗಳಿನಲ್ಲಿ ದೇಶಾದ್ಯಂತ ವಾಡಿಕೆಗಿಂತ ಹೆಚ್ಚಿನ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಿದೆ. ಈ ಅನಿರೀಕ್ಷಿತ ಮಳೆಯು ಬಿಸಿಲಿನಿಂದ રાહತ ನೀಡುವ ನಿರೀಕ್ಷೆಯಿದ್ದರೂ, ಕೆಲವು ಪ್ರದೇಶಗಳಲ್ಲಿ ಪ್ರವಾಹ ಮತ್ತು ಬೆಳೆ ಹಾನಿಯ ಆತಂಕವನ್ನು ಸೃಷ್ಟಿಸಿದೆ.
Read Full Story

08:07 AM (IST) May 02

ವಾಹನ ಸವಾರರಿಗೆ ಹಾಗೂ ಗೃಹಿಣಿಯರಿಗೆ ಬಿಗ್ ಶಾಕ್ - 5-7 ದಿನಗಳಲ್ಲಿ ಪೆಟ್ರೋಲ್, ಡೀಸೆಲ್, ಗ್ಯಾಸ್ ಬೆಲೆ ಏರಿಕೆ?

ಯುದ್ಧದಿಂದಾಗಿ ಜಾಗತಿಕ ಕಚ್ಚಾ ತೈಲ ಬೆಲೆ ಏರಿಕೆಯಾಗಿದ್ದು, ಭಾರತದಲ್ಲಿ ಪೆಟ್ರೋಲ್, ಡೀಸೆಲ್ ಮತ್ತು ಎಲ್‌ಪಿಜಿ ಸಿಲಿಂಡರ್ ಬೆಲೆಗಳನ್ನು ಹೆಚ್ಚಿಸಲು ಸರ್ಕಾರ ಚಿಂತನೆ ನಡೆಸಿದೆ. ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಲೀಟರ್‌ಗೆ 4-5 ರೂ. ಹಾಗೂ ಸಿಲಿಂಡರ್ ಬೆಲೆ 40-50 ರೂ. ಏರಿಕೆಯಾಗುವ ಸಾಧ್ಯತೆಯಿದೆ.

Read Full Story

07:50 AM (IST) May 02

ಎಣ್ಣೆ ಕುಡಿದು ಸದನಕ್ಕೆ ಬರ್ತಾನೆ ಪಂಜಾಬ್‌ ಸಿಎಂ! ಆಲ್ಕೋಹಾಲ್‌ ಟೆಸ್ಟ್ ಮಾಡಿಸಲು ವಿಧಾನಸಭೇಲಿ ಪ್ರತಿಪಕ್ಷ ಸದಸ್ಯರಿಂದ ಬಿಗಿಪಟ್ಟು!

ಪಂಜಾಬ್ ವಿಧಾನಸಭೆಯ ವಿಶೇಷ ಅಧಿವೇಶನದಲ್ಲಿ ಮುಖ್ಯಮಂತ್ರಿ ಭಗವಂತ್ ಮಾನ್ ಮದ್ಯಪಾನ ಮಾಡಿ ಬಂದಿದ್ದಾರೆ ಎಂದು ವಿಪಕ್ಷಗಳು ಗಂಭೀರ ಆರೋಪ. ಸಿಎಂಗೆ ಮದ್ಯಪಾನ ಪತ್ತೆ ಪರೀಕ್ಷೆ ನಡೆಸಬೇಕೆಂದು ಕಾಂಗ್ರೆಸ್ ಮತ್ತು ಅಕಾಲಿದಳ ಆಗ್ರಹಿಸಿದವು, ಆದರೆ ಸ್ಪೀಕರ್ ಬೇಡಿಕೆ ತಿರಸ್ಕರಿಸಿದ್ದರಿಂದ ವಿಪಕ್ಷಗಳು ಸಭಾತ್ಯಾಗ

 

Read Full Story

07:33 AM (IST) May 02

ವಾಣಿಜ್ಯ ಬಳಕೆಯ 19 ಕೆಜಿ ಸಿಲಿಂಡರ್‌ ಬೆಲೆ ₹990, ಶೀಘ್ರ ಹೋಟೆಲ್‌ ತಿನಿಸುಗಳ ದರ ಇನ್ನಷ್ಟು ಹೆಚ್ಚಳ

ವಾಣಿಜ್ಯ ಬಳಕೆಯ 19 ಕೆಜಿ ಸಿಲಿಂಡರ್‌ ಬೆಲೆ ₹990 ರಷ್ಟು ಹೆಚ್ಚಳವಾಗಿದ್ದು, ಇದು ಹೋಟೆಲ್‌ ಉದ್ಯಮದ ಮೇಲೆ ಭಾರೀ ಪರಿಣಾಮ ಬೀರಲಿದೆ. ಈ ಬೆಲೆ ಏರಿಕೆಯ ಹೊರೆಯನ್ನು ಸರಿದೂಗಿಸಲು, ಹೋಟೆಲ್‌ಗಳು ಅನಿವಾರ್ಯವಾಗಿ ಕಾಫಿ, ಟೀ, ತಿಂಡಿ ಮತ್ತು ಊಟದ ದರವನ್ನು ಹೆಚ್ಚಿಸಲು ಮುಂದಾಗಿವೆ.

 

Read Full Story

07:33 AM (IST) May 02

ಬಂಗಾಳದಲ್ಲಿ ಬಿಜೆಪಿ ಅಧಿಕಾರಕ್ಕೆ, ಸಮೀಕ್ಷೆಗಳಿಂದ ಬಾಂಗ್ಲಾದೇಶಕ್ಕೆ ನಡುಕ, ಮಮತಾ ಮತಬ್ಯಾಂಕ್ ಯಾರು ಅನ್ನೋದು ಬಾಯಿಬಿಟ್ಟ ಬಾಂಗ್ಲಾದೇಶಿ ಸಂಸದ!

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಅಧಿಕಾರಕ್ಕೆ ಬರಬಹುದೆಂಬ ಚುನಾವಣೋತ್ತರ ಸಮೀಕ್ಷೆಗಳು ಬಾಂಗ್ಲಾದೇಶದ ಆತಂಕಕ್ಕೆ ಕಾರಣವಾಗಿದೆ. ಬಿಜೆಪಿ ಅಕ್ರಮ ವಲಸಿಗರನ್ನು ಹೊರಹಾಕಿದರೆ, ಬಾಂಗ್ಲಾದಲ್ಲಿ ಬಿಕ್ಕಟ್ಟು ಸೃಷ್ಟಿಯಾಗುತ್ತದೆ ಎಂದು ಅಲ್ಲಿನ ಸಂಸದ ಅಖ್ತರ್‌ ಹೊಸೈನಿ ಕಳವಳ ವ್ಯಕ್ತಪಡಿಸಿದ್ದಾರೆ.

 

Read Full Story

More Trending News