ನವದೆಹಲಿ (ಮೇ.22): ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಾಧೀಶ ಸೂರ್ಯಕಾಂತ್ ಅವರ ಹೇಳಿಕೆ ಹಾಗೂ ದೇಶದ ರಾಜಕೀಯ ವ್ಯವಸ್ಥೆ ವಿರುದ್ಧ ಆಕ್ರೋಶ ವ್ಯಕ್ತಪಡಿಸುವ ಹಾಗೂ ರಾಜಕೀಯ ಪಕ್ಷಗಳನ್ನು ಟೀಕಿಸುವ ಉದ್ದೇಶದಿಂದ ಹುಟ್ಟುಹಾಕಲಾದ 'ಕಾಕ್ರೋಚ್ ಜನತಾ ಪಾರ್ಟಿ' (ಸಿಜೆಪಿ) ಸಾಮಾಜಿಕ ಮಾಧ್ಯಮದಲ್ಲಿ ಸುನಾಮಿ ಎಬ್ಬಿಸಿದೆ. ಇದಕ್ಕೆ ಭಾರೀ ಬೆಂಬಲ ವ್ಯಕ್ತವಾಗಿದ್ದು, ದೇಶದ ಜೆನ್ಝೀಗಳು (ಯುವಕರು) ಇದರ ಬೆನ್ನ ಹಿಂದೆ ನಿಂತಿದ್ದಾರೆ ಎಂದು ವಿಶ್ಲೇಷಿಸಲಾಗಿದೆ. ಅದರೊಂದಿಗೆ ಇಂದಿನ ರಾಷ್ಟ್ರೀಯ, ರಾಜಕೀಯ, ಚುನಾವಣೆ, ವಾಣಿಜ್ಯ, ಟೆಕ್ನಾಲಜಿ ಹಾಗೂ ಎಂಟರ್ಟೇನ್ಮೆಂಟ್ನ ಸುದ್ದಿಗಳ ವಿವರಗಳ ಲೈವ್ ಬ್ಲಾಗ್..
11:11 AM (IST) May 22
10:52 AM (IST) May 22
10:48 AM (IST) May 22
ರಾಜಕೀಯಕ್ಕೆ ಬಂದ ಮೇಲೆ ಕಂಗನಾ ಅವರ ಹೆಸರು ಹ್ಯಾಂಡ್ಸಮ್ ಪಾಲಿಟಿಶಿಯನ್ ಚಿರಾಗ್ ಪಾಸ್ವಾನ್ ಜೊತೆ ಥಳುಕು ಹಾಕಿಕೊಂಡಿತ್ತು. ಸಂಸತ್ತಿನ ಆವರಣದಲ್ಲಿ ಇವರಿಬ್ಬರು ಕೈ-ಕೈ ಮಿಲಾಯಿಸಿ ನಕ್ಕ ವಿಡಿಯೋಗಳು ವೈರಲ್ ಆಗಿ "ಹೊಸ ಜೋಡಿ ರೆಡಿಯಾಯ್ತು" ಎನ್ನಲಾಗಿತ್ತು. ಆದರೆ ಅದಕ್ಕೆ ಸಾಕ್ಷಿ ಸಿಕ್ಕಿರಲಿಲ್ಲ.
10:47 AM (IST) May 22
ಪಶ್ಚಿಮ ಬಂಗಾಳದಲ್ಲಿ ಬಕ್ರೀದ್ ವೇಳೆ ಸಾರ್ವಜನಿಕ ಸ್ಥಳಗಳಲ್ಲಿ ಜಾನುವಾರು ವಧೆ ನಿಷೇಧಿಸಿ ಸರ್ಕಾರ ಹೊರಡಿಸಿದ್ದ ಆದೇಶವನ್ನು ಕಲ್ಕತ್ತಾ ಹೈಕೋರ್ಟ್ ಎತ್ತಿಹಿಡಿದಿದೆ. ಗೋವಧೆಯು ಈದ್ ಹಬ್ಬದ ಅವಿಭಾಜ್ಯ ಅಂಗವಲ್ಲ ಎಂದು ಸ್ಪಷ್ಟಪಡಿಸಿರುವ ನ್ಯಾಯಾಲಯ, ಅಧಿಕೃತ ಕಸಾಯಿಖಾನೆಗಳಲ್ಲಿ ಮಾತ್ರ ವಧೆಗೆ ಅವಕಾಶ ನೀಡಿದೆ.
10:33 AM (IST) May 22
ಹೈದರಾಬಾದ್: ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವಿಂದು ಬಲಿಷ್ಠ ಸನ್ರೈಸರ್ಸ್ ಹೈದರಾಬಾದ್ ತಂಡವನ್ನು ಎದುರಿಸಲಿದೆ. ಈ ಮ್ಯಾಚ್ನಲ್ಲಿ ಆರ್ಸಿಬಿ ಗೆದ್ದರೇ ನಾಲ್ಕು ಅಪರೂಪದ ದಾಖಲೆಗೆ ಪಾತ್ರವಾಗಲಿದೆ. ಏನವು ದಾಖಲೆಗಳು ಎನ್ನುವ ನಿಮ್ಮ ಕುತೂಹಲಕ್ಕೆ ಇಲ್ಲಿದೆ ಉತ್ತರ.
10:00 AM (IST) May 22
09:28 AM (IST) May 22
09:21 AM (IST) May 22
08:59 AM (IST) May 22
ಪಶ್ಚಿಮ ಬಂಗಾಳದ ಬಿಜೆಪಿ ಸರ್ಕಾರವು ರಾಜ್ಯದ ಎಲ್ಲಾ ಮಾನ್ಯತೆ ಪಡೆದ, ಅನುದಾನಿತ ಮತ್ತು ಅನುದಾನರಹಿತ ಮದರಸಾಗಳಲ್ಲಿ 'ವಂದೇ ಮಾತರಂ' ಗೀತೆಯನ್ನು ಕಡ್ಡಾಯಗೊಳಿಸಿ ಆದೇಶ ಹೊರಡಿಸಿದೆ. ಶಾಲಾ-ಕಾಲೇಜುಗಳ ನಂತರ ಇದೀಗ ಮದರಸಾಗಳಿಗೂ ಈ ನಿಯಮ ವಿಸ್ತರಿಸಿದೆ.
08:41 AM (IST) May 22
08:34 AM (IST) May 22
08:09 AM (IST) May 22
08:06 AM (IST) May 22
ಚುನಾವಣಾ ಸಮೀಕ್ಷಾ ತಜ್ಞ ಪ್ರದೀಪ್ ಗುಪ್ತಾ ಅವರ ಪ್ರಕಾರ, 2014ರಲ್ಲಿ ಆರಂಭವಾದ ಬಿಜೆಪಿಯ ರಾಜಕೀಯ ಪ್ರಾಬಲ್ಯ ಕನಿಷ್ಠ 2034ರವರೆಗೂ ಮುಂದುವರಿಯಲಿದೆ. ಬಿಜೆಪಿ ಸರ್ಕಾರದ ಸಾಧನೆ ಉತ್ತಮವಾಗಿರುವವರೆಗೂ ಅದರ ಸ್ಥಾನ ಭದ್ರ. ಪ್ರತಿಪಕ್ಷಗಳು ಚೇತರಿಸಿಕೊಳ್ಳಲು ಹೆಚ್ಚಿನ ಸಮಯ ಬೇಕೆಂದು ವಿಶ್ಲೇಷಿಸಿದ್ದಾರೆ.
07:57 AM (IST) May 22
ಇರಾನ್ ಮೇಲೆ ಯುದ್ಧದ ವಿಚಾರವಾಗಿ ಅಮೆರಿಕ ಅಧ್ಯಕ್ಷ ಟ್ರಂಪ್ ಮತ್ತು ಇಸ್ರೇಲ್ ಪ್ರಧಾನಿ ನೆತನ್ಯಾಹು ನಡುವೆ ಭಿನ್ನಮತ ಉಂಟಾಗಿದೆ. ಯುದ್ಧಕ್ಕೆ ನೆತನ್ಯಾಹು ಪಟ್ಟು ಹಿಡಿದರೆ, ಟ್ರಂಪ್ ಮಾತುಕತೆಗೆ ಒಲವು ತೋರಿದ್ದಾರೆ.
07:39 AM (IST) May 22
ಸುಪ್ರೀಂ ಕೋರ್ಟ್ ನ್ಯಾಯಾಧೀಶರ ಹೇಳಿಕೆಯಿಂದ ಪ್ರೇರಿತರಾಗಿ ಜೆನ್ಝೀ ಯುವಕರು 'ಕಾಕ್ರೋಚ್ ಜನತಾ ಪಾರ್ಟಿ' ಎಂಬ ಆಂದೋಲನವನ್ನು ಆರಂಭಿಸಿದ್ದಾರೆ. ಈ ರಾಜಕೀಯ ವ್ಯವಸ್ಥೆಯ ವಿರುದ್ಧದ ಹೋರಾಟಕ್ಕೆ ಮಹುವಾ ಮೊಯಿತ್ರಾ, ಅಖಿಲೇಶ್ ಯಾದವ್ ಸೇರಿದಂತೆ ಹಲವು ವಿಪಕ್ಷ ನಾಯಕರು ಮತ್ತು ಸೆಲೆಬ್ರಿಟಿಗಳು ಬೆಂಬಲ.
07:38 AM (IST) May 22
ಕೇರಳ ವಿಧಾನಸಭೆಯ ಪ್ರಮಾಣ ವಚನ ಸಮಾರಂಭದಲ್ಲಿ, ಕಾಸರಗೋಡಿನ ಮಂಜೇಶ್ವರ ಕ್ಷೇತ್ರದ ಶಾಸಕ ಎ.ಕೆ.ಎಂ ಅಶ್ರಫ್ ಅವರು ಕನ್ನಡದಲ್ಲಿ ಪ್ರಮಾಣ ವಚನ ಸ್ವೀಕರಿಸಿ ಗಮನ ಸೆಳೆದರು. ಇದೇ ವೇಳೆ, ದೇವಿಕುಲಂ ಶಾಸಕರು ತಮಿಳಿನಲ್ಲಿ ಶಪಥ ಸ್ವೀಕರಿಸಿದ್ದು, ಈ ಘಟನೆಯು ರಾಜ್ಯದ ಭಾಷಾ ವೈವಿಧ್ಯತೆಯನ್ನು ಪ್ರತಿಬಿಂಬಿಸಿತು.