LIVE NOW
Published : Sep 05, 2026, 05:50 AM ISTUpdated : Sep 05, 2026, 07:25 AM IST

National News Live: ಮಹಿಳಾ ಏಷ್ಯಾಕಪ್‌ ಟಿ20 - ಇಂದು ಭಾರತ ಎದುರು ಪಾಕಿಸ್ತಾನಕ್ಕೆ ಡು ಆರ್ ಡೈ ಮ್ಯಾಚ್! ಎಷ್ಟು ಗಂಟೆಗೆ ಆರಂಭ? ನೇರ ಪ್ರಸಾರ ಎಲ್ಲಿ?

ಸಾರಾಂಶ

ನವದೆಹಲಿ (ಸೆ.5): ಭೀಕರ ಪ್ರವಾಹದಿಂದ ಸಾವಿರಾರು ಮಂದಿ ಬಲಿಯಾಗಿರುವ ನೇಪಾಳದಲ್ಲಿ ವೀರೋಚಿತ ರಕ್ಷಣಾ ಕಾರ್ಯವೊಂದು ಶುಕ್ರವಾರ ನಡೆದಿದೆ. ಕಳೆದ 10 ದಿನದಿಂದ ತ್ರಿಶೂಲಿ ಜಲವಿದ್ಯುತ್ ಯೋಜನೆಯ ಸುರಂಗದೊಳಗೆ 170 ಮೀ. ಆಳದಲ್ಲಿ ಸಿಲುಕಿದ್ದ ಇಬ್ಬರನ್ನು ಜೀವಂತವಾಗಿ ಪವಾಡಸದೃಶ ರೀತಿಯಲ್ಲಿ ರಕ್ಷಿಸಲಾಗಿದೆ. ವಿಶೇಷವೆಂದರೆ ರಕ್ಷಣೆಗೆ ಒಳಗಾದ ಸಿಬ್ಬಂದಿಯಲ್ಲಿ ಒಬ್ಬರು, 'ನಾನು ಇತರ ಸಿಬ್ಬಂದಿಯನ್ನು ರಕ್ಷಿಸಿ ಅಲ್ಲೇ ಸಿಲುಕಿದೆ. ಕೊನೆಗೆ ಹರೇಕೃಷ್ಣ ಮಂತ್ರ ಪಠಿಸುತ್ತ ಜೀವಂತವಾಗಿ ಬದುಕಿದೆ' ಎಂದಿದ್ದಾರೆ. ಇವರು ರಕ್ಷಣೆಗೆ ಒಳಗಾಗಿದ್ದು ಕೃಷ್ಣ ಜನ್ಮಾಷ್ಟಮಿಯಂದು ಎಂಬುದು ವಿಶೇಷ. ಅದರೊಂದಿಗೆ ಇಂದಿನ ರಾಷ್ಟ್ರೀಯ, ರಾಜಕೀಯ, ಚುನಾವಣೆ, ವಾಣಿಜ್ಯ, ಟೆಕ್ನಾಲಜಿ ಹಾಗೂ ಎಂಟರ್‌ಟೇನ್‌ಮೆಂಟ್‌ನ ಸುದ್ದಿಗಳ ವಿವರಗಳ ಲೈವ್‌ ಬ್ಲಾಗ್‌.

 

07:25 AM (IST) Sep 05

ಮಹಿಳಾ ಏಷ್ಯಾಕಪ್‌ ಟಿ20 - ಇಂದು ಭಾರತ ಎದುರು ಪಾಕಿಸ್ತಾನಕ್ಕೆ ಡು ಆರ್ ಡೈ ಮ್ಯಾಚ್! ಎಷ್ಟು ಗಂಟೆಗೆ ಆರಂಭ? ನೇರ ಪ್ರಸಾರ ಎಲ್ಲಿ?

ಮಹಿಳಾ ಏಷ್ಯಾಕಪ್‌ ಟಿ20 ಟೂರ್ನಿಯಲ್ಲಿ ಭಾರತ ಮತ್ತು ಪಾಕಿಸ್ತಾನ ತಂಡಗಳು ಶನಿವಾರ ಮುಖಾಮುಖಿಯಾಗಲಿವೆ. ಈಗಾಗಲೇ ಸೆಮಿಫೈನಲ್‌ ಪ್ರವೇಶಿಸಿರುವ ಭಾರತಕ್ಕೆ ಇದು ಪ್ರತಿಷ್ಠೆಯ ಪಂದ್ಯವಾದರೆ, ಸೆಮಿಫೈನಲ್‌ ರೇಸ್‌ನಲ್ಲಿ ಉಳಿಯಲು ಪಾಕಿಸ್ತಾನಕ್ಕೆ ಈ ಪಂದ್ಯದಲ್ಲಿ ಗೆಲುವು ಅನಿವಾರ್ಯವಾಗಿದೆ.
Read Full Story

06:54 AM (IST) Sep 05

Baleno Facelift - ಟಾಟಾ ಆಲ್ಟ್ರೋಜ್, i20ಗೆ ಟಕ್ಕರ್ ಕೊಡಲು ಹೊಸ ಬಲೆನೊ ರೆಡಿ; ಏನೆಲ್ಲಾ ಅಪ್‌ಡೇಟ್?

2026ರ ಮಾರುತಿ ಬಲೆನೊ ಫೇಸ್‌ಲಿಫ್ಟ್ ಸೆಪ್ಟೆಂಬರ್ 5 ರಂದು ಬಿಡುಗಡೆಯಾಗಲಿದ್ದು, ಇದು ಮಹತ್ವದ ಅಪ್‌ಡೇಟ್ ಪಡೆಯಲಿದೆ. ಕಾರಿನ ಹೊರ ಹಾಗೂ ಒಳ ವಿನ್ಯಾಸದಲ್ಲಿ ಪ್ರಮುಖ ಬದಲಾವಣೆಗಳಾಗಲಿದ್ದು, ಸ್ವಿಫ್ಟ್‌ನಲ್ಲಿರುವ ಹೊಸ Z-ಸೀರೀಸ್ ಎಂಜಿನ್, ದೊಡ್ಡ ಟಚ್‌ಸ್ಕ್ರೀನ್ ಮತ್ತು ADAS ನಂತಹ ಫೀಚರ್‌ಗಳನ್ನು ನಿರೀಕ್ಷಿಸಲಾಗಿದೆ.
Read Full Story

06:13 AM (IST) Sep 05

ಹರೇಕೃಷ್ಣ ಮಂತ್ರ ಜಪಿಸುತ್ತಾ ನೇಪಾಳ ಸುರಂಗದಲ್ಲಿ 10 ದಿನ ಇದ್ದ ಇಬ್ಬರ ವೀರೋಚಿತ ರಕ್ಷಣೆ

ನೇಪಾಳದ ತ್ರಿಶೂಲಿ ಜಲವಿದ್ಯುತ್ ಯೋಜನೆಯ ಸುರಂಗದಲ್ಲಿ 10 ದಿನಗಳಿಂದ ಸಿಲುಕಿದ್ದ ಇಬ್ಬರು ಕಾರ್ಮಿಕರನ್ನು ಪವಾಡಸದೃಶವಾಗಿ ಜೀವಂತವಾಗಿ ರಕ್ಷಿಸಲಾಗಿದೆ. ಪ್ರವಾಹದಿಂದಾಗಿ 170 ಮೀಟರ್ ಆಳದಲ್ಲಿ ಸಿಲುಕಿದ್ದ ಇವರಲ್ಲಿ ಒಬ್ಬರು, ಹರೇಕೃಷ್ಣ ಮಂತ್ರ ಪಠಿಸಿ ಬದುಕುಳಿದೆ ಎಂದು ಹೇಳಿದ್ದಾರೆ.
Read Full Story

More Trending News